Editor

ಉಡುಪಿ: ನ.28ರಂದು ಪ್ರಧಾನಿ ಭೇಟಿ ಹಿನ್ನಲೆ| ಜಿಲ್ಲೆಯ ಈ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ನ.28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಅಂದು ಲಕ್ಷ ಕಂಠ ಗೀತ ಪಾರಾಯಣದಲ್ಲಿ ಭಾಗವಹಿಸಲಿರುವ ಕಾರಣದಿಂದ, ಮುಂಜಾಗ್ರತೆ ಕ್ರಮವಾಗಿ ಅಂದು ಉಡುಪಿ ಮತ್ತು ನಗರ ಮತ್ತು ಸುತ್ತಮುತ್ತಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಪ್ರಧಾಣಿ ಮೋದಿ ಭೇಟಿ ನೀಡಲಿದ್ದು, ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಉಡುಪಿಯಲ್ಲಿ ಬೃಹತ್‌ ರೋಡ್‌ ಶೋ ನಡೆಯಲಿದ್ದು, 30000 ಕ್ಕೂ ಅಧಿಕ ಮಂದಿ ಭಾಗವಹಿಸುವ ಸಾಧ್ಯತೆ […]

ಉಡುಪಿ: ನ.28ರಂದು ಪ್ರಧಾನಿ ಭೇಟಿ ಹಿನ್ನಲೆ| ಜಿಲ್ಲೆಯ ಈ ಶಾಲೆಗಳಿಗೆ ರಜೆ ಘೋಷಣೆ Read More »

ಕಲಬುರಗಿಯಲ್ಲಿ ಭೀಕರ ಅಪಘಾತ| ಹಿರಿಯ ಐಎಎಸ್ ಅಧಿಕಾರ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

ಸಮಗ್ರ ನ್ಯೂಸ್: ಭೀಕರ ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿಗೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಶ್ವಾನ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದಲ್ಲಿ ಮಹಾಂತೇಶ್ ಬೀಳಗಿ, ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ

ಕಲಬುರಗಿಯಲ್ಲಿ ಭೀಕರ ಅಪಘಾತ| ಹಿರಿಯ ಐಎಎಸ್ ಅಧಿಕಾರ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು Read More »

ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ| ಮದ್ಯದಂಗಡಿ ಮುಚ್ಚಲು ಡಿಸಿ‌ ಆದೇಶ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ 2 ರ ತನಕ ನಡೆಯಲಿದ್ದು, ನವೆಂಬರ್ 25 ರಂದು ಪಂಚಮಿ ರಥೋತ್ಸವ, ತೈಲಾಭ್ಯಂಜನ ಹಾಗೂ 26 ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ಸುಮಾರು 50 ರಿಂದ 60 ಸಾವಿರ ಭಕ್ತಾಧಿಗಳು ಸೇರುವ ನಿರೀಕ್ಷೆ ಇದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟುಮಾಡುವುದನ್ನು ತಪ್ಪಿಸಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನವೆಂಬರ್ 25 ರಂದು ಬೆಳಿಗ್ಗೆ

ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ| ಮದ್ಯದಂಗಡಿ ಮುಚ್ಚಲು ಡಿಸಿ‌ ಆದೇಶ Read More »

ದೆಹಲಿ, ರಾಜಾಸ್ತಾ‌ನ ತಲುಪಿದ ಇಥಿಯೋಪಿಯದ ಜ್ವಾಲಾಮುಖಿ ಬೂದಿ

ಸಮಗ್ರ ನ್ಯೂಸ್: ಇಥಿಯೋಪಿಯಾದ ಹೈಲಿ ಗುಬ್ಬಿ ಜ್ವಾಲಾಮುಖಿಯ ಬೂದಿ ಸೋಮವಾರ ರಾತ್ರಿ ದೆಹಲಿ-ಎನ್‌ಸಿಆರ್ ತಲುಪಿದೆ. ಹವಾಮಾನ ಇಲಾಖೆ ಈ ಘಟನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮೋಡದಂತಿರುವ ಬೂದಿ ವಾಯುವ್ಯ ಭಾರತದ ಕಡೆಗೆ ಗಂಟೆಗೆ ಸುಮಾರು 130 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡ ನಂತರ ಈ ಸಂಪೂರ್ಣ ಘಟನೆ ಸಂಭವಿಸಿದೆ. 10,000 ವರ್ಷಗಳಲ್ಲಿ ಇದು ಮೊದಲ ಸ್ಫೋಟವಾಗಿದೆ. ಹೊಗೆ ರಾಜಸ್ಥಾನ, ಹರಿಯಾಣ ಮತ್ತು ದೆಹಲಿಯ ಕೆಲವು ಭಾಗಗಳಿಗೆ ಹರಡಿದೆ. ಅದರ ಒಂದು ಭಾಗ ಗುಜರಾತ್ ತಲುಪುವ ನಿರೀಕ್ಷೆಯಿದೆ.

ದೆಹಲಿ, ರಾಜಾಸ್ತಾ‌ನ ತಲುಪಿದ ಇಥಿಯೋಪಿಯದ ಜ್ವಾಲಾಮುಖಿ ಬೂದಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಆರೋಪಿ ಚೆನ್ನಯಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಸೇರಿದಂತೆ 12 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಧರ್ಮಸ್ಥಳ ಬುರುಡೆ ಪ್ರಕರಣ| ಆರೋಪಿ ಚೆನ್ನಯಗೆ ಜಾಮೀನು ಮಂಜೂರು Read More »

ದ.ಕ ದಲ್ಲಿ ಶೀಘ್ರ ಆನೆ ಕಾರ್ಯಪಡೆ‌ ಸ್ಥಾಪನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ವಿವಿಧ ಭಾಗಗಳಲ್ಲಿ ಮಾನವ-ಆನೆ ಸಂಘರ್ಷದ ಘಟನೆಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಗೆ ಮೀಸಲಾದ ಆನೆ ಕಾರ್ಯಪಡೆ (ಇಟಿಎಫ್) ರಚನೆಯನ್ನು ಸರ್ಕಾರ ಅಂತಿಮಗೊಳಿಸಲು ನಿರ್ಧರಿಸಿದೆ. ಆದಾಗ್ಯೂ, ಆನೆ ಶಿಬಿರದ ಪ್ರಸ್ತಾವನೆಗೆ ಗಣನೀಯವಾಗಿ ಹೆಚ್ಚಿನ ಹೂಡಿಕೆಯ ಅಗತ್ಯವಿರುತ್ತದೆ ಮತ್ತು ಉದ್ದೇಶಿತ ಗುಂಡ್ಯ ಪ್ರದೇಶದಲ್ಲಿ ಸ್ಥಳೀಯರಿಂದ ವಿರೋಧವನ್ನು ಎದುರಿಸಿದೆ. ಈ ಅಡೆತಡೆಗಳನ್ನು ಪರಿಗಣಿಸಿ, ಅಧಿಕಾರಿಗಳು ಈಗ ಇಟಿಎಫ್ ಸ್ಥಾಪನೆಗೆ ಆದ್ಯತೆ ನೀಡುತ್ತಿದ್ದಾರೆ, ಸುಳ್ಯ ಮತ್ತು ಗುಂಡ್ಯವನ್ನು ಕೇಂದ್ರ ಕಾರ್ಯಾಚರಣೆಯ ವಲಯಗಳಾಗಿ ಗುರುತಿಸಲಾಗಿದೆ. ಪ್ರಸ್ತಾವನೆಗೆ ಈಗಾಗಲೇ ಸಚಿವ

ದ.ಕ ದಲ್ಲಿ ಶೀಘ್ರ ಆನೆ ಕಾರ್ಯಪಡೆ‌ ಸ್ಥಾಪನೆ Read More »

ಬಜ್ಪೆ: ಯುವಕನ ಮೇಲೆ‌ ಚೂರಿ ಇರಿತ| ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಎಡಪದವಿನಲ್ಲಿ ಸೋಮವಾರ ಬೈಕಿನಲ್ಲಿ ಸಾಗುತ್ತಿದ್ದ ನಾಲ್ವರು ಯುವಕರ ಗುಂಪು ಚೂರಿ ಇರಿದು ಯುವಕನನ್ನು ಕೊಲ್ಲಲು ಯತ್ನಿಸಿದೆ. ಈ ಕೃತ್ಯದಲ್ಲಿ ಭಾಗಿಯಾದ ಒಬ್ಬ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಖಿಲೇಶ್‌ ಹಲ್ಲೆಗೊಳಗಾದ ಯುವಕ. ಒಂದೇ ಬೈಕಿನಲ್ಲಿ ನಾಲ್ವರು ಕುಳಿತುಕೊಂಡು, ಕೈಯಲ್ಲಿ ಚೂರಿ ಹಿಡಿದುಕೊಂಡು ಸಾಗುತ್ತಿದ್ದುದ್ದನ್ನು ಅಖಿಲೇಶ್‌ ನೋಡಿದ್ದರು. ಈ ಕುರಿತು ವಿಡಿಯೊ ಚಿತ್ರೀಕರಿಸಲು ಅವರನ್ನು ಹಿಂಬಾಲಿಸಿದ್ದರು. ಬೈಕಿನಲ್ಲಿ ಸಾಗುತ್ತಿದ್ದ ಕಿಡಿಗೇಡಿಗಳು ಅಖಿಲೇಶ್‌ ಅವರತ್ತ ಚೂರಿ ಬೀಸಿದ್ದು, ಅವರ

ಬಜ್ಪೆ: ಯುವಕನ ಮೇಲೆ‌ ಚೂರಿ ಇರಿತ| ಆರೋಪಿ ಪೊಲೀಸ್ ವಶಕ್ಕೆ Read More »

ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಸುರತ್ಕಲ್-ನಂತೂರು-ಬಿ.ಸಿ. ರಸ್ತೆ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ಅನ್ನು ಸುಧಾರಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಕೊನೆಗೂ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿರುವ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಜಾಲವನ್ನು ಸುಧಾರಣೆ ಮಾಡುವ ಬೇಡಿಕೆ ತುಂಬಾ ವರ್ಷಗಳಿಂದ ಕೇಳಿಬಂದಿತ್ತು. ಕೊನೆಗೂ ಎನ್‌ಎಂಪಿಟಿ ವ್ಯಾಪ್ತಿಯ

ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ Read More »

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಮಗ್ರ ನ್ಯೂಸ್: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ಬಾಲಿವುಡ್ ಹೀ ಮ್ಯಾನ್’ ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಅವರ ಸಾವಿನ ವದಂತಿಗಳು

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ

ಸಮಗ್ರ ನ್ಯೂಸ್: ಮಲಕ್ಕಾ ಮತ್ತು ದಕ್ಷಿಣ ಅಂಡಮಾನ್‌ ಸಮುದ್ರ, ಬಂಗಾಲಕೊಲ್ಲಿ ಮತ್ತು ಶ್ರೀಲಂಕಾದಲ್ಲಿ ನಿಮ್ನ ಒತ್ತಡ ನಿರ್ಮಾಣಗೊಂಡಿದ್ದು, ಪಶ್ಚಿಮ ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ನ. 24ರಂದು ಇದರ ತೀವ್ರತೆ ಇನ್ನಷ್ಟು ಹೆಚ್ಚಾಗಿ ಮುಂದಿನ 48 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆ ಯಾಗುವ ಸಾಧ್ಯತೆ ಇದೆ. ನಿಮ್ನ ಒತ್ತಡದ ಪರಿಣಾಮ ಮತ್ತು ಹಿಂಗಾರು ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ರವಿವಾರವೂ ಮಳೆ

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ Read More »