Editor

ಉಡುಪಿ: ಕಾರು- ಮೀನಿನ ಲಾರಿ ಮಧ್ಯೆ ಭೀಕರ ಅಪಘಾತ; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್‌ : ಕಾರು ಮತ್ತು ಮೀನು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದೆ. ಮೀನಿನ ಲಾರಿ ಕೇರಳದ ಕಡೆಗೆ ಸಾಗುತ್ತಿತ್ತು. ಅಂಬಲಪಾಡಿ ಬಳಿ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿಯು ಡಿವೈಡರ್ ಹತ್ತಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ […]

ಉಡುಪಿ: ಕಾರು- ಮೀನಿನ ಲಾರಿ ಮಧ್ಯೆ ಭೀಕರ ಅಪಘಾತ; ಹಲವು ಮಂದಿಗೆ ಗಾಯ Read More »

ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ‌ಹಾಕದಿರಿ – ವಿಜಯೇಂದ್ರ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನ ಬಂಧನ ಸಾಧ್ಯತೆ ವಿಚಾರವಾಗಿ ಕೆಂಡಾಮಂಡಲರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಾಸಕರನ್ನು ಅರೆಸ್ಟ್‌ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದೆ ನಡೆಯುವುದಕ್ಕೆ ಕಾಂಗ್ರೆಸ್‌ ಹೊಣೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರೀಶ್ ಪೂಂಜಾ ಉದ್ವೇಗದಲ್ಲಿ ಕೆಲವು ಮಾತನಾಡಿದ್ದಾರೆ, ಅದು ತಪ್ಪು ಎಂದು ಅವರಿಗೂ ಗೊತ್ತಾಗಿದೆ, ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ ಕಾನೂನು ಸುವ್ಯವಸ್ಥೆ ಹದಗೆಡಲು ನೀವೆ ಕುಮ್ಮಕ್ಕು ನೀಡುತ್ತಿದ್ದಿರಿ ಎಂಧು ವಿಜಯೇಂದ್ರ

ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ‌ಹಾಕದಿರಿ – ವಿಜಯೇಂದ್ರ Read More »

HSPR ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಹಾಗಿದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಎಲ್ಲಾ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ ಹಾಗೂ ಈ ತಿಂಗಳು 31ರವರೆಗೆ ಗಡುವು ಸಹ ನೀಡಿತ್ತು. ಆದರೂ ಕಾರಣಾಂತರಗಳಿಂದ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕದ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಸದವರ ವಿರುದ್ಧ ಜೂನ್ 12ರವರೆಗೆ ಯಾವುದೇ ರೀತಿಯ ಕ್ರಮವಿಲ್ಲ. ಈ ಬಗ್ಗೆ ಸ್ವತಃ ರಾಜ್ಯ ಸರ್ಕಾರವೇ ಹೈಕೋರ್ಟ್‌ಗೆ ತಿಳಿಸಿದೆ. ಹೀಗಾಗಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್

HSPR ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಹಾಗಿದ್ರೆ ಈ ಸುದ್ದಿ ಓದ್ಲೇಬೇಕು… Read More »

ಮಹಾ‌ದುರಂತಕ್ಕೆ ಹದಿನಾಲ್ಕು ‌ವರ್ಷ| ಭಯಾನಕ ಘಟನೆಯ ಮರುನೆನಪು

ಸಮಗ್ರ ವಿಶೇಷ: ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ 14 ವರ್ಷಗಳ ಹಿಂದೆ ಇದೇ ದಿನ (2010 ಮೇ 22) ನಡೆದ ಆ ಒಂದು ದುರ್ಘಟನೆಯು ದೇಶದಾದ್ಯಂತ ಉಂಟುಮಾಡಿದ ನೋವಿನ ಅಲೆಗಳನ್ನು ಈಗ ಕಲ್ಪನೆ ಮಾಡಲೂ ಭಯವಾಗುತ್ತದೆ! ದುಬೈಯಿಂದ ಹೊರಟ ಭಾರತದ ವೈಭವದ ಬೋಯಿಂಗ್ 737-800 ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಅದರಲ್ಲಿ ಎಲ್ಲ ಪ್ರಾಯದವರೂ ಇದ್ದರು. ಹೆಚ್ಚಿನವರು ಕರ್ನಾಟಕ ಮತ್ತು ಕೇರಳದವರು. ನೂರಾರು ಕನಸುಗಳನ್ನು ಹೊತ್ತು ತಮ್ಮ ತಾಯ್ನೆಲಕ್ಕೆ ಹೊರಟವರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂಜಾನೆ ಸೂರ್ಯೋದಯಕ್ಕೆ ಮೊದಲು

ಮಹಾ‌ದುರಂತಕ್ಕೆ ಹದಿನಾಲ್ಕು ‌ವರ್ಷ| ಭಯಾನಕ ಘಟನೆಯ ಮರುನೆನಪು Read More »

ಅಶ್ಲೀಲ ವಿಡಿಯೋ ‌ನೋಡಿ ಅಕ್ಕನನ್ನೇ ಗರ್ಭಿಣಿಯನ್ನಾಗಿಸಿದ ಅಪ್ರಾಪ್ತ ಬಾಲಕ!!

ಸಮಗ್ರ ನ್ಯೂಸ್: 13 ವರ್ಷದ ಬಾಲಕ ಅಶ್ಲೀಲ ವಿಡಿಯೋಗಳ ಚಟಕ್ಕೆ ಬಿದ್ದು ತನ್ನ ಅಕ್ಕನ ಗರ್ಭಿಣಿ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ಬಾಲಾಪರಾಧಿ ಕೇಂದ್ರಕ್ಕೆ ಒಪ್ಪಿಸಿದ್ದಾರೆ. 13 ವರ್ಷದ ಬಾಲಕ ಪೊರ್ನ್ ವಿಡಿಯೋ ನೋಡುವ ಚಟಕ್ಕೆ ಬಿದ್ದಿದ್ದ. ಬಳಿಕ ತನ್ನ 15 ವರ್ಷದ ಅಕ್ಕನಿಗೂ ಪೊರ್ನ್ ವಿಡಿಯೋ ತೋರಿಸಿದ್ದಾನೆ. ಇಬ್ಬರು ಜೊತೆಯಾಗಿ ಪೊರ್ನ್ ವಿಡಿಯೋ ನೋಡಿದ್ದಾರೆ. ಕೆಲವು ವಿಡಿಯೋಗಳನ್ನು ನೋಡಿದ್ದಾರೆ. ಬಳಿಕ ಕಳೆದ ಡಿಸೆಂಬರ್ ತಿಂಗಳಲ್ಲಿ ತಮ್ಮನ

ಅಶ್ಲೀಲ ವಿಡಿಯೋ ‌ನೋಡಿ ಅಕ್ಕನನ್ನೇ ಗರ್ಭಿಣಿಯನ್ನಾಗಿಸಿದ ಅಪ್ರಾಪ್ತ ಬಾಲಕ!! Read More »

ಮಂಗಳೂರು : ಹೆಜಮಾಡಿ ಟೋಲ್ ಪ್ಲಾಜಾ- ಶೌಚಾಲಯವಿಲ್ಲದೆ ಪರದಾಟ

ಸಮಗ್ರ ನ್ಯೂಸ್ : ಟೋಲ್ ನಿರ್ವಾಹಣೆ, ಸುಂಕ ವಸೂಲಿಗೆ ಹೊಸ ಕಂಪನಿ ಹೆಜಮಾಡಿಗೆ ವಕ್ಕರಿಸಿದ್ದರೂ ಹಳೆಯ ಸಮಸ್ಯೆಗಳು ಜೀವಂತವಿದ್ದು, ಕಳೆದ ಸುಮಾರು ಹತ್ತು ದಿನಗಳಿಂದ ಶೌಚಾಲಯ ದುರಸ್ಥಿ ಹೆಸರಲ್ಲಿ ಮುಚ್ಚಿದ್ದು ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ. ಶೌಚಾಲಯವನ್ನು ಹೈಟೆಕ್ ಮಾಡುವುದಾಗಿ ಬದಲಿ ವ್ಯವಸ್ಥೆ ಕಲ್ಪಿಸದೆ ಶೌಚಾಲಯವನ್ನು ಮುಚ್ಚಿ ಕಾಮಗಾರಿ ಆರಂಭಿಸಲಾಗಿದ್ದು, ಇದೀಗ ಕೆಲ ದಿನಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದು , ಅಗೆದು ಹಾಕಲಾದ ಅರೆಬರೆ ಶೌಚಾಲಯ ಭೇಟಿ ಸಂದರ್ಭ ಗೊಚರಿಸುತ್ತದೆ. ಪುರುಷರು ವಿಧಿ ಇಲ್ಲದೆ ಟೋಲ್ ಪ್ರದೇಶದಲ್ಲಿ ಬಯಲು ಮೂತ್ರ

ಮಂಗಳೂರು : ಹೆಜಮಾಡಿ ಟೋಲ್ ಪ್ಲಾಜಾ- ಶೌಚಾಲಯವಿಲ್ಲದೆ ಪರದಾಟ Read More »

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ

ಸಮಗ್ರ ನ್ಯೂಸ್: ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಪ್ರತ್ಯೇಕವಾಗಿ ಎರಡು ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜಾಗೆ ಬಂಧನ ಭೀತಿ ಎದುರಾಗಿದೆ. ಎರಡೂ ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು ಇದೀಗ ಹರೀಶ್ ಪೂಂಜ ಅವರ ಬಂಧನಕ್ಕಾಗಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ಪೂಂಜ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಖಾಕಿ ಪಡೆ

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ Read More »

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ

ಸಮಗ್ರ ನ್ಯೂಸ್: ಉಡುಪಿ, ದಕ್ಷಿಣ ಕನ್ನಡ ಜಿಲಲೆಗಳು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಮೇ 22ರಿಂದ 24ರವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಲ್ಲೂ ನಡೆಯಿತು ದೈವನರ್ತನ:ಕರಾವಳಿಯಲ್ಲಿ ಮುಂಗಾರು

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ Read More »

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್

ಸಮಗ್ರ ನ್ಯೂಸ್: ‘ಭಜರಂಗಿ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಪತಿ ನಂದೀಶ್ ತನ್ನ ಪತ್ನಿ ವಿದ್ಯಾರನ್ನು ಕೊಲೆ ಮಾಡಿದ್ದಾನೆ. ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್ Read More »

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ

ಸಮಗ್ರ ನ್ಯೂಸ್: ‘ವಸಂತ ಬಂಗೇರ ಅವರು ಸದಾ ಬಡವರ ಪರ, ಸತ್ಯದ ಪರ ಇದ್ದರು. ಬಡವರ ಕೆಲಸ ಮಾಡಿಕೊಡಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಗಲಿದ ಮಾಜಿ ಶಾಸಕ ದಿ.‌ವಸಂತ ಬಂಗೇರಗೆ ನುಡಿನಮನ ಸಲ್ಲಿಸಲು ತಾಲ್ಲೂಕಿನ ಕುವೆಟ್ಟುವಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಕ್ಷೇತ್ರದ ಅಭಿವೃದ್ಧಿ ವಿಚಾರಗಳಲದಲಿ ಬಂಗೇರ ಅವರಿಗೆ ತಾನು ಯಾರ ಜೊತೆ ಮಾತನಾಡುತ್ತಿದ್ದೇನೆ ಎನ್ನುವುದು ಮುಖ್ಯ ಆಗುತ್ತಿರಲಿಲ್ಲ. ಬಡವರ ಸಮಸ್ಯೆ ಪರಿಹರಿಸುವುದೇ ಅವರಿಗೆ ಮುಖ್ಯವಾಗಿತ್ತು.ಮಾನವಿಯತೆ ಇದ್ದ ಮನುಷ್ಯ.

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ Read More »