Editor

ವಿಧಾನ ಪರಿಷತ್ ಚುನಾವಣೆ/ ಒಟ್ಟು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಸೋಮವಾರ ಸಲ್ಲಿಕೆಯಾದ 17 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರ […]

ವಿಧಾನ ಪರಿಷತ್ ಚುನಾವಣೆ/ ಒಟ್ಟು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಮುಂಗಾರು ಮಳೆ/ ಮೇ 19ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಎಂಟ್ರಿ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯ ಆಗ್ನೆಯ ಭಾಗಕ್ಕೆ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಮೇ 19ರಂದು ಮುಂಗಾರು ಮಳೆ ಎಂಟ್ರಿಕೊಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮೂನ್ಸೂಚನೆ ಕೊಟ್ಟಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಬರುವ ಮಾರುತಗಳು ಏಳೆಂಟು ದಿನಗಳ ಬಳಿಕ ವಾಡಿಕೆಗಿಂತ ಮುನ್ನವೇ ಕೇರಳಕ್ಕೆ ಪ್ರವೇಶಿಸಲಿವೆ. ನಂತರ, ಕೇರಳಕ್ಕೆ ಆಗಮಿಸಿರುವ ಮಾರುತಗಳು ಪ್ರಬಲವಾಗೊಂಡರೆ ಅದೇ ದಿನ ಕರ್ನಾಟಕದ ಕರಾವಳಿ ಭಾಗಗಕ್ಕೆ ಕಾಲಿಡಲಿದೆ. ಮಾರುತಗಳು ಪ್ರಬಲಗೊಂಡರೆ ವಾಡಿಕೆಗಿಂತ ಮುನ್ನ ಅಥವಾ ವಾಡಿಕೆಯಂತೆ ರಾಜ್ಯಕ್ಕೆ ಮಾರುತಗಳು ಆಗಮಿಸಲಿವೆ.

ಮುಂಗಾರು ಮಳೆ/ ಮೇ 19ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಎಂಟ್ರಿ Read More »

ಬೆಂಗಳೂರಿನಲ್ಲಿ ಮತ್ತೆ ಬಾಂಬ್ ದಾಳಿ ಬೆದರಿಕೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಮತ್ತೊಮ್ಮೆ ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದೆ. ಎರಡು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಆರು ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿದ್ದು, ನಂತರ ಅದು ನಕಲಿ ಬಾಂಬ್ ಬೆದರಿಕೆ ಕರೆ ಎಂದು ಖಚಿತವಾಗಿತ್ತು. ಇದೀಗ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಧ್ಯರಾತ್ರಿ ಶಾಲೆಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಮೇಲ್

ಬೆಂಗಳೂರಿನಲ್ಲಿ ಮತ್ತೆ ಬಾಂಬ್ ದಾಳಿ ಬೆದರಿಕೆ Read More »

ಬೆಳ್ತಂಗಡಿ: ಬೆನ್ನು ತಟ್ಟಿ ಆರೋಗ್ಯ ವಿಚಾರಿಸಿದ ಪಶುವೈದ್ಯ| ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ| ಪಶು ವೈದ್ಯಾಧಿಕಾರಿಯ ಬಂಧಿಸಿದ ಪೊಲೀಸರು!!

ಸಮಗ್ರ ನ್ಯೂಸ್: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದ ಮರಳುತ್ತಿದ್ದಂತೆ ಆತನನ್ನು ಕಂಡು ಪರಿಚಿತ‌‌ ಪಶು ವೈದ್ಯಾಧಿಕಾರಿಯೊಬ್ಬರು ಬೆನ್ನುತಟ್ಟಿ ವಿಚಾರಿಸಿದ್ದು, ಇದೇ ವೇಳೆ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ. ಆರೋಪಿ ಡಾಕ್ಟರ್ ಕುಮಾರ್ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಮೃತ ದುರ್ದೈವಿ. ಕೊಕ್ಕಡದ‌‌‌ ಸ್ಥಳೀಯ ನಿವಾಸಿ ಮೃತ ಕೃಷ್ಣ ಅವರು ವಿಪರೀತ ಜ್ವರ ಇದ್ದ

ಬೆಳ್ತಂಗಡಿ: ಬೆನ್ನು ತಟ್ಟಿ ಆರೋಗ್ಯ ವಿಚಾರಿಸಿದ ಪಶುವೈದ್ಯ| ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ| ಪಶು ವೈದ್ಯಾಧಿಕಾರಿಯ ಬಂಧಿಸಿದ ಪೊಲೀಸರು!! Read More »

ಭಾರೀ ಬಿರುಗಾಳಿ ಸಹಿತ ಮಳೆ| ಶಿರಾಡಿ ಘಾಟ್ ನಲ್ಲಿ ಮರ ಬಿದ್ದು ಸಂಚಾರ ಬಂದ್

ಸಮಗ್ರ ನ್ಯೂಸ್: ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ ಸಂಚಾರ ಬಂದ್ ಆಗಿದೆ. ತಿಂಗಳುಗಳ ಬಳಿಕ ಬಿರುಗಾಳಿ ಸಹಿತ ಅಬ್ಬರದ ಮಳೆಯಾಗಿದೆ. ಪರಿಣಾಮ ಮರ ರಸ್ತೆಗೆ ಉರುಳಿ ಬಿದ್ದಿದ್ದು, ವಾಹನ ಸಚಾರ ಮಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಗೆ ಬಿದ್ದ

ಭಾರೀ ಬಿರುಗಾಳಿ ಸಹಿತ ಮಳೆ| ಶಿರಾಡಿ ಘಾಟ್ ನಲ್ಲಿ ಮರ ಬಿದ್ದು ಸಂಚಾರ ಬಂದ್ Read More »

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು

ಸಮಗ್ರ ನ್ಯೂಸ್: ಕೆಲವರಿಗೆ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದರೆ ಸಾಧನೆ, ಇನ್ನು ಕೆಲವರಿಗೆ ತೇರ್ಗಡೆಯಾದರೆ ಅದೇ ಸಾಧನೆ. ನಿಜದ ಅರ್ಥದಲ್ಲಿ ಎರಡೂ ಸಂಭ್ರಮವೇ, ಆದ್ಯತೆಯೆ ಬೇರೆ. ಕುಡುಪಿನ ಮಂಗಳಾನಗರದಲ್ಲಿ ಇಂಥದ್ದೇ ಒಂದು ಅಪರೂಪದ ಸಂಭ್ರಮಾಚರಣೆ ನಡೆದಿದೆ. ಇತ್ತೀಚಿನ ಎಸ್‌ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೇ (ಜಸ್ಟ್‌ ಪಾಸ್‌) ವಿದ್ಯಾರ್ಥಿಯೋರ್ವನಿಗೆ ಯುವ ಫ್ರೆಂಡ್ಸ್‌ನ ಗೆಳೆಯರು ಹಿತೈಷಿಗಳು ಸೇರಿ ಬ್ಯಾನರ್‌ ಹಾಕಿ ಅಭಿನಂದಿಸಿದ್ದಾರೆ. ಬ್ಯಾನರ್‌ ಹೀಗಿದೆ ನೋಡಿ : ವಿದ್ಯಾರ್ಥಿಯ ಫೋಟೋ ಇರುವ ಬ್ಯಾನರ್‌ನಲ್ಲಿ ಆತನಿಗೆ ಅಭಿನಂದನೆಗಳನ್ನು ಸಲ್ಲಿಸಿ ಪಕ್ಕದಲ್ಲೇ

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು Read More »

ಉಡುಪಿ: ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಸರಕಾರ ಪತನ- ಶಾಸಕ ಯಶ್ ಪಾಲ್ ಸುವರ್ಣ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ಸರ್ಕಾರ ಜನರ ಮನ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ನ ಶಾಸಕರೇ ಸರ್ಕಾರದ ವಿರುದ್ಧ ಬೇಸರಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಸರಕಾರದ ಪತನಕ್ಕೆ ಮುಹೂರ್ತ ನಿಗದಿಯಾಗುತ್ತದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಉರುಳುತ್ತೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಅಭಿವೃದ್ಧಿಗೆ ಅನುದಾನ ಇಲ್ಲದೆ ಶಾಸಕರು ಜನಕ್ಕೆ ಮುಖ ತೋರಿಸದ ಪರಿಸ್ಥಿತಿ ಇದೆ.

ಉಡುಪಿ: ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಸರಕಾರ ಪತನ- ಶಾಸಕ ಯಶ್ ಪಾಲ್ ಸುವರ್ಣ Read More »

ಪ್ರಧಾನಿ ನರೇಂದ್ರ ಮೋದಿಯಿಂದ ಬಾಗಲಕೋಟೆ ಯುವತಿಗೆ ಪತ್ರ

ಸಮಗ್ರ ನ್ಯೂಸ್: ಇತ್ತೀಚೆಗೆ ಕರುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಅದೇ ಸಂದರ್ಭದಲ್ಲಿ ಪ್ರಚಾರದ ರ್ಯಾಲಿ ನಡೆಯುತ್ತಿತ್ತು. ಆಗಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಇದೀಗ ಮೋದಿ ಪತ್ರ ಬರೆದಿದ್ದಾರೆ. ಏಪ್ರಿಲ್ 29 ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಮೋದಿ ಬಾಗಲಕೋಟೆಗೆ ಆಗಮಿಸಿದ್ದಾಗ ತಾನು ಚಿತ್ರಿಸಿದ ಸ್ಕೆಚ್ ಹಿಡಿದು ಯುವತಿ ವೇದಿಕೆ ಮುಂಭಾಗದಲ್ಲಿ ನಿಂತಿದ್ದಳು. ತಾಯಿಯ ಫೋಟೋ ಫ್ರೆಮ್ ನೋಡಿ ಎಸ್​ಪಿಜಿ ಸಿಬ್ಬಂದಿಗೆ ಹೇಳಿ ಮೋದಿ ತರಿಸಿಕೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿಯಿಂದ ಬಾಗಲಕೋಟೆ ಯುವತಿಗೆ ಪತ್ರ Read More »

ಚುನಾವಣೆ ಪ್ರಚಾರ| ರಾಹುಲ್ ಗಾಂಧಿ ಮದುವೆಯ ಬಗ್ಗೆ ಪ್ರಸ್ತಾಪಿಸಿದ ಜನತೆ

ಸಮಗ್ರ ನ್ಯೂಸ್: ಚುನಾವಣೆ ಪ್ರಚಾರವಾಗಿ ಇಂದು ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಭಾಷಣ ಮಾಡಿದರು. ಇತರೆ ಪಕ್ಷದ ನಾಯಕರ ಮೇಲೆ ವಾಗ್ದಾಳಿ ನಡೆಸಿದರು. ಆದರೆ ಅಲ್ಲಿ ಸೇರಿದ್ದ ಜನಸಮೂಹವು ರಾಹುಲ್ ಗಾಂಧಿಯ ಮದುವೆಯ ಬಗ್ಗೆ ಪ್ರಸ್ತಾಪಿಸಿದ್ದು, ನೀವು ಯಾವಾಗ ಮದುವೆಯಾಗುತ್ತೀರಿ? ಎಂದು ಕೇಳಿದರು. ಇದಕ್ಕೆ ಉತ್ತರ ನೀಡಿದ ರಾಹುಲ್ ಗಾಂಧಿ ಅಬ್ ಜಲ್ದಿ ಹೈ ಕರ್ನಿ ಪಡೆಗಿ (ನೀವಿಷ್ಟು ಕೇಳಿದ ಮೇಲೆ ನಾನು ಶೀಘ್ರದಲ್ಲೇ ಮದುವೆಯಾಗಬೇಕಾಗಿದೆ) ಎಂದು

ಚುನಾವಣೆ ಪ್ರಚಾರ| ರಾಹುಲ್ ಗಾಂಧಿ ಮದುವೆಯ ಬಗ್ಗೆ ಪ್ರಸ್ತಾಪಿಸಿದ ಜನತೆ Read More »

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ

ಸಮಗ್ರ ನ್ಯೂಸ್: ಮುಂಬೈನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಫಲಕ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜೊತೆಗೆ 59 ಜನರು ಗಾಯಗೊಂಡಿದ್ದಾರೆ. ಎನ್​​ಡಿಆರ್​ಎಫ್ ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಇದರಂತೆ ಧೂಳು ಗಾಳಿಗೆ ಅನೇಕ ಕಡೆಗಳಲ್ಲಿ ಅನಾಹುತಗಳು ಸಂಭವಿಸಿವೆ. ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ Read More »