Editor

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಸಮಗ್ರ ನ್ಯೂಸ್‌ : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ಉಡುಪಿ: ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಭಜರಂಗದಳ ಕಾರ್ಯಕರ್ತರು

ಸಮಗ್ರ ನ್ಯೂಸ್‌ : ಪರ್ಕಳ ಸಮೀಪದ ಹೆರ್ಗದಲ್ಲಿ ಕಾಮಗಾರಿ ಹಂತದಲ್ಲಿದ್ದ ಬಾವಿಗೆ ಬಿದ್ದ ಹಸುವನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿ ಜೀವದಾನ ನೀಡಿದ್ದಾರೆ. ಸುಮಾರು 40 ಅಡಿ ಆಳದ ಬಾವಿಗೆ ಈ ಹಸು ಬಿದ್ದಿತ್ತು. ತಕ್ಷಣ ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಪ್ರಾಣೇಶ್ ಪರ್ಕಳ ನೇತೃತ್ವದ ಕಾರ್ಯಕರ್ತರ ತಂಡ ಕಾರ್ಯಾಚರಣೆ ನಡೆಸಿ ಗಾಯಾಳು ಹಸುವನ್ನು ರಕ್ಷಿಸಿತು. ಪರ್ಕಳ ಬಜರಂಗದಳದ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪ್ರಾಣೇಶ್ ಪರ್ಕಳ, ಶಶಿಕಾಂತ್ ನಡಿದಾರೆ,

ಉಡುಪಿ: ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಭಜರಂಗದಳ ಕಾರ್ಯಕರ್ತರು Read More »

ಒಂದು ಲಕ್ಷ ಕೊಡಿ/ ಲಕ್ನೋದಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ನಿಂತ ಮಹಿಳೆಯರು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸರ್ಕಾರ ರಚನೆಗೆ ಎನ್‍ಡಿಎ ಮೈತ್ರಿಕೂಟ, ಇಂಡಿಯಾ ಒಕ್ಕೂಟದ ನಾಯಕರು ಇನ್ನಿಲ್ಲದ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಒಂದು ಲಕ್ಷ ಕೊಡಿ ಎಂದು ಮುಸ್ಲಿಂ ಮಹಿಳೆಯರು ಕಾಂಗ್ರೆಸ್ ಕಚೇರಿಗೆ ಲಗ್ಗೆ ಇಟ್ಟಿದ್ದಾರೆ. ‘ಚುನಾವಣೆ ಬಳಿಕ 1 ಲಕ್ಷ ರೂ. ಕೊಡುತ್ತೇವೆ ಎಂದಿದ್ರಲ್ಲ, ಕೊಡಿ’ ಎಂದು ಮುಸ್ಲಿಂ ಮಹಿಳೆಯರು ಲಖನೌನಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಸಾಲಾಗಿ ನಿಂತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮಹಿಳೆಯರಿಗೆ 1

ಒಂದು ಲಕ್ಷ ಕೊಡಿ/ ಲಕ್ನೋದಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ನಿಂತ ಮಹಿಳೆಯರು Read More »

ಹಾಸನದಲ್ಲಿ ರೌಡಿಶೀಟರ್ ಡೆಡ್ಲಿ ಮರ್ಡರ್…! ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಹಾಸನದಲ್ಲಿ ಇಂದು ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಘಟನೆ ಹಾಸನದ ಹೇಮಾವತಿನಗರದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಮೃತಪಟ್ಟಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ

ಹಾಸನದಲ್ಲಿ ರೌಡಿಶೀಟರ್ ಡೆಡ್ಲಿ ಮರ್ಡರ್…! ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ Read More »

ಉಡುಪಿ: ಬಸ್ ಚಾಲನೆ ವೇಳೆ ಹೃದಯಾಘಾತ| ಶಾಲಾ ಮಕ್ಕಳು ಅಪಾಯದಿಂದ ಪಾರು

ಸಮಗ್ರ ನ್ಯೂಸ್: ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜೂ.5ರಂದು ಸಂಜೆ ವೇಳೆ ಪೆರಂಪಳ್ಳಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಸುಮಾರು 65 ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ದಾರಿ ಮಧ್ಯೆ ಐವರು ಮಕ್ಕಳ ಇಳಿಸಿದ ಬಸ್, ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಆಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ. ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ

ಉಡುಪಿ: ಬಸ್ ಚಾಲನೆ ವೇಳೆ ಹೃದಯಾಘಾತ| ಶಾಲಾ ಮಕ್ಕಳು ಅಪಾಯದಿಂದ ಪಾರು Read More »

ಉತ್ತರಾಖಂಡ ಚಾರಣಕ್ಕೆ ತೆರಳಿದ 9 ಮಂದಿ ಸಾವು

ಸಮಗ್ರ ನ್ಯೂಸ್: ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್ಗೆ ಚಾರಣಕ್ಕೆ ತೆರಳಿದ್ದ 22 ಸದಸ್ಯರ ತಂಡದ ಪೈಕಿ ಕರ್ನಾಟಕದವರು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಸ್ಥಳೀಯ ಮಾರ್ಗದರ್ಶಿಗಳನ್ನು ಒಳಗೊಂಡ ತಂಡವು ಮೇ 29 ರಂದು ಸಾಹಸವನ್ನು ಪ್ರಾರಂಭಿಸಿತು, ಜೂನ್ 7 ರೊಳಗೆ ವಾಪಸ್ ಆಗಲು ನಿರ್ಧರಿಸಿತ್ತು. ಮೃತರನ್ನು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್

ಉತ್ತರಾಖಂಡ ಚಾರಣಕ್ಕೆ ತೆರಳಿದ 9 ಮಂದಿ ಸಾವು Read More »

ಮೈತ್ರಿಕೂಟದ ಸಭೆ/ ಪ್ರಬಲ ಪ್ರತಿಪಕ್ಷವಾಗುವತ್ತ ಚಿತ್ತ

ಸಮಗ್ರ ನ್ಯೂಸ್: ಮೈತ್ರಿಕೂಟದ ನಾಯಕರ ಸಭೆಯು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದಿದ್ದು, ಎನ್‍ಡಿಎ ಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುವುದು, ಒಕ್ಕೂಟದ ಸದಸ್ಯ ಪಕ್ಷಗಳ ಮಧ್ಯೆ ಸಮನ್ವಯತೆ, ಒಗ್ಗಟ್ಟು ಸಾಧಿಸುವುದು, ರಚನೆಯಾದ ನೂತನ ಸರ್ಕಾರದ ವಿರುದ್ಧ ಹೋರಾಡುವುದು, ಅದನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವುದು ಸೇರಿ ಹಲವು ರಣತಂತ್ರಗಳ ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಮಾತನಾಡಿದ ಖರ್ಗೆ, ನಾವು ಉತ್ತಮವಾಗಿ ಹೋರಾಡಿದ್ದೇವೆ. ಒಗ್ಗಟ್ಟಿನಿಂದ ಹೋರಾಡಿದ್ದೇವೆ, ದೃಢವಾಗಿ

ಮೈತ್ರಿಕೂಟದ ಸಭೆ/ ಪ್ರಬಲ ಪ್ರತಿಪಕ್ಷವಾಗುವತ್ತ ಚಿತ್ತ Read More »

ಹಿಮಾಚಲ ಪ್ರದೇಶದಲ್ಲಿ ಗೆಲುವು/ ಗೆಲುವನ್ನು ಮೋದಿಗೆ ಅರ್ಪಿಸಿದ ಕಂಗನಾ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನಟಿ ಕಂಗನಾ ರನೌತ್ ತಮ್ಮ ಗೆಲುವನ್ನು ಪ್ರಧಾನಿ ಮೋದಿಗೆ ಅರ್ಪಿಸಿದ್ದಾರೆ. ನನ್ನ ಜನ್ಮಭೂಮಿ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ, ಪ್ರಧಾನಿ ನರೇಂದ್ರ ಮೋದಿಯವರ ‘ಸಲ್ಮಾ ಸಾಥ್, ಸಬ್ಬಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ. ಬಹುಶಃ ಬೇರೊಬ್ಬರು ತಮ್ಮ ಬ್ಯಾಗ್ ವ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ಆದರೆ ನಾನು ಇಲ್ಲಿ ಇದ್ದೇ ಇರುತ್ತೇನೆ ಎಂದು ಹೇಳಿದೆ. ಹಾಗೆಯೇ ಆಗಲಿದೆ, ಪ್ರಧಾನಿ ಮೋದಿಗೆ ನನ್ನ

ಹಿಮಾಚಲ ಪ್ರದೇಶದಲ್ಲಿ ಗೆಲುವು/ ಗೆಲುವನ್ನು ಮೋದಿಗೆ ಅರ್ಪಿಸಿದ ಕಂಗನಾ Read More »

ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ.

ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು Read More »

ಎನ್ ಡಿಎ ಸರ್ಕಾರದ ಜೊತೆಗೆ ಮೈತ್ರಿಗೆ ಬೆಂಬಲ ನೀಡಿದ ನಾಯ್ಡು, ನಿತೀಶ್| ನಮೋಗೆ ಬೆಂಬಲ ಪತ್ರ ನೀಡಿದ‌ ನಾಯಕರು

ಸಮಗ್ರ ನ್ಯೂಸ್: ಎನ್‌ ಡಿಎ ಸರ್ಕಾರ ರಚನೆಯ ಬಗ್ಗೆ ಊಹಾಪೋಹಗಳ ಮಧ್ಯೆ, ಆಡಳಿತಾರೂಢ ಮೈತ್ರಿ ಪಾಲುದಾರರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಬಿಜೆಪಿಗೆ ಬೆಂಬಲ ಪತ್ರವನ್ನು ಹಸ್ತಾಂತರಿಸಿದ್ದಾರೆ. ಈ ಹಿನ್ನಲೆಯಲ್ಲಿ 3ನೇ ಬಾರಿಗೆ ಮೋದಿ ಪ್ರಧಾನ ಮಂತ್ರಿಯಾಗೋದಕ್ಕೆ ಸಜ್ಜಾಗಿದ್ದಾರೆ. ಇಂದೇ 3ನೇ ಅವಧಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಎನ್ ಡಿಎ ರಾಷ್ಟ್ರಪತಿ ಮುರ್ಮು ಭೇಟಿಯಾಗೋ ಸಾಧ್ಯತೆ ಇದೆ ಎಂಬುದಾಗಿ ವರದಿಗಳಿಂದ ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಎನ್ಡಿಎ ಅಂಗಪಕ್ಷಗಳ ನಾಯಕರು ಇಂದು

ಎನ್ ಡಿಎ ಸರ್ಕಾರದ ಜೊತೆಗೆ ಮೈತ್ರಿಗೆ ಬೆಂಬಲ ನೀಡಿದ ನಾಯ್ಡು, ನಿತೀಶ್| ನಮೋಗೆ ಬೆಂಬಲ ಪತ್ರ ನೀಡಿದ‌ ನಾಯಕರು Read More »