Editor

ಮೂರು ಹೊಸ ಕಾನೂನುಗಳ ಅನುಷ್ಠಾನ/ ಮುಂದೂಡುವಂತೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್: ಭಾರತೀಯ ನ್ಯಾಯ ಸಂಹಿತಾ, ಭಾರತೀಯ ಸಾಕ್ಷಿ ಅಧಿನಿಯಮ್ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಎಂಬ ಮೂರು ಕ್ರಿಮಿನಲ್ ಕಾನೂನುಗಳ ಅನುಷ್ಠಾನವನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪತ್ರ ಬರೆದಿದ್ದಾರೆ. ಈ ಕಾನೂನುಗಳ ಸನ್ನಿಹಿತ ಅನುಷ್ಠಾನದ ಬಗ್ಗೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023, ಭಾರತೀಯ ಸಾಕ್ಷಿ ಅಧಿನಿಯಮ್ (ಬಿಎಸ್‌ಎ) ಅನುಷ್ಠಾನವನ್ನು ಮುಂದೂಡಲು ನಮ್ಮ ಮನವಿಯನ್ನು […]

ಮೂರು ಹೊಸ ಕಾನೂನುಗಳ ಅನುಷ್ಠಾನ/ ಮುಂದೂಡುವಂತೆ ಪತ್ರ ಬರೆದ ಮಮತಾ ಬ್ಯಾನರ್ಜಿ Read More »

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಮೇಲೆ ಗುಳಿಗ ದೃಷ್ಟಿ| ಎಷ್ಟು ಪ್ರಯತ್ನಿಸಿದ್ರೂ ಕೆಲಸ ಮುಗೀತಿಲ್ವಂತೆ!!

ಸಮಗ್ರ ನ್ಯೂಸ್: ದೈವಗಳ ನೆಲೆವೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ದೈವ ಮುನಿಸಿಕೊಂಡ ಪರಿಣಾಮ ಒಂದಲ್ಲ ಒಂದು ಅವಾಂತರಗಳು ಸಂಭವಿಸುತ್ತಿದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿದೆ. ಆದರೆ ಮಂಗಳೂರಿನ ಹಳೆ ಬಸ್ ನಿಲ್ದಾಣದ ಬಳಿ ಮೂರು ವರ್ಷದಿಂದ ಕಾಮಗಾರಿಯೊಂದು ನೆನೆಗುದಿಗೆ ಬಿದ್ದಿದೆ. ಇದಕ್ಕೆ ಕಾರಣ ಗುಳಿಗೆ ದೈವದ ಮುನಿಸಂತೆ!! ಬಹು ಅಂತಸ್ಥಿನ ಕಾರ್ ಪಾರ್ಕಿಂಗ್ ಕಾಮಗಾರಿಯ

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಮೇಲೆ ಗುಳಿಗ ದೃಷ್ಟಿ| ಎಷ್ಟು ಪ್ರಯತ್ನಿಸಿದ್ರೂ ಕೆಲಸ ಮುಗೀತಿಲ್ವಂತೆ!! Read More »

ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ಮೇಲೂ ಲೈಂಗಿಕ ಆರೋಪ| ಯುವಕನ ಮೇಲೆ ಅಸಹಜ‌ ಕಾಮಕೇಳಿ ನಡೆಸಿದ್ರಂತೆ ಎಂಎಲ್ ಸಿ ಸೂರಜ್ ರೇವಣ್ಣ!!

ಸಮಗ್ರ ನ್ಯೂಸ್: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡಿದ್ದು, ದೇಶ-ವಿದೇಶ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ತಮ್ಮ ಪಕ್ಷದ ಕಾರ್ಯಕರ್ತೆಯರು, ಸರ್ಕಾರಿ ಮಹಿಳಾ ಅಧಿಕಾರಿಗಳು, ಜೆಡಿಎಸ್​ ಮುಖಂಡರ ಹೆಂಡತಿಯರನ್ನು ಪ್ರಜ್ವಲ್​ ಲೈಂಗಿಕವಾಗಿ ಬಳಿಸಿಕೊಂಡಿರುವ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ಅಣ್ಣ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ,

ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ಮೇಲೂ ಲೈಂಗಿಕ ಆರೋಪ| ಯುವಕನ ಮೇಲೆ ಅಸಹಜ‌ ಕಾಮಕೇಳಿ ನಡೆಸಿದ್ರಂತೆ ಎಂಎಲ್ ಸಿ ಸೂರಜ್ ರೇವಣ್ಣ!! Read More »

ತನ್ನ ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಧು ಸಾವು

ಸಮಗ್ರ ನ್ಯೂಸ್: ಯುವತಿಯೊಬ್ಬಳು ಇನ್ನೇನು ಸಪ್ತಪದಿ ತುಳಿದು ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದಿದೆ. ಸಂತೋಷದಿಂದ ತುಂಬಿ ತುಳುಕುತ್ತಿದ್ದ ಮನೆಯಲ್ಲಿ ಇದೀಗ ನೀರವ ಮೌನ ಆವರಿಸಿದೆ. ಮೃತ ಯುವತಿ ಶ್ರೇಯಾ ಜೈನ್(28) ದೆಹಲಿ ಮೂಲದವರಾದ ಶ್ರೇಯಾ ಕುಟುಂಬ ಡೆಹ್ರಾಡೂನ್‌ನ ಐಷಾರಾಮಿ ರೆಸಾರ್ಟೊಂದನ್ನು ಮದುವೆಯ ಸಂಭ್ರಮಾಚರಣೆಗಾಗಿ ಬುಕ್ ಮಾಡಿತ್ತು. ಆದರಂತೆ

ತನ್ನ ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಧು ಸಾವು Read More »

ಮದ್ಯಪ್ರಿಯರಿಗೆ ಗುಡ್ ನ್ಯೂಸ್| ಜು.1 ರಿಂದ ಎಣ್ಣೆರೇಟ್ ಇಳಿಸಲು ರಾಜ್ಯ ಸರ್ಕಾರದ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮದ್ಯಪ್ರಿಯರ ಕುರಿತು ಫೆಬ್ರವರಿಯಲ್ಲಿ ಬಜೆಟ್‌ನಲ್ಲಿ ಕೊಟ್ಟಿದ್ದ ಭರವಸೆಯನ್ನು ಉಳಿಸಿಕೊಳ್ಳುವುದಾಗಿ ತಿಳಿಸಿರುವ ರಾಜ್ಯ ಸರ್ಕಾರ, ಜುಲೈ 1ರಿಂದ ವಿವಿಧ ಮದ್ಯದ ಬೆಲೆ ಇಳಿಕೆ ಜಾರಿಗೆ ತರಲಿದೆ. ಜುಲೈ 1ರಿಂದ ವಿವಿಧ ದುಬಾರಿ ಪ್ರಿಮಿಯಂ ಮದ್ಯದ ಅಬಕಾರಿ ತೆರಿಗೆಯನ್ನು ಕಡಿಮೆ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಇಂಧನ ಬೆಲೆ ಹಾಗೂ ದಿನಸಿ ವಸ್ತುಗಳು ಬೆಲೆ ಏರಿಕೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದ್ಯದ ಬೆಲೆ ಇಳಿಸುವ ನಿರ್ಧಾರ

ಮದ್ಯಪ್ರಿಯರಿಗೆ ಗುಡ್ ನ್ಯೂಸ್| ಜು.1 ರಿಂದ ಎಣ್ಣೆರೇಟ್ ಇಳಿಸಲು ರಾಜ್ಯ ಸರ್ಕಾರದ ಚಿಂತನೆ Read More »

ಸಾರಿಗೆ ನೌಕರರು ಮುಷ್ಕರ ಮಾಡುವಂತಿಲ್ಲ| ಸರ್ಕಾರದ ಆದೇಶಕ್ಕೆ ಅಸಮಾಧಾನ

ಸಮಗ್ರ ನ್ಯೂಸ್: ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಯಾವುದೇ ಕಾರಣಕ್ಕೂ ಮುಷ್ಕರ , ಪ್ರತಿಭಟನೆ , ಹರತಾಳ ಹಾಗೂ ಅಸಹಕಾರ ಚಳುವಳಿಗಳನ್ನು ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಆರು ತಿಂಗಳು ಯಾವುದೇ ಸಮಸ್ಯೆಗಳಿದ್ದರೂ ಸಹ ಅವರು ಪ್ರತಿಭಟನೆ ನಡೆಸುವಂತಿಲ್ಲ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದು, ಇದು ಸಾರಿಗೆ ಕಾರ್ಮಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರಿಗೆ ಇಲಾಖೆಯ ನೌಕರರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಹಿಂದೆಯೂ ಸರ್ಕಾರದ ವಿರುದ್ದ ತಿರುಗಿಬಿದ್ದಿದ್ದರು. ಬಿಜೆಪಿ ಸರ್ಕಾರದ ಆಡಳಿತದಲ್ಲಿ

ಸಾರಿಗೆ ನೌಕರರು ಮುಷ್ಕರ ಮಾಡುವಂತಿಲ್ಲ| ಸರ್ಕಾರದ ಆದೇಶಕ್ಕೆ ಅಸಮಾಧಾನ Read More »

ಶಬರಿಮಲೆಯಲ್ಲಿ‌ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ/ ಭೂ ಸ್ವಾಧೀನ ಅಧಿಸೂಚನೆ ಹಿಂಪಡೆದ ಕೇರಳ ಸರ್ಕಾರ

ಸಮಗ್ರ ನ್ಯೂಸ್: ಶಬರಿಮಲೆ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯ ಭೂಸ್ವಾಧೀನ ಕುರಿತು ಆಕ್ಷೇಪಗಳ ಹಿನ್ನೆಲೆಯಲ್ಲಿ ತನ್ನ ನಿಲುವು ಬದಲಿಸಿರುವ ಕೇರಳ ಸರ್ಕಾರ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯುವುದಾಗಿ ಹೈಕೋರ್ಟ್‌ಗೆ ಹೇಳಿದೆ. ಪ್ರಸ್ತುತ ಅಧಿಸೂಚನೆಗೆ ಈ ಹಿಂದೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿಲುವನ್ನು ಬದಲಿಸಿದ್ದು, ಭೂ ಸ್ವಾಧೀನದಿಂದಾಗುವ ಸಾಮಾಜಿಕ ಪರಿಣಾಮದ ಅಧ್ಯಯನವನ್ನು ಹೊಸ ಏಜೆನ್ಸಿಯಿಂದ ನಡೆಸಲಾಗುವುದು ಎಂದು ಕೋರ್ಟ್‌ಗೆ ಹೇಳಿದೆ. ಕೇರಳ ಸರ್ಕಾರದ ಭೂ ಸ್ವಾಧೀನ ಅಧಿಸೂಚನೆಗೆ ಬಿಲೀವರ್ಸ್‌ ಚರ್ಚ್ ಅಧೀನದಲ್ಲಿರುವ ಅಯನಾ ಚಾರಿಟಬಲ್‌

ಶಬರಿಮಲೆಯಲ್ಲಿ‌ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ/ ಭೂ ಸ್ವಾಧೀನ ಅಧಿಸೂಚನೆ ಹಿಂಪಡೆದ ಕೇರಳ ಸರ್ಕಾರ Read More »

ಬೆಳ್ಳಾರೆ: ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ 16ನೇ ಸಂಸ್ಥಾಪನಾ ದಿನದ ಅಂಗವಾಗಿ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್ ಡಿ ಪಿ ಐ ಗ್ರಾಮ ಸಮಿತಿ ಅಧ್ಯಕ್ಷ ತಾಜುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರೂ ಸವಣೂರು ಗ್ರಾಮ ಪಂಚಾಯಿತಿ ಸದಸ್ಯರೂ ಆದ ರಝಾಕ್ ಕೆನರಾ ಧ್ವಜಾರೋಹಣ ನೆರವೇರಿಸಿದರು.ವಿಧಾನಸಭಾ ಸಮಿತಿ ಸಂಘಟಣಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ

ಬೆಳ್ಳಾರೆ: ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ Read More »

ಪುತ್ತೂರು: “ಬ್ರೈಟ್ ಭಾರತ್” ಸಂಸ್ಥೆ ಇದೀಗ ಪ್ರಪ್ರಥಮ ಬಾರಿಗೆ ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ|ಇದರ ಸದಸ್ಯರಾಗುವುದು ಹೇಗೆ!? ಇಲ್ಲಿದೆ ಈ ಬಗ್ಗೆ ಮಾಹಿತಿ

ಸಮಗ್ರ ನ್ಯೂಸ್: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್

ಪುತ್ತೂರು: “ಬ್ರೈಟ್ ಭಾರತ್” ಸಂಸ್ಥೆ ಇದೀಗ ಪ್ರಪ್ರಥಮ ಬಾರಿಗೆ ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ|ಇದರ ಸದಸ್ಯರಾಗುವುದು ಹೇಗೆ!? ಇಲ್ಲಿದೆ ಈ ಬಗ್ಗೆ ಮಾಹಿತಿ Read More »

ಯುಜಿಸಿ ನೆಟ್ ಪರೀಕ್ಷೆ ರದ್ದು/ ಶೀಘ್ರದಲ್ಲೇ ಮರುಪರೀಕ್ಷೆ

ಸಮಗ್ರ ನ್ಯೂಸ್: ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇರುವುದರಿಂದ ಅದನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಎನ್‌ಟಿಎ ಜೂನ್ 18 ರಂದು ನಡೆಸಿದ ಯುಜಿಸಿ- ನೆಟ್ ಪರೀಕ್ಷೆಯಲ್ಲಿ 9 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿ ಲಭಿಸಿರುವ ಕಾರಣ ಪರೀಕ್ಷೆಯನ್ನು ರದ್ದುಗೊಳಿಸಲು ಸಚಿವಾಲಯ ನಿರ್ಧರಿಸಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಯುಜಿಸಿ ನೆಟ್ ಪರೀಕ್ಷೆ ರದ್ದು/ ಶೀಘ್ರದಲ್ಲೇ ಮರುಪರೀಕ್ಷೆ Read More »