Editor

ತಿರುವನಂತಪುರಂ ಅನಂತ ಪದ್ಮನಾಭ ದೇವಾಲಯದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ| ಬೆಳ್ತಂಗಡಿಯ ಕೊಕ್ಕಡ ಗ್ರಾಮದ ನಾಗೇಶರಿಗೆ ಒಲಿದ ಭಾಗ್ಯ

ಸಮಗ್ರ ನ್ಯೂಸ್: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರರಾಗಿದ್ದಾರೆ. ಹಿಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು […]

ತಿರುವನಂತಪುರಂ ಅನಂತ ಪದ್ಮನಾಭ ದೇವಾಲಯದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ| ಬೆಳ್ತಂಗಡಿಯ ಕೊಕ್ಕಡ ಗ್ರಾಮದ ನಾಗೇಶರಿಗೆ ಒಲಿದ ಭಾಗ್ಯ Read More »

ರಾಜ್ಯದಲ್ಲಿ ಬಾಕಿ ಉಳಿದ ರೈಲ್ವೆ ಯೋಜನೆಗಳು ಎರಡೇ ವರ್ಷದಲ್ಲಿ ಪೂರ್ಣ; ಕೇಂದ್ರ ಸಚಿವ ವಿ.ಸೋಮಣ್ಣ

ಸಮಗ್ರ ನ್ಯೂಸ್: ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಬಂಪರ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ ವಿಳಂಬವಾಗಿರುವ ಸುಮಾರು 1264 ಕಿಲೋ ಮೀಟರ್ ಒಳಗೊಂಡ 9 ರೈಲ್ವೆ ಯೋಜನೆ 2025 -26ರ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ತುಮಕೂರು -ಕಲ್ಯಾಣದುರ್ಗ – ರಾಯದುರ್ಗ, ತುಮಕೂರು -ಚಿತ್ರದುರ್ಗ -ದಾವಣಗೆರೆ, ಗಿಣಿಗೇರಾ -ರಾಯಚೂರು, ಬಾಗಲಕೋಟ -ಕುಡಚಿ, ಗದಗ -ವಾಡಿ, ಕಡೂರು -ಚಿಕ್ಕಮಗಳೂರು,

ರಾಜ್ಯದಲ್ಲಿ ಬಾಕಿ ಉಳಿದ ರೈಲ್ವೆ ಯೋಜನೆಗಳು ಎರಡೇ ವರ್ಷದಲ್ಲಿ ಪೂರ್ಣ; ಕೇಂದ್ರ ಸಚಿವ ವಿ.ಸೋಮಣ್ಣ Read More »

ಉದ್ಯೋಗ ಸಮಾಚಾರ| ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಹಲವು ಹುದ್ದೆಗಳು| ಜೂ.24 ಅರ್ಜಿ ಸಲ್ಲಿಕೆಗೆ ಕೊನೆದಿನ

ಸಮಗ್ರ ನ್ಯೂಸ್: ಕರ್ನಾಟಕ ಗ್ರಾಮೀಣ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ 586 ಆಫೀಸ್ ಅಸಿಸ್ಟೆಂಟ್​, ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್‌ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅಪ್ಲೈ ಮಾಡಿ. ಯಾವ್ಯಾವ ಬ್ಯಾಂಕಿನಲ್ಲಿ ಎಷ್ಟೆಷ್ಟು ಹುದ್ದೆಗಳಿಗೆ ಎಂಬ ಮಾಹಿತಿ ಇಲ್ಲಿದೆ. ಕರ್ನಾಟಕ

ಉದ್ಯೋಗ ಸಮಾಚಾರ| ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಹಲವು ಹುದ್ದೆಗಳು| ಜೂ.24 ಅರ್ಜಿ ಸಲ್ಲಿಕೆಗೆ ಕೊನೆದಿನ Read More »

ಹವಾಮಾನ ವರದಿ| ಮತ್ತೆ ಚುರುಕುಗೊಂಡ ಮುಂಗಾರು| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಕ್ಷೀಣಗೊಂಡಿತ್ತು, ಈಗ ಮತ್ತೆ ಮಾರುತಗಳು ಕರಾವಳಿ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಹಿನ್ನಲೆಯಲ್ಲಿ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತೆ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಬಿರುಗಾಳಿ 40 ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಮತ್ತು ಉತ್ತರ

ಹವಾಮಾನ ವರದಿ| ಮತ್ತೆ ಚುರುಕುಗೊಂಡ ಮುಂಗಾರು| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಟಿ-20 ವಿಶ್ವಕಪ್/ ಸೂಪರ್-8 ತಲುಪಿದ ಎಂಟು ತಂಡಗಳು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್‌ನ ಸೂಪರ್-8 ಆಡಲಿರುವ ಎಂಟು ತಂಡಗಳು ಅಂತಿಮಗೊಂಡಿದೆ. ಈ ಎಂಟು ತಂಡಗಳನ್ನು ತಲಾ 4 ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಜೂನ್ 19 ರಿಂದ ಸೂಪರ್-8 ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗಲಿವೆ. ಬಾಂಗ್ಲಾದೇಶ ಇಂದು ನೇಪಾಳ ತಂಡವನ್ನು ಸೋಲಿಸುವ ಮೂಲಕ ಸೂಪ‌ರ್-8 ತಲುಪಿದ ಕೊನೆಯ ತಂಡವಾಯಿತು. ಈಗ ಸೂಪರ್-8 ಸುತ್ತಿಗೆ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಯುಎಸ್‌ಎ, ಇಂಗ್ಲೆಂಡ್, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ತಂಡಗಳು ಅರ್ಹತೆ ಪಡೆದಿವೆ. ಈ ಎಲ್ಲಾ

ಟಿ-20 ವಿಶ್ವಕಪ್/ ಸೂಪರ್-8 ತಲುಪಿದ ಎಂಟು ತಂಡಗಳು Read More »

ತಂಗಿ ಪ್ರಿಯಾಂಕಗಾಗಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಖರ್ಗೆ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟು, ಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕೇರಳದ

ತಂಗಿ ಪ್ರಿಯಾಂಕಗಾಗಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ Read More »

ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಬೈಕ್ ಮತ್ತು ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸುಳ್ಯದ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಜೂ.17ರಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಅಲ್ಪ ಸ್ಪಲ್ಪ ಗಾಯಗಳಾಗಿದ್ದು, ಇನ್ನೋವಾ ಮತ್ತು ಬೈಕ್ ಜಖಂಗೊಂಡಿದೆ.

ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ Read More »

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ| 15 ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ನ್ಯೂ ಜಲ್ಪೈಗುರಿ ಬಳಿ ಸೋಮವಾರ ಬೆಳಿಗ್ಗೆ ಗೂಡ್ಸ್ ರೈಲು ಸೀಲ್ಡಾಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಎನ್‌ಎಫ್‌ಆರ್ನ ಕಟಿಹಾರ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ| 15 ಸಾವು, ಹಲವರು ಗಂಭೀರ Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು

ಸಮಗ್ರ ನ್ಯೂಸ್:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಪ್ರಪಾತಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿಯ ಬೆಟ್ಟಗೇರಿ ಮುಖ್ಯರಸ್ತೆಯ ತಳೂರು ಜಂಕ್ಷನ್ ಬಳಿ ಭಾನುವಾರ(ಜೂ.16) ನಡೆದಿದೆ. ಭಾಗಮಂಡಲ ಕಡೆಯಿಂದ ಮಡಿಕೇರಿ ಕಡೆಗೆ ಟಿ. ನರಸೀಪುರದ ನಿವಾಸಿ ನಾಗೇಂದ್ರ ಎಂಬುವವರು ಚಲಾಯಿಸುತಿದ್ದ ಕಾರು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿಬಿದ್ದು ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ಜಖಂಗೊಂಡಿದ್ದು, ಕಾರಲ್ಲಿದ್ದ ನಾಗೇಂದ್ರ ಹಾಗೂ ಅವರ ಪತ್ನಿ ಮಗುವಿಗೆ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಹಾಸ್ಯನಟ ಚಿಕ್ಕಣ್ಣನಿಗೂ ನೋಟೀಸ್!?

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ದರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಬಹುದು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ| ಹಾಸ್ಯನಟ ಚಿಕ್ಕಣ್ಣನಿಗೂ ನೋಟೀಸ್!? Read More »