Editor

ಉಡುಪಿ: ಗ್ಯಾಂಗ್ ವಾರ್ ಪ್ರಕರಣ- ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರು

ಸಮಗ್ರ ನ್ಯೂಸ್‌ : ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಶುಕ್ರವಾರ ನಗರ ಠಾಣಾ ಪೊಲೀಸರು ಹಾಜರುಪಡಿಸಿದರು. ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಅಲ್ಫಾಝ್, ಮಜಿದ್, ರಾಕಿಬ್, ಶರೀಫ್ ನನ್ನು ಬಾಡಿ ವಾರೆಂಟ್ ಮೂಲಕ ತನಿಖೆಗೆ ಪಡೆಯಲಾಗಿದ್ದು, ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳ ಮಹಜರು ಪ್ರಕ್ರಿಯೆಯನ್ನು ನಡೆಸಿದ್ದು, ತನಿಖೆಯಲ್ಲಿ ಆರೋಪಿಗಳ ಕೃತ್ಯಕ್ಕೆ ಬಳಸಿದ 2 […]

ಉಡುಪಿ: ಗ್ಯಾಂಗ್ ವಾರ್ ಪ್ರಕರಣ- ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರು Read More »

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಠಾಣೆಗೆ ನುಗ್ತೀರಾ? ಶಾಸಕ ಹರೀಶ್ ಪೂಂಜಾಗೆ ಛಾಟಿ ಬೀಸಿದ ಹೈಕೊರ್ಟ್

ಸಮಗ್ರ ನ್ಯೂಸ್: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ? ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಉಚ್ಚ ನ್ಯಾಯಾಲಯ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಉಚ್ಚ ನ್ಯಾಯಾಲಯ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಠಾಣೆಗೆ ನುಗ್ತೀರಾ? ಶಾಸಕ ಹರೀಶ್ ಪೂಂಜಾಗೆ ಛಾಟಿ ಬೀಸಿದ ಹೈಕೊರ್ಟ್ Read More »

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ| ಯಾವುದೇ ಕ್ಷಣ ಬಂಧನದ ಸಾಧ್ಯತೆ

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್​​ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಪ್ರಕರಣದ ತನಿಖೆ

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ| ಯಾವುದೇ ಕ್ಷಣ ಬಂಧನದ ಸಾಧ್ಯತೆ Read More »

6 ದಿನಗಳ ಕಾಲ ಎಸ್ಐಟಿ ವಶಕ್ಕೆ ಪ್ರಜ್ವಲ್ ರೇವಣ್ಣ|

ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಮುಖಂಡ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಬಂಧಿಸಲಾಗಿದೆ. ಹಾಸನದ 33 ವರ್ಷದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಮಾನ ನಿಲ್ದಾಣದಿಂದ ವಶಕ್ಕೆ ತೆಗೆದುಕೊಂಡಿದೆ. ದೇಶವನ್ನು ತೊರೆದ ಸುಮಾರು ಒಂದು ತಿಂಗಳ ನಂತರ ಅವರು ಗುರುವಾರ ಮಧ್ಯರಾತ್ರಿ ಜರ್ಮನಿಯಿಂದ ಭಾರತಕ್ಕೆ ಮರಳಿದರು.

6 ದಿನಗಳ ಕಾಲ ಎಸ್ಐಟಿ ವಶಕ್ಕೆ ಪ್ರಜ್ವಲ್ ರೇವಣ್ಣ| Read More »

ಉಡುಪಿ: ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಸಮಗ್ರ ನ್ಯೂಸ್‌ : ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ನಡೆಸುವಂತಿಲ್ಲ. ಯಾಂತ್ರೀಕೃತ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ

ಉಡುಪಿ: ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »

ಎಚ್ ಬಿ ಸಿ ನೌಕರ ನೇಣಿಗೆ ಶರಣು

ಅಥಣಿ : ಪಟ್ಟಣದ ಹಿಪ್ಪರಗಿ ಆಣೆಕಟ್ಟು ಹಿನ್ನೀರು ನೀರಾವರಿ ನಿಗಮದ ನೌಕರ ಕಚೇರಿ ಹೊರಾಂಗಣದಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕುಮಾರ ಬಸಯ್ಯ ಧುಮ್ಕಿಮಠ (49) ಮೃತ ದುರ್ದೈವಿಯಾಗಿದ್ದು ಇಲಾಖೆ ಆವರಣದ ಪಕ್ಕದಲ್ಲಿದ್ದ ಬೇವಿನ ಮರಕ್ಕೆ ನಿನ್ನೆ ತಡ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಸುಮಾರು 20 ವರ್ಷ ಸರ್ಕಾರಿ ನೌಕರಿಯಲ್ಲಿ ಸೇವೆಸಲ್ಲಿಸುತ್ತಿದ್ದ ಕುಮಾರ ಕಳೆದ ಮೂರು ತಿಂಗಳಿಂದ ಕೆಲಸಕ್ಕೆ ಬಾರದೆ ರಜೆಯಲ್ಲಿದ್ದ ಎಂದು ತಿಳಿದುಬಂದಿದೆ.ಘಟನೆ ಸಂಬಂಧ ಅಥಣಿ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು

ಎಚ್ ಬಿ ಸಿ ನೌಕರ ನೇಣಿಗೆ ಶರಣು Read More »

“ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ”- ಡಿಕೆಶಿ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ಚುನಾವಣೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. “ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದೆ” ಎಂಬುದಾಗಿ ಹೇಳಿಕೆ ನೀಡಿರುವುದು ಈಗ ಸಂಚಲನ ಮೂಡಿಸಿದೆ. ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ

“ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ”- ಡಿಕೆಶಿ ಸ್ಫೋಟಕ ಹೇಳಿಕೆ Read More »

ಮಂಗಳೂರು: ರೌಡಿ ಶೀಟರ್ ಭರತ್ ಶೆಟ್ಟಿ ಮೇಲೆ ತಲವಾರು ದಾಳಿ

ಸಮಗ್ರ ನ್ಯೂಸ್‌ : ಸುರತ್ಕಲ್ ನ ಕುಳಾಯಿ ಆರೋನ್ ವೈನ್ಸ್ ಬಳಿ ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ರೌಡಿ ಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ತಲವಾರು ದಾಳಿ ನಡೆದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುರತ್ಕಲ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿ ಪೋಲಿಸರು ತನಿಖೆ ಕೈಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಭರತ್ ಶೆಟ್ಟಿ ನೀಡಿರುವ ದೂರಿನ ಪ್ರಕಾರ ದೀಕ್ಷಿತ್ ಶೆಟ್ಟಿ ಕೈಕಂಬ ಶೈಲೇಶ್ ಕೈಕಂಬ ಮತ್ತು ಇತರ ಮೂವರ ಜೊತೆಗೆ ಸೇರಿ ಕೃತ್ಯ ಎಸಗಿದ್ದಾರೆ

ಮಂಗಳೂರು: ರೌಡಿ ಶೀಟರ್ ಭರತ್ ಶೆಟ್ಟಿ ಮೇಲೆ ತಲವಾರು ದಾಳಿ Read More »

ಕಿಸಾನ್ ಕರ್ಜಾ ಮಾಫಿ ಆಯೋಗ/ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡುತ್ತೇವೆ ಎಂದ ರಾಹುಲ್

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ಮೈತ್ರಿಪಕ್ಷಗಳು ಅಧಿಕಾರಕ್ಕೆ ಬಂದರೆ ‘ಕಿಸಾನ್ ಕರ್ಜಾ ಮಾಫಿ ಆಯೋಗ್’ ತರುವ ಮೂಲಕ ರೈತರ ಸಾಲವನ್ನು ಎಷ್ಟು ಬಾರಿ ಬೇಕಾದರೂ ಮನ್ನಾ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಯ ನಡುವೆ ಪ್ರಮುಖ ಭರವಸೆ ನೀಡಿದ್ದಾರೆ. “ಇತಿಹಾಸದಲ್ಲಿ ಮೊದಲ ಬಾರಿಗೆ ಈ ಚುನಾವಣೆ ಸಂವಿಧಾನವನ್ನು ಉಳಿಸಲು ಆಗಿದೆ. ಪಕ್ಷವೊಂದು ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ಕಿತ್ತುಹಾಕುತ್ತೇವೆ ಎಂದು ಬಹಿರಂಗವಾಗಿ ಹೇಳಿದ್ದು ಇದೇ ಮೊದಲು. ಬಿಜೆಪಿ ಕೇವಲ ಕೋಟ್ಯಾಧಿಪತಿಗಳಿಗಾಗಿ ಕೆಲಸ ಮಾಡುತ್ತದೆ

ಕಿಸಾನ್ ಕರ್ಜಾ ಮಾಫಿ ಆಯೋಗ/ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡುತ್ತೇವೆ ಎಂದ ರಾಹುಲ್ Read More »

ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು

ಸಮಗ್ರ ನ್ಯೂಸ್: ನೈಋತ್ಯ ಮುಂಗಾರು ಮಾರುತಗಳು ಮೇ.30 ರಂದು ಕೇರಳವನ್ನು ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಭುವನೇಶ್ವರ ಕೇಂದ್ರವು ಪ್ರಕಟಿಸಿದೆ. ರವಿವಾರ ಪಶ್ಚಿಯ ಬಂಗಾಳ ಹಾಗೂ ಬಾಂಗ್ಲಾದೇಶದ ಮೂಲಕ ಅಪ್ಪಳಿಸಿದ್ದ ಚಂಡಮಾರುತವು ಮಾನ್ಸೂನ್ ಮಾರುತವನ್ನು ಬಂಗಾಳ ಕೊಲ್ಲಿಗೆ ನೂಕಿರುವುದು ಮುಂಚಿತವಾಗಿಯೇ ಈಶಾನ್ಯ ಭಾರತವನ್ನು ಮಾನ್ಸೂನ್ ಆವರಿಸಿಕೊಳ್ಳಲು ಕಾರಣವಿರಬಹುದು ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಭಾರತೀಯ ಹವಾಮಾನ ಇಲಾಖೆಯು, “ನೈಋತ್ಯ ಮಾನ್ಸೂನ್ ಮಾರುತಗಳು ಕೇರಳವನ್ನು ಪ್ರವೇಶಿಸಿದ್ದು, ಇಂದು (ಮೇ

ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು Read More »