Editor

ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ಜೀವಗಳು ಅಪಾಯದಲ್ಲಿ ಸಿಲುಕುತ್ತಿದ್ದು ಜನರು ತತ್ತರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ […]

ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಚಿಕ್ಕಮಗಳೂರು:ಭಾರೀ ಮಳೆ ಹಿನ್ನೆಲೆ| ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ಮಲೆನಾಡಿನಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಿ ತಹಶಿಲ್ದಾರ್ ಪರಮಾನಂದ ಆದೇಶಿಸಿದ್ದಾರೆ. ರಜೆ ಇಂದು ( ಜೂ.28) ರಂದು ಇರಲಿದ್ದು, ಪ್ರೌಢಶಾಲೆವರೆಗಿನ ಖಾಸಗಿ, ಅನುದಾನಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿ ತೆರೆಯುವುದಿಲ್ಲ. ಉಳಿದಂತೆ ಪಿಯುಸಿ ಹಾಗೂ ಪದವಿ ತರಗತಿಗಳು ಯಥಾವತ್ತಾಗಿ ನಡೆಯಲಿವೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಚಿಕ್ಕಮಗಳೂರು:ಭಾರೀ ಮಳೆ ಹಿನ್ನೆಲೆ| ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ Read More »

ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ಮೊಮ್ಮಗಳ ಮೇಲೆ ಕಾಮುಕ ತಾತನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮೊಮ್ಮಗಳ ಮೇಲೆ ಕಾಮುಕ ತಾತ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ತಾಯಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಹೇಯ ಕೃತ್ಯ ನಡೆಸಿದ್ದಾನೆ. ಈ ಬಾಲಕಿಗೆ 6 ವರ್ಷ. ಲೈಂಗಿಕ ದೌರ್ಜನ್ಯ ನಡೆಸಿರುವುದು ಬಾಲಕಿ ತಾಯಿಗೆ ತಿಳಿಯುತ್ತಿದ್ದಂತೆ ಯಾರಿಗೂ ಹೇಳದಂತೆ ಆರೋಪಿಗಳು ಆಮಿಷವೊಡ್ಡಿದ್ದಾರೆ. ಮನೆಯನ್ನು ಮೊಮ್ಮಗಳ ಹೆಸರಿಗೆ ಬರೆಯುತ್ತೇವೆ. ಚಿನ್ನದ ಒಡವೆ ಕೊಡಿಸುತ್ತೇವೆ ಎಂದು ಆಸೆ ತೋರಿಸಿದ್ದಾರೆ. ಆದರೆ ಆರೋಪಿಗಳ ವಿರುದ್ಧ

ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ಮೊಮ್ಮಗಳ ಮೇಲೆ ಕಾಮುಕ ತಾತನಿಂದ ಅತ್ಯಾಚಾರ Read More »

ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣ: ಎಂ.ಕೆ.ಸ್ಟಾಲಿನ್‌ ಸ್ಪಷ್ಟನೆ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಕೇವಲ 4೦ ಕಿಲೋಮೀಟರ್‌ ದೂರದಲ್ಲಿರುವ, ತಮಿಳುನಾಡಿನ ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಘೋಷಣೆ ಮಾಡಿದ್ದಾರೆ. ಇದರಿಂದ ಬೆಂಗಳೂರಿನ ಜನತೆಗೂ ಅನುಕೂಲವಾಗಲಿದೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿಯೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್‌ ಅವರು ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಿಸಲಾಗುವುದು ಎಂಬುದಾಗಿ ಘೋಷಣೆ ಮಾಡಿದ್ದಾರೆ. ಹೊಸೂರು ಹೆಚ್ಚಿನ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುತ್ತಿದೆ. ಹಾಗಾಗಿ, ಹೊಸೂರಿನಲ್ಲಿ ಹಲವು

ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣ: ಎಂ.ಕೆ.ಸ್ಟಾಲಿನ್‌ ಸ್ಪಷ್ಟನೆ Read More »

ಮಳೆ ಆರ್ಭಟ: ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಸಮಗ್ರ ನ್ಯೂಸ್: ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೂನ್‌ 27ರಿಂದ ಸೆಪ್ಟೆಂಬರ್‌ 15ರವರೆಗೆ ಆಗುಂಬೆ ಘಾಟಿ ರಸ್ತೆಗಳಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗಗಳನ್ನೂ ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆ, ವಾಹನಗಳ ಓಡಾಟ ಜಾಸ್ತಿಯಾಗಿದೆ. ಇದರ ಮಧ್ಯೆ, ಭಾರಿ ಗಾತ್ರದ ವಾಹನಗಳ ಓಡಾಟವೂ ಮುಂದುವರಿದರೆ ಭೂಕುಸಿತ ಉಂಟಾಗುವ

ಮಳೆ ಆರ್ಭಟ: ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ Read More »

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ| ನಿಂತಿದ್ದ ಲಾರಿಗೆ ಟಿಟಿ ಗುದ್ದಿ 13 ಮಂದಿ ದುರ್ಮರಣ

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಜೂ.28) ಬೆಳಗ್ಗೆ ನಡೆದಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದ್ದು, ಭೀಕರತೆಗೆ ಸಾಕ್ಷಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಮೃತರ ಹಿನ್ನಲೆಯನ್ನು ಪೊಲೀಸರು ಪತ್ತೆ ಹಚ್ಚುತ್ತಿರುವುದಾಗಿ‌ ತಿಳಿದುಬಂದಿದೆ ಮಾಹಿತಿಗಳ ಪ್ರಕಾರ ಮೃತರು

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ| ನಿಂತಿದ್ದ ಲಾರಿಗೆ ಟಿಟಿ ಗುದ್ದಿ 13 ಮಂದಿ ದುರ್ಮರಣ Read More »

ಟಿ-20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಪೈನಲ್ ಪ್ರವೇಶಿಸಿದ ಭಾರತ

ಸಮಗ್ರ ನ್ಯೂಸ್: ಗಯಾನದ ಗಯಾನ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದ ಭಾರತ ಫೈನಲ್ ಪ್ರವೇಶಿಸಿದೆ. ಈ ಮೂಲಕ ಟಿ20 ವಿಶ್ವಕಪ್ ನಲ್ಲಿ ಭಾರತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2022ರ ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ಸೇಡು ತೀರಿಸಿಕೊಂಡಿದೆ. ಭಾರತ ನೀಡಿದ 172 ರನ್ ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 16.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 103 ರನ್ ಗಳಿಸಿತು.

ಟಿ-20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಪೈನಲ್ ಪ್ರವೇಶಿಸಿದ ಭಾರತ Read More »

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್| ಬೆಳೆವಿಮೆ ನೋಂದಣಿ ವಿಮಾಕಂತು ಪಾವತಿಗೆ ದಿನ ನಿಗದಿ| ಯಾವಾಗ ಕೊನೆ ದಿನ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ವಿಮಾ ಕಂಪನಿ ಜೊತೆ ಒಪ್ಪಂದ ರೂಪುಗೊಂಡಿದ್ದು, ವಿಮಾಕಂತು ಪಾವತಿಗೆ ಜು.31ನ್ನು ಕೊನೆ ದಿನ‌ ಎಂದು ನಿಗದಿಗೊಳಿಸಲಾಗಿದೆ. ಬೆಳೆವಿಮೆಯಿಂದ ಅಡಿಕೆ, ಕಾಳುಮೆಣಸು ‌ಬೆಳೆಗಳನ್ನು ಹೊರಗಿಡಲಾಗಿದ್ದು, ಇದರಿಂದ ಕರಾವಳಿ ಮತ್ತು ಮಲೆನಾಡಿನ ಅಡಿಕೆ ಕೃಷಿಕರಿಗೆ ತೊಂದರೆಯಾಗಿತ್ತು. ಕಂಪನಿ ಜೊತೆ ಒಪ್ಪಂದ ಕೈಗೂಡದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿತ್ತು. ಇದೀಗ ಒಪ್ಪಂದಕ್ಕೆ ಟಾಟಾ ಎಐಜಿ ಸಂಸ್ಥೆ ಒಪ್ಪಿಕೊಂಡಿದೆ. ದ.ಕ‌ ಜಿಲ್ಲೆಗೆ ಅನ್ವಯವಾಗುವಂತೆ ಅಡಿಕೆ‌ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮಾ ಆಧಾರಿತ ಪ್ರೀಮಿಯಂ ಪಾವತಿಗೆ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್| ಬೆಳೆವಿಮೆ ನೋಂದಣಿ ವಿಮಾಕಂತು ಪಾವತಿಗೆ ದಿನ ನಿಗದಿ| ಯಾವಾಗ ಕೊನೆ ದಿನ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ದ.ಕ‌ ಜಿಲ್ಲೆಯಲ್ಲಿ ಮಳೆ ಅವಘಡಕ್ಕೆ ಮತ್ತೊಂದು ಬಲಿ| ವಿದ್ಯುತ್ ಸ್ಟೇ ವಯರ್ ನಲ್ಲಿ ಹರಿದ ವಿದ್ಯುತ್| ಬೆಳ್ತಂಗಡಿಯ ಶಿಬಾಜೆಯಲ್ಲಿ ಯುವತಿ ಸಾವು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯ ಅವಘಡಕ್ಕೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್‌ ನಿಂದ ವಿದ್ಯುತ್‌ ಹರಿದು ಇದರಿಂದ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ನಡೆದಿದೆ. ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ.‌ ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದು, ಅದನ್ನು ಸ್ವೀಕರಿಸಲು ಹೋದಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಮನೆ ಬಳಿ

ದ.ಕ‌ ಜಿಲ್ಲೆಯಲ್ಲಿ ಮಳೆ ಅವಘಡಕ್ಕೆ ಮತ್ತೊಂದು ಬಲಿ| ವಿದ್ಯುತ್ ಸ್ಟೇ ವಯರ್ ನಲ್ಲಿ ಹರಿದ ವಿದ್ಯುತ್| ಬೆಳ್ತಂಗಡಿಯ ಶಿಬಾಜೆಯಲ್ಲಿ ಯುವತಿ ಸಾವು Read More »

ನಿಲ್ಲದ ವರುಣಾರ್ಭಟ| ಜೂ. 28ರಂದು ದ.ಕ‌ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆ‌ ಹಾಗೂ ಪ.ಪೂ ತರಗತಿಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

ನಿಲ್ಲದ ವರುಣಾರ್ಭಟ| ಜೂ. 28ರಂದು ದ.ಕ‌ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »