Editor

ಉಡುಪಿ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕ ಡಾ. ಸತೀಶ್ ಪೂಜಾರಿ‌ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಶ್ರೀಮಾತಾ ಅಸ್ಪತ್ರೆಯ ಮಾಲಿಕ, ಗಾಯಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಉಡುಪಿಯ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಪರಿವರ್ತನಾ ಸಂಸ್ಥೆಯನ್ನು ನಡೆಸುತ್ತಿದ್ದರು‌. ಇವರು ಅತ್ಯುತ್ತಮ ಗಾಯಕರೂ ಹೌದು. ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ

ಉಡುಪಿ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕ ಡಾ. ಸತೀಶ್ ಪೂಜಾರಿ‌ ಹೃದಯಾಘಾತದಿಂದ ಸಾವು Read More »

ಮುಡಾ ಪ್ರಕರಣ/ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್‌: ರಾಜ್ಯ ರಾಜಕಾರಣದಲ್ಲಿ ಉದ್ವಿಗ್ನತೆಗೆ ಕಾರಣವಾಗಿರುವ ಮುಡಾ ಪ್ರಕರಣದಲ್ಲಿ, ಇದೀಗ ಸಿದ್ದರಾಮಯ್ಯ ವಿರುದ್ಧ ಹೋರಾಟಗಾರ ಟಿಜೆ ಅಬ್ರಹಾಂ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಕೃಷಿ ಭೂಮಿ ಅಫಿಡವಿಟ್ ತನ್ನ ಪತ್ನಿಯ ಹೆಸರಿನಲ್ಲಿ 3.16 ಹೆಕ್ಟೇ‌ರ್ ಜಮೀನಿನ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿದ್ದಾರೆ. 2013 ರ ಚುನಾವಣಾ ಅಫಿಡವಿಟ್‌ನಲ್ಲಿದಾಖಲೆಗಳನ್ನು ಪ್ರಸ್ತುತಪಡಿಸಲಾಗಿಲ್ಲ. ಸಿದ್ದರಾಮಯ್ಯ ಕಣ್ಣೆದುರಿಗಿದ್ದರೂ ಕೃಷಿಭೂಮಿಯ ವಿವರಗಳನ್ನು ಮುಚ್ಚಿಡಲಾಗುತ್ತಿದೆ. ಉದ್ದೇಶಪೂರ್ವಕವಾಗಿ ಕಲಂ ಖಾಲಿ ಬಿಡಲಾಗಿದೆ ಎಂದು ದೂರು ನೀಡಲಾಗಿದೆ. ಭಾರತೀಯ ದಂಡ ಸಂಹಿತೆಯ ಪ್ರಜಾಪ್ರತಿನಿಧಿ ಕಾಯ್ದೆಯಡಿ ಸೂಕ್ತ ಕ್ರಮ

ಮುಡಾ ಪ್ರಕರಣ/ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ಮತ್ತೊಮ್ಮೆ ತೆರೆಯಲಿದೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ

ಸಮಗ್ರ ನ್ಯೂಸ್‌: ನಾಲ್ಕು ದಶಕಗಳ ನಂತರ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ಜು.14ರಂದು ತೆರೆಯಲು ಒಡಿಶಾ ಸರ್ಕಾರ ನಿರ್ಧರಿಸಿದೆ. ಆಭರಣ ಹಾಗೂ ಬೆಲೆಬಾಳುವ ಲೋಹಗಳಿರುವ ಈ ತಿಜೋರಿಯನ್ನು ಕೊನೆಯ ಬಾರಿಗೆ 1985ರಲ್ಲಿ ತೆರೆಯಲಾಗಿತ್ತು. ಮುಖ್ಯಮಂತ್ರಿ ಮೋಹನ್ ಮಾಝಿ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿ ರತ್ನಭಂಡಾರದಲ್ಲಿರುವ ಅಮೂಲ್ಯ ವಸ್ತುಗಳನ್ನು ದಾಸ್ತಾನು ಮಾಡಲಿದೆ. ಕಳೆದ ಬಾರಿ ತೆರೆಯಲಾದಾಗ ಭಂಡಾರದಲ್ಲಿ 12,500 ರತ್ನಖಚಿತ ಚಿನ್ನದ ಆಭರಣ ಹಾಗೂ 22,000 ತುಂಡು ಬೆಳ್ಳಿ ಇತ್ತು. 2018ರಲ್ಲಿ ಇದರ ತನಿಖೆ

ಮತ್ತೊಮ್ಮೆ ತೆರೆಯಲಿದೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ Read More »

ರಾಜ್ಯದ ಹಲವೆಡೆ ಭ್ರಷ್ಟರಿಗೆ ಶಾಕ್ ನೀಡಿದ ಲೋಕಾಯುಕ್ತ| ಬೆಳ್ಳಂಬೆಳಗ್ಗೆ‌ ಹಲವು ತಿಮಿಂಗಿಲಗಳಿಗೆ ಬಲೆ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಳಗ್ಗೆಯಷ್ಟೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದೀಗ ಅದರ ಬೆನ್ನಲ್ಲೇ ಕರ್ನಾಟಕದಾದ್ಯಂತ ಹಲವು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಇಳಿದಿದ್ದಾರೆ. ಗುರುವಾರ ಬೆಳ್ಳಂಬೆಳಗ್ಗೆಯೇ 56 ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ​​11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​

ರಾಜ್ಯದ ಹಲವೆಡೆ ಭ್ರಷ್ಟರಿಗೆ ಶಾಕ್ ನೀಡಿದ ಲೋಕಾಯುಕ್ತ| ಬೆಳ್ಳಂಬೆಳಗ್ಗೆ‌ ಹಲವು ತಿಮಿಂಗಿಲಗಳಿಗೆ ಬಲೆ Read More »

ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

ಸಮಗ್ರ ನ್ಯೂಸ್: ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಘಟನೆ ವರದಿಯಾಗಿತ್ತು. ಪಟ್ಲ ಬೆಟ್ಟ ಸಕಲೇಶಪುರ ಪಟ್ಟಣದಿಂದ 40 ಕಿಮೀ ದೂರದಲ್ಲಿದೆ. ಪ್ರತಿನಿತ್ಯ ಒಂದಲ್ಲ ಒಂದು ವಿಚಾರದಲ್ಲಿ ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಆಗಾಗ ನಡೆಯುತ್ತಿದ್ದ ಕರಣ ಜಗಳಕ್ಕೆ ಕಡಿವಾಣ ಹಾಕಿ ಪ್ರಕೃತಿಯನ್ನು ರಕ್ಷಿಸಲು ಇಲಾಖೆ

ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ Read More »

ಉಡುಪಿ: ಇಲ್ಲಿ‌ ಎಣ್ಣೆ ಹೊಡೆಯೋರಿಗೂ ನೀಡಲಾಗುತ್ತೆ ಉಚಿತ ವಾಹನ ವ್ಯವಸ್ಥೆ!?| ಆಟೋದ ಮೇಲೊಂದು ವಿಭಿನ್ನ ಬರಹ ವೈರಲ್

ಸಮಗ್ರ ನ್ಯೂಸ್: ಮದ್ಯಪಾನ ಪ್ರಿಯರಿಗೆ ಎದುರಾಗುವ ದೊಡ್ಡ ಸಮಸ್ಯೆ ಎಂದರೆ ಕುಡಿದಾದ ಬಳಿಕ ವಾಹನ ಓಡಿಸುವುದು. ಹಾಗೊಮ್ಮೆ ಹೇಗೋ ಕಷ್ಟ ಪಟ್ಟು ವಾಹನ ಓಡಿಸಿಕೊಂಡು ಹೋದರು ಕೂಡ ಪೊಲೀಸರ ಕೈಗೆ ಸಿಕ್ಕಿ ಬಿದ್ದರೆ ಅದಕ್ಕಿಂತ ದೊಡ್ಡ ಸಮಸ್ಯೆ ಮತ್ತೊಂದಿಲ್ಲ. ಯಾಕೆಂದರೆ ಒಂದೊಮ್ಮೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡರೂ ಸಹ ಮದ್ಯದ ಅಮಲಿನಲ್ಲಿ ಅಪಘಾತವಾದರೆ ಹೇಗೋ ಎಂಬ ಭೀತಿಯೂ ಕಾಡುತ್ತಿರುತ್ತದೆ. ಇದಕ್ಕೆ ಪರಿಹಾರವೆಂಬಂತೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಅಜೆಕಾರುವಿನಲ್ಲಿರುವ ರಚನಾ ಬಾರ್ ಅಂಡ್ ರೆಸ್ಟೋರೆಂಟ್ ಮಾರ್ಗ ಒಂದನ್ನು ಹುಡುಕಿಕೊಂಡಿದೆ

ಉಡುಪಿ: ಇಲ್ಲಿ‌ ಎಣ್ಣೆ ಹೊಡೆಯೋರಿಗೂ ನೀಡಲಾಗುತ್ತೆ ಉಚಿತ ವಾಹನ ವ್ಯವಸ್ಥೆ!?| ಆಟೋದ ಮೇಲೊಂದು ವಿಭಿನ್ನ ಬರಹ ವೈರಲ್ Read More »

ಕೊಡಗಿನ‌ ಪೊನ್ನಂಪೇಟೆಯಲ್ಲೊಂದು ಅಮಾನವೀಯ ಘಟನೆ| ಡ್ರಾಪ್ ಕೇಳಿದ ಬಾಲಕಿ‌‌ಯರ ಮೇಲೆ ಐವರಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಡ್ರಾಪ್ ಕೇಳಿದ ಬಾಲಕಿ‌ ಮೇಲೆ ತಮ್ಮ‌ ಜೊತೆಯಲ್ಲಿ‌ ಬಂದಿದ್ದ ಯುವಕರಿಂದಲೇ ಅತ್ಯಾಚಾರ ಮಾಡಿರುವ ಘಟನೆ ಜೂನ್ 9 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ನಡೆದು ಸಾಗುತ್ತಿದ್ದ ಮೂವರು ಬಾಲಕಿಯರು ಜೂನ್ 9ರಂದು ಬರುತ್ತಿದ್ದ ಕಾರನ್ನು ತಡೆದು ನಾಗರಹೊಳೆಗೆ ಡ್ರಾಪ್‌ ನೀಡುವಂತೆ ವಿನಂತಿ ಮಾಡಿದ್ದರು. ಆದರೆ ಆ ಕಾರಿನಲ್ಲಿ ಕಾಮುಕರಿರುವುದು ಇವರಿಗೆ ತಿಳಿದಿರಲಿಲ್ಲ. ಮಾರುತಿ 800 ಕಾರಿನಲ್ಲಿ ನಾಗರಹೊಳೆ‌ ಕಡೆ ಬಾಲಕಿಯರು

ಕೊಡಗಿನ‌ ಪೊನ್ನಂಪೇಟೆಯಲ್ಲೊಂದು ಅಮಾನವೀಯ ಘಟನೆ| ಡ್ರಾಪ್ ಕೇಳಿದ ಬಾಲಕಿ‌‌ಯರ ಮೇಲೆ ಐವರಿಂದ ಅತ್ಯಾಚಾರ Read More »

ಸಕಲೇಶಪುರ: ಹಣಸೆ ಸ. ಹಿ ಪ್ರಾ ಶಾಲೆಯ ಮಕ್ಕಳಿಗೆ ಪುಸ್ತಕ ಪರಿಕರ ವಿತರಣೆ

ಸಮಗ್ರ ನ್ಯೂಸ್: ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ದಾನಿ ಸಿಸ್ಟರ್ ಪ್ರೆಸಿಲ್ಲ ಕುಮಾರಿ ಅವರು ಕೊಡಗು ಜಿಲ್ಲೆಯ ಶನಿವಾರಸಂತೆ ಹೋಬಳಿಯ ಬಸವನಕೊಪ್ಪ ಗ್ರಾಮದ ಪಕ್ಕದಲ್ಲಿ ಇರುವ ಗಡಿ ಭಾಗಕ್ಕೆ ಸೇರಿದ ಹಾಸನ ಜಿಲ್ಲೆಗೆ ಸೇರಿದ ಸಕಲೇಶಪುರ ತಾಲೂಕಿನ ಹಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 16 ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ಮತ್ತು ಪರಿಕರಗಳನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾನು ಇದೇ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯಾಗಿದ್ದು ಈ ಶಾಲೆಯಲ್ಲಿ ಓದಿ ಇಂದು ನಾನು ಕಿನ್ಯಾ

ಸಕಲೇಶಪುರ: ಹಣಸೆ ಸ. ಹಿ ಪ್ರಾ ಶಾಲೆಯ ಮಕ್ಕಳಿಗೆ ಪುಸ್ತಕ ಪರಿಕರ ವಿತರಣೆ Read More »

ಹಿರಿಯ ಪತ್ರಕರ್ತೆ ಆಯೆಷಾ ಖಾನಂ ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ‌‌ ನೇಮಕ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದರೊಂದಿಗೆಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಮಹಿಳೆಯೊಬ್ಬರು ಅಧ್ಯಕ್ಷರಾಗಿ ನೇಮಕಗೊಂಡಿರುವುದು ಇದೇ ಮೊದಲು. ಪ್ರಥಮ ಬಾರಿಗೆ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸ್ಥಾನವನ್ನು ಉನ್ನತ ಶ್ರೇಣಿಯ ಅಲ್ಪಸಂಖ್ಯಾತ ಮಹಿಳೆಯೊಬ್ಬರು ತಮ್ಮ ವೃತ್ತಿಪರತೆಯನ್ನು ಉಳಿಸಿಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರು 20 ವರ್ಷಗಳಿಂದ ಮಾಧ್ಯಮ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ದಿ ಏಷ್ಯನ್ ಏಜ್, ಸ್ಟಾರ್ ನ್ಯೂಸ್, ಆಜ್ ತಕ್, ದೂರದರ್ಶನ

ಹಿರಿಯ ಪತ್ರಕರ್ತೆ ಆಯೆಷಾ ಖಾನಂ ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ‌‌ ನೇಮಕ Read More »

ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಗೆ ಲವ್ ಜಿಹಾದ್ ಕಾರಣವಲ್ಲ| ಸಿಐಡಿ ಚಾರ್ಜ್ ಶೀಟ್ ನಲ್ಲಿ ಹೇಳಿದ್ದೇನು?

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎಂಬ ಕಾಲೇಜು ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಕುರಿತು ಎಲ್ಲಿಯೂ ಉಲ್ಲೇಖವಾಗಿಲ್ಲ. ನೇಹಾ ಹಿರೇಮಠ ಹತ್ಯೆಗೆ ಆರೋಪಿಯ ಹತಾಶೆಯೇ ಕಾರಣ ಎಂದು ಸಿಐಟಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ವೇಳೆ, ಲವ್ ಜಿಹಾದ್​ ಕುರಿತ ಯಾವುದೇ ವಿಚಾರಗಳನ್ನು ನಮೂದಿಸಿಲ್ಲ. ಒಟ್ಟು 483 ಪುಟಗಳ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.ಆರೋಪಿ ಫಯಾಜ್

ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಗೆ ಲವ್ ಜಿಹಾದ್ ಕಾರಣವಲ್ಲ| ಸಿಐಡಿ ಚಾರ್ಜ್ ಶೀಟ್ ನಲ್ಲಿ ಹೇಳಿದ್ದೇನು? Read More »