Editor

ಬೆಳ್ತಂಗಡಿ: ಮಹಿಳೆಯ ಅಂಗಡಿಗೆ ನುಗ್ಗಿ‌ ಹಲ್ಲೆ| ಶಾಸಕ‌ ಹರೀಶ್ ಪೂಂಜಾ ಆಪ್ತ ಅರೆಸ್ಟ್

ಸಮಗ್ರ ನ್ಯೂಸ್: ಟೈಲರಿಂಗ್ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆಯ ಸಿಸಿ ಕ್ಯಾಮೆರಾ ದೃಶ್ಯಗಳು ಎಲ್ಲೆಡೆ ವೈರಲ್ ಆದ ಬಳಿಕ ಬೆಳ್ತಂಗಡಿ ಶಾಸಕರ ಆಪ್ತ, ಆರೆಸ್ಸೆಸ್ ಕಾರ್ಯಕರ್ತ ನವೀನ್ ಕನ್ಯಾಡಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನವೀನ್ ಮತ್ತು ಟೈಲರಿಂಗ್ ನಡೆಸುವ ಮಹಿಳೆಯ ನಡುವೆ ಹಣಕಾಸಿನ ವ್ಯವಹಾರವೂ ಇದ್ದು, ಸಾಲ ಮರುಪಾವತಿಗೆ ಪಟ್ಟು ಹಿಡಿದುದಕ್ಕಾಗಿ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹಲ್ಲೆ ಪ್ರಕರಣ ನಡೆದು ಎರಡು […]

ಬೆಳ್ತಂಗಡಿ: ಮಹಿಳೆಯ ಅಂಗಡಿಗೆ ನುಗ್ಗಿ‌ ಹಲ್ಲೆ| ಶಾಸಕ‌ ಹರೀಶ್ ಪೂಂಜಾ ಆಪ್ತ ಅರೆಸ್ಟ್ Read More »

171 ಲಕ್ಷ ಕೋಟಿಗೆ ಏರಿದ ಕೇಂದ್ರ ಸರ್ಕಾರದ ಸಾಲ| ನಿರ್ವಹಣಾ ತ್ರೈಮಾಸಿಕ ವರದಿ ಹೇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ಒಟ್ಟು ಸಾಲವು 2024ರ ಮಾರ್ಚ್‌ ಅಂತ್ಯದ ವೇಳೆಗೆ ₹171.78 ಲಕ್ಷ ಕೋಟಿಗೆ ಏರಿಕೆಯಾಗಿದೆ. 2023ರ ಡಿಸೆಂಬರ್‌ ಅಂತ್ಯದಿಂದ ಆರಂಭಗೊಂಡು 2024ರ ಮಾರ್ಚ್‌ ಅಂತ್ಯದ ವೇಳೆದ ವೇಳೆ ಶೇ 3.4ರಷ್ಟು ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯದ ಸಾರ್ವಜನಿಕ ಸಾಲದ ನಿರ್ವಹಣಾ ತ್ರೈಮಾಸಿಕ ವರದಿಯಲ್ಲಿ (ಜನವರಿ-ಮಾರ್ಚ್‌, 2024) ಹೇಳಲಾಗಿದೆ. ಈ ಆರ್ಥಿಕ ವರ್ಷದ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿನ ಕೇಂದ್ರ ಬಜೆಟ್‌ನ ವಿತ್ತೀಯ ಕೊರತೆಯು ಶೇ 3ರಷ್ಟಾಗಿದೆ. ಲೋಕಸಭೆ ಚುನಾವಣೆಯ ಕಾರಣ ನೀತಿ ಸಂಹಿತೆ

171 ಲಕ್ಷ ಕೋಟಿಗೆ ಏರಿದ ಕೇಂದ್ರ ಸರ್ಕಾರದ ಸಾಲ| ನಿರ್ವಹಣಾ ತ್ರೈಮಾಸಿಕ ವರದಿ ಹೇಳಿಕೆ Read More »

‘ಗೃಹಲಕ್ಷ್ಮಿ’ ಹಣ ಬಂದಿಲ್ಲವೆಂದು ಮಹಿಳಾಮಣಿಗಳ ಪ್ರತಿಭಟನೆ| ಇಂದು ಅಥವಾ ನಾಳೆ ಹಣ ಬಿಡುಗಡೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ, ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ

‘ಗೃಹಲಕ್ಷ್ಮಿ’ ಹಣ ಬಂದಿಲ್ಲವೆಂದು ಮಹಿಳಾಮಣಿಗಳ ಪ್ರತಿಭಟನೆ| ಇಂದು ಅಥವಾ ನಾಳೆ ಹಣ ಬಿಡುಗಡೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read More »

ಲಡಾಖ್: ನದಿ ನೀರಲ್ಲಿ ಕೊಚ್ಚಿ ಹೋಗಿ ಐವರು ಸೈನಿಕರು ಹುತಾತ್ಮ

ಸಮಗ್ರ ನ್ಯೂಸ್: ಲಡಾಖ್ ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಟಿ -72 ಟ್ಯಾಂಕ್ ನಲ್ಲಿ ನದಿಯನ್ನು ದಾಟುವಾಗ ಸೇನೆಯ ಐವರು ಸೈನಿಕರು ನೀರಿನಲ್ಲಿ ಕೊಚ್ಚಿಹೋಗಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐವರು ಸೈನಿಕರನ್ನು ಹೊತ್ತ ಟಿ -72 ಟ್ಯಾಂಕ್ ನದಿಯನ್ನು ದಾಟುವಾಗ ಪ್ರವಾಹದಿಂದಾಗಿ ಮುಳುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಟ್ಯಾಂಕ್ ನಕ್ಕು ಒಬ್ಬ ಜೆಸಿಒ ಮತ್ತು 4 ಜವಾನರು ಸೇರಿದಂತೆ ಐದು ಸೈನಿಕರು ಇದ್ದರು. ಒಬ್ಬ ವ್ಯಕ್ತಿಯನ್ನು ಪತ್ತೆಹಚ್ಚಲಾಗಿದ್ದು,

ಲಡಾಖ್: ನದಿ ನೀರಲ್ಲಿ ಕೊಚ್ಚಿ ಹೋಗಿ ಐವರು ಸೈನಿಕರು ಹುತಾತ್ಮ Read More »

ಇಂದು ಟಿ-20 ವಿಶ್ವಕಪ್ ಫೈನಲ್| ಮೊದಲ ಬಾರಿ‌ ಇಂಡಿಯಾ – ದ.ಆಫ್ರಿಕಾ ನಡುವೆ ಚಾಂಪಿಯನ್ ಪಟ್ಟಕ್ಕೆ ಹೋರಾಟ

ಸಮಗ್ರ ನ್ಯೂಸ್: ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024 ಇದರ ಕ್ಲೈಮ್ಯಾಕ್ಸ್ ಇಂದು ನಡೆಯಲಿದೆ. 2007ರ ಮೊದಲ ಆವೃತ್ತಿಯ ವಿಶ್ವಕಪ್ ನಲ್ಲಿ ಚಾಂಪಿಯನ್ ಆಗಿದ್ದ ಭಾರತ ತಂಡ 17 ವರ್ಷಗಳ ಬಳಿಕ ಇದೇ ಮೊದಲ ಬಾರಿ ಫೈನಲ್ ನಲ್ಲಿ ಸ್ಪರ್ಧಿಸುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಹೋರಾಡಲಿದೆ. ಉಭಯ ತಂಡಗಳು 2014ರ ಟಿ20 ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಕೊನೆಯ ಬಾರಿ ಮುಖಾಮುಖಿಯಾಗಿದ್ದು, ಭಾರತ ಜಯ ಸಾಧಿಸಿತ್ತು. ಭಾರತ ಕ್ರಿಕೆಟ್ ತಂಡ 2007ರಲ್ಲಿ

ಇಂದು ಟಿ-20 ವಿಶ್ವಕಪ್ ಫೈನಲ್| ಮೊದಲ ಬಾರಿ‌ ಇಂಡಿಯಾ – ದ.ಆಫ್ರಿಕಾ ನಡುವೆ ಚಾಂಪಿಯನ್ ಪಟ್ಟಕ್ಕೆ ಹೋರಾಟ Read More »

ಉಪ್ಪಿನಂಗಡಿ: ಅನ್ನ ಹಾಕಿದ ಯಜಮಾನಿಯ ಆತ್ಮಹತ್ಯೆ ತಡೆದ ಶ್ವಾನ!!| ನೇತ್ರಾವತಿಗೆ ಹಾರಲೆತ್ನಿಸಿದ್ದಾಕೆ ಬದುಕಿದ್ದು ಹೇಗೆ?

ಸಮಗ್ರ ನ್ಯೂಸ್: ಗಂಡನ ಜೊತೆ ಮುನಿಸಿಕೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯ ಜೀವ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿಯಿಂದ ಬಚಾವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಲಿಗೂಡು ನಿವಾಸಿ ಮಹಿಳೆ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಮನೆಯಿಂದ ಹತ್ತಾರು ಕಿ.ಮೀ ದೂರದ ಉಪ್ಪಿನಂಗಡಿಯ ನೇತ್ರಾವತಿ ಸೇತುವೆಗೆ ನಡೆದು ಬಂದಿದ್ದರು. ಆದರೆ ಅವರನ್ನು ಮನೆಯಿಂದಲೇ ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಅಪಾಯ ವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ

ಉಪ್ಪಿನಂಗಡಿ: ಅನ್ನ ಹಾಕಿದ ಯಜಮಾನಿಯ ಆತ್ಮಹತ್ಯೆ ತಡೆದ ಶ್ವಾನ!!| ನೇತ್ರಾವತಿಗೆ ಹಾರಲೆತ್ನಿಸಿದ್ದಾಕೆ ಬದುಕಿದ್ದು ಹೇಗೆ? Read More »

ಗೂಗಲ್ ಟ್ರಾನ್ಸ್ ಲೆಟ್ ನಲ್ಲಿ ತುಳುಭಾಷೆ| ತುಳು ಕಲಿಕೆ ಈಗ ಮತ್ತಷ್ಟು ಸುಲಭ!

ಸಮಗ್ರ ನ್ಯೂಸ್: ತುಳು ಭಾಷೆ ಕಲಿಯಬೇಕೆಂಬ ಜನರಿಗೆ ಗೂಗಲ್ ಸಿಹಿಸುದ್ದಿ ನೀಡಿದ್ದು, ಗೂಗಲ್ ಟ್ರಾನ್ಸ್ ಲೇಟಲ್ಲಿ ತುಳು ಭಾಷೆ ಸೇರ್ಪಡೆಯಾಗಿದೆ. ದೊಡ್ಡ ಟೆಕ್ ದೈತ್ಯ ಗೂಗಲ್ ಹೊಸದಾಗಿ 110 ಹೊಸ ಭಾಷೆಗಳನ್ನು ಸೇರಿಸಿದೆ. ಅವಧಿ, ಬೋಡೋ, ಖಾಸಿ, ಕೋಕ್ ಬೊರೋಕ್, ಮಾರ್ವಾಡಿ, ಸಂತಾಲಿ ಮತ್ತು ತುಳು ಹೊಸ ಭಾರತೀಯ ಭಾಷೆಗಳಾಗಿವೆ. ಭಾಷಾಂತರಕ್ಕೆ ಹೊಸ ಭಾಷೆಗಳನ್ನು ಹೇಗೆ ಸೇರಿಸುತ್ತದೆ ಎಂಬುದನ್ನು ಗೂಗಲ್ ಉಲ್ಲೇಖಿಸಿದೆ. ಪ್ರಾದೇಶಿಕ ಪ್ರಭೇದಗಳು, ಉಪಭಾಷೆಗಳು ಮತ್ತು ಕಾಗುಣಿತ ಮಾನದಂಡಗಳಂತಹ ಹಲವಾರು ಅಂಶಗಳನ್ನು ಪರಿಗಣಿಸುತ್ತದೆ ಎಂದು ಟೆಕ್

ಗೂಗಲ್ ಟ್ರಾನ್ಸ್ ಲೆಟ್ ನಲ್ಲಿ ತುಳುಭಾಷೆ| ತುಳು ಕಲಿಕೆ ಈಗ ಮತ್ತಷ್ಟು ಸುಲಭ! Read More »

ಉಜಿರೆ: ಭೀಕರ ರಸ್ತೆ ಅಪಘಾತ| ಗಂಭೀರ ಗಾಯಗೊಂಡ ಕಾರು ಚಾಲಕ ಸಾವು

ಸಮಗ್ರ ನ್ಯೂಸ್: ಉಜಿರೆ – ಧರ್ಮಸ್ಥಳ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ತಲುಪಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮೃತ ಕಾರು ಚಾಲಕನನ್ನು ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಎಂ. ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಗಾಯಾಳು ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಎಂದು

ಉಜಿರೆ: ಭೀಕರ ರಸ್ತೆ ಅಪಘಾತ| ಗಂಭೀರ ಗಾಯಗೊಂಡ ಕಾರು ಚಾಲಕ ಸಾವು Read More »

ಬಾಹ್ಯಾಕಾಶ ‌ನಿಲ್ದಾಣದಲ್ಲಿ‌ ತುರ್ತುಪರಿಸ್ಥಿತಿ| ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಗೆ ಸ್ಟಾರ್ ಲೆನ್ಸರ್ ನಲ್ಲಿ ಆಶ್ರಯ ಪಡೆಯಲು ಸೂಚನೆ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ನಿಲ್ದಾಣದ ಎತ್ತರದ ಬಳಿ ಉಪಗ್ರಹ ಛಿದ್ರವಾಗುವ ಬಗ್ಗೆ ನಾಸಾ ಎಚ್ಚರಿಕೆ ನೀಡಿದ್ದು, ತಕ್ಷಣವೇ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಗೆ ಬೋಯಿಂಗ್ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆ ಮತ್ತು ಇತರ ವಾಪಸಾತಿ ವಾಹನಗಳಲ್ಲಿ ಆಶ್ರಯ ಪಡೆಯುವಂತೆ ಆದೇಶಿಸಲಾಗಿದೆ. ಬಾಹ್ಯಾಕಾಶ ಅವಶೇಷಗಳು ಕಕ್ಷೆಯಲ್ಲಿರುವ ಪ್ರಯೋಗಾಲಯಕ್ಕೆ ಬುಧವಾರ ಬೆದರಿಕೆ ಹಾಕಿದ್ದರಿಂದ ತುರ್ತು ಆದೇಶವನ್ನು ಹೊರಡಿಸಲಾಗಿದೆ. ನಿಲ್ದಾಣದ ಸಮೀಪವಿರುವ ಎತ್ತರದಲ್ಲಿ ಉಪಗ್ರಹ ಮುರಿದುಹೋಗಿರುವ ಬಗ್ಗೆ ನಾಸಾಗೆ ತಿಳಿಸಿದಾಗ ತುರ್ತು

ಬಾಹ್ಯಾಕಾಶ ‌ನಿಲ್ದಾಣದಲ್ಲಿ‌ ತುರ್ತುಪರಿಸ್ಥಿತಿ| ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಗೆ ಸ್ಟಾರ್ ಲೆನ್ಸರ್ ನಲ್ಲಿ ಆಶ್ರಯ ಪಡೆಯಲು ಸೂಚನೆ Read More »

ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ತ್ರಿ ಆಯ್ಕೆ

ಸಮಗ್ರ ನ್ಯೂಸ್‌: ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ 1989ರ ಐಎಫ್‌ಎಸ್ ಬ್ಯಾಚ್ ಅಧಿಕಾರಿ ವಿಕ್ರಮ್ ಮಿಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾಲಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾಟ್ರಾ ಅವರ ಅವಧಿಯು ಜುಲೈ 14ರಂದು ಮುಗಿಯುವ ಕಾರಣ ವಿಕ್ರಮ್ ಮಿಸ್ತ್ರಿ ಅವರನ್ನು ನೇಮಿಸಲಾಗಿದೆ. ಜುಲೈ 15ರಂದು ವಿಕ್ರಮ್ ಮಿಸ್ತ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ವಿನಯ್ ಕ್ವಾಟ್ರಾ ಅವರ ಅಧಿಕಾರದ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿತ್ತು. ವಿನಯ್ ಕ್ವಾಟ್ರಾ ಅವರನ್ನು ಅಮೆರಿಕಕ್ಕೆ ಭಾರತದ ರಾಯಭಾರಿಯನ್ನಾಗಿ ನೇಮಿಸಲಾಗುತ್ತದೆ

ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ತ್ರಿ ಆಯ್ಕೆ Read More »