Editor

70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌ ಪ್ರಶಸ್ತಿಗೆ […]

70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| ಇಲ್ಲಿದೆ ಸಂಪೂರ್ಣ ವಿವರ Read More »

ಹಸೆಮಣೆ ಏರಬೇಕಿದ್ದ ವಧು ಮಸಣಕ್ಕೆ| ಹೃದಯಾಘಾತದಿಂದ ಯುವತಿ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಗೆ ಮುನ್ನ ದಿನವೇ ಕುಸಿದುಬಿದ್ದು ಹೃದಯಾಘಾತದಿಂದ ನವವಧು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಳೆ (ಅ.31) ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಶೃತಿ (32) ಮೃತ ಯುವತಿ. ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು. ಆದರೆ ಇಂದು ಮನೆಯಲ್ಲಿದ್ದಾಗಲೇ ವಧು ಶೃತಿ ಹೃದಯಾಘಾತದಿಂದ

ಹಸೆಮಣೆ ಏರಬೇಕಿದ್ದ ವಧು ಮಸಣಕ್ಕೆ| ಹೃದಯಾಘಾತದಿಂದ ಯುವತಿ ಸಾವು Read More »

ಸುಬ್ರಹ್ಮಣ್ಯ: ಮದುವೆ ದಿಬ್ಬಣದ ವಾಹನ ಪಲ್ಟಿ| ಹಲವರು ಜಖಂ, ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್ : ಸುಬ್ರಹ್ಮಣ್ಯ ಸಮೀಪದ ಬಿಸ್ಲೆ ಘಾಟ್ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಮದುವೆಗೆ ತೆರಳುತ್ತಿದ್ದ ದಿಬ್ಬಣದ ವಾಹನ ಪಲ್ಟಿಯಾಗಿ ಹಲವರು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಅ. ೩೦) ನಡೆದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆ ಕಾರ್ಯಕ್ರಮವಿತ್ತು. ಕೂಡುರಸ್ತೆ ವನಗೂರು ಯುವಕ ಹಾಗೂ ಏನೆಕಲ್ಲಿನ ಯುವತಿ ಜತೆ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗಾಗಿ ವರನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಹೀಗೆ ಬರುತ್ತಿರುವಾಗ ವ್ಯಾನ್ ಪಲ್ಟಿಗೊಂಡಿದ್ದು, ಅದರಲ್ಲಿದ್ದ ಹಲವರಿಗೆ ಗಂಭೀರ

ಸುಬ್ರಹ್ಮಣ್ಯ: ಮದುವೆ ದಿಬ್ಬಣದ ವಾಹನ ಪಲ್ಟಿ| ಹಲವರು ಜಖಂ, ಆಸ್ಪತ್ರೆಗೆ ದಾಖಲು Read More »

ಬುರುಡೆ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ದೂರುದಾರರ ತಂಡ| ಬೀಸೋ ದೊಣ್ಣೆ ತಪ್ಪಿಸಲು ಕೊನೆ ಪ್ರಯತ್ನ!!

ಸಮಗ್ರ ನ್ಯೂಸ್: ಧರ್ಮಸ್ಥಳ ವಿರುದ್ಧ ದೂರು ದಾಖಲಿಸಿದ್ದ ದೂರುದಾರರ ತಂಡ ಇದೀಗ ಕಂಗಾಲಾಗಿದೆ. ತಿಮರೋಡಿ ಸಹಿತ ಈ ತಂಡದ ಸದಸ್ಯರು ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಇದೀಗ ಕೊನೆಯ ಪ್ರಯತ್ನ ಮಾಡಿದೆ. ಧರ್ಮಸ್ಥಳ ಸುತ್ತ ಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ದೂರುದಾರರು ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಬುರುಡೆ ಗ್ಯಾಂಗ್ ಸದಸ್ಯರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿಯಿಂದ

ಬುರುಡೆ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ದೂರುದಾರರ ತಂಡ| ಬೀಸೋ ದೊಣ್ಣೆ ತಪ್ಪಿಸಲು ಕೊನೆ ಪ್ರಯತ್ನ!! Read More »

ನ.28: ಕೃಷ್ಣ ನಗರಿ ಉಡುಪಿಗೆ ಪ್ರಧಾನಿ ಮೋದಿ ಭೇಟಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಪ್ರಧಾನಿ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನ

ನ.28: ಕೃಷ್ಣ ನಗರಿ ಉಡುಪಿಗೆ ಪ್ರಧಾನಿ ಮೋದಿ ಭೇಟಿ Read More »

ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ| 104 ಮಂದಿ ಸಾವು

ಸಮಗ್ರ ನ್ಯೂಸ್: ಸಹಜ ಸ್ಥಿತಿಗೆ ಮರಳುತ್ತಿದ್ದ ಗಾಜಾಪಟ್ಟಿಯಲ್ಲಿ ಹಮಾಸ್‌ ಕದನ ವಿರಾಮ ಉಲ್ಲಂಘಿಸಿದೆ ಎಂದು ಇಸ್ರೇಲ್‌ ಮಂಗಳವಾರ ತಡರಾತ್ರಿ ನಡೆಸಿದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿ ಕನಿಷ್ಠ 104 ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಗಾಜಾದಲ್ಲಿ ಕದನ ವಿರಾಮ ಜಾರಿಯಲ್ಲಿದೆ. ಹಮಾಸ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದರೆ, ಇಸ್ರೇಲ್‌ ಪ್ರತಿದಾಳಿ ನಡೆಸುವ ಹಕ್ಕಿದೆ ಎಂದು ಹೇಳಿದ್ದಾರೆ. ಜತೆಗೆ ಮಧ್ಯಪ್ರಾಚ್ಯದಲ್ಲಿ ಹಮಾಸ್‌ ಒಂದು ಸಣ್ಣ ಭಾಗ. ಅದು ಮತ್ತೆ ಬಾಲ ಬಿಚ್ಚಲು

ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ| 104 ಮಂದಿ ಸಾವು Read More »

ಅಮೇರಿಕಾ ನಿರ್ಬಂಧ| ರಷ್ಯಾದಿಂದ ತೈಲ‌ ಖರೀದಿ ಸ್ಥಗಿತಕ್ಕೆ ಭಾರತ‌ ನಿರ್ಧಾರ

ಸಮಗ್ರ ನ್ಯೂಸ್: ರಷ್ಯಾದ ಎರಡು ಪ್ರಮುಖ ತೈಲ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದ ಹಿನ್ನೆಲೆ ಭಾರತದ ತೈಲ ಸಂಸ್ಕರಣಾ ಕಂಪನಿಗಳು ರಷ್ಯಾದಿಂದ ಹೊಸದಾಗಿ ತೈಲ ಖರೀದಿ ನಿಲ್ಲಿಸಿದೆ. ಅಮೆರಿಕ ನಿರ್ಬಂಧದ ಪರಿಣಾಮ, ಪಾವತಿ ವಿಧಾನ ಕುರಿತ ಗೊಂದಲ ಬಗೆಹರಿಯುವವರೆಗೂ ರಷ್ಯಾದ ರೋಸ್‌ನೆಫ್ಟ್‌ ಮತ್ತು ಲುಕೋಯಿಲ್‌ನಿಂದ ತೈಲ ಖರೀದಿ ಸ್ಥಗಿತಕ್ಕೆ ನಿರ್ಧರಿಸಿವೆ. ಆದರೆ ತಕ್ಷಣದ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ದೀರ್ಘ ಕಾಲೀನ ಒಪ್ಪಂದದದ ಬದಲಾಗಿ ಸ್ಪಾಟ್‌ ಮಾರ್ಕೆಟ್‌ನಿಂದ ತೈಲ ಖರೀದಿಗೆ ದೇಶದ ಅತಿದೊಡ್ಡ ತೈಲ ಉದ್ಯಮವಾದ ಇಂಡಿಯನ್‌

ಅಮೇರಿಕಾ ನಿರ್ಬಂಧ| ರಷ್ಯಾದಿಂದ ತೈಲ‌ ಖರೀದಿ ಸ್ಥಗಿತಕ್ಕೆ ಭಾರತ‌ ನಿರ್ಧಾರ Read More »

ಬಿಗ್ ಬಾಸ್ ಮನೆಯಿಂದ ಹೊರಬಂದ ಮಲ್ಲಮ್ಮ| ಕಾರಣ ಇದೇ ನೋಡಿ…

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್ 12 ಎಕ್ಸ್​ಪೆಕ್ಟ್​ ದಿ ಅನ್​ಎಕ್ಸ್​ಪೆಕ್ಟೆಡ್ ಎಂಬ ಟ್ಯಾಗ್​ಲೈನ್​ನೊಂದಿಗೆ ಶುರುವಾಯಿತು. ಇದಕ್ಕೆ ತಕ್ಕಂತೆ ಶೋ ಆರಂಭ ಆದಾಗಿನಿಂದ ಪ್ರತೀ ವಾರ ಒಂದಲ್ಲ ಒಂದು ಟ್ವಿಸ್ಟ್ ಬಿಗ್ ಬಾಸ್ ನೀಡುತ್ತಲೇ ಬರುತ್ತಿದ್ದಾರೆ. ಮೂರನೇ ವಾರಕ್ಕೆ ಒಂದು ಫಿನಾಲೆ ನಡೆದು ಆ ವಾರ ಬರೋಬ್ಬರಿ ಮೂರು ಜನ ಎಲಿಮಿನೇಟ್ ಆದರು. ಇದರ ಬೆನ್ನಲ್ಲೇ ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಒಮ್ಮೆಲೆ ಮನೆಯೊಳಗೆ ಎಂಟ್ರಿ ಕೊಟ್ಟರು. ವೀಕ್ಷಕರ ಊಹೆಗೆ ಮಿಲುಕಿದ ಬಿಬಿಕೆ 12 ನಲ್ಲಿ

ಬಿಗ್ ಬಾಸ್ ಮನೆಯಿಂದ ಹೊರಬಂದ ಮಲ್ಲಮ್ಮ| ಕಾರಣ ಇದೇ ನೋಡಿ… Read More »

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ‌ಜಾರಿ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಎಫ್‌ಐಆರ್ ದಾಖಲಾಗಿದ್ದು, ಈ ಕುರಿತಂತೆ ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ‌ಜಾರಿ Read More »

ಮೋಂತಾ ಚಂಡಮಾರುತದ ಪರಿಣಾಮ| ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು (ಅ.29) ಮಳೆ ಅಬ್ಬರಿಸುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ

ಮೋಂತಾ ಚಂಡಮಾರುತದ ಪರಿಣಾಮ| ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »