Editor

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಪ್| ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್

ಸಮಗ್ರ ನ್ಯೂಸ್: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ. […]

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಪ್| ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್ Read More »

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ.. ಹೈದರಾಬಾದ್‌ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ವಿಡಿಯೋ ವೈರಲ್‌ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷಮುಖಂಡ ಅಸಾದುದ್ದೀನ್‌ ಓವೈಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ Read More »

ಸುಳ್ಯ: ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತನನ್ನು ನೆಟ್ಟಾರು ನಿವಾಸಿ ಚರಣ್‌ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರಲ್ಲಿ ಅಭ್ಯಾಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಳ್ಯ: ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ Read More »

ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಗಚ್ಚಿನಗಕಟ್ಟಿ ಕಾಲೋನಿಯಿಂದ ನಿನ್ನೆ ನಾಪತ್ತೆಯಾಗಿದ್ದ ಮೂವರು ಮಕ್ಕಳು ಇಂದು ಶವವಾಗಿ ಪತ್ತೆಯಾಗಿದ್ದಾರೆ. ಅನುಷ್ಕಾ, ವಿಜಯ ಹಾಗೂ ಮಿಹಿರ ಮೃತ ದುರ್ದೈವಿಗಳು. ಇವರೆಲ್ಲ ಮನೆ ಮುಂದೆ ಆಟವಾಡುತ್ತಿದ್ದಾಗ ಕಾಲೋನಿಯಲ್ಲಿ ಒಂಟೆ ಬಂದಿತ್ತು. ಮೂವರು ಖುಷಿಯಲ್ಲಿ ಅದರ ಹಿಂದೆ ಹೋಗಿದ್ದಾರೆ. ಹೀಗೆ ಹೋದವರು ಮನೆಗೆ ವಾಪಸ್‌ ಆಗಿರಲಿಲ್ಲ. ಪೋಷಕರು ಸಹ ಮನೆ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ ಮಕ್ಕಳ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಮಕ್ಕಳು ಕಾಣಿಯಾಗಿದ್ದಕ್ಕೆ ಕಂಗಾಲಾದ ಪೋಷಕರು ಎಪಿಎಂಸಿ ಠಾಣೆ ಮೆಟ್ಟಿಲು ಹತ್ತಿದ್ದರು.

ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿಯಲ್ಲಿ ಶವವಾಗಿ ಪತ್ತೆ Read More »

ಶಿವಮೊಗ್ಗ : ಜಮೀನು ವಿವಾದ ತಾರಕಕ್ಕೇರಿ ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ

ಸಮಗ್ರ ನ್ಯೂಸ್‌ : ಜಮೀನು ವಿವಾದ ತಾರಕಕ್ಕೇರಿ ಹಾಡಹಗಲೇ ವ್ಯಕ್ತಿಯೊಬ್ಬರ ಬರ್ಬರ ಕೊಲೆಯಾಗಿದ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ವಿರುದ್ಧ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಹಲವು ವರ್ಷಗಳಿಂದ ಇವರಿಬ್ಬರ ಮಧ್ಯೆ ಜಮೀನು ವಿವಾದ ಇತ್ತು. ವಿವಾದ ಹಿನ್ನೆಲೆಯಲ್ಲಿ ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಕೋರ್ಟ್ ಆದೇಶ

ಶಿವಮೊಗ್ಗ : ಜಮೀನು ವಿವಾದ ತಾರಕಕ್ಕೇರಿ ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ Read More »

ಉಡುಪಿ : ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿದ ನಗರಸಭಾ ಸದಸ್ಯ

ಸಮಗ್ರ ನ್ಯೂಸ್‌ : ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ಸೇರಿದಂತೆ ಇತರ 6 ಮಂದಿ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಕಕ್ಕುಂಜೆಯ ಸವಿತಾ ಎಂಬವರು ಮಹಿಳಾ ಠಾಣೆಯಲ್ಲಿ ದೂರ ದಾಖಲಿಸಿದ್ದಾರೆ. ಸವಿತಾ ಹಾಗೂ ಬಾಲಕೃಷ್ಣ ಶೆಟ್ಟಿ ಅವರಿಗೆ ಸುಮಾರು 4 ವರ್ಷಗಳಿಂದ ಸವಿತಾ ಅವರ ಮನೆ ಜಾಗ ಹಾಗೂ ಸವಿತಾ ಅವರ ಪತಿಯ ಗ್ಯಾರೇಜ್ ವಿಚಾರದಲ್ಲಿ ತಕರಾರು ಇದ್ದು, ಈ

ಉಡುಪಿ : ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿದ ನಗರಸಭಾ ಸದಸ್ಯ Read More »

ಕಲ್ಲಡ್ಕ : ಭಾರೀ ಗಾಳಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್‌ : ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಕಾರು ಚಾಲಕ ತೌಶೀಫ್ ಎಂಬಾತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ತೌಶೀಫ್ ಕಾರಿನಲ್ಲಿ ಒಬ್ಬನೇ ಇದ್ದು ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಘಟನೆ ನಡೆದಿದೆ. ಸಂಜೆ ಜೋರಾಗಿ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮವಾಗಿ ನಿಯಂತ್ರಣ ಕಳೆದು ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಸರಿಯಾಗಿ

ಕಲ್ಲಡ್ಕ : ಭಾರೀ ಗಾಳಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು

ಸಮಗ್ರ ನ್ಯೂಸ್‌ : ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟಿ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ. ಮೆಹನಾಜ್ (17) ಮೃತ ದುರ್ದೈವಿ.ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್‌ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ

ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು Read More »

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಸಮಗ್ರ ನ್ಯೂಸ್ : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ. ಶಾಸಕರು ಕಛೇರಿಯಲ್ಲಿ ನೀರು ಪೂರೈಕೆ ಅಧಿಕಾರಿಗಳ ಸಭೆ ಕರೆದಿದ್ದು, ಅಧಿಕಾರಿಗಳಿಂದ ಸಭೆಗೆ ತಡೆ ನೀಡಲಾಗಿದೆ.ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಅಧಿಕಾರಿಗಳು ಸೂಚನೆ ನೀಡಿದರು. ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ ಎಂದು ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆಯ ವೇಳೆ ಶಾಸಕರು ಸಭೆಯನ್ನು ಕರೆದಿದ್ದು, ಜನರ ಸಮಸ್ಯೆಯನ್ನು

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ Read More »

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಸ್ತೆ: ಸಂಚಾರ ಅಸ್ತವ್ಯಸ್ತ

ಸಮಗ್ರ ನ್ಯೂಸ್‌ : ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ. ಹೆದ್ದಾರಿ ಕಾಮಗಾರಿ ಹಾಗೂ ಪ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಕಲ್ಲಡ್ಕದಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆ ಸರಿಯಾಗದೆ ಇದ್ದ ಪರಿಣಾಮ ರಸ್ತೆ ತುಂಬಾ‌ ಕೆಸರು ತುಂಬಿಕೊಂಡಿದೆ. ಅಲ್ಲಲ್ಲಿ ಉಂಟಾದ ಗುಂಡಿಯಿಂದ ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗುತ್ತಿಲ್ಲ. ಮೇ.13 ರಂದು ಬೆಳಿಗ್ಗೆಯಿಂದಲೇ ಕುದ್ರೆಬೆಟ್ಟುವಿನಿಂದ ನರಹರಿ ವರೆಗೂ ಟ್ರಾಫಿಕ್ ಜಾಮ್

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಸ್ತೆ: ಸಂಚಾರ ಅಸ್ತವ್ಯಸ್ತ Read More »