Editor

ಕುಕ್ಕೆ ಸುಬ್ರಹ್ಮಣ್ಯ: ಹೊರಾಂಗಣ ಉತ್ಸವಾದಿಗಳು ಸಮಾಪ್ತಿ| ಒಳಾಂಗಣ ಪ್ರವೇಶಿಸಿದ ಕುಕ್ಕೆ ಪುರಾಧೀಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ದೇವರ ಹೊರಾಂಗಣ ಉತ್ಸವಾದಿಗಳು ಬುಧವಾರ ತೆರೆಕಂಡವು. ಜೇಷ್ಠ ಶುದ್ಧ ಷಷ್ಠಿಯ ದಿನ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ನಿತ್ಯೋತ್ಸವ ಸಂಪನ್ನವಾಯಿತು. ಬಳಿಕ ಒಳಾಂಗಣದ ಕಟ್ಟೆಯಲ್ಲಿ ಪೂಜೆ ಮತ್ತು ವಸಂತ ಪೂಜೆ, ಪಂಚಾಂಗ ಶ್ರವಣ ನೆರವೇರಿತು. ತದನಂತರ ಫಲವಸ್ತುಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು. ಊರ ಮತ್ತು ಪರವೂರ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಇನ್ನು ದೀಪಾವಳಿ ಅಮಾವಾಸ್ಯೆಯ ತನಕ ದೇವಸ್ಥಾನದಲ್ಲಿ ಹರಕೆ ಉತ್ಸವ […]

ಕುಕ್ಕೆ ಸುಬ್ರಹ್ಮಣ್ಯ: ಹೊರಾಂಗಣ ಉತ್ಸವಾದಿಗಳು ಸಮಾಪ್ತಿ| ಒಳಾಂಗಣ ಪ್ರವೇಶಿಸಿದ ಕುಕ್ಕೆ ಪುರಾಧೀಶ Read More »

ಕ್ಯಾನ್ಸರ್ ನಿಂದ ಪತಿ ಸಾವು: ಶವವನ್ನು ಮನೆ ಒಳಗೆ ತರಬೇಡಿ ಎಂದ ಪತ್ನಿ…!

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸೋಮವಾರಪೇಟೆಯ ಗುರು ಕಿತ್ತೂರ (51) ಎಂಬುವರು ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. ಈ ಕ್ಯಾನ್ಸರ್ ಗೆ ಹೆದರಿ ಪತಿಯ ಶವವನ್ನು ಪತ್ನಿ ಹಾಗೂ ಪತ್ನಿಯ ಕುಟುಂಬಸ್ಥರು ಮನೆಯೊಳಗೆ ತರಲು ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಬಳಿಕ ಸ್ಥಳೀಯರು ಮನೆಯ ಹೊರಗಿನ ವಿದ್ಯುತ್ ಕಂಬಕ್ಕೆ ಶವವನ್ನು ಆಧಾರವಾಗಿಸಿ ಕೂರಿಸಿದ್ದಾರೆ. ಗುರು ಕಿತ್ತೂರು ಕಳೆದೆರಡು ತಿಂಗಳಿಂದ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಕ್ಯಾನ್ಸರ್ನಿಂದ ಜಿಗುಪ್ಸೆಗೊಂಡ ಗುರು ಕಿತ್ತೂರು ಇತ್ತೀಚಿಗೆ ಮನೆ ತೊರೆದಿದ್ದರು. ಮಂಗಳವಾರ (ಜೂನ್ 11)

ಕ್ಯಾನ್ಸರ್ ನಿಂದ ಪತಿ ಸಾವು: ಶವವನ್ನು ಮನೆ ಒಳಗೆ ತರಬೇಡಿ ಎಂದ ಪತ್ನಿ…! Read More »

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಮೋಹನ್ ಚರಣ್ ಮಾಝಿ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರು ಅಧಿಕಾರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರಾವಧಿ ಕೊನೆಗೊಂಡಿದ್ದರಿಂದ ಮಾಝಿ ಕೇಸರಿ

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ Read More »

HSPR ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮತ್ತೆ ವಿಸ್ತರಣೆಗೆ ಹೈಕೋರ್ಟ್ ಸಮ್ಮತಿ| ಜು.4ಕ್ಕೆ ವಿಚಾರಣೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಆಗಸ್ಟ್‌ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ಅನುಮತಿ ನೀಡಿದೆ. HSRP ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಬುಧವಾರ ನಡೆಸಿತು. “ಹೈಕೋರ್ಟ್‌ನ ರಜಾಕಾಲೀನ ಪೀಠವು

HSPR ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮತ್ತೆ ವಿಸ್ತರಣೆಗೆ ಹೈಕೋರ್ಟ್ ಸಮ್ಮತಿ| ಜು.4ಕ್ಕೆ ವಿಚಾರಣೆ ಮುಂದೂಡಿಕೆ Read More »

‘ದರ್ಶನ್ ಗಿಂತ ನಾನೇನು ಕಡಿಮೆ?ಬಾ…’| ಪವಿತ್ರಾಗೆ ಆ ಫೋಟೋ ಕಳಿಸಿದ್ನಂತೆ ರೇಣುಕಾಸ್ವಾಮಿ!!

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಪ್ರಕರಣದಲ್ಲಿ ಮೊತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿರುವ ಜತೆಗೆ ಕಳೆದ ಶುಕ್ರವಾರ ಮರ್ಮಾಂಗದ ಫೋಟೊ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿರುವುದಾಗಿ ವರದಿಯಾಗಿದೆ. ಪವಿತ್ರಾ ಗೌಡ ಹಾಗೂ ದರ್ಶನ್‌ ನಡುವೆ ಇರುವ ಗಾಸಿಪ್‌ ಹೊಸದೇನಲ್ಲ. ಈ ಮುಂಚೆ ದರ್ಶನ್‌ ಪತ್ನಿ ಹಾಗೂ ಪವಿತ್ರಾ ಗೌಡ ಅವರ ನಡುವೆ ಸೋಷಿಯಲ್‌

‘ದರ್ಶನ್ ಗಿಂತ ನಾನೇನು ಕಡಿಮೆ?ಬಾ…’| ಪವಿತ್ರಾಗೆ ಆ ಫೋಟೋ ಕಳಿಸಿದ್ನಂತೆ ರೇಣುಕಾಸ್ವಾಮಿ!! Read More »

ಕುವೈತ್ ನಲ್ಲಿ ಭಾರೀ ಅಗ್ನಿ ಅವಘಡ| ಐವರು ಭಾರತೀಯರು ಸೇರಿ‌ ಕನಿಷ್ಠ 53 ಮಂದಿ ಸಾವು

ಸಮಗ್ರ ನ್ಯೂಸ್: ಕುವೈತ್ ನ ಮಂಗಾಫ್ ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಕನಿಷ್ಠ 53 ಮಂದಿ ಸಜೀವ ದಹನವಾಗಿದ್ದಾರೆ. 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ. ಈ ಕಟ್ಟಡವು ಹೆಚ್ಚಿನ ಸಂಖ್ಯೆಯಲ್ಲಿ ಕೇರಳಿಗರನ್ನು ಹೊಂದಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಆದಾಗ್ಯೂ, ಅಧಿಕಾರಿಗಳಿಂದ ಅಧಿಕೃತ ದೃಢೀಕರಣಕ್ಕಾಗಿ ಇನ್ನೂ ಪ್ರಕಟಗೊಂಡಿಲ್ಲ. ಕುವೈತ್ ಆರೋಗ್ಯ ಸಚಿವಾಲಯ

ಕುವೈತ್ ನಲ್ಲಿ ಭಾರೀ ಅಗ್ನಿ ಅವಘಡ| ಐವರು ಭಾರತೀಯರು ಸೇರಿ‌ ಕನಿಷ್ಠ 53 ಮಂದಿ ಸಾವು Read More »

ಬೆಳಗಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಎಂದು ಕೂಗಿದ ವಿಚಾರಣಾಧೀನ ಖೈದಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲೇ ನಟೋರಿಯಸ್​ ಕ್ರಿಮಿನಲ್ ಒಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಆತನ ಕುಕೃತ್ಯದಿಂದ ಕೋಪಗೊಂಡ ಸ್ಥಳದಲ್ಲಿದ್ದವರು ಧರ್ಮದೇಟು ಕೊಟ್ಟಿದ್ದಾರೆ. ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟ್ ಒಳ ಭಾಗದಲ್ಲೇ ಆತನಿಗೆ ಪೆಟ್ಟಿ ಬಿದ್ದಿದೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಹೊರ

ಬೆಳಗಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಎಂದು ಕೂಗಿದ ವಿಚಾರಣಾಧೀನ ಖೈದಿ Read More »

ಮಂಗಳೂರಿನ ಮುಕ್ಕದಲ್ಲಿ ಮುಸ್ಲಿಂ ಯುವಕರೊಂದಿಗೆ ಸಿಕ್ಕಿಬಿದ್ದ ಹಿಂದೂ ಯುವತಿ!!

ಸಮಗ್ರ ನ್ಯೂಸ್: ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಕ್ಕದಲ್ಲಿ ನಡೆದಿದೆ. ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸ್ಕೂಲ್ ಬಸ್ ಡ್ರೈವರ್ ಜೊತೆ ಜಗಳವಾಡುತ್ತ ಹಿಗ್ಗಾಮುಗ್ಗಾ ಬೈದಾಡುತ್ತಿದ್ದು, ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಕಾರು ಕೈ ಕೊಟ್ಟಿದೆ. ಸ್ಥಳದಲ್ಲಿ ಜನ ಸೇರುತ್ತಿದ್ದಂತೆ ಇದು ಅನ್ಯಕೋಮಿನ ಜೋಡಿ ಎಂಬುದು

ಮಂಗಳೂರಿನ ಮುಕ್ಕದಲ್ಲಿ ಮುಸ್ಲಿಂ ಯುವಕರೊಂದಿಗೆ ಸಿಕ್ಕಿಬಿದ್ದ ಹಿಂದೂ ಯುವತಿ!! Read More »

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಐಡಿ‌ ನೋಟೀಸ್|

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ ನೀಡಲಾಗಿದೆ. ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು. ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಐಡಿ‌ ನೋಟೀಸ್| Read More »

ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ಕಾಫಿನಾಡಿನ ಜನರ ತತ್ತರ | ತ್ರಿಶತಕ ದಾಟಿದ ಡೆಂಗ್ಯೂ ಪ್ರಕರಣ

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಲ್ಲಿ ಕಳೆದೊಂದು ದಶಕದಿಂದ ಹಿಂದೆಂದೂ ಕಾಣದ ರೀತಿಯಲ್ಲಿ ಡೆಂಗ್ಯೂ ಮಹಾಮಾರಿ ತಾಂಡವವಾಡುತ್ತಿದೆ. ಪ್ರತಿನಿತ್ಯ ಜಿಲ್ಲೆಯಾದ್ಯಂತ ಐದಾರು ಪ್ರಕರಣಗಳು ದಾಖಲಾಗುತ್ತಿದ್ದು, ಸದ್ಯಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 300ರ ಗಡಿ ದಾಟಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಇದರಿಂದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಬರದಿಂದ ಕಂಗೆಟ್ಟಿದ್ದ ಜಿಲ್ಲೆಯಲ್ಲಿ ಸದ್ಯಕ್ಕೆ ಉತ್ತಮ ಮಳೆಯಾಗ್ತಿದೆ. ಈ ಮಧ್ಯೆ ಡೆಂಗ್ಯೂ ಪ್ರಕರಣಗಳ ರುದ್ರನರ್ತನ ಕೂಡ ದಿನದಿಂದ ದಿನಕ್ಕೆ ಜಿಲ್ಲೆಯನ್ನು ಕಾಡುತ್ತಿದೆ.

ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ಕಾಫಿನಾಡಿನ ಜನರ ತತ್ತರ | ತ್ರಿಶತಕ ದಾಟಿದ ಡೆಂಗ್ಯೂ ಪ್ರಕರಣ Read More »