Editor

ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್‌ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಬೋಳಿಯಾರ್​​ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನು ದೊಡ್ಡದು ಮಾಡುವವರೇ ದೇಶದ್ರೋಹಿಗಳು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ. ಅದನ್ನು ಅಲ್ಲಿನವರು, ಊರಿನವರೇ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಹೊರಗಿನವರು ಯಾರೂ ಶಾಂತಿ‌ ಕೆಡಿಸಬೇಡಿ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ. ಹೊರಗಿನ ಎಲ್ಲರೂ […]

ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್‌ ಖಡಕ್ ಎಚ್ಚರಿಕೆ Read More »

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಫ‌ಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್‌ ರೇಶನ್‌ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದುಗೊಳ್ಳುವ ಕಾರ್ಡ್‌ಗಳ ಬದಲಿಗೆ ಬಿಪಿಎಲ್‌ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಈಗಾಗಲೇ ಕೇಂದ್ರ ಸರಕಾರ ನಿಗದಿಪಡಿಸಿರುವ ಆದ್ಯತಾ ಪಡಿತರ ಕುಟುಂಬ (ಬಿಪಿಎಲ್‌)ಗಳು 1.03 ಕೋಟಿ ಹಾಗೂ ಅಂತ್ಯೋದಯ ಕುಟುಂಬಗಳು 10.83 ಲಕ್ಷ ಸೇರಿ 1.14 ಕೋಟಿ ಇರಬೇಕು. ಆದರೆ ರಾಜ್ಯದಲ್ಲಿ ಈಗಾಗಲೇ ಕೇಂದ್ರದ ಮಿತಿ ಮೀರಿ

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ? Read More »

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್| ಮುಂದಿನ ವಿಚಾರಣೆವರೆಗೆ ಬಂಧಿಸದಂತೆ ಹೈಕೋರ್ಟ್ ‌ಆದೇಶ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಬಿಎಸ್ವೈ ಅವರನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅಂತೆಯೇ ಜೂ.17 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್| ಮುಂದಿನ ವಿಚಾರಣೆವರೆಗೆ ಬಂಧಿಸದಂತೆ ಹೈಕೋರ್ಟ್ ‌ಆದೇಶ Read More »

ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್‌ : ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ‌ ಅಂಬಾಗಿಲಿನಲ್ಲಿ ಸಂಭವಿಸಿದೆ. ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯಲ್ಲಿ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ. ಕಾರಿನ ಇಂಜಿನ್ ಬೇರ್ಪಟ್ಟು ಮಾರುದ್ದ ಹೋಗಿ ಬಿದ್ದಿದೆ. ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ

ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ನಾಲ್ವರಿಗೆ ಗಾಯ Read More »

ಅಥಣಿ: ಅಗ್ನಿಶಾಮಕ ಸಿಬ್ಬಂದಿಗೆ ಒಲಿದು ಬಂದ ಮುಖ್ಯಮಂತ್ರಿ ಚಿನ್ನದ ಪದಕ

ಸಮಗ್ರ ನ್ಯೂಸ್: ವಿಪತ್ತು ಹಾಗೂ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಅತ್ಯುತ್ತಮ ಸೇವೆಯನ್ನ ಸಲ್ಲಿಸಿದ ಅನಿಲ ಕುಮಾರ್ ಬಡಚಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಒಲಿದು ಬಂದಿದೆ. ಅಗ್ನಿ ಅವಗಡ ಮತ್ತು ವಿಪತ್ತು ಮತ್ತು ತುರ್ತು ಸೇವೆಗಳ ಸಂದರ್ಭದಲ್ಲಿ ನಾಗರಿಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಅತ್ಯುತ್ತಮ ಸೇವೆ ಸಲ್ಲಿಸಿದ ಅಗ್ನಿಶಾಮಕ ಮತ್ತು ಅಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಮುಖ್ಯ ಮಂತ್ರಿ ಚಿನ್ನದ ಪದಕವನ್ನ ಜೂ. 11 ರಂದು ಬೆಂಗಳೂರಿನ ಅಗ್ನಿಶಾಮಕ

ಅಥಣಿ: ಅಗ್ನಿಶಾಮಕ ಸಿಬ್ಬಂದಿಗೆ ಒಲಿದು ಬಂದ ಮುಖ್ಯಮಂತ್ರಿ ಚಿನ್ನದ ಪದಕ Read More »

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ದರ್ಶನ್ & ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರನ್ನೂ ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಈ ಕೊಲೆ ಆರೋಪದಿಂದ ದರ್ಶನ್ ಅವರನ್ನು ಚಿತ್ರರಂಗದಲ್ಲಿ ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಇದರ ಕುರಿತು ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ಎಂ ಸುರೇಶ್ ಮಾತನಾಡಿ ‘ಯಾವ ಚಿತ್ರರಂಗದಲ್ಲೂ

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ Read More »

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು..!

ಸಮಗ್ರ ನ್ಯೂಸ್: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್(19)‌ ಹಾಗೂ ತಮಿಳುನಾಡು ಮೂಲದ ರೋಹನ್ (18) ಮೃತ ಯುವಕರು. ಈ ಯುವಕರು ಮೈಸೂರಿನ ಅಜ್ಜಿ ಮನೆಗೆ ಪೋಷಕರೊಂದಿಗೆ ಬಂದಿದ್ದರು‌. ಶ್ರೀರಂಗಪಟ್ಟಣದ ನಿಮಿಷಾಂಭ ದೇವಿ ದರ್ಶನಕ್ಕಾಗಿ ಕುಟುಂಬ ಸಮೇತ ಬಂದಿದ್ದರು. ಇದೇ ಸಂದರ್ಭದಲ್ಲಿ ಯುವಕರಿಬ್ಬರುಈಜಲು ಕಾವೇರಿ ನದಿಗಿಳಿದಿದ್ದರು. ಆದರೆ ಇವರಿಬ್ಬರಿಗೂ ಈಜು ಬಾರದೇ ಸಾವನ್ನಪ್ಪಿದ್ದಾರೆ. ಇನ್ನು ಮಗನನ್ನ ಕಳೆದುಕೊಂಡ ತಾಯಿ ರೋಧನೆ ಮುಗಿಲು ಮುಟ್ಟಿದ್ದು, ಕಾವೇರಿ

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು..! Read More »

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಜೈಲುಪಾಲಾಗಿದ್ದ ಆರೋಪಿಗಳಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರಂತೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ.18

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಜೈಲುಪಾಲಾಗಿದ್ದ ಆರೋಪಿಗಳಿಗೆ ಜಾಮೀನು ಮಂಜೂರು Read More »

ಭದ್ರತಾ ಸಲಹೆಗಾರರಾಗಿ ಮತ್ತೆ ನೇಮಕಗೊಂಡ ಅಜಿತ್ ದೋವಲ್

ಸಮಗ್ರ ನ್ಯೂಸ್: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ ಅವರನ್ನು ಕೇಂದ್ರ ಸರ್ಕಾರವು ಮೂರನೇ ಅವಧಿಗೂ ಸಲಹೆಗಾರರನ್ನಾಗಿ ನೇಮಕ ಮಾಡಿದೆ . ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ ಅವರೇ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಜಿತ್ ದೋವಲ್ ಅವರನ್ನು ಮೂರನೇ ಅವಧಿಗೆ ನೇಮಿಸಿರುವ ಕುರಿತು ಸಂಪುಟದ ನೇಮಕಾತಿ ಸಮಿತಿಯು ಆದೇಶ ಹೊರಡಿಸಿದೆ. ನೂತನ ಆದೇಶದ ಪ್ರಕಾರ, ಅಜಿತ್ ದೋವಲ್ ಅವರು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ

ಭದ್ರತಾ ಸಲಹೆಗಾರರಾಗಿ ಮತ್ತೆ ನೇಮಕಗೊಂಡ ಅಜಿತ್ ದೋವಲ್ Read More »

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿ| ಬಂಧನ ಬೀತಿಯಲ್ಲಿ ರಾಜಾಹುಲಿ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿರೋದಾಗಿ ತಿಳಿದು ಬಂದಿದೆ. ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ. ಮತ್ತೊಂದೆಡೆ ಗೃಹ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿ| ಬಂಧನ ಬೀತಿಯಲ್ಲಿ ರಾಜಾಹುಲಿ Read More »