Editor

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ

ಸಮಗ್ರ ನ್ಯೂಸ್::ಉತ್ತರ ಪ್ರದೇಶದ ಉನ್ನಾವ್‌ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ ಬಳಿ ಮುಂದೆ ಚಲಿಸುತ್ತಿದ್ದ ಹಾಲಿನ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಲೀಪರ್ ಬಸ್ ಹಿಂದಿನಿಂದ ಮುಂದೆ ಚಲಿಸುತ್ತಿದ್ದ […]

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ Read More »

ರಷ್ಯಾದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದ ಮೋದಿ/ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರದಾನ ಮಾಡಿದ ವ್ಲಾದಿಮಿರ್‌ ಪುತಿನ್‌

ಸಮಗ್ರ ನ್ಯೂಸ್‌: ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದು, ಮಂಗಳವಾರ ಮಾಸ್ಕೋ ಕ್ರೆಮಿನ್ ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಸಾಂಪ್ರದಾಯಿಕವಾಗಿ ಪ್ರದಾನ ಮಾಡಿದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ

ರಷ್ಯಾದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದ ಮೋದಿ/ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರದಾನ ಮಾಡಿದ ವ್ಲಾದಿಮಿರ್‌ ಪುತಿನ್‌ Read More »

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, “ಭಾರತೀಯ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ಅಪಾರ ಸಂತೋಷವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ. “ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ. ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಮಾದರಿಯ ಕ್ರಿಕೆಟ್ ನಲ್ಲಿ

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ Read More »

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ: ಅರ್ಚಕರ ಮೇಲೂ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನೊಬ್ಬ ರಂಪಾಟವನ್ನೇ ನಡೆಸಿದ್ದಾನೆ. ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದ ಪ್ರಾಂಗಣಕ್ಕೆ ನೇರ ಬೈಕ್ ಚಲಾಯಿಸಿಕೊಂಡು ಬಂದು ವ್ಯಕ್ತಿ ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಲ್ಲದೇ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನಂತೆ. ಇದನ್ನು ನೋಡಿ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಕೆಲಕಾಲ ಆತಂಕದ

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ: ಅರ್ಚಕರ ಮೇಲೂ ಹಲ್ಲೆ Read More »

ಮಂಗಳೂರು: ನಗರವಾಸಿಗಳ‌ ನೆಮ್ಮದಿ‌ ಕಸಿದಿದ್ದ ‘ಚಡ್ಡಿಗ್ಯಾಂಗ್’ನ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು| ಪೊಲೀಸರ ಕಾರ್ಯಾಚರಣೆಗೆ ಕೆಎಸ್ಆರ್ ಟಿಸಿ ಸಾಥ್!!

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ

ಮಂಗಳೂರು: ನಗರವಾಸಿಗಳ‌ ನೆಮ್ಮದಿ‌ ಕಸಿದಿದ್ದ ‘ಚಡ್ಡಿಗ್ಯಾಂಗ್’ನ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು| ಪೊಲೀಸರ ಕಾರ್ಯಾಚರಣೆಗೆ ಕೆಎಸ್ಆರ್ ಟಿಸಿ ಸಾಥ್!! Read More »

ಪುತ್ತೂರು: ರೋಟರಿ ಕ್ಲಬ್ ಯುವ ಪದಗ್ರಹಣ| ದಶಮಾನ ವರ್ಷದಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ

ಸಮಗ್ರ ನ್ಯೂಸ್: ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂಕೋಶಾಧಿಕಾರಿಯಾಗಿ ಅಭಿಷ್ ಕೆ ಅವರು ಇವತ್ತು ಪದಗ್ರಹಣಗೊಳ್ಳಲಿದ್ದಾರೆ. ಪದಗ್ರಹಣವನ್ನು PDG Dr ಗೌರಿ ಹಡಿಗಾಲ್ ಇವರು ನೆರವೇರಿಸಲಿದ್ದಾರೆ.ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷ ನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಆಗಿ ನಿಹಾಲ್ ಶೆಟ್ಟಿ, ಇಂಟರ್ನ್ಯಾಷನಲ್ ಸರ್ವಿಸ್ ಡೈರೆಕ್ಟರ್ ಆಗಿ ವಿನೀತ್

ಪುತ್ತೂರು: ರೋಟರಿ ಕ್ಲಬ್ ಯುವ ಪದಗ್ರಹಣ| ದಶಮಾನ ವರ್ಷದಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ Read More »

ಎಲೆಕ್ಟ್ರಿಕ್ ವಾಹನದಲ್ಲಿ ಪುತಿನ್ – ಮೋದಿ ರೌಂಡ್ಸ್| ನಮೋಗೆ ಸಾರಥಿಯಾದ ರಷ್ಯಾ ಅಧ್ಯಕ್ಷ

ಸಮಗ್ರ ನ್ಯೂಸ್: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಹಳ ಆತ್ಮೀಯವಾಗಿ ನಿನ್ನೆ ಬರಮಾಡಿಕೊಂಡಿದ್ದು, ಅದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಅವರು ಡ್ರೈವರ್ ಸೀಟಿನಲ್ಲಿ ಕುಳಿತಿದ್ದು, ಪ್ರಧಾನಿ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದಾರೆ. ಇಬ್ಬರು ಆ ಪ್ರಯಾಣವನ್ನು ಎಂಜಾಯ್ ಮಾಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಹೀಗೆ ಕಾರಿನಲ್ಲಿ ಪ್ರಧಾನಿಯವರನ್ನು ಕೂರಿಸಿಕೊಂಡೆ ರಷ್ಯಾ ಅಧ್ಯಕ್ಷ ಪುಟಿನ್ ಅವರು ತಮ್ಮ ಬಂಗಲೆಗೆ ಒಂದು

ಎಲೆಕ್ಟ್ರಿಕ್ ವಾಹನದಲ್ಲಿ ಪುತಿನ್ – ಮೋದಿ ರೌಂಡ್ಸ್| ನಮೋಗೆ ಸಾರಥಿಯಾದ ರಷ್ಯಾ ಅಧ್ಯಕ್ಷ Read More »

ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಸುನ್ನಿ ಮುಸ್ಲಿಮರ ಆಧ್ಯಾತ್ಮಿಕ ನೇತಾರರು, ಉಳ್ಳಾಲದ ಗೌರವಾನ್ವಿತ ಖಾಝಿಯೂ ಆದ ಕೂರತ್ ತಂಘಳ್ ಎಂದೇ ಪ್ರಸಿದ್ಧರಾದ ಬಹುಮಾನ್ಯ ಸೆಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಳ್ ರವರು ನಮ್ಮನಗಲಿದ್ದಾರೆ, ಇವರ ವಿಯೋಗವು ಮುಸ್ಲಿಂ ಸಮುದಾಯ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿಗೆ ಎಂದು SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಪ್ರಕಟಣೆಯಲ್ಲಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಕೇರಳ, ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದಲ್ಲಿ ಸುನ್ನಿ ಸಮೂಹಕ್ಕೆ ಆಧ್ಯಾತ್ಮಿಕ ನಾಯಕತ್ವವನ್ನು ನೀಡಿದ ಗೌರವಾನ್ವಿತರು ದೊಡ್ಡ

ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ Read More »

ನಡುರಸ್ತೆಯಲ್ಲೇ ಧಗಧಗನೇ ಉರಿದು ಹೋದ ಬಿಎಂಟಿಸಿ ಬಸ್

ಸಮಗ್ರ ನ್ಯೂಸ್: ಬೆಂಗಳೂರಿನ ಎಂ.ಜಿ ರೋಡ್​ನ ಅನಿಲ್​ ಕುಂಬ್ಳೆ ಸರ್ಕಲ್​ ಬಳಿ 144ಈ ಮಾರ್ಗದ ಬಿಎಂಟಿಸಿ ಬಸ್​ವೊಂದು ದಿಢೀರ್​ ಅಗ್ನಿಗೆ ಆಹುತಿಯಾಗಿದೆ. ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲಾ ಪ್ರಯಾಣಿಕರನ್ನು ಬಸ್​ನಿಂದ ಕೆಳಗಿಳಿಸಿದ ಚಾಲಕ ಮತ್ತು ನಿರ್ವಾಹಕ, ತಕ್ಷಣವೇ ಸ್ಥಳದಿಂದ ದೂರ ಓಡಿದ್ದಾರೆ. ಕ್ಷಣಮಾತ್ರದಲ್ಲಿ ಬಸ್​ ಧಗಧಗನೆ ಹೊತ್ತಿ ಉರಿದ ದೃಶ್ಯ ಸ್ಥಳೀಯರ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಡುರಸ್ತೆಯಲ್ಲೇ ಧಗಧಗನೇ ಉರಿದು ಹೋದ ಬಿಎಂಟಿಸಿ ಬಸ್ Read More »

ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ ಐಆರ್ ದಾಖಲಾಗಿದೆ. ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸರ್ಕಾರ ನಿಗದಿ ಪಡಿಸಿದ ನಿಯಮಗಳನ್ನು ಗಾಳಿಗೆ ತೂರಿ ತಡರಾತ್ರಿವರೆಗೂ ಪಬ್ ತೆರೆದು ಪಾರ್ಟಿಗಳಿಗೆ ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿರುವ ಪಬ್, ರೆಸ್ಟೋರೆಂಟ್, ಬಾರ್ ಗಳ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜುಲೈ 6ರಂದು ರಾತ್ರಿ

ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ Read More »