Editor

ದೇಶವಾಸಿಗಳಿಗೆ ಟೋಲ್ ಶಾಕ್| ಟೋಲ್ ದರಗಳಲ್ಲಿ ಹೆಚ್ಚಳ

ಸಮಗ್ರ ನ್ಯೂಸ್: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೋಮವಾರದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಅನ್ನು 3% ರಿಂದ 5% ಗೆ ಹೆಚ್ಚಿಸಿದ್ದು, ದೇಶದಾದ್ಯಂತ ರಾಷ್ಟ್ರೀಯ ರಸ್ತೆಗಳು ಮತ್ತು ಎಕ್ಸ್‍ಪ್ರೆಸ್‍ವೇಗಳಲ್ಲಿ ಇಂದಿನಿಂದ ಟೋಲ್ ದರಗಳು ಹೆಚ್ಚಾಗಲಿವೆ. 18ನೇ ಲೋಕಸಭೆ ಚುನಾವಣೆಯಲ್ಲಿ ಮತದಾನ ಮುಗಿದ ಒಂದು ದಿನದ ನಂತರ ಟೋಲ್ ಶುಲ್ಕದಲ್ಲಿ ಬದಲಾವಣೆ ಮಾಡಲಾಗಿದೆ. ಈ ದರವು ಪ್ರತಿ ವರ್ಷ ಏಪ್ರಿಲ್ 1 ರಿಂದ ಅನ್ವಯಿಸುತ್ತದೆ. ಆದರೆ, ಚುನಾವಣೆಯ ಕಾರಣ ಬಳಕೆ ಶುಲ್ಕವನ್ನು ತಡೆಹಿಡಿಯಲಾಗಿತ್ತು. ಇಂದಿನಿಂದ ಸುಮಾರು 1,100 ಟೋಲ್ […]

ದೇಶವಾಸಿಗಳಿಗೆ ಟೋಲ್ ಶಾಕ್| ಟೋಲ್ ದರಗಳಲ್ಲಿ ಹೆಚ್ಚಳ Read More »

ಅಬಕಾರಿ ಹಗರಣ/ ತಿಹಾರ್ ಜೈಲಿಗೆ ವಾಪಾಸಾದ ಕೇಜ್ರಿವಾಲ್

ಸಮಗ್ರ ನ್ಯೂಸ್: ಅಬಕಾರಿ ಹಗರಣದಲ್ಲಿ ಬಂಧಿತರಾದ ಬಳಿಕ ಲೋಕಸಭೆ ಚುನಾವಣೆ ಕಾರಣ ಜಾಮೀನು ಪಡೆದಿದ್ದ ಆಪ್ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಮರಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿ, ಜೂ.2ರಂದು ಜೈಲಿಗೆ ಮರಳಬೇಕು ಎಂದು ಕೇಜ್ರಿವಾಲ್‍ಗೆ ತಾಕೀತು ಮಾಡಿತ್ತು. ಈ ನಡುವೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿದ್ದ ಅರ್ಜಿಯ ತೀರ್ಪು ಜೂ.5ಕ್ಕೆ ಮುಂದೂಡಿಕೆ ಆದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಭಾನುವಾರ ಜೈಲಿಗೆ

ಅಬಕಾರಿ ಹಗರಣ/ ತಿಹಾರ್ ಜೈಲಿಗೆ ವಾಪಾಸಾದ ಕೇಜ್ರಿವಾಲ್ Read More »

ಮೂರನೇ ಬಾರಿಗೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸುನೀತಾ ವಿಲಿಯಮ್ಸ್

ಸಮಗ್ರ ನ್ಯೂಸ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬೋಯಿಂಗ್ ಸ್ಟಾರ್‍ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಬಾಹ್ಯಾಕಾಶ ಪ್ರಯಾಣಕ್ಕೆ ಕೈಗೊಂಡಿದ್ದಾರೆ. ಶನಿವಾರ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆಗೆ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿದ್ದಾರೆ. ಕಳೆದ ತಿಂಗಳ 7 ರಂದೇ ಸುನೀತಾ ಅಂತರಿಕ್ಷ ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣದಿಂದ ಮುಂದೂಡಲಾಗಿತ್ತು. ವಿಲಿಯಮ್ಸ್ ಹೊರತಾಗಿ ಬುಚ್ ವಿಲ್ಮೋರ್ ಕೂಡ ಅಂತರಿಕ್ಷಕ್ಕೆ ಪ್ರಯಾಣ ಕೈಗೊಳ್ಳಲಿದ್ದಾರೆ. ಸುನಿತಾ ಮತ್ತು ವಿಲ್ಮೋರ್

ಮೂರನೇ ಬಾರಿಗೆ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಸುನೀತಾ ವಿಲಿಯಮ್ಸ್ Read More »

ಚುನಾವಣೋತ್ತರ ಸಮೀಕ್ಷೆ ತಿರಸ್ಕರಿಸಿದ ಇಂಡಿಯಾ ಮೈತ್ರಿ ಕೂಟ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಲೋಕಸಭಾ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆಗಳನ್ನು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಕಾಂಗ್ರೆಸ್, ಆಪ್ ಮತ್ತು ಸಮಾಜವಾದಿ ಪಕ್ಷಗಳು ಸ್ಪಷ್ಟವಾಗಿ ತಿರಸ್ಕರಿಸಿವೆ. ಸಮೀಕ್ಷೆಗಳ ಕುರಿತು ಪ್ರತಿಕ್ರಿಯೆ ನೀಡಿದ ರಾಹುಲ್, ಈ ಸಮೀಕ್ಷೆಗಳೆಲ್ಲಾ ಬೋಗಸ್. ಇದು ಮೋದಿ ಮೀಡಿಯಾ ಪೆÇೀಲ್. ತಿರುಚಿದ ಚುನಾವಣೆ ಸಮರ್ಥನೆಗೆ ಮತ್ತು ಮಾನಸಿಕ ಯುದ್ಧ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಆಡುತ್ತಿರುವ ಆಟ. ನಿಮಗೆಲ್ಲಾ ಸಿಧು ಮೂಸೇವಾಲಾರ

ಚುನಾವಣೋತ್ತರ ಸಮೀಕ್ಷೆ ತಿರಸ್ಕರಿಸಿದ ಇಂಡಿಯಾ ಮೈತ್ರಿ ಕೂಟ Read More »

ಯುವತಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದ ಹಿಂದೂ ಯುವಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮುಸ್ಲಿಂ ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗ ನಗರದ ಆರ್‌ಎಂಎಲ್ ನಗರದ ಸಮೀಪ ನಡೆದಿದೆ. ಶಿವಮೊಗ್ಗದ ನಂದನ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದ್ದು ಈತ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ 20ಕ್ಕೂ ಹೆಚ್ಚು ಅನ್ಯ ಕೋಮಿನ ಯುವಕರು ನಂದನ್‌ನನ್ನು ತಡೆದು ಥಳಿಸಿದ್ದರು. ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು

ಯುವತಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದ ಹಿಂದೂ ಯುವಕನ ಮೇಲೆ ಹಲ್ಲೆ Read More »

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ| ಮಹಿಳೆ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿ ಹಲವರನ್ನು ಪುಲಿಕೇಶಿ ನಗರ ಪೊಲೀಸ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್‌ ದಾಳಿ ಖಂಡಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ರೀತಿ ನಗರದ ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರು ಸೇರಿ ಹಲವರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನಂತರ ಠಾಣೆಗೆ ಕರೆದೊಯ್ದ ವೇಳೆ ಪ್ಯಾಲೆಸ್ತೀನ್‌

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ| ಮಹಿಳೆ ಪೊಲೀಸ್ ವಶಕ್ಕೆ Read More »

ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ‘ಕೈ’ ಕಾರ್ಯಕರ್ತ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಬಾಗಲಕೋಟೆಯ ಕಾಂಗ್ರೆಸ್‌ ಮುಖಂಡನೊಬ್ಬರು ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿರುವ ಘಟನೆ ಜಿಲ್ಲೆಯ ಹವೇಲಿ ಗ್ರಾಮದಲ್ಲಿ ನಡೆದಿದೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವಿಷ್ಣುವರ್ಧನ್ ಸಾಂಗ್ ಹಾಕಿ ಕಾಂಗ್ರೆಸ್‌ ಮುಖಂಡ ಕೇಕ್ ಕಟ್ ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಳೆ ಹವೇಲಿ ಗ್ರಾಮದ ಕೈ ಮುಖಂಡ ರಮೇಶ್ ರಾಠೋಡ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ತಲ್ವಾರ್‌ನಿಂದ ಕೇಕ್ ಕತ್ತರಿಸಿದ ಮುಖಂಡನಿಗೆ ಬೆಂಬಲಿಗರು ಸನ್ಮಾನ ಮಾಡಿದ್ದಾರೆ. ಈ ವಿಡಿಯೊವನ್ನು ಇನ್ಸ್ಟಾಗ್ರಾಮ್‌ನಲ್ಲಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ‘ಕೈ’ ಕಾರ್ಯಕರ್ತ| ವಿಡಿಯೋ ವೈರಲ್ Read More »

ಭಾರತ ತಂಡಕ್ಕೆ ತರಬೇತಿ ನೀಡುವುದಕ್ಕಿಂತ ದೊಡ್ಡ ಗೌರವವಿಲ್ಲ/ ಕೋಚ್ ಆಯ್ಕೆಯ ಕುರಿತ ವದಂತಿಗಳಿಗೆ ತೆರೆ ಎಳೆದ ಗಂಭೀರ್

ಸಮಗ್ರ ನ್ಯೂಸ್: ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಅಯ್ಕೆಯ ಕುರಿತು ಎದ್ದಿರುವ ಊಹಾಪೋಹಗಳ ನಡುವೆ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಭಾರತೀಯ ಕ್ರಿಕೆಟ್ ತಂಡಕ್ಕೆ ತರಬೇತುದಾರರಾಗುವುದುಗೌರವದ ವಿಚಾರ ಎಂದು ಹೇಳಿದ್ದಾರೆ ನಾನು ಭಾರತ ತಂಡಕ್ಕೆ ಕೋಚ್ ಆಗಲು ಇಷ್ಟಪಡುತ್ತೇನೆ. ನಮ್ಮ ರಾಷ್ಟ್ರೀಯ ತಂಡಕ್ಕೆ ತರಬೇತಿ ನೀಡುವುದಕ್ಕಿಂತ ದೊಡ್ಡ ಗೌರವವಿಲ್ಲ” ಎಂದು ಹೇಳಿದ್ದಾರೆ. ಭಾರತವು ತನ್ನ T20 ವಿಶ್ವಕಪ್ ಅಭಿಯಾನವನ್ನು ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ ಪ್ರಾರಂಭಿಸಲಿರುವುದರಿಂದ, ಮೆನ್ ಇನ್ ಬ್ಲೂ

ಭಾರತ ತಂಡಕ್ಕೆ ತರಬೇತಿ ನೀಡುವುದಕ್ಕಿಂತ ದೊಡ್ಡ ಗೌರವವಿಲ್ಲ/ ಕೋಚ್ ಆಯ್ಕೆಯ ಕುರಿತ ವದಂತಿಗಳಿಗೆ ತೆರೆ ಎಳೆದ ಗಂಭೀರ್ Read More »

ದ.‌ ಭಾರತದ‌ ಮೊದಲ ಪ್ರಾದೇಶಿಕ ಸೇನಾ ಅಧಿಕಾರಿಯಾಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ

ಸಮಗ್ರ ನ್ಯೂಸ್: ಎಐಸಿಸಿ ರಾಷ್ಟ್ರೀಯ ಕೋ ಆರ್ಡಿನೇಟರ್ ಆಗಿರುವ, ಕರ್ನಾಟಕ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಈಗ ಸೇನಾ ಅಧಿಕಾರಿಯಾಗಿದ್ದಾರೆ. ಪ್ರಾದೇಶಿಕ ಸೇನೆಯಲ್ಲಿ ಕಮಿಷನ್‌ಡ್ ಆಫೀಸರ್ ಆಗಿ ಭವ್ಯ ನರಸಿಂಹಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ, ಭಾರತೀಯ ಸೇನೆ ಸಮವಸ್ತ್ರದಲ್ಲಿ ತರಬೇತಿ ಪಡೆಯುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದು, ಇದು ನನ್ನ ಜೀವನದ ಹೆಮ್ಮೆಯ ಸಂದರ್ಭ ಎಂದು ಹೇಳಿದ್ದಾರೆ. 2022ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ

ದ.‌ ಭಾರತದ‌ ಮೊದಲ ಪ್ರಾದೇಶಿಕ ಸೇನಾ ಅಧಿಕಾರಿಯಾಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ Read More »

ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಜೊತೆಗೆ ಗಲಾಟೆ ನಡೆಸಿದ ಪ್ರಕರಣ| ಶಾಸಕ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಮೇಲೆ‌ ಚಾರ್ಜ್ ಶೀಟ್

ಸಮಗ್ರ ನ್ಯೂಸ್: ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಲೋಲಾಕ್ಷ ಎಂಬಾತ ಮೀಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಕಿತ್ತು ಹಾಕಿದ್ದರು. ಇದರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್

ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಜೊತೆಗೆ ಗಲಾಟೆ ನಡೆಸಿದ ಪ್ರಕರಣ| ಶಾಸಕ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಮೇಲೆ‌ ಚಾರ್ಜ್ ಶೀಟ್ Read More »