Editor

ಉಡುಪಿ: ನೆರೆನೀರಲ್ಲಿ ಕೊಚ್ಚಿ ಹೋದ ಕಾರು| ಪ್ರಯಾಣಿಕರು ಜಸ್ಟ್ ಮಿಸ್

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಾಂತ ಮಳೆ ಆರ್ಭಟ ಜೋರಾಗಿದ್ದು, ಕನ್ನರ್ಪಾಡಿಯಲ್ಲಿ ಕಾರೊಂದು ರಸ್ತೆಯಿಂದ ಕೊಚ್ಚಿಹೋಗಿ, ಮೂವರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಕಾರೊಂದು ಕನ್ನರ್ಪಾಡಿಯಲ್ಲಿ ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ವೇಳೆ, ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದು ಮೂವರು ಪ್ರಯಾಣಿಕರು‌ ಕಾರಿನ ಬಾಗಿಲು ಹೊಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ‌ ಸಿಬಂದಿ ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ನಗರದ ಸುತ್ತಮುತ್ತಲಿನ ಪ್ರದೇಶಗಳಾದ ಗುಂಡಿಬೈಲು, ಕಲ್ಸಂಕ, ಮಠದಬೆಟ್ಟು ಜಲಾವೃತವಾಗಿವೆ. ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸುತ್ತಿದ್ದು […]

ಉಡುಪಿ: ನೆರೆನೀರಲ್ಲಿ ಕೊಚ್ಚಿ ಹೋದ ಕಾರು| ಪ್ರಯಾಣಿಕರು ಜಸ್ಟ್ ಮಿಸ್ Read More »

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ| ‘ನೆರವಾಗಿ ಇಲ್ಲ ದಯಾಮರಣ ಕರುಣಿಸಿ’ ಎಂದು ಈಮೇಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ನಾವೂರು ಗ್ರಾಮದ ಬಡ ಕುಟುಂಬದ ಚಾಂದಿನಿ ಜಿ.ಡಿ. (33) ಎಂಬುವರು ‘ಹೈಪರ್‌ ಐಜಿಇ ಸಿಂಡ್ರೋಮ್‌’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ವೆಚ್ಚ ಭರಿಸಲು ಸರ್ಕಾರದ ನೆರವು ಕೋರಿದ್ದಾರೆ. ‘ಚಿಕಿತ್ಸೆಗೆ ನೆರವು ನೀಡಲು ಸಾಧ್ಯವಾಗದಿದ್ದರೆ ದಯಾಮರಣವನ್ನಾದರೂ ನೀಡಿ’ ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರಿಗೆ ಇ- ಮೇಲ್‌ ಕಳುಹಿಸಿದ್ದಾರೆ. ‘ನನ್ನ ಕಾಯಿಲೆಗೆ ಊರಿನಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ| ‘ನೆರವಾಗಿ ಇಲ್ಲ ದಯಾಮರಣ ಕರುಣಿಸಿ’ ಎಂದು ಈಮೇಲ್ Read More »

ರೆಡ್ ಅಲರ್ಟ್ ಹಿನ್ನೆಲೆ|ಜುಲೈ 9ರಂದು ದ.ಕ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಜು. 9ರಂದು ರೆಡ್ ಅಲರ್ಟ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಮುಲ್ಲೈ‌ ಮುಗಿಲನ್ ಆದೇಶಿಸಿದ್ದಾರೆ. ಮಳೆಯಿಂದಾಗಿ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದ್ದು, ನಾಗರಿಕರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ರೆಡ್ ಅಲರ್ಟ್ ಹಿನ್ನೆಲೆ|ಜುಲೈ 9ರಂದು ದ.ಕ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ Read More »

ಕಲಬುರಗಿ: ರಾತ್ರಿ ಪ್ರವಚನ ನೀಡಿದ ವಿರಕ್ತ ಮಠದ ಸ್ವಾಮೀಜಿ ಮುಂಜಾನೆ ಸಾವು!

ಸಮಗ್ರ ನ್ಯೂಸ್: ರಾತ್ರಿ ಪ್ರವಚನ ನೀಡಿದ್ದ ಸ್ವಾಮೀಜಿ ಬೆಳಗಾಗುವುದರೊಳಗೆ ಹೃದಯಾಘಾತಕ್ಕೆ ಬಲಿಯಾಗಿರುವ ದುಖಃಕರ ಘಟನೆ ಕಲಬುರಗಿಯ ವಿರಕ್ತ ಮಠದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಠಕಲ್ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ. ನಸುಕಿನ ಜಾವ ತೀವ್ರ ಹೃದಯಾಘಾತಕ್ಕೊಳಗಾಗಿ ಮಠದಲ್ಲೇ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಪ್ರಾಣ ಬಿಟ್ಟಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆದಿದೆ. ಜು.7ರಂದು ರಟಕಲ್ ಗ್ರಾಮದಲ್ಲಿ ವಚನ ಸಂಗಮ

ಕಲಬುರಗಿ: ರಾತ್ರಿ ಪ್ರವಚನ ನೀಡಿದ ವಿರಕ್ತ ಮಠದ ಸ್ವಾಮೀಜಿ ಮುಂಜಾನೆ ಸಾವು! Read More »

ನಟ, ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು!!

ಸಮಗ್ರ ನ್ಯೂಸ್: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್​ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ,

ನಟ, ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು!! Read More »

ಮುಂದುವರಿದ ಮಳೆಯಬ್ಬರ|ಜುಲೈ 9ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಜು. 9ರಂದು ರೆಡ್ ಅಲರ್ಟ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಆದೇಶಿಸಿದ್ದಾರೆ. ಮಳೆಯಿಂದಾಗಿ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದ್ದು, ನಾಗರಿಕರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ಮುಂದುವರಿದ ಮಳೆಯಬ್ಬರ|ಜುಲೈ 9ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ Read More »

ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ/ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್ ಟಿಕೆಟ್ ಉಚಿತ

ಸಮಗ್ರ ನ್ಯೂಸ್‌: ಪ್ರತಿವರ್ಷದಂತೆ ಈ ವರ್ಷವೂ ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ವಿಶೇಷವಾದ ಪೂಜೆಯನ್ನ ಸಲ್ಲಿಸಲಾಗುತ್ತಿದ್ದು, ಈ ದಿನ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್ ಟಿಕೆಟ್ ಉಚಿತವಾಗಿರಲಿದೆ. ಆಷಾಢ ಶುಕ್ರವಾರಕ್ಕಾಗಿ ಮೈಸೂರು ಜಿಲ್ಲಾಡಳಿತ ಮಂಡಳಿ ಭರದ ಸಿದ್ಧತೆ ನಡೆಸಿದ್ದು, ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಉಚಿತ ಬಸ್ ಸೇವೆ ಒದಗಿಸಲಿದೆ. ಲಲಿತ ಮಹಲ್ ಅರಮನೆ ಮೈದಾನದಿಂದ ನಲವತ್ತು ಬಸ್‌ಗಳು ಸಂಚರಿಸಲಿದ್ದು, ಚಾಮುಂಡಿ ಬೆಟ್ಟದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು

ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ/ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್ ಟಿಕೆಟ್ ಉಚಿತ Read More »

ಮತ್ತೆ ಭಾರೀ ಮಳೆ‌ ಸಾಧ್ಯತೆ|ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ| ಮಲೆನಾಡಿನಲ್ಲಿ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಈಗಾಗಲೇ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಅಷ್ಟೆ ಅಲ್ಲದೆ ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಜು.9 ರಿಂದ 12 ರವರೆಗೆ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ಏಳು ದಿನಗಳ ಕಾಲ

ಮತ್ತೆ ಭಾರೀ ಮಳೆ‌ ಸಾಧ್ಯತೆ|ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ| ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ Read More »

ಅಗ್ನಿ ಅವಘಡಗಳಿಂದ ರಕ್ಷಣೆ/ ರಾಜ್ಯದಲ್ಲಿ ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟ್‌ ಸೇವೆಗೆ ಲಭ್ಯ

ಸಮಗ್ರ ನ್ಯೂಸ್‌: ಅಗ್ನಿ ಅವಘಡಗಳ ಸಂದರ್ಭಗಳಲ್ಲಿ ಬೆಂಕಿ ನಂದಿಸಲು ಹಾಗೂ ಅಪಾಯದಲ್ಲಿ ಸಿಲುಕಿದ ಜನರನ್ನು ರಕ್ಷಿಸಲು ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಪ್ರಥಮ ಬಾರಿಗೆ ರಿಮೋಟ್‌ ನಿಯಂತ್ರಿತ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟ್‌ ಪರಿಚಯಿಸಲು ಮುಂದಾಗಿದೆ. ಅಗ್ನಿ ದುರಂತ ಸಂದರ್ಭದಲ್ಲಿ ಕ್ಲಿಷ್ಟ ಸ್ಥಳಗಳಿಗೆ ತೆರಳಿ ಅಗ್ನಿ ನಂದಿಸುವ ಹಾಗೂ ಕಟ್ಟಡಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಈ ರೋಬೋಟ್‌ ನೆರವಾಗಲಿದೆ. ಈಗಾಗಲೇ ಸುಮಾರು 1 ಕೋಟಿ ರು. ವೆಚ್ಚದಲ್ಲಿ ರೋಬೋಟ್‌ ಖರೀದಿಸಲು ಟೆಂಡರ್‌ ಆಹ್ವಾನಿಸಲಾಗಿದೆ.

ಅಗ್ನಿ ಅವಘಡಗಳಿಂದ ರಕ್ಷಣೆ/ ರಾಜ್ಯದಲ್ಲಿ ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟ್‌ ಸೇವೆಗೆ ಲಭ್ಯ Read More »

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಞಳ್ ಇನ್ನಿಲ್ಲ

ಸಮಗ್ರ ನ್ಯೂಸ್: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು. ಕೇರಳದ ಎಟ್ಟಿಕುಳಂನಲ್ಲಿರುವ ಅವರು ರಾತ್ರಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಈಗ ಕೂರತ್ ತಂಙಳ್ ರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್ ನಲ್ಲಿ ಜನಾಝ ನಮಾಝ್ ನಡೆಯಲಿದೆ.

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಞಳ್ ಇನ್ನಿಲ್ಲ Read More »