Editor

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ.. ನಾಲ್ವರು ಸಾವು

ಸಮಗ್ರ ನ್ಯೂಸ್: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಇವರೆಲ್ಲ ಬೆಂಗಳೂರಿನ ತಣಿಸಂದ್ರ ಮೂಲದವರು ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ನೋಹನ್ (2), ವಿಜಯರೆಡ್ಡಿ ಮೃತ ದುರ್ದೈವಿಗಳು. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ […]

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ.. ನಾಲ್ವರು ಸಾವು Read More »

ರಾಜ್ಯ ಸರ್ಕಾರದಿಂದ ವಾಹನ ಸವಾರರ ಜೇಬಿಗೆ ಕತ್ತರಿ| ಪೆಟ್ರೋಲ್, ಡೀಸೆಲ್‌ ಬೆಲೆಯಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್‌ ಪೆಟ್ರೋಲ್‌ ದರವನ್ನು 3 ರೂ. ಹಾಗೂ ಡೀಸೆಲ್‌ ದರನ್ನು 3 ರೂ. 50 ಪೈಸೆಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಇದರಿಂದ ಇನ್ನು ಮುಂದೆ ಪೆಟ್ರೋಲ್‌ ದರ ಲೀಟರ್‌ಗೆ 103 ರೂ.ಗೆ ಹಾಗೂ ಡೀಸೆಲ್‌ 91 ರೂ. 50 ಪೈಸೆ

ರಾಜ್ಯ ಸರ್ಕಾರದಿಂದ ವಾಹನ ಸವಾರರ ಜೇಬಿಗೆ ಕತ್ತರಿ| ಪೆಟ್ರೋಲ್, ಡೀಸೆಲ್‌ ಬೆಲೆಯಲ್ಲಿ ಭಾರೀ ಏರಿಕೆ Read More »

ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸದರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ ಎಚ್.ಡಿ.ಕುಮಾರಸ್ವಾಮಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಬೆಳಗ್ಗೆ

ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ Read More »

ಕೊಲೆ ಪ್ರಕರಣ: ದರ್ಶನ್ ಗೆ ಸಂಕಷ್ಟ ನಿವಾರಣೆಯಾಗಲಿ ಎಂದು ಕುಟುಂಬಸ್ಥರಿಂದ ಪೂಜೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದರ್ಶನ್ ನನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಕುಟುಂಬಸ್ಥರು ಸಂಕಷ್ಟ ಪರಿಹಾರಕ್ಕೆ ದೇವರ ಮೊರೆ ಹೋಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗದಲ್ಲಿರುವ ದರ್ಶನ್ ಸಹೋದರಿ ದಿವ್ಯಾ ಅವರ ಪತಿ ಮಂಜುನಾಥ, ದರ್ಶನ್ ಒಳಿತಿಗಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೈಗಾದ ಟೌನ್‌ಶಿಪ್‌ನಲ್ಲಿರುವ ರಾಮಲಿಂಗೇಶ್ವರ, ಶನೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಹಾಗೂ ವಿಶೇಷ‌ ಹೂವಿನ ಅಲಂಕಾರ ಪೂಜೆ

ಕೊಲೆ ಪ್ರಕರಣ: ದರ್ಶನ್ ಗೆ ಸಂಕಷ್ಟ ನಿವಾರಣೆಯಾಗಲಿ ಎಂದು ಕುಟುಂಬಸ್ಥರಿಂದ ಪೂಜೆ Read More »

ಜೂ.17ರಂದು ಮೆಟ್ರೋ ಸೇವೆ ರದ್ದು… ಚಲ್ಲಘಟ್ಟದಿಂದ ಕೆಂಗೇರಿ ತನಕ ಇರಲ್ಲ ಮೆಟ್ರೋ ಸೇವೆ ..!

ಸಮಗ್ರ ನ್ಯೂಸ್: ನಮ್ಮ ಮೆಟ್ರೊದಲ್ಲಿನ ನೇರಳೆ ಮಾರ್ಗದ ಚಲ್ಲಘಟ್ಟ ನಿಲ್ದಾಣದಿಂದ ಕೆಂಗೇರಿವರೆಗಿನ ಮಾರ್ಗದಲ್ಲಿ ಸೋಮವಾರ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮೆಟ್ರೋ ರೈಲುಗಳು ಸಂಚರಿಸುವುದಿಲ್ಲ. ಈ ಮಾರ್ಗದ ರೈಲುಗಳನ್ನು ಅವಲಂಬಿಸಿರುವ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಂಡರೆ ಉತ್ತಮ ಈ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು ದುರಸ್ತಿಗಾಗಿ ನಮ್ಮ ಮೆಟ್ರೊ ರೈಲು ಪ್ರಾಧಿಕಾರ ಸೇವೆಯನ್ನು ನಿಲ್ಲಿಸುವುದಾಗಿ ಬಿಎಂಆರ್ ಸಿಎಲ್ ಮಾಹಿತಿ ಹೊರಡಿಸಿದೆ. ನಮ್ಮ ಮೆಟ್ರೋ ನೀಡಿರುವ ಪ್ರಕಟಣೆ:ನೇರಳೆ ಮಾರ್ಗದಲ್ಲಿರುವ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ದಿನಾಂಕ 17ನೇ ಜೂನ್

ಜೂ.17ರಂದು ಮೆಟ್ರೋ ಸೇವೆ ರದ್ದು… ಚಲ್ಲಘಟ್ಟದಿಂದ ಕೆಂಗೇರಿ ತನಕ ಇರಲ್ಲ ಮೆಟ್ರೋ ಸೇವೆ ..! Read More »

ಸಿಕ್ಕಿಂ ನಲ್ಲಿ ಭಾರೀ ಪ್ರವಾಹ/ ಸಂಕಷ್ಟದಲ್ಲಿ ಪ್ರವಾಸಿಗರು

ಸಮಗ್ರ ನ್ಯೂಸ್: ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ಆರು ಜನರು ಸಾವನ್ನಪ್ಪಿದ್ದು, 1,200 ಕ್ಕೂ ಹೆಚ್ಚು ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. 1,200 ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು ರಾಜ್ಯಗಳಿಂದ ಪ್ರಯಾಣಿಸಿದ್ದಾರೆ, ಇದರಲ್ಲಿ ಬಾಂಗ್ಲಾದೇಶದಿಂದ 10, ನೇಪಾಳದಿಂದ ಮೂರು ಮತ್ತು ಥಾಯ್ಲೆಂಡ್‌ನಿಂದ ಇಬ್ಬರು ಸೇರಿದಂತೆ ದೂರದಲ್ಲಿರುವ ಲಾಚುಂಗ್ ಗ್ರಾಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ಬಿ ಪಾಠಕ್‌ ಅವರು ಸಿಲುಕಿರುವ ಪ್ರವಾಸಿಗರನ್ನು ವಿಮಾನದಲ್ಲಿ ಕರೆದೊಯ್ಯುವ

ಸಿಕ್ಕಿಂ ನಲ್ಲಿ ಭಾರೀ ಪ್ರವಾಹ/ ಸಂಕಷ್ಟದಲ್ಲಿ ಪ್ರವಾಸಿಗರು Read More »

ಕೊನೆಗೂ ಕೊಲೆಯ‌ ರಹಸ್ಯ ಬಾಯ್ಬಿಟ್ಟ ದರ್ಶನ್, ಪವಿತ್ರಾ| ತನಿಖೆಯಲ್ಲಿ ತಿಳಿದುಬಂದ ಸತ್ಯಗಳೇನು?

ಸಮಗ್ರ ನ್ಯೂಸ್: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ ಹೇಳಿಲ್ಲ. ಪವಿತ್ರಾ ಆಪ್ತ ಪವನ್ ನನಗೆ ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶದ ಕುರಿತು ತಿಳಿಸಿದ್ದ. ಆ ಕ್ಷಣದಲ್ಲಿ ಭಾರೀ ಕೋಪ ಬಂತು.

ಕೊನೆಗೂ ಕೊಲೆಯ‌ ರಹಸ್ಯ ಬಾಯ್ಬಿಟ್ಟ ದರ್ಶನ್, ಪವಿತ್ರಾ| ತನಿಖೆಯಲ್ಲಿ ತಿಳಿದುಬಂದ ಸತ್ಯಗಳೇನು? Read More »

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ?

ಸಮಗ್ರ ನ್ಯೂಸ್: ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಯ ಪುಚ್ಚೆಹಿತ್ಲು ನಿವಾಸಿ ವೃತ್ತಿಪರ ಆಟೋ ಚಾಲಕ ವಿಶ್ವನಾಥ್ ಗೌಡ ಪುಚ್ಚೆಹಿತ್ತಿಲುರವರ ಚಿಕಿತ್ಸೆಗೆ ನೆರವಾಗಲು ಅವರ ಹಿತೈಷಿಗಳು ಮನವಿ ಮಾಡಿದ್ದಾರೆ. ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ ಕುಟುಂಬಕ್ಕೆ ಆಸರೆಯಾಗಿದ್ದ ಇವರ ಚಿಕಿತ್ಸಾ ವೆಚ್ಚ 5 ಲಕ್ಷ ರೂಪಾಯಿಯಷ್ಟಾಗಿದೆ. ದುಬಾರಿ ವೆಚ್ಚವನ್ನು ಕುಟುಂಬಕ್ಕೆ ಭರಿಸಲು ತುಂಬಾ ಕಷ್ಟಕರವಾದ ಈ ಸಂದರ್ಭದಲ್ಲಿ ದಾನಿಗಳು ಕೈ ಜೋಡಿಸುವಂತೆ ವಿನಂತಿಸಿದ್ದಾರೆ. ಹೃದಯವಂತ ಓದುಗರು ಸಹಾಯಹಸ್ತ

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ? Read More »

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಲ್ಲಿ ದಾಸ, ಅಭಿಮಾನಿಗಳ ಚಾಲೆಂಜಿಂಗ್ ಸ್ಟಾರ್​ ಎಂದೆಲ್ಲಾ ಕರೆಯಲ್ಪಟ್ಟ ನಟ ದರ್ಶನ್​ ಇದೀಗ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿ, ಪೊಲೀಸರ ಕಸ್ಟಡಿಯಲ್ಲಿದ್ದು, ನಿರಂತರ ವಿಚಾರಣೆಗೆ ಒಳಪಟ್ಟಿದ್ದಾರೆ. ಒಂದೆಡೆ ದರ್ಶನ್​ ಬಂಧನ ಚಿತ್ರರಂಗದ ಗಣ್ಯರು ಸೇರಿದಂತೆ ರಾಜ್ಯದ ಜನತೆಗೂ ಭಾರೀ ಅಚ್ಚರಿ ತಂದರೆ, ಹತ್ಯೆ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿರುವ ದರ್ಶನ್​ ಪರ ಬೆಂಬಲದ ಘೋಷಣೆಗಳನ್ನು ಕೂಗುತ್ತಿರುವ ಅಭಿಮಾನಿಗಳು ಮತ್ತೊಂದೆಡೆ. ಆರಂಭಿಕ ಹಂತದಲ್ಲೇ ಮುಚ್ಚಿಹೋಗಬೇಕಿದ್ದ ಈ ಪ್ರಕರಣದಲ್ಲಿ ದರ್ಶನ್​ರನ್ನು ಬಯಲಿಗೆಳೆದು ತಂದ ಇಬ್ಬರು ದಕ್ಷ

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು Read More »

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್‌ಡಿಪಿಐ ನಾಯಕರ ನಿಯೋಗ

ಸಮಗ್ರ ನ್ಯೂಸ್: ವಿಜಯೋತ್ಸವ ಹೆಸರಿನಲ್ಲಿ ಇತ್ತೀಚಿಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹಲವಾರು ಮಂದಿ ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ನೆಪದಲ್ಲಿ ಮನೆಗಳಿಗೆ ದಾಳಿ ನಡೆಸಿದ ಪೊಲೀಸರು ಹಲವಾರು ಯುವಕರನ್ನು, ಮಹಿಳೆಯರನ್ನು ಠಾಣೆಗೆ ಕರೆದೊಯ್ದು ಎರಡು, ಮೂರು ದಿನಗಳ ಕಾಲ ಠಾಣೆಯಲ್ಲಿ ಕೂಡಿಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ. ಈ

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್‌ಡಿಪಿಐ ನಾಯಕರ ನಿಯೋಗ Read More »