ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!!
ಸಮಗ್ರ ನ್ಯೂಸ್: ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸರಿಗೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಕ್ಷೇತ್ರದ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮಂಗಳವಾರ ಮತ್ತೊಂದು ಎಫ್ಐಆರ್ ದಾಖಲಾಗಿದೆ. ‘ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧದ ಎದುರು ಸೋಮವಾರ ಬಿಜೆಪಿ ವತಿಯಿಂದ ನಡೆಸಿದ್ದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ […]









