Editor

ಚಿಕ್ಕೋಡಿ: ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಬಾಳುಮಾಮಾ ಜಾತ್ರೆ ನಡೆದಿತ್ತು, ಈ ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನೇ 200ಕ್ಕೂ ಹೆಚ್ಚು ಮಂದಿ ಸಂಜೆ ಊಟ ಮಾಡಿದ್ದರು. ಸಂಜೆ ಊಟ ಮಾಡಿದವರಿಗೆ ಏಕಾಏಕಿ ವಾಂತಿ ಭೇದಿ ಶುರುವಾಗಿತ್ತು. ಕೂಡಲೇ ಅಸ್ವಸ್ಥಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಸುಮಾರು 30 ಮಂದಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, […]

ಚಿಕ್ಕೋಡಿ: ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ Read More »

ಕಂಗೆಡಿಸಿದ ಸುಡು ಬಿಸಿಲು/ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ತಾಪಮಾನ

ಸಮಗ್ರ ನ್ಯೂಸ್: ಉತ್ತರ ಮತ್ತು ಪೂರ್ವದ ರಾಜ್ಯಗಳು ಕಂಗೆಡುವಂತೆ ಮಾಡಿರುವ ಸುಡುಬಿಸಿಲು ಇದೀಗ ಹೊಸ ದಾಖಲೆ ಸೃಷ್ಟಿಸಿದೆ. ದೆಹಲಿಯ ಮುಂಗೇಶ್‍ಪುರದಲ್ಲಿ 52.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಭಾರತದಲ್ಲಿ ದಾಖಲಾದ ಈವರೆಗಿನ ಅತಿ ಹೆಚ್ಚು ಉಷ್ಣಾಂಶ ಎನ್ನಿಸಿಕೊಂಡಿದೆ. ಆದರೆ ಇದು ಇದುವರೆಗೆ ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆಯಾದ ಕಾರಣ, ಮಾಪನದ ಸೆನ್ಸರ್‍ಗಳನ್ನು ಮತ್ತೊಮ್ಮೆ ಪರಿಶೀಲಿಸಿ ಅಧಿಕೃತವಾಗಿ ಮಾಹಿತಿ ನೀಡುವುದಾಗಿ ಹವಾಮಾನ ಇಲಾಖೆ ಹೇಳಿದೆ. ಒಂದು ವೇಳೆ ಉಷ್ಣಾಂಶ 52.9 ಡಿಗ್ರಿ ದಾಖಲಾಗಿದ್ದರೆ, ಅದು ವಿಶ್ವದಾಖಲೆಗಿಂತ ಕೇವಲ

ಕಂಗೆಡಿಸಿದ ಸುಡು ಬಿಸಿಲು/ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ತಾಪಮಾನ Read More »

ರಸ್ತೆ‌ ಮಧ್ಯೆ ನಮಾಜ್ ಮಾಡಿದ ಪ್ರಕರಣ| ಸುಮೋಟೋ ಕೇಸ್ ವಾಪಾಸ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ನಮಾಝ್ ನಿರ್ವಹಿಸಿದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ನಮಾಝ್ ನಿರ್ವಹಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ತಕ್ಷಣ ಕದ್ರಿ ಪೊಲೀಸರು ಸ್ವಯಂ ಪ್ರೇರಿತ (ಕಲಂ 341,283,143,149)ವಾಗಿ ಪ್ರಕರಣ ದಾಖಲಿಸಿದ್ದರು.ಇದಕ್ಕೆ ಕರಾವಳಿಯ ಮುಸ್ಲಿಂ ವಲಯ ಮತ್ತು ಪ್ರಗತಿಪರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಸುಮೋಟೊ ಪ್ರಕರಣ ವಾಪಸ್ ಪಡೆಯಬೇಕು ಎಂಬ ಒತ್ತಾಯ

ರಸ್ತೆ‌ ಮಧ್ಯೆ ನಮಾಜ್ ಮಾಡಿದ ಪ್ರಕರಣ| ಸುಮೋಟೋ ಕೇಸ್ ವಾಪಾಸ್ Read More »

ಅತಿಥಿ ಗೃಹದಲ್ಲಿನ ವಸ್ತುಗಳು ನಾಪತ್ತೆ| ರೋಹಿಣಿ ಸಿಂಧೂರಿ ವೇತನ ಕಡಿತಗೊಳಿಸಲು ಮನವಿ

ಸಮಗ್ರ ನ್ಯೂಸ್: ‘ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ (ಎಟಿಐ) ಅತಿಥಿ ಗೃಹದಲ್ಲಿ ನಾಪತ್ತೆಯಾದ ಸಾಮಗ್ರಿಗಳಿಗೆ ತಗಲುವ ಮೊತ್ತವನ್ನು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೇತನದಲ್ಲೇ ಕಡಿತಗೊಳಿಸಬೇಕು’ ಎಂದು ಕೋರಿ ಸಂಸ್ಥೆಯ ಜಂಟಿ ನಿರ್ದೇಶಕರು (ಆಡಳಿತ) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ರೋಹಿಣಿ ಇಲ್ಲಿನ ಜಿಲ್ಲಾಧಿಕಾರಿ ಯಾಗಿ ಬಂದ ವೇಳೆ ಅಂದರೆ 2020ರ ಅ.2ರಿಂದ 2020ರ ನ.14ರವರೆಗೆ ಎಟಿಐ ಅತಿಥಿಗೃಹದಲ್ಲಿ ವಾಸವಿದ್ದರು. ಬಳಿಕ ಜಿಲ್ಲಾಧಿಕಾರಿ ನಿವಾಸಕ್ಕೆ ಸ್ಥಳಾಂತರದ ವೇಳೆ ಅತಿಥಿಗೃಹದ 2

ಅತಿಥಿ ಗೃಹದಲ್ಲಿನ ವಸ್ತುಗಳು ನಾಪತ್ತೆ| ರೋಹಿಣಿ ಸಿಂಧೂರಿ ವೇತನ ಕಡಿತಗೊಳಿಸಲು ಮನವಿ Read More »

ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಎಂಬವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್ ಎಂಜಿರದ ಪರಕ್ಕಳದ ಸ್ಕೇರಿಯಾ ಎಂಬವರ ಪುತ್ರ. ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಮನೆಯಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ

ಬೆಂಗಳೂರಿನಲ್ಲಿ ಭೀಕರ ಅಪಘಾತ| ನೆಲ್ಯಾಡಿ ಮೂಲದ ಯುವಕ ದಾರುಣ ಸಾವು Read More »

ಕಾಸರಗೋಡು: ನಾಪತ್ತೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜೊತೆ ಮದುವೆ| ಲವ್ ಜಿಹಾದ್ ಗೆ ಮುಸ್ಲಿಂ ಲೀಗ್ ಕುಮ್ಮಕ್ಕು!?

ಸಮಗ್ರ ನ್ಯೂಸ್: ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡುತ್ತಿದೆ. ಮಂಗಳೂರು ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಸದ್ದಿಲ್ಲದೆ ಮದುವೆ ಆಗಿದ್ದು, ಮುಸ್ಲಿಂ ಲೀಗ್ ನಾಯಕನೊಬ್ಬ ಈ ಪ್ರಕರಣದಲ್ಲಿ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಕಾಸರಗೋಡಿನ ಬದಿಯಡ್ಕದಲ್ಲಿ ʼಲವ್‌ ಜಿಹಾದ್ʼ ಎನ್ನಲಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿಹಿಂಪ ಸೇರಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದು, ತಮಗೆ ಮದುವೆಯಾಗಿದೆ ಎಂದು ತಿಳಿಸಿದ್ದಾಳೆ.

ಕಾಸರಗೋಡು: ನಾಪತ್ತೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜೊತೆ ಮದುವೆ| ಲವ್ ಜಿಹಾದ್ ಗೆ ಮುಸ್ಲಿಂ ಲೀಗ್ ಕುಮ್ಮಕ್ಕು!? Read More »

ಮುಂಗಾರು ಪ್ರವೇಶಕ್ಕೆ 24 ಗಂಟೆ ಬಾಕಿ| ದೇಶಾದ್ಯಂತ ವಾಡಿಕೆ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಮುಂಗಾರು ಪ್ರವೇಶಿಸಲಿದೆ. ಮುಂಗಾರು ಪ್ರವೇಶದಿಂದಾಗಿ ಕೇರಳದಲ್ಲಿ ಮಳೆಯಾಗಲಿದೆ. ನಂತರ ಈಶಾನ್ಯ ಭಾರತದ ಕೆಲ ರಾಜ್ಯಗಳಲ್ಲಿ ಮಳೆಯಾಗಲಿದೆ. ಉಷ್ಣ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮುಂಗಾರು ಪ್ರವೇಶವು ತುಸು ರಿಲೀಫ್‌ ನೀಡಲಿದೆ. ಭಾರತದ ವಾಯವ್ಯ ಹಾಗೂ ಕೇಂದ್ರ ಭಾಗದಲ್ಲಿ ಉತ್ತಮ ಮಳೆಯಾಗುವ ಕಾರಣ ಕೃಷಿ ಚಟುವಟಿಕೆಗಳ ಆರಂಭಕ್ಕೆ ಮುನ್ನುಡಿ ಬರೆಯಲಿದೆ. ಸುಮಾರು 3-4 ಡಿಗ್ರಿ ಸೆಲ್ಸಿಯಸ್‌ ತಾಪಮಾನವು ಇಳಿಕೆಯಾಗಲಿದೆ’ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ,

ಮುಂಗಾರು ಪ್ರವೇಶಕ್ಕೆ 24 ಗಂಟೆ ಬಾಕಿ| ದೇಶಾದ್ಯಂತ ವಾಡಿಕೆ ಮಳೆ ನಿರೀಕ್ಷೆ Read More »

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ| ಡೆತ್ ನೋಟ್ ನಲ್ಲಿದ್ದ ಇಬ್ಬರು ಅಧಿಕಾರಿಗಳು ಸಸ್ಪೆಂಡ್..!

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌(52) ನೇಣಿಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತ ರಾಜ್ಯ ಸರ್ಕಾರ, ಡೆತ್ ನೋಟ್ ನಲ್ಲಿ ನಮೂದಿಸಿದ್ದ ಮೂರು ಜನ ಅಧಿಕಾರಿಗಳಲ್ಲಿ ಇಬ್ಬರಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಪ್ರಕರಣವನ್ನು ಮೊನ್ನೆಯೆ CIDಗೆ ವಹಿಸಲಾಗಿತ್ತು . ಈಗ ಶಿವಮೊಗ್ಗ ಮತ್ತು ಬೆಂಗಳೂರು ಎರಡು ಕಡೆಗಳಲ್ಲಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ| ಡೆತ್ ನೋಟ್ ನಲ್ಲಿದ್ದ ಇಬ್ಬರು ಅಧಿಕಾರಿಗಳು ಸಸ್ಪೆಂಡ್..! Read More »

ಮಂಗಳೂರು: ಪೈಲ್ಸ್ ಚಿಕಿತ್ಸೆಗೆಂದು ಕರೆತಂದು ಮಹಿಳೆ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರನ್ನು ಪೈಲ್ಸ್  ಚಿಕಿತ್ಸೆಗೆಂದು ಕರೆದುಕೊಂಡು ಬಂದು ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ನಡೆದಿದೆ. ಅತ್ಯಾಚಾರ ನಡೆಸಿದ ನಂತರ ಸಂತ್ರಸ್ಥೆಯ ನಗ್ನ ಫೋಟೋವನ್ನು ತೆಗೆದುಕೊಂಡು ಬ್ಲಾಕ್ ಮೇಲೆ ಮಾಡಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಇನ್ನು ಆರೋಪಿ, ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್ ಗೆ ಚಿಕಿತ್ಸೆ ಕೊಡಿಸುವುದಾಗಿ ಮೊದಲು ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಬಳಿಕ ನಗರದ ಮಹಾರಾಜ ಹೋಟೆಲ್, ಫಾದರ್ ಮುಲ್ಲರ್ಸ್ ಆಸ್ಪತ್ರೆ

ಮಂಗಳೂರು: ಪೈಲ್ಸ್ ಚಿಕಿತ್ಸೆಗೆಂದು ಕರೆತಂದು ಮಹಿಳೆ ಮೇಲೆ ಅತ್ಯಾಚಾರ Read More »

ಪೋಸ್ಟ್ ಆಫೀಸ್ ನಲ್ಲಿ ಖಾತೆಗಾಗಿ ಮುಗಿಬಿದ್ದ ಮಹಿಳೆಯರು| 1 ಲಕ್ಷಕ್ಕಾಗಿ ಇಷ್ಟು ಕ್ಯೂನಾ..?

ಸಮಗ್ರ ನ್ಯೂಸ್: ಬೆಂಗಳೂರಿನ ಅಂಚೆ ಕೇಂದ್ರ ಕಚೇರಿಯಲ್ಲಿ ಮುಂಜಾನೆ 4 ಗಂಟೆಗೆ ಜನ ಕ್ಯೂ ಬಂದು ನಿಲ್ಲುತ್ತಾರಂತೆ ಯಾಕೆ ಇಷ್ಟು ಜನ ಒಮ್ಮೊಗೆ ಬಂದು ಕ್ಯೂ ನಿಲ್ಲುತ್ತಾರೆ ಅಂತ ಗೋತ್ತಾಗಬೇಕ ಈ ಸ್ಟೋರಿ ಓದಿ. ಹೌದು ಬೆಂಗಳೂರಿನ ಅಂಚೆ ಕೇಂದ್ರದಲ್ಲಿ ಜನ ಸಾಲುಗಟ್ಟಿ ನಿಂತಿರುವುದು ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆಗಾಗಿ. ಅದ್ರೆ ಇಷ್ಟು ಜನ ಒಮ್ಮೊಗೆ ಬರುತ್ತಿರುವುದರಿಂದ ಸಿಬ್ಬಂದಿ ಹೈರಾಣಾಗಿದ್ದಾರೆ. ಯಾಕೆ ಅಂತೀರಾ, ಚುನಾವಣೆ ಹೊತ್ತಲ್ಲಿ I.N.D.I.A ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ

ಪೋಸ್ಟ್ ಆಫೀಸ್ ನಲ್ಲಿ ಖಾತೆಗಾಗಿ ಮುಗಿಬಿದ್ದ ಮಹಿಳೆಯರು| 1 ಲಕ್ಷಕ್ಕಾಗಿ ಇಷ್ಟು ಕ್ಯೂನಾ..? Read More »