Editor

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ/ ಬೆಂಬಲ ಘೋಷಿಸಿದ ಯೋಗೇಶ್ವರ್

ಸಮಗ್ರ ನ್ಯೂಸ್: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಸಚಿವ ಕುಮಾರಸ್ವಾಮಿಯನ್ನೂ ಭೇಟಿ ಮಾಡಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌, ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ. ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ […]

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ/ ಬೆಂಬಲ ಘೋಷಿಸಿದ ಯೋಗೇಶ್ವರ್ Read More »

ಮಡಿಕೇರಿ: ಕೆಲಸಕ್ಕೆ ಹೊರಡಲು ರೆಡಿಯಾಗುತ್ತಿದ್ದವಳ ಹೊತ್ತೊಯ್ದ ಜವರಾಯ| ಹೃದಯಾಘಾತದಿಂದ ಯುವತಿ ಸಾವು

ಸಮಗ್ರ ನ್ಯೂಸ್: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದುಬಿದ್ದು ಸುಂದರ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.. ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 24 ವರ್ಷದ ನಿಲಿಕಾ ಪೊನ್ನಪ್ಪ ಎಂಬಾಕೆಯೇ ಸಾವನ್ನಪ್ಪಿದ ದುರ್ದೈವಿ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳಾದ ನಿಲಿಕಾ, ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಇಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದಳು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾಳೆ. ತಾಯಿ ಬಂದು ಏನಾಯಿತು ಎಂದು ಕೇಳುವಷ್ಟರಲ್ಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಮಡಿಕೇರಿ: ಕೆಲಸಕ್ಕೆ ಹೊರಡಲು ರೆಡಿಯಾಗುತ್ತಿದ್ದವಳ ಹೊತ್ತೊಯ್ದ ಜವರಾಯ| ಹೃದಯಾಘಾತದಿಂದ ಯುವತಿ ಸಾವು Read More »

ರಾಬರ್ಟ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸೋನಲ್ ಮದುವೆ

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ನಲ್ಲಿ ಇದೀಗ ಮತ್ತೊಂದು ಜೋಡಿ ಮದುವೆ ಸಂಭ್ರಮಕ್ಕೆ ಸಜ್ಜಾಗಿದ್ದಾರೆ. ಹೌದು ‘ರಾಬರ್ಟ್’ ನಿರ್ದೇಶಕ ತರುಣ್ ಸುಧೀರ್ ಜೊತೆ ಸೋನಲ್ ಹಸೆಮಣೆ ಏರಲಿದ್ದಾರೆ. ಈ ಕುರಿತು ತರುಣ್ ಸುಧೀರ್ ತಾಯಿ ಮಾಲತಿ ಖಚಿತಪಡಿಸಿದ್ದಾರೆ. ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ

ರಾಬರ್ಟ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸೋನಲ್ ಮದುವೆ Read More »

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ. ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ ಇದೀಗ ಸ್ನಾನ ಘಟ್ಟ ಮುಳುಗಡೆಯಾಗಿದ್ದು, ನದಿಗಿಳಿಯದಂತೆ ಭಕ್ತರಿಗೆ ಸೂಚಿಸಲಾಗಿದೆ. ಭಕ್ತರು ನದಿ ದಡದಲ್ಲೇ ತೀರ್ಥ ಸ್ನಾನ ಮಾಡುತ್ತಿದ್ದಾರೆ. ಕುಮಾರಧಾರ ಉಪನದಿ ದರ್ಪಣತೀರ್ಥ ಕೂಡ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು, ಗೃಹ ರಕ್ಷಕ ದಳ

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ Read More »

ಮಂಗಳೂರು: ವಿದ್ಯುತ್ ತಂತಿ‌ ಸ್ಪರ್ಶಿಸಿ ಇಬ್ಬರು‌ ಆಟೋ‌ ಚಾಲಕರು ಸಾವು

ಸಮಗ್ರ ನ್ಯೂಸ್: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ

ಮಂಗಳೂರು: ವಿದ್ಯುತ್ ತಂತಿ‌ ಸ್ಪರ್ಶಿಸಿ ಇಬ್ಬರು‌ ಆಟೋ‌ ಚಾಲಕರು ಸಾವು Read More »

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

ಸಮಗ್ರ ನ್ಯೂಸ್: ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಕಳ್ಳತನದ

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ Read More »

ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಬಳಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು, ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ. ಸ್ಕೂಟರ್ ಸವಾರರೊಬ್ಬರು ಬುಧವಾರ ಬೆಳಿಗ್ಗೆ ಹೆದ್ದಾರಿಯ ಗುಂಡಿಗೆ ಬಿದ್ದು ಗಾಯಗೊಂಡರು. ಇದರಿಂದ ಬೇಸತ್ತ ಅವರು, ತಾವು ಬಿದ್ದ ಹೊಂಡದಲ್ಲೇ ತಮ್ಮ ಸ್ಕೂಟರ್ ನಿಲ್ಲಿಸಿ, ತಾವೂ ಅದರ ಪಕ್ಕದಲ್ಲೇ ನಿಂತು ಈ ದುರವಸ್ಥೆಯ ಬಗ್ಗೆ ಪ್ರತಿಭಟನೆ ನಡೆಸಿದರು. ಅಲ್ಲದೇ, ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನ ಸವಾರರಿಗೂ ಗುಂಡಿಗಳ ಕುರಿತು ಎಚ್ಚರಿಸುವ ಮೂಲಕ ಗಮನ ಸೆಳೆದರು. ಇಷ್ಟೆಲ್ಲ‌

ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ Read More »

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ‌ ಕುಸಿದು‌ ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ಇಂದು(ಗುರುವಾರ) ಬೆಳಗಿನ ಜಾವ ನಡೆದಿದೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಅದೃಷ್ಟವಶಾತ್ ಮಣ್ಣಿನಡಿ ಸಿಲುಕಿದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದ

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ‌ ಕುಸಿದು‌ ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ Read More »

ಕರಾವಳಿ, ಮಲೆನಾಡಿನಲ್ಲಿ ಭಾರೀ ವರ್ಷಧಾರೆ| ನಾಲ್ಕು ಬಲಿ; ಇಂದು ರೆಡ್ ಅಲರ್ಟ್

ಸಮಗ್ರ ನ್ಯೂಸ್: ಹಲವು ದಿನಗಳ ಬಳಿಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ ಮತ್ತು ವಿದ್ಯುತ್ ಕಂಬ ಉರುಳಿಬಿದ್ದು, 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮಂಗಳೂರಲ್ಲಿ ಮನೆಯೊಂದರ ಮೇಲೆ ಕಾಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಇನ್ನು ಗುರುವಾರವೂ ಭಾರೀ ಮಳೆ ನಿರೀಕ್ಷೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆ ತಾಲೂಕುಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಮತ್ತು ಸರ್ಕಾರಿ ಶಾಲೆಗಳಿಗೆ

ಕರಾವಳಿ, ಮಲೆನಾಡಿನಲ್ಲಿ ಭಾರೀ ವರ್ಷಧಾರೆ| ನಾಲ್ಕು ಬಲಿ; ಇಂದು ರೆಡ್ ಅಲರ್ಟ್ Read More »

ಕರಾವಳಿಯಲ್ಲಿ ಭಾರೀ ಮಳೆ‌ ಮುನ್ಸೂಚನೆ| ಜೂ.27ರಂದು ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ. ನಾಳೆ(ಜೂ. ೨೭) ಮಾತ್ರವಲ್ಲದೆ ಶುಕ್ರವಾರಕ್ಕೂ ಮಳೆ ಮುಂದುವರೆಯಲಿದೆ. ಸುಮಾರು 30 ತಾಸಿನ ಭಾರೀ ಮಳೆಗೆ ತಯಾರಾಗಲು ಈ ಜಿಲ್ಲೆಗಳ ಜನರಿಗೆ ಸೂಚಿಸಲಾಗಿದೆ. ನಡುವೆ ದಕ್ಷಿಣ ಒಳನಾಡಿನಲ್ಲೂ ಮುಂಗಾರು

ಕರಾವಳಿಯಲ್ಲಿ ಭಾರೀ ಮಳೆ‌ ಮುನ್ಸೂಚನೆ| ಜೂ.27ರಂದು ರೆಡ್ ಅಲರ್ಟ್ ಘೋಷಣೆ Read More »