Editor

ಮಂಗಳೂರು: ಸ್ಥಳ ಮಹಜರು‌ ವೇಳೆ‌ ಪರಾರಿಯಾಗಲೆತ್ನಿಸಿದ ಚಡ್ಡಿಗ್ಯಾಂಗ್ ತಂಡ| ಪೊಲೀಸರಿಂದ‌ ಶೂಟೌಟ್, ಇಬ್ಬರಿಗೆ ಗುಂಡು

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ನಗರದ ಹೊರವಲಯದ ಪಡುಪಣಂಬೂರು ಎಂಬಲ್ಲಿ ಸ್ಥಳ‌ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ದರೋಡೆ ಆರೋಪಿಗಳನ್ನು ನಿನ್ನೆ ಸಕಲೇಶಪುರದಿಂದ ಬಂಧಿಸಿ ತರಲಾಗಿತ್ತು. ಬುಧವಾರ ಬೆಳಗ್ಗೆ ಸ್ಥಳ ಮಹಜರು ವೇಳೆ ಎಎಸ್ ಐ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ದರೋಡೆಕೋರರ […]

ಮಂಗಳೂರು: ಸ್ಥಳ ಮಹಜರು‌ ವೇಳೆ‌ ಪರಾರಿಯಾಗಲೆತ್ನಿಸಿದ ಚಡ್ಡಿಗ್ಯಾಂಗ್ ತಂಡ| ಪೊಲೀಸರಿಂದ‌ ಶೂಟೌಟ್, ಇಬ್ಬರಿಗೆ ಗುಂಡು Read More »

ಬಾಲಕನಿಗೆ ಕಿರುಕುಳ ನೀಡಿದ ಆರೋಪ/ ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾ

ಸಮಗ್ರ ನ್ಯೂಸ್‌: ಟಿಬೆಟನ್ ಧರ್ಮಗುರು ದಲೈಲಾಮ ವಿರುದ್ಧ ಬಾಲಕನೊಬ್ಬನಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಬಾಲಕನ ತುಟಿ ಚುಂಬಿಸಿ, ತಮ್ಮ ನಾಲಿಗೆ ಚೀಪುವಂತೆ ದಲೈಲಾಮ ಅವರು ಹೇಳುವ ವಿಡಿಯೋ ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವಿವಾದಕ್ಕೆ ಕಾರಣವಾಗಿತ್ತು. ದಲೈಲಾಮ ವಿರುದ್ಧ ಪೋಟೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ‘ಕಾನ್ಸೆಡರೇಷನ್ ಆಫ್ ಎನ್‌ಜಿಒ’ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ

ಬಾಲಕನಿಗೆ ಕಿರುಕುಳ ನೀಡಿದ ಆರೋಪ/ ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾ Read More »

14 ಉತ್ಪನ್ನಗಳ ಮಾರಾಟ ನಿಲ್ಲಿಸಿದ ಪತಂಜಲಿ/ ಸುಪ್ರೀಂ ಕೋರ್ಟ್‌ಗೆ ಮಾಹಿತಿ

ಸಮಗ್ರ ನ್ಯೂಸ್‌: 14 ಉತ್ಪನ್ನಗಳ ಮಾರಾಟ ನಿಲ್ಲಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಉತ್ಪನ್ನಗಳನ್ನು ಹಿಂತೆಗೆದುಕೊಳ್ಳುವಂತೆ 5,606 ಫ್ರಾಂಚೈಸ್ ಅಂಗಡಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಮತ್ತು ಈ 14 ಉತ್ಪನ್ನಗಳ ಜಾಹೀರಾತುಗಳನ್ನು ಹಿಂತೆಗೆದುಕೊಳ್ಳುವಂತೆ ಮಾಧ್ಯಮ ವೇದಿಕೆಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂಪನಿ ನ್ಯಾಯಾಲಯಕ್ಕೆ ತಿಳಿಸಿದೆ. ಜಾಹೀರಾತುಗಳನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ ಮಾಡಿದ ಮನವಿಯನ್ನು ಪೂರೈಸಲಾಗಿದೆಯೇ ಅಥವಾ ಇಲ್ಲವೇ ಎಂದು ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ

14 ಉತ್ಪನ್ನಗಳ ಮಾರಾಟ ನಿಲ್ಲಿಸಿದ ಪತಂಜಲಿ/ ಸುಪ್ರೀಂ ಕೋರ್ಟ್‌ಗೆ ಮಾಹಿತಿ Read More »

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ

ಸಮಗ್ರ ನ್ಯೂಸ್‌: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅವರು ಜೂನ್ ತಿಂಗಳ ಐಸಿಸಿ ಆಟಗಾರ ಮತ್ತು ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ಮಹಿಳಾ ಆಟಗಾರ್ತಿ ಗೌರವಕ್ಕೆ ಭಾಜನರಾಗಿದ್ದಾರೆ. ಜೂನ್ ತಿಂಗಳ ಐಸಿಸಿ ಆಟಗಾರ ಪಟ್ಟಿಯಲ್ಲಿ ಜಸ್‌ಪ್ರೀತ್ ಬುಮ್ರಾ ಜತೆ ರೋಹಿತ್ ಶರ್ಮಾ ಹಾಗೂ ಅಘಾನಿಸ್ತಾನದ ಆರಂಭಿಕ ಬ್ಯಾಟರ್ ರೆಹಮಾನುಲ್ಲಾ ಗುರ್ಬಾಜ್ ಕೂಡ ರೇಸ್‌ನಲ್ಲಿದ್ದರು. ಆದರೆ ಇವರನ್ನು ಬುಮ್ರಾ ಹಿಂದಿಕ್ಕಿ ಪ್ರಶಸ್ತಿ ಗೆದ್ದಿದ್ದಾರೆ. 30 ವರ್ಷದ ಬುಮ್ರಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ Read More »

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ

ಸಮಗ್ರ ನ್ಯೂಸ್::ಉತ್ತರ ಪ್ರದೇಶದ ಉನ್ನಾವ್‌ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ ಬಳಿ ಮುಂದೆ ಚಲಿಸುತ್ತಿದ್ದ ಹಾಲಿನ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಲೀಪರ್ ಬಸ್ ಹಿಂದಿನಿಂದ ಮುಂದೆ ಚಲಿಸುತ್ತಿದ್ದ

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ Read More »

ರಷ್ಯಾದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದ ಮೋದಿ/ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರದಾನ ಮಾಡಿದ ವ್ಲಾದಿಮಿರ್‌ ಪುತಿನ್‌

ಸಮಗ್ರ ನ್ಯೂಸ್‌: ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದು, ಮಂಗಳವಾರ ಮಾಸ್ಕೋ ಕ್ರೆಮಿನ್ ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಸಾಂಪ್ರದಾಯಿಕವಾಗಿ ಪ್ರದಾನ ಮಾಡಿದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ

ರಷ್ಯಾದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದ ಮೋದಿ/ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರದಾನ ಮಾಡಿದ ವ್ಲಾದಿಮಿರ್‌ ಪುತಿನ್‌ Read More »

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, “ಭಾರತೀಯ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ಅಪಾರ ಸಂತೋಷವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ. “ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ. ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಮಾದರಿಯ ಕ್ರಿಕೆಟ್ ನಲ್ಲಿ

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ Read More »

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ: ಅರ್ಚಕರ ಮೇಲೂ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನೊಬ್ಬ ರಂಪಾಟವನ್ನೇ ನಡೆಸಿದ್ದಾನೆ. ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದ ಪ್ರಾಂಗಣಕ್ಕೆ ನೇರ ಬೈಕ್ ಚಲಾಯಿಸಿಕೊಂಡು ಬಂದು ವ್ಯಕ್ತಿ ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಲ್ಲದೇ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನಂತೆ. ಇದನ್ನು ನೋಡಿ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಕೆಲಕಾಲ ಆತಂಕದ

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ: ಅರ್ಚಕರ ಮೇಲೂ ಹಲ್ಲೆ Read More »

ಮಂಗಳೂರು: ನಗರವಾಸಿಗಳ‌ ನೆಮ್ಮದಿ‌ ಕಸಿದಿದ್ದ ‘ಚಡ್ಡಿಗ್ಯಾಂಗ್’ನ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು| ಪೊಲೀಸರ ಕಾರ್ಯಾಚರಣೆಗೆ ಕೆಎಸ್ಆರ್ ಟಿಸಿ ಸಾಥ್!!

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ

ಮಂಗಳೂರು: ನಗರವಾಸಿಗಳ‌ ನೆಮ್ಮದಿ‌ ಕಸಿದಿದ್ದ ‘ಚಡ್ಡಿಗ್ಯಾಂಗ್’ನ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು| ಪೊಲೀಸರ ಕಾರ್ಯಾಚರಣೆಗೆ ಕೆಎಸ್ಆರ್ ಟಿಸಿ ಸಾಥ್!! Read More »

ಪುತ್ತೂರು: ರೋಟರಿ ಕ್ಲಬ್ ಯುವ ಪದಗ್ರಹಣ| ದಶಮಾನ ವರ್ಷದಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ

ಸಮಗ್ರ ನ್ಯೂಸ್: ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂಕೋಶಾಧಿಕಾರಿಯಾಗಿ ಅಭಿಷ್ ಕೆ ಅವರು ಇವತ್ತು ಪದಗ್ರಹಣಗೊಳ್ಳಲಿದ್ದಾರೆ. ಪದಗ್ರಹಣವನ್ನು PDG Dr ಗೌರಿ ಹಡಿಗಾಲ್ ಇವರು ನೆರವೇರಿಸಲಿದ್ದಾರೆ.ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷ ನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಆಗಿ ನಿಹಾಲ್ ಶೆಟ್ಟಿ, ಇಂಟರ್ನ್ಯಾಷನಲ್ ಸರ್ವಿಸ್ ಡೈರೆಕ್ಟರ್ ಆಗಿ ವಿನೀತ್

ಪುತ್ತೂರು: ರೋಟರಿ ಕ್ಲಬ್ ಯುವ ಪದಗ್ರಹಣ| ದಶಮಾನ ವರ್ಷದಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ Read More »