Editor

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾದ ವ್ಯಕ್ತಿಯೊಬ್ಬರ ಶವ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಘಟನೆ ಸುಳ್ಯ ಸಮೀಪದ ಭಸ್ಮಡ್ಕ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಕುರುಂಜಿಗುಡ್ಡೆ ನಿವಾಸಿ ಕುಮಾರ್ ಎಂದು ಗುರುತಿಸಲಾಗಿದೆ. ವಿಶೇಷ ಚೇತನರಾದ ಕುಮಾರ್ ಅವರು ಭಾನುವಾರ(ಜೂ.23) ಮಧ್ಯಾಹ್ನದ ನಂತರ ನಾಪತ್ತೆಯಾಗಿದ್ದರು. ಎಲ್ಲಾ ಕಡೆ ಹುಡುಕಾಡಿದರೂ ಅವರ ಸುಳಿವು ಲಭ್ಯವಾಗಿರಲಿಲ್ಲ. ಬಳಿಕ ಭಸ್ಮಡ್ಕ ಎಂಬಲ್ಲಿ ಪಯಸ್ವಿನಿ ನದಿಯ ದಡದಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು. ಹೀಗಾಗಿ ಸೋಮವಾರ ಬೆಳಗ್ಗಿನಿಂದಲೇ ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞರ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. […]

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ Read More »

ಸುಳ್ಯ:ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ

ಸಮಗ್ರ ನ್ಯೂಸ್:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ತಾಪತ್ರ “ವಿದ್ಯಾಚೇತನ”ದ ಅನಾವರಣ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ವಾರ್ತಾಪತ್ರವನ್ನು ಅನಾವರಣಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ದಾಖಲೆಯ ದೃಷ್ಟಿಯಲ್ಲಿ ವಾರ್ತಾಪತ್ರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿ ಇದು ಹೊರಬರಲು ಶ್ರಮಿಸಿದ ಸಂಪಾದಕ ಮಂಡಳಿಯನ್ನು ಶ್ಲಾಘಿಸಿದರು. ವಾರ್ತಾಪತ್ರದ ಕಾರ್ಯನಿರ್ವಾಹಕ ಸಂಪಾದಕಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ ವಾರ್ತಾಪತ್ರ ಹೊರಬರುವಲ್ಲಿ ಸಹಕರಿಸಿದ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಹೋದ್ಯೋಗಿ ಮಿತ್ರರು ಹಾಗೂ ಸಂಪಾದಕ

ಸುಳ್ಯ:ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ Read More »

ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

ಸಮಗ್ರ ನ್ಯೂಸ್: ಮುಂದಿನ 3 ದಿನಗಳಲ್ಲಿ ಅಸುರಕ್ಷಿತ ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂಥದ್ದೊಂದು ತೂಗುಕತ್ತಿ ಈ ಮಸಾಲಾ ತಿಂಡಿಗಳ ಮೇಲಿದೆ. ಇದಕ್ಕೆ ಬಳಸುವ ಕೆಮಿಕಲ್‌ ಸಾಸ್‌ ಮಕ್ಕಳ ಜೀರ್ಣಾಂಗದ ಮೇಲೂ ಪರಿಣಾಮ ಬೀರಿ, ಹೈಪರ್‌ ಆಕ್ವಿವ್‌ನೆಸ್‌ ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ.ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಅಸುರಕ್ಷಿತ ಗೋಬಿ ಹಾಗೂ ಕಾಟನ್‌ ಕ್ಯಾಂಡಿಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಜೂ. 24ರಂದು ಕೃತಕ

ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ? Read More »

ಗ್ರಾಹಕರಿಗೆ ಮತ್ತೊಂದು ಬರೆ| ನಾಳೆಯಿಂದ ನಂದಿನಿ ಹಾಲಿನ ದರ ಏರಿಕೆ| ಪ್ಯಾಕೇಟ್ ನಲ್ಲೂ ಅಧಿಕ ಹಾಲು!!

ಸಮಗ್ರ ನ್ಯೂಸ್: ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳವಾಗಿದ್ದು, ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ. ಕೆಎಂಎಫ್ ನಂದಿನಿ ಹಾಲಿ ದರ ಹೆಚ್ಚಳ ಮಾಡಿದ್ದು, ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳ ಮಾಡಿದೆ. ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ. ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ

ಗ್ರಾಹಕರಿಗೆ ಮತ್ತೊಂದು ಬರೆ| ನಾಳೆಯಿಂದ ನಂದಿನಿ ಹಾಲಿನ ದರ ಏರಿಕೆ| ಪ್ಯಾಕೇಟ್ ನಲ್ಲೂ ಅಧಿಕ ಹಾಲು!! Read More »

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ

ಸಮಗ್ರ ನ್ಯೂಸ್: ನಾಯಕ ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿ, ಸೆಮಿಪೈನಲ್​ಗೆ ಲಗ್ಗೆ ಇಟ್ಟಿದೆ. ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ Read More »

ಪಟ್ಲಬೆಟ್ಟಕ್ಕೆ ತೆರಳಿದ್ದ ತಂಡದ ಮೇಲೆ ಸ್ಥಳೀಯರಿಂದ ಹಲ್ಲೆ; ದೂರು ದಾಖಲು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಬಿಸಿಲೇ ಘಾಟ್‌ ಸಮೀಪದ ಸಕಲೇಶಪುರ ತಾಲೂಕು ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟಕ್ಕೆ ತೆರಳಿದ್ದ ಮಂಗಳೂರಿನ ತಂಡದ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಲ್ಲೆಗೊಳಗಾದವರಲ್ಲಿ ಮಂಗಳೂರಿನ ಕೊಟ್ಟಾರದ ಯುವಕ ಈ ಬಗ್ಗೆ ಸಕಲೇಶಪುರ ತಾಲೂಕಿನ ಯಸಲೂರು ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್‌ನಲ್ಲಿ ಬಂದಿರುವ ತಂಡದ ಜತೆ ಅಲ್ಲಿದ್ದ ವ್ಯಕ್ತಿಗಳು ಬೈಕ್‌ನಲ್ಲಿ ಹೋಗಬೇಡಿ ಎಂಬಿತ್ಯಾದಿ

ಪಟ್ಲಬೆಟ್ಟಕ್ಕೆ ತೆರಳಿದ್ದ ತಂಡದ ಮೇಲೆ ಸ್ಥಳೀಯರಿಂದ ಹಲ್ಲೆ; ದೂರು ದಾಖಲು Read More »

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ| ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೀರ್ಮಾನ

ಸಮಗ್ರ ನ್ಯೂಸ್: ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್‌ ಸಭೆಯಲ್ಲಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಾಧಿಕಾರ ರಚನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅವಧಿ ಮಾರ್ಚ್‌ಗೆ ಕೊನೆಗೊಂಡಿದ್ದು, ಸದ್ಯ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸುವ ನಿರ್ಧಾರ ನಿರೀಕ್ಷೆಯಲ್ಲಿತ್ತು. ಆದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ 100 ಕೋಟಿಗೂ ಅಧಿಕ ಆದಾಯ ಬರುವ ಕ್ಷೇತ್ರವಾಗಿರುವುದರಿಂದ ಅಭಿವೃದ್ಧಿ ಪ್ರಾಧಿಕಾರ ಮಾಡುವ

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ| ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೀರ್ಮಾನ Read More »

ಅಂಗನವಾಡಿಗಳಲ್ಲೇ LKG, UKG ಆರಂಭಿಸಲು ಸಿಎಂ ಸಮ್ಮತಿ – ಲಕ್ಷ್ಮೀ‌ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. ಅಂಗನವಾಡಿ

ಅಂಗನವಾಡಿಗಳಲ್ಲೇ LKG, UKG ಆರಂಭಿಸಲು ಸಿಎಂ ಸಮ್ಮತಿ – ಲಕ್ಷ್ಮೀ‌ ಹೆಬ್ಬಾಳ್ಕರ್ Read More »

ರಾಜ್ಯದಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ| ನಿಯಮ‌ ಉಲ್ಲಂಘಿಸಿದರೆ ಜೈಲು, ಭಾರೀ ದಂಡ ಪಕ್ಕಾ

ಸಮಗ್ರ ನ್ಯೂಸ್: ವೆಜ್ & ನಾನ್‌ವೆಜ್ ಕಬಾಬ್‍ ಮುಂತಾದ ಆಹಾರ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕೃತಕ ಬಣ್ಣಗಳನ್ನು ಬಳಸಿರುವ

ರಾಜ್ಯದಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ| ನಿಯಮ‌ ಉಲ್ಲಂಘಿಸಿದರೆ ಜೈಲು, ಭಾರೀ ದಂಡ ಪಕ್ಕಾ Read More »

ವಯನಾಡಿನ ಜನರಿಗೆ ಪತ್ರ ಬರೆದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ವಯನಾಡ್ ಲೋಕಸಭಾ ಕ್ಷೇತ್ರವನ್ನು ತೊರೆಯಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಯನಾಡ್‌ ಜನತೆಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ. ನೀವು ನನ್ನನ್ನು ಅಪರಿಮಿತ ಪ್ರೀತಿ ಮತ್ತು ವಾತ್ಸಲ್ಯದಿಂದ ಅಪ್ಪಿಕೊಂಡಿದ್ದೀರಿ. ನೀವು ಯಾವ ರಾಜಕೀಯ ರಚನೆಯನ್ನು ಬೆಂಬಲಿಸಿದ್ದೀರಿ?, ನೀವು ಯಾವ ಸಮುದಾಯಕ್ಕೆ ಸೇರಿದವರು?, ನೀವು ಯಾವ ಧರ್ಮವನ್ನು ನಂಬಿದ್ದೀರಿ? ಅಥವಾ ನೀವು ಯಾವ ಭಾಷೆಯಲ್ಲಿ ಮಾತನಾಡುತ್ತೀರಿ? ಎಂಬುದು ಮುಖ್ಯವಲ್ಲ ಎಂದರು. ನಾನು ದಿನದಿಂದ ದಿನಕ್ಕೆ ನಿಂದನೆಯನ್ನು ಎದುರಿಸಿದಾಗ ನೀವು ಕೊಟ್ಟ ಪ್ರೀತಿ ನನ್ನನ್ನು ರಕ್ಷಿಸಿತು. ನೀವೇ

ವಯನಾಡಿನ ಜನರಿಗೆ ಪತ್ರ ಬರೆದ ರಾಹುಲ್ ಗಾಂಧಿ Read More »