ಉಡುಪಿ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ಸಾವು
ಸಮಗ್ರ ನ್ಯೂಸ್: ಶ್ರೀಮಾತಾ ಅಸ್ಪತ್ರೆಯ ಮಾಲಿಕ, ಗಾಯಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಉಡುಪಿಯ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಪರಿವರ್ತನಾ ಸಂಸ್ಥೆಯನ್ನು ನಡೆಸುತ್ತಿದ್ದರು. ಇವರು ಅತ್ಯುತ್ತಮ ಗಾಯಕರೂ ಹೌದು. ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ
ಉಡುಪಿ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ಸಾವು Read More »










