ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್ ಸೇರಿದಂತೆ ನಾಲ್ಕು ಮಂದಿ ಪರಪ್ಪನ ಅಗ್ರಹಾರ ಜೈಲಿಗೆ
ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಸೇರಿದಂತೆ 4 ಆರೋಪಿಗಳು ಪರಪ್ಪನ ಅಗ್ರಹಾರ ಪಾಲಾಗಿದ್ದಾರೆ. ದರ್ಶನ್ ಸೇರಿದಂತೆ ಉಳಿದ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅವಧಿ ಅಂತ್ಯವಾದ ಹಿನ್ನೆಲೆ ಇಂದು 5ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ದರ್ಶನ್ ಸೇರಿದಂತೆ ಒಟ್ಟು 4 ಆರೋಪಿಗಳಿಗೆ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ. ಅದರಂತೆ ಎರಡನೇ ಬಾರಿಗೆ ನಟ ದರ್ಶನ್ ಜೈಲು ಪಾಲಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್ ಸೇರಿದಂತೆ ನಾಲ್ಕು ಮಂದಿ ಪರಪ್ಪನ ಅಗ್ರಹಾರ ಜೈಲಿಗೆ Read More »










