Editor

ಸಾಹಿತಿ ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ರಿಗೆ ಬೆಂಗಳೂರಿನಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ಬೆಳಕು ಸಾಹಿತ್ಯ ಸಂಭ್ರಮ -2024 ಸಮ್ಮೇಳನದಲ್ಲಿ ಸುಳ್ಯದ ಖ್ಯಾತ ಸಾಹಿತಿ, ಜ್ಯೋತಿಷಿ, ಗಾಯಕ ಎಚ್. ಭೀಮರಾವ್ ವಾಷ್ಠರ್ ಅವರನ್ನು ಬೆಳಕು ಸಂಸ್ಥೆಯ ಸ್ಥಾಪಕಧ್ಯಕ್ಷ ಅಣ್ಣಪ್ಪ ಮೇಟಿಗೌಡ ಅವರು ಸಮ್ಮಾನಿಸಿ ಗೌರವಿಸಿದರು. ಭೀಮರಾವ್ ವಾಷ್ಠರ್ ಅವರ ಅಪಾರ ಸಾಧನೆ ಪರಿಗಣಿಸಿ ಸನ್ಮಾನಿಸಿದ ಸಮಾರಂಭದ ವೇದಿಕೆಯಲ್ಲಿ ಖ್ಯಾತ ಕವಿ ಜಯಕವಿ ಜಯಪ್ಪ ಹೊನ್ನಾಳಿ, ವಿಹಾರಿ ಹರಿನರಸಿಂಹ ಉಪಾಧ್ಯಾಯ, ಲತಾ […]

ಸಾಹಿತಿ ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ರಿಗೆ ಬೆಂಗಳೂರಿನಲ್ಲಿ ಸನ್ಮಾನ Read More »

ಗರ್ಭಿಣಿ ಪತ್ನಿಗೆ ಚೂರಿ ಇರಿದ‌ ‘ನೇತ್ರಾವತಿ’ ಸೀರಿಯಲ್ ನಟ; ದೂರು ದಾಖಲು

ಸಮಗ್ರ ನ್ಯೂಸ್: ‘ನೇತ್ರಾವತಿ’ ಸೀರಿಯಲ್ ನಟ ಸನ್ನಿ ಮಹಿಪಾಲ್ ವಿರುದ್ಧ, ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೊಂದ ಪತ್ನಿ ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದ ಸನ್ನಿ ‌ಮಹಿಪಾಲ್ ತನ್ನ ಮನೆಗೆ ಅತಿಕ್ರಮ ಪ್ರವೇಶ ಮಾಡಿರುವುದಾಗಿ ಯುವತಿ ವಿರುದ್ಧ ಹೆಚ್.ಎ.ಎಲ್. ಠಾಣೆಗೆ ದೂರು ನೀಡಿದ್ದಾರೆ. ‘ನೇತ್ರಾವತಿ’ ಸೀರಿಯಲ್ ಖ್ಯಾತಿಯ ಸನ್ನಿ ಮಹಿಪಾಲ್ ತನ್ನನ್ನು ಬಿಟ್ಟು ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದನ್ನು ಪ್ರಶ್ನಿಸಲು ಹೋದ ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಆಕೆಗೆ ರಕ್ತಸ್ರಾವವಾಗಿ ಗರ್ಭಪಾತವಾಗಿದೆ ಎನ್ನಲಾಗಿದೆ.

ಗರ್ಭಿಣಿ ಪತ್ನಿಗೆ ಚೂರಿ ಇರಿದ‌ ‘ನೇತ್ರಾವತಿ’ ಸೀರಿಯಲ್ ನಟ; ದೂರು ದಾಖಲು Read More »

ಪುತ್ತೂರು: ಲಾರಿ‌ ಟಯರ್ ಬದಲಿಸುವ ವೇಳೆ ಸ್ಪೋಟ| ಇಬ್ಬರು ಕಾರ್ಮಿಕರು ಗಂಭೀರ

ಸಮಗ್ರ ನ್ಯೂಸ್: ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಕ್ಕೆ ಒಳಗಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಪೋಟದ ಭೀಕರತೆ ತೋರಿಸುತ್ತಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಬಳಿಕ ಟಯರ್ ಪಂಚರ್

ಪುತ್ತೂರು: ಲಾರಿ‌ ಟಯರ್ ಬದಲಿಸುವ ವೇಳೆ ಸ್ಪೋಟ| ಇಬ್ಬರು ಕಾರ್ಮಿಕರು ಗಂಭೀರ Read More »

ಬಜೆಟ್ 2024| ಯಾವ ಕ್ಷೇತ್ರಕ್ಕೆ‌ ಏನು ಸಿಕ್ತು? ಇಲ್ಲಿದೆ ಹೈಲೈಟ್ಸ್…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಬಜೆಟ್ ನಲ್ಲಿ ನಿಗದಿಪಡಿಸಿದ ಗುರಿಗಳನ್ನು ಅನುಸರಿಸಿ, ನಾವು ಒಂಬತ್ತು ಆದ್ಯತೆಗಳನ್ನು ನಿಗದಿಪಡಿಸಿದ್ದೇವೆ, ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. 2024-25ನೇ ಸಾಲಿನ ಕೇಂದ್ರ

ಬಜೆಟ್ 2024| ಯಾವ ಕ್ಷೇತ್ರಕ್ಕೆ‌ ಏನು ಸಿಕ್ತು? ಇಲ್ಲಿದೆ ಹೈಲೈಟ್ಸ್… Read More »

೫೦ ವರ್ಷ ಮೀರಿದ ಶಿಕ್ಷಕರಿಗೆ ಶುಭ ಸುದ್ದಿ| ಕರ್ನಾಟಕ ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ವಾರ್ತೆ: 50 ವರ್ಷ ಮೀರಿದ ಮಹಿಳಾ ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿಸಿ ನೀಡುವ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಶಿಕ್ಷಕರ ನಿಯಂತ್ರಣ ಮತ್ತು ವರ್ಗಾವಣೆ) ಕಾಯ್ದೆಯ ನಿಯಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. “ಕರ್ನಾಟಕ ರಾಜ್ಯ” ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾ. ಎಸ್.ಜಿ. ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ. 50 ವರ್ಷ ದಾಟಿದ್ದ ಇಬ್ಬರು ಶಿಕ್ಷಕಿಯರನ್ನು ವರ್ಗಾವಣೆ ಮಾಡಿದ್ದ

೫೦ ವರ್ಷ ಮೀರಿದ ಶಿಕ್ಷಕರಿಗೆ ಶುಭ ಸುದ್ದಿ| ಕರ್ನಾಟಕ ಹೈಕೋರ್ಟ್ ನಿಂದ ಮಹತ್ವದ ಆದೇಶ Read More »

ಅಂಕೋಲ: ಗುಡ್ಡ ಕುಸಿತ ‌ಪ್ರಕರಣ| ಮತ್ತೊಂದು ‌ಶವ‌ ಪತ್ತೆ; ಮೃತರ ಸಂಖ್ಯೆ 8ಕ್ಕೆ ಏರಿಕೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ ಈಗಾಗಲೇ ಏಳು ಮೃತದೇಹ ಪತ್ತೆಯಾಗಿತ್ತು. ಈ ಮೃತ ದೇಹದ ಕೈಯಲ್ಲಿ ಬಳೆ ಮತ್ತು ಸೊಂಟದ ಮೇಲಿನ ಬಟ್ಟೆಯ ಮೇಲೆ ಪತ್ತೆ ಮಾಡಬಹುದಾಗಿದೆ. ಗಂಗಾವಳಿ ನದಿ ತೀರದ ಉಳುವರೆ ಗ್ರಾಮದ ಸಣ್ಣಿ ಗೌಡ ಎನ್ನುವ ಮಹಿಳೆ ನಾಪತ್ತೆಯಾಗಿದ್ದರು. ಮೃತದೇಹ ಆಕೆಯದ್ದೇ?

ಅಂಕೋಲ: ಗುಡ್ಡ ಕುಸಿತ ‌ಪ್ರಕರಣ| ಮತ್ತೊಂದು ‌ಶವ‌ ಪತ್ತೆ; ಮೃತರ ಸಂಖ್ಯೆ 8ಕ್ಕೆ ಏರಿಕೆ Read More »

ಬ್ರೇಕ್ ಕೊಟ್ಟ ಮಳೆರಾಯ| ಶಿರಾಡಿ, ಸಂಪಾಜೆ ಘಾಟ್ ನಲ್ಲಿ ರಾತ್ರಿ ಸಂಚಾರ ಆರಂಭ

ಸಮಗ್ರ ನ್ಯೂಸ್: ಮುಂಗಾರು ಮಳೆ ಕೊಂಚ ಬಿಡುವು ಕೊಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರ ಪುನರಾರಂಭವಾಗಿದೆ. ಸಕಲೇಶಪುರ ಸಮೀಪ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತ ಸಂಭವ ಹಿನ್ನೆಲೆಯಲ್ಲಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ

ಬ್ರೇಕ್ ಕೊಟ್ಟ ಮಳೆರಾಯ| ಶಿರಾಡಿ, ಸಂಪಾಜೆ ಘಾಟ್ ನಲ್ಲಿ ರಾತ್ರಿ ಸಂಚಾರ ಆರಂಭ Read More »

ಯುದ್ಧಪೀಡಿತ ಈ ದೇಶದಲ್ಲಿ ಆಹಾರ ಸಿಗಬೇಕಾದ್ರೆ ಸೈನಿಕರ ಜೊತೆ‌ ಸೆಕ್ಸ್ ಮಾಡ್ಲೇಬೇಕು!! ಇಲ್ಲಿ ಮಹಿಳೆಯರ, ಹಿರಿಯ ನಾಗರಿಕರ ಅವಸ್ಥೆ ಕೇಳೋದೇ ಬೇಡ!

ಸಮಗ್ರ ನ್ಯೂಸ್: ಕುಟುಂಬದ ಆರ್ಥಿಕ ನಿರ್ವಹಣೆಗಾಗಿ ಆಹಾರ ಬೇಕಾದರೆ ಮಹಿಳೆಯರು ಯೋಧರ ಜೊತೆ ಮಲಗುವಂತೆ ಒತ್ತಡ ಯುದ್ಧಪೀಡಿತ ಸೂಡಾನ್ ದೇಶದಲ್ಲಿ‌ ಹೇರಲಾಗುತ್ತಿದೆ.‌ ಸುಡಾನ್ ನ ಒಮ್ರುಮನ್ ನಗರದ ಸುಮಾರು 25ಕ್ಕೂ ಹೆಚ್ಚು ಮಹಿಳೆಯರು ತಾವು ಕೇವಲ ಕುಟುಂಬ ಹೊಟ್ಟೆ ತುಂಬಿಸಲು ಆಹಾರ ಮುಂತಾದ ಅಗತ್ಯ ವಸ್ತುಗಳನ್ನು ಪಡೆಯಲು ಸೈನಿಕರ ಜೊತೆ ದೇಹ ಹಂಚಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ಆಹಾರ ಸಂಗ್ರಹಿಸುವ ಉಗ್ರಾಣ ಸೇರಿದಂತೆ ಕಾರ್ಖಾನೆಗಳು ಸೈನಿಕರ ವಶದಲ್ಲಿದೆ. ಇದರಿಂದ ದೇಶದ ಜನರು ಆಹಾರಕ್ಕಾಗಿ ಪರದಾಡುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈನಿಕರು

ಯುದ್ಧಪೀಡಿತ ಈ ದೇಶದಲ್ಲಿ ಆಹಾರ ಸಿಗಬೇಕಾದ್ರೆ ಸೈನಿಕರ ಜೊತೆ‌ ಸೆಕ್ಸ್ ಮಾಡ್ಲೇಬೇಕು!! ಇಲ್ಲಿ ಮಹಿಳೆಯರ, ಹಿರಿಯ ನಾಗರಿಕರ ಅವಸ್ಥೆ ಕೇಳೋದೇ ಬೇಡ! Read More »

ಕನಕಪುರ: ಮಹಿಳೆಯರು ಸೇರಿದಂತೆ ಏಳು ಜನರ ಮೇಲೆ‌ ಮಾರಕಾಸ್ತ್ರಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿಶೀಟರ್ ಹರ್ಷ ಗ್ಯಾಂಗ್​ನಿಂದ ಕೃತ್ಯ ಆರೋಪ ಮಾಡಲಾಗಿದೆ. ದಾರಿಗೆ ಅಡ್ಡವಾಗಿ ನಿಂತಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆ ಸಂಬಂಧ ಕೆಲವರನ್ನ ವಶಕ್ಕೆ ಪಡೆಯಲಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗಲಾಟೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ

ಕನಕಪುರ: ಮಹಿಳೆಯರು ಸೇರಿದಂತೆ ಏಳು ಜನರ ಮೇಲೆ‌ ಮಾರಕಾಸ್ತ್ರಗಳಿಂದ ಹಲ್ಲೆ Read More »

ಶಿರೂರು ಗುಡ್ಡ ಮತ್ತಷ್ಟು ಕುಸಿಯುವ ಭೀತಿ: ಜಿಎಸ್ಐ ವರದಿಯಲ್ಲಿ ಪ್ರಕಟ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಈಗಾಗಲೇ ಭೂಕುಸಿತ ಸಂಭವಿಸಿದು, ಇದೀಗ ಮತ್ತೆ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿಯುವ ಆತಂಕ ಶುರುವಾಗಿದೆ. 2 ದಿನದ ಹಿಂದೆ ಶಿರೂರು ಬಳಿ ಮಣ್ಣು ಪರೀಕ್ಷೆ ನಡೆಸಿದ್ದ ಜಿಎಸ್ಐ (ಜಿಯಾಲಾಜಿಕಲ್ ಸೆರ್ವೆ ಆಪ್ ಇಂಡಿಯ) ತಜ್ಞರು, ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆಗಳಿವೆ ಎಂದು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ವರದಿ ನೀಡಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿದೆ. ಇನ್ನು ನಾಪತ್ತೆಯಾಗಿರುವ ಮೂವರ ಪತ್ತೆಗಾಗಿ

ಶಿರೂರು ಗುಡ್ಡ ಮತ್ತಷ್ಟು ಕುಸಿಯುವ ಭೀತಿ: ಜಿಎಸ್ಐ ವರದಿಯಲ್ಲಿ ಪ್ರಕಟ Read More »