Editor

ಸೌದೆ ತರಲು ಹೋದ ವ್ಯಕ್ತಿ ಮೇಲೆ ರೈಲು‌ ಹರಿದು ಸಾವು

ಸಮಗ್ರ ನ್ಯೂಸ್: ರೈಲು‌ ಹರಿದು ಕಾರ್ಮಿಕ‌ನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ರುದ್ರಪ್ಪ (68) ಮೃತ ದುರ್ದೈವಿ. ಇವರು ರೈಲ್ವೆ ಹಳಿಯ ಬಳಿ ಸೌದೆ ಆರಿಸುತ್ತಿದ್ದರು. ಅದೇ ಸಂದರ್ಭದಲ್ಲಿ ಮೈಸೂರು ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇನ್ನು ರುದ್ರಪ್ಪ, ಸ್ವಲ್ಪ ಕಿವುಡು ಹಾಗೂ ಕಣ್ಣು ಮಂಜಿನಿಂದ ಬಳಲುತ್ತಿದ್ದನಂತೆ. ಹೀಗಾಗಿ ರೈಲು ಬಂದ ಶಬ್ದ ಕೇಳಿಸದೇ ದುರ್ಘಟನೆ ಸಂಭವಿಸಿದ್ದು, ಈ ಕುರಿತು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೌದೆ ತರಲು ಹೋದ ವ್ಯಕ್ತಿ ಮೇಲೆ ರೈಲು‌ ಹರಿದು ಸಾವು Read More »

ಎಕ್ಸಿಟ್‌ ಪೋಲ್‌ ಗಳಲ್ಲಿ ಭರ್ಜರಿ ವಿಜಯದ ದಿಕ್ಸೂಚಿ ಬೆನ್ನಲ್ಲೇ ಪ್ರಧಾನಿ ಸಭೆ..!

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಏಳು ಹಂತದ ಮತದಾನ ಪೂರ್ಣಗೊಂಡಿದೆ, ನಿನ್ನೆ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬಿದ್ದಿವೆ. ಇದರಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುತ್ತದೆ ಎಂಬ ಮಾಹಿತಿಯೂ ಲಭಿಸಿದೆ. ಈ ಮಾಹಿತಿ ಸಿಕ್ಕಾಗಿಂದ ಪ್ರಧಾನಿ ಮೋದಿ ಇಂದು 7 ಸಭೆಗಳನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಧಿಕಾರಕ್ಕೆ ಬಂದ ಮೊದಲ 100 ದಿನಗಳಲ್ಲಿ ಕೈಗೆತ್ತಿಕೊಳ್ಳಬಹುದಾದ ಯೋಜನೆ ಹಾಗೂ ದೇಶಾದ್ಯಂತ ತಲೆದೋರಿರುವ ಬಿಸಿಗಾಳಿ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಅಧಿಕೃತ ಮೂಲಗಳ

ಎಕ್ಸಿಟ್‌ ಪೋಲ್‌ ಗಳಲ್ಲಿ ಭರ್ಜರಿ ವಿಜಯದ ದಿಕ್ಸೂಚಿ ಬೆನ್ನಲ್ಲೇ ಪ್ರಧಾನಿ ಸಭೆ..! Read More »

ಪಲ್ಲಕ್ಕಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..!

ಸಮಗ್ರ ನ್ಯೂಸ್: ಪಲ್ಲಕ್ಕಿ ಇದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ ಹೊಂದಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯಲ್ಲಿ ನಡೆದಿದೆ. ವೀರಸಂದ್ರ ವಾಸಿ ರಂಗನಾಥ(33), ಯಾರಂಡಹಳ್ಳಿ ವಾಸಿ ಹರಿಬಾಬು(25) ಮೃತ ದುರ್ದೈವಿಗಳು. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುವಾಗ ಚಾಲಕನಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಚಾಲಕನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನಿಗೂ ವಿದ್ಯುತ್‌ ಶಾಕ್‌ ಆಗಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ

ಪಲ್ಲಕ್ಕಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..! Read More »

ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾದ ಕೊಹ್ಲಿ

ಸಮಗ್ರ ನ್ಯೂಸ್: ಐಸಿಸಿ ವರ್ಷದ ಏಕದಿನ ಆಟಗಾರ (ICC ODI Player Of The Year 2023) ಪ್ರಶಸ್ತಿಗೆ ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಭಾಜನರಾಗಿದ್ದಾರೆ. ಟಿ20 ವಿಶ್ವಕಪ್ ಆಡುವ ಸಲುವಾಗಿ ನ್ಯೂಯಾರ್ಕ್ ನಲ್ಲಿರು ಕೊಹ್ಲಿ ಈ ಪ್ರಶಸ್ತಿಯನ್ನು ಇಲ್ಲಿಯೇ ಸ್ವೀಕರಿಸಿದ್ದಾರೆ. ಇದರ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್ ಎಕ್ಸ್‌ನಲ್ಲಿ ಹಂಚಿಕೊಂಡಿದೆ. 2012, 2017, 2018 ರಲ್ಲಿಯೂ ಕೊಹ್ಲಿ ಈ ಪ್ರಶಸ್ತಿ ಪಡೆದಿದ್ದರು. 35 ವರ್ಷದ ಕೊಹ್ಲಿ 2023 ರಲ್ಲಿ 27

ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾದ ಕೊಹ್ಲಿ Read More »

ವಿಧಾನ ಪರಿಷತ್ ಚುನಾವಣೆ/ ಸಿ ಟಿ ರವಿಗೆ ಒಲಿದ ಟಿಕೆಟ್

ಸಮಗ್ರ ನ್ಯೂಸ್: ಕರ್ನಾಟಕದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 03 ಕೊನೆ ದಿನವಾಗಿದ್ದು, ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್ ರವಿ ಕುಮಾ‌ರ್ ಅವರಿಗೆ

ವಿಧಾನ ಪರಿಷತ್ ಚುನಾವಣೆ/ ಸಿ ಟಿ ರವಿಗೆ ಒಲಿದ ಟಿಕೆಟ್ Read More »

ಉಡುಪಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ – ಸವಾರ ಮೃತ್ಯು

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್‌ನಲ್ಲಿ ನಡೆದಿದೆ. ಮೃತ ಬೈಕ್‌ ಸವಾರನನ್ನು ಕೋಟತಟ್ಟು ಕಲ್ಮಾಡಿ ರಸ್ತೆಯ ವಾಸುದೇವ ಗಾಣಿಗ (33) ಎಂದು ಗುರುತಿಸಲಾಗಿದೆ. ವಾಸುದೇವ ರಾತ್ರಿ ಸುಮಾರು 12 ಗಂಟೆಗೆ ತೆಕ್ಕಟ್ಟೆ ಸಾಯಿಗ್ರಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು. ಅವರು ಕೋಟ ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಶಿರಸಿ ಕಡೆ

ಉಡುಪಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ – ಸವಾರ ಮೃತ್ಯು Read More »

ಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ

ಸಮಗ್ರ ನ್ಯೂಸ್‌ : ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂಧಿಸಿದ್ದಾರೆ. ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ ಕಾಪು‌ ಸಿಐ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆ

ಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ Read More »

MLC ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್‌ ಚುನಾವಣೆಗೆ ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಹೌದು ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ 7 ಜನರಿಗೆ ಮಣೆ ಹಾಕಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ

MLC ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

ಸುಳ್ಯ: ಕೋಳಿ ಗೂಡಲ್ಲಿದ್ದ ನಾಗರ ಕಡಿದು ವೃದ್ದೆ ಸಾವು

ಸಮಗ್ರ ನ್ಯೂಸ್: ಮನೆಯ ಸಮೀಪ ಕೊಟ್ಟಿಗೆಯ ಸುತ್ತ ಸ್ವಚ್ಚಗೊಳಿಸುವ ಸಂದರ್ಭ ಕೋಳಿ ಗೂಡು(ಕಾಪು) ವನ್ನು ಪರಿಶೀಲಿಸಲು ವೃದ್ದೆಯೊಬ್ಬರು ಕೈ ಹಾಕಿದಾಗ ನಾಗರ ಹಾವು ಕಡಿದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಸಂಭವಿಸಿದೆ. ಮೃತರನ್ನು ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠ ನಿವಾಸಿ ದೇವಮ್ಮ(67) ಎಂದು ಗುರುತಿಸಲಾಗಿದೆ. ಕೈಗೆ ನಾಗರ ಹಾವು ಕಡಿದಿರುವುದು ಗೊತ್ತಾಗಿದ್ದು ತಕ್ಷಣವೇ ಅವರನ್ನು ಹಳ್ಳಿ ಮದ್ದಿಗೆ ಕರೆದೊಯ್ದು ಅಲ್ಲಿಂದ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ವಿಷವೇರಿ ಕೊನೆಯುಸಿರೆಳೆದರೆನ್ನಲಾಗಿದೆ.

ಸುಳ್ಯ: ಕೋಳಿ ಗೂಡಲ್ಲಿದ್ದ ನಾಗರ ಕಡಿದು ವೃದ್ದೆ ಸಾವು Read More »

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ನಾರಾಯಣ‌ ಕಳಿಗೆ ಇನ್ನಿಲ್ಲ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಬಿಳಿನೆಲೆಯ ಚೇರು ನಿವಾಸಿ ನಾರಾಯಣ ಕಳಿಗೆ ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. 2023ರ ಸೆಪ್ಟೆಂಬರ್ ನಲ್ಲಿ ಬ್ರೈನ್ ಸ್ಟ್ರೋಕ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾಳೆ ಜೂ.3 ರ ಬೆಳಗ್ಗೆ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿದು ಬಂದಿದೆ. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಮಾಲತಿ, ಓರ್ವ ಪುತ್ರಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ನಾರಾಯಣ‌ ಕಳಿಗೆ ಇನ್ನಿಲ್ಲ Read More »