Editor

ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವು

ಸಮಗ್ರ ನ್ಯೂಸ್: ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ. ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗ ಅಮಿತ್ ಸಾವನ್ನಪ್ಪಿದ್ದಾನೆ. ಬಿಹಾರ ಮೂಲದ ಅಮಿತ್ ಜಿಮ್ ಟ್ರೈನರ್ ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪದ ಯುವತಿಯನ್ನು ಪ್ರೀತಿಸಿದ್ದು. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು. ಆದರೆ […]

ಪತ್ನಿಗೆ ವಿಡಿಯೋ ಕಾಲ್ ನಲ್ಲಿ ಹೆದರಿಸಲು ಹೋಗಿ ಪತಿ ಸಾವು Read More »

ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಸಮಗ್ರ ನ್ಯೂಸ್: ಸಚಿನ್ ತೆಂಡೂಲ್ಕರ್ ಅವರ ಭದ್ರತಾ ಸಿಬ್ಬಂದಿ ಪ್ರದೀಪ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಜ್ಯ ಮೀಸಲು ಪೊಲೀಸ್ ಪಡೆಯ ಜವಾನ್ ಪ್ರಕಾಶ್ ಕಾಪ್ಡೆ (39) ಮೃತ ದುರ್ದೈವಿ. ಸಚಿನ್ ಅವರ ವಿವಿಐಪಿ ಭದ್ರತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಚರು ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಊರಿಗೆ ತೆರಳಿದ್ದರು. ಆದರೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಮಹಾರಾಷ್ಟ್ರದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗಿನ ಜಾವ 1:30ಕ್ಕೆ ತನ್ನ ಸರ್ವೀಸ್ ಗನ್ ನಿಂದ

ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಸ್ಕಾಟ್ಲೆಂಡ್ ‌ತಂಡದ ಜೆರ್ಸಿಯಲ್ಲಿ ಮಿಂಚಿದ ‘ನಂದಿನಿ’ ಲೋಗೋ

ಸಮಗ್ರ ನ್ಯೂಸ್: ಮುಂದಿನ ತಿಂಗಳಿನಿಂದ ನಡೆಯಲಿರುವ ಟಿ-20 ಕ್ರಿಕೆಟ್ (T-20 World Cup) ವಿಶ್ವಕಪ್‌ಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಇದರ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್ ಲೋಗೋ ಇರುವ ಜೆರ್ಸಿಯನ್ನು ಸ್ಕಾಟ್ಲೆಂಟ್ ತಂಡ ಅನಾವರಣಗೊಳಿಸಿದೆ. ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯು ಜೂ. 2ರಿಂದ ವೆಸ್ಟ್‌ಇಂಡೀಸ್, ಅಮೆರಿಕದಲ್ಲಿ ನಡೆಯಲಿದೆ. ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲಾಗಿದೆ.

ಸ್ಕಾಟ್ಲೆಂಡ್ ‌ತಂಡದ ಜೆರ್ಸಿಯಲ್ಲಿ ಮಿಂಚಿದ ‘ನಂದಿನಿ’ ಲೋಗೋ Read More »

ಪುತ್ತೂರು: ಜಾಹೀರಾತು ಹೋರ್ಡಿಂಗ್ಸ್ ತೆರವಿಗೆ ಕ್ರಮ – ಎಸಿ

ಸಮಗ್ರ ನ್ಯೂಸ್: ಮುಂಬೈನಲ್ಲಿ ಇತ್ತೀಚೆಗೆ ಬಂದ ಬಿರುಗಾಳಿಗೆ ಭಾರೀ ದೊಡ್ಡ ಗಾತ್ರದ ಜಾಹಿರಾತು ಫಲಕ ಪೆಟ್ರೋಲ್ ಪಂಪ್ ಮೇಲೆ ಬಿದ್ದು 14ಕ್ಕೂ ಅಧಿಕ ಮಂದಿ ಸಾವನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು ಅಪಾಯಕಾರಿಯಾಗಿರುವ ಜಾಹಿರಾತು ಫಲಕಗಳನ್ನು ತೆಗೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಜಿಲ್ಲಾಧಿಕಾರಿಯವರು ಈಗಾಗಲೇ ಎಲ್ಲಾ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನಲೆ ಉಪವಿಭಾಗದ ಕಡೆಯಿಂದ

ಪುತ್ತೂರು: ಜಾಹೀರಾತು ಹೋರ್ಡಿಂಗ್ಸ್ ತೆರವಿಗೆ ಕ್ರಮ – ಎಸಿ Read More »

ಭ್ರೂಣಕ್ಕೂ ಬದುಕುವ ಹಕ್ಕು ಇದೆ/ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

ಸಮಗ್ರ ನ್ಯೂಸ್: ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, 27 ವಾರಗಳ ಗರ್ಭಣಿ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗರ್ಭಪಾತಕ್ಕೆ ಅನುಮತಿ ಕೋರಿ 20 ವರ್ಷದ ಅವಿವಾಹಿತ ಯುವತಿಯು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿತ್ತು.

ಭ್ರೂಣಕ್ಕೂ ಬದುಕುವ ಹಕ್ಕು ಇದೆ/ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ Read More »

ಪ್ರಜ್ವಲ್ ರೇವಣ್ಣ ಪ್ರಕರಣ/ ಎಕ್ಸ್ ನಲ್ಲಿ ಬ್ಲ್ಯೂ ಟಿಕ್ ಮಾನ್ಯತೆ ಕಳೆದುಕೊಂಡ ಪ್ರಜ್ವಲ್

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ‘ಎಕ್ಸ್’ ನಿಂದ ಗೇಟ್ ಪಾಸ್ ನೀಡಲಾಗಿದ್ದು, ಅವರ ಬ್ಯೂ ಟಿಕ್ ಮಾನ್ಯತೆ ಈಗ ಅಮಾನ್ಯಗೊಂಡಿದೆ. ಈ ಮೂಲಕ ವೇರಿಫೈಡ್ ಅಕೌಂಟ್ ಸ್ಟೇಟಸ್‍ನಿಂದ ಪ್ರಜ್ವಲ್ ಹೊರಬಿದ್ದಿದ್ದಾರೆ. ಮೊದಲು ಎಕ್ಸ್ ನ ಅಫೀಶಿಯಲ್ ಖಾತೆದಾರರಿಗೆ ಬ್ಯೂಟಿಕ್ ಅನ್ನು ನೀಡಲಾಗುತ್ತಿತ್ತು. ಆದರೆ, ಎಲಾನ್ ಮಸ್ಕ್ ಟ್ವಿಟರ್ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ

ಪ್ರಜ್ವಲ್ ರೇವಣ್ಣ ಪ್ರಕರಣ/ ಎಕ್ಸ್ ನಲ್ಲಿ ಬ್ಲ್ಯೂ ಟಿಕ್ ಮಾನ್ಯತೆ ಕಳೆದುಕೊಂಡ ಪ್ರಜ್ವಲ್ Read More »

ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕøತ/ ರಾಜಕೀಯ ಪಿತೂರಿ ಎಂದ ಕಾಮಿಡಿಯನ್

ಸಮಗ್ರ ನ್ಯೂಸ್: ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಖಾಡಕ್ಕಿಳಿದಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕøತಗೊಂಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ಯಾಮ್ ರಂಗೀಲಾ, ವಿನಾ ಕಾರಣ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ. ಇದು ನಿರೀಕ್ಷಿತ ಎಂದು ಆರೋಪಿಸಿದ್ದಾರೆ. ಮೋದಿ, ರಾಹುಲ್ ಗಾಂಧಿ ಸೇರಿದಂತೆ ಹಲವರ ಧ್ವನಿ ಅನುಕರಿಸಿ ಭಾರಿ ಜನಪ್ರಿಯತೆ ಗಳಿಸಿರುವ ಶ್ಯಾಮ್ ರಂಗೀಲಾ ಈ ಬಾರಿ ಮೋದಿ ವಿರುದ್ಧವೇ ತೊಡೆ ತಟ್ಟಿದ್ದರು. ವಿಪಕ್ಷಗಳ ನಾಯಕರು, ಇಂಡಿಯಾ ಒಕ್ಕೂಟ ಬೆಂಬಲಿತ ನಾಯಕರೂ ಶ್ಯಾಮ್ ರಂಗೀಲಾಗೆ

ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕøತ/ ರಾಜಕೀಯ ಪಿತೂರಿ ಎಂದ ಕಾಮಿಡಿಯನ್ Read More »

ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ರಾಕ್ಷಸರು..!

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಹಸುಗೂಸನ್ನು ರಸ್ತೆ ಬದಿಗೆ ಎಸೆದು ಹೋಗಿರುವ ಅಮಾನವೀಯ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕದ ಅಟ್ಟೂರು ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಆ ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗು ಹುಟ್ಟಿ ಕೆಲವೇ ಗಂಟೆಯಾಗಿತಷ್ಟೆ. ಆದರೆ ಶಿಶುವನ್ನು ಅನಾಮಿಕರು ಬಸ್ ನಿಲ್ದಾಣದ ಬಳಿ ಇರುವ ಗೂಡ್ಸ್ ಸ್ಟ್ಯಾಂಡ್ ಬಳಿ ಬಿಸಾಡಿ ಹೋಗಿದ್ದಾರೆ. ಸ್ಥಳೀಯರು ಮಗು ಅಳುವ ಧ್ವನಿ ಕೇಳಿ ಹೋಗಿ ನೋಡಿದ್ದಾಗ ಮಗು ಇರುವುದು ಬೆಳಕಿಗೆ ಬಂದಿದೆ. ಸದ್ಯ

ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ರಾಕ್ಷಸರು..! Read More »

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ: ಇನ್ಸ್​ಪೆಕ್ಟರ್​ & ಮಹಿಳಾ ಕಾನ್ಸ್​ಟೇಬಲ್​​ ಸಸ್ಪೆಂಡ್

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು ಮಾಡಲಾಗಿದೆ. ಈ ಕುರಿತಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದಾರೆ. ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪದಡಿ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್​ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ: ಇನ್ಸ್​ಪೆಕ್ಟರ್​ & ಮಹಿಳಾ ಕಾನ್ಸ್​ಟೇಬಲ್​​ ಸಸ್ಪೆಂಡ್ Read More »

ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ… ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ

ಸಮಗ್ರ ನ್ಯೂಸ್: ಚಾರ್ಲಿ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಟೈಮಲ್ಲಿ ತುಂಬಾ ಫೇಮಸ್ ಆದ ಮೂವಿ ಇದು. ಅದ್ರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಲೈವ್ ಬಂದು ಒಂದು ಸಂತಸದ ವಿಚಾರ ಹಂಚಿಕೊಂಡಿದ್ದಾರೆ ಅದೇನು ಅಂತೀರಾ ಇಲ್ಲಿದೆ ನೋಡಿ ಹೌದು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ ತಾಯಿ ಆಗಿದೆ. 6 ಮರಿಗಳಿಗೆ ಜನ್ಮ ನೀಡಿದೆ. ಚಾರ್ಲಿ ಮತ್ತು ಅದರ ಮರಿಗಳನ್ನು ನೋಡಲು ರಕ್ಷಿತ್​ ಶೆಟ್ಟಿ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿಂದ ಅವರು

ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ… ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ Read More »