Editor

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. 6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳಿನಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಿವಶಂಕರಪ್ಪ ಏಕೈಕ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದವರು ಇದೀಗ ಅವರು ಶಿವೈಕ್ಯರಾಗಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ Read More »

ಡಿಜಿಟಲ್ ಅರೆಸ್ಟ್| ಬೆಂಗಳೂರಿನಲ್ಲಿ 1.38 ಕೋಟಿ ಕಳೆದುಕೊಂಡ ವೃದ್ಧ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ನಿಂದ ವೃದ್ಧರೊಬ್ಬರು ಬರೋಬ್ಬರಿ 1.32 ಕೋಟಿ ರೂ. ಕಳೆದುಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ವರದರಾಜನ್ (83) ಡಿಜಿಟಲ್ ಅರೆಸ್ಟ್ ಮಾಡಿ ವಂಚಕರು 1.32 ಕೋಟಿ ರೂ. ವಂಚಿಸಿದ್ದಾರೆ. ಆರ್ ಬಿಐ, ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡಿದ್ದಾರೆ. ಮನಿಲಾಂಡರಿಂಗ್ ಆಗಿದೆ ಎಂದು ಹೆದರಿಸಿ 1.32 ಕೋಟಿ ರೂ. ಪಡೆದು ವೃದ್ಧರಿಗೆ ವಂಚಿಸಿದ್ದಾರೆ. ನವೆಂಬರ್ 19ರಿಂದ ಡಿಸೆಂಬರ್ 6ರವರೆಗೆ ಹಂತ ಹಂತವಾಗಿ ಹಣ ವರ್ಗಾವಣೆ

ಡಿಜಿಟಲ್ ಅರೆಸ್ಟ್| ಬೆಂಗಳೂರಿನಲ್ಲಿ 1.38 ಕೋಟಿ ಕಳೆದುಕೊಂಡ ವೃದ್ಧ Read More »

ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಇದೀಗ ಆಯೋಜಕರು ದಫ್ ಪ್ರದರ್ಶನವನ್ನು ಕೈ ಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್‌ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ

ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ Read More »

ಋತುಚಕ್ರ ರಜೆ| ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ ಕಾಯ್ದೆಯಲ್ಲಿ ಇಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ. ಸರ್ಕಾರದ ಏಕಪಕ್ಷ ಆದೇಶದಿಂದ ಹೋಟೆಲ್

ಋತುಚಕ್ರ ರಜೆ| ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »

ಕೆಂಪುಕಲ್ಲು ಸಮಸ್ಯೆ: 74 ಕಾರ್ಯಾದೇಶ, 21 ಪರವಾನಗಿ ಮಂಜೂರು – ಸಚಿವ ಎಸ್ ಎಸ್ ಮಲ್ಲಿಕಾರ್ಜುನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ತೆಗೆಯಲು 74 ಕಾರ್ಯಾದೇಶ ಹಾಗೂ 21 ಪರವಾನಿಗೆ ಮಂಜೂರು ಮಾಡಲಾಗಿದೆ. ಪರವಾನಿಗೆ ಕೋರಿ ಸಲ್ಲಿಸಿರುವ ಒಟ್ಟು 63 ಅರ್ಜಿಗಳ ವಿಲೇವಾರಿ ಬಾಕಿ ಇದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು(ಲ್ಯಾಟರೈಟ್‌ ಇಟ್ಟಿಗೆ) ಸಮಸ್ಯೆಯ ಕುರಿತು ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜಾ ಸೋಮವಾರದಂದು ವಿಧಾನಪರಿಷತ್‌ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕ

ಕೆಂಪುಕಲ್ಲು ಸಮಸ್ಯೆ: 74 ಕಾರ್ಯಾದೇಶ, 21 ಪರವಾನಗಿ ಮಂಜೂರು – ಸಚಿವ ಎಸ್ ಎಸ್ ಮಲ್ಲಿಕಾರ್ಜುನ Read More »

ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ?

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಪಾವತಿಸಿದ ರೈತರ ಖಾತೆಗೆ ಸೋಮವಾರದಿಂದ ಮೊತ್ತ ಜಮೆ ಆಗಲು ಆರಂಭಗೊಂಡಿದೆ. ಈ ನಡುವೆ ನಿರೀಕ್ಷೆಗಿಂತ ಕಡಿಮೆ ಮೊತ್ತ ಜಮೆ ಆಗುತ್ತಿರುವ ಬಗ್ಗೆ ರೈತರು ದೂರಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೆಳೆ ವಿಮೆ ಪಾವತಿಯಾದ ಲೆಕ್ಕಚಾರದ ಬಗ್ಗೆಯೇ ವ್ಯಾಪಕ ಚರ್ಚೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಅನ್ವಯವಾಗುವಂತೆ ಬೆಳೆ ವಿಮೆ ಪಾವತಿಸಬಹುದು. ಅಡಿಕೆ ಹೆಕ್ಟರ್‌ಗೆ 6400 ರೂ. ಹಾಗೂ ಕಾಳುಮೆಣಸು ಹೆಕ್ಟರ್‌ಗೆ

ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ? Read More »

ಉಡುಪಿ: ಆನ್ ಲೈನ್ ಟಾಸ್ಕ್| ಮಹಿಳೆಗೆ 31 ಲಕ್ಷ ರೂ ವಂಚನೆ

ಸಮಗ್ರ ನ್ಯೂಸ್: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತಿಗೆ ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪೆನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ ಟೈಮ್ ಕೆಲಸ ಮಾಡಲು ಆಸಕ್ತಿ ಇದ್ದರೆ ಫಾರ್ಮ್ ಫಿಲ್ ಮಾಡಿ ಕಳುಹಿಸಿ

ಉಡುಪಿ: ಆನ್ ಲೈನ್ ಟಾಸ್ಕ್| ಮಹಿಳೆಗೆ 31 ಲಕ್ಷ ರೂ ವಂಚನೆ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ

ಸಮಗ್ರ‌ ನ್ಯೂಸ್: ರಾಜ್ಯದ ನಾಯಕತ್ವ ಬದಲಾವಣೆ ತಿಕ್ಕಾಟದ ಮಧ್ಯ ಒಗ್ಗಟ್ಟಿನ ಮಂತ್ರ ಜಪಿಸಿರುವ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ವಿಪಕ್ಷಗಳ ಟೀಕೆಗಳಿಗೆ, ಪ್ರಶ್ನೆಗಳು ಮತ್ತು ಆರೋಪಗಳಿಗೆ ತಕ್ಕ ಉತ್ತರ ಕೊಡಲು ಸಜ್ಜಾಗಿದ್ದಾರೆ. ಬೆಂಬಲ ಬೆಲೆ, ರೈತರು ಬೆಳೆದ ಕಬ್ಬು, ಮಕ್ಕೆಜೋಳ ಇತರ ಬೆಳೆಗೆ ಸೂಕ್ತ ಬೆಲೆ, ನೆರೆ-ಪ್ರವಾಹ ಪರಿಹಾರ, ಸರ್ಕಾರ ನೇಮಕಾತಿ, ಪೊಲೀಸ್ ವೈಫಲ್ಯ, ನೀರಾವರಿ ವಿಷಯಗಳು ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಹಲವು ಸಮಸ್ಯೆಗಳು, ಬೇಡಿಕೆಗಳ ಪ್ರಸ್ತಾಪಿಸಿ ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಅಣಿಯಾಗಿವೆ.

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ Read More »

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ. ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ Read More »

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಉಡುಪಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶಾ ತಿಮ್ಮಪ್ಪ ಗೌಡ ಅವರ ಪೋಟೋವನ್ನು ಬಳಸಿಕೊಂಡು, ಉಡುಪಿಗೆ ಪ್ರಧಾನಿ ಮೋದಿ ಬಂದಿದ್ದ ಸಂದರ್ಭದಲ್ಲಿ ಅವರನ್ನು ನೋಡುವ ಭಾಗ್ಯ ಸಿಗಬಹುದು ಅಂದುಕೊಂಡಿದ್ದೆ. ಆದರೆ ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ ಎಂದು ಬರೆದಿರುವ

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು Read More »