Editor

ಕಲಬುರಗಿ: ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದು

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಕುರಿತು ಸಂಶೋಧನೆ ನಡೆಸಿರುವ ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧಕರು ಹಲವು ಮಹತ್ವದ ಸಂಗತಿಗಳನ್ನು ಕಂಡುಕೊಂಡಿದ್ದಾರೆ. ಲಮಾಣಿ, ಲಂಬಾಡಿ, ಬಂಜಾರಿ (ಬಂಜಾರ), ಸುಗಾಲಿ ಎಂಬ ವಿವಿಧ ಹೆಸರುಗಳಿಂದ ಕರೆಯಲಾಗುವ ಈ ಭಾಷೆಯನ್ನು ಮಾತನಾಡುವವರ ಪೈಕಿ ಶೇ 20ರಷ್ಟು ಭಾಷಿಕರು ಕರ್ನಾಟಕದಲ್ಲಿಯೇ ಇದ್ದಾರೆ. ಸ್ವಂತ […]

ಕಲಬುರಗಿ: ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದು Read More »

ಕಲಬುರಗಿ: ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ ಸಲ್ಲಿಸಿದ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್‌ : ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಸರಳ ಮತ್ತು ಸಂಕೇತವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಗತ್ತ್ ವೃತ್ತದಲ್ಲಿರುವ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ಕಲಬುರಗಿ ಶಹಾಬಜಾರ ಸಾರಂಗಮಠ, ಶ್ರೀಶೈಲ ಹಾಗೂ ಸುಲಫಲಮಠ, ಜಗದ್ಗುರು, ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಷಟಸ್ಥಲ ಧ್ವಜಾರೋಹಣ

ಕಲಬುರಗಿ: ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ ಸಲ್ಲಿಸಿದ ಜಿಲ್ಲಾಧಿಕಾರಿ Read More »

ಪ್ರಜ್ವಲ್ ರೇವಣ್ಣರನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ಬಹುಮಾನ ಘೋಷಣೆ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ.ಬಹುಮಾನ ನೀಡುವುದಾಗಿ ಜನತಾ ಪಕ್ಷ ಘೋಷಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪಕ್ಷ, ಈ ಘೋಷಣೆಯ ನೋಟಿಸ್‌ ಅನ್ನು ಬೆಂಗಳೂರಿನಲ್ಲಿ ವಿವಿಧಡೆ ಅಂಟಿಸಲು ಮುಂದಾಗಿದೆ. ರೆಡ್ಡಿ ಪೆಟ್ರೋಲ್‌ ಬಂಕ್‌ನಿಂದ ಶಿವಾನಂದ ಸರ್ಕಲ್‌, ಚಾಲುಕ್ಯ ಸರ್ಕಲ್‌, ಎಂ.ಎಸ್‌.ಬಿಲ್ಡಿಂಗ್‌, ಕೆ.ಆರ್‌.ಸರ್ಕಲ್‌, ಫ್ರೀಡಂ ಪಾರ್ಕ್‌, ಮೌರ್ಯ

ಪ್ರಜ್ವಲ್ ರೇವಣ್ಣರನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ಬಹುಮಾನ ಘೋಷಣೆ Read More »

ಚಿತ್ರದುರ್ಗ: ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿಗೆ ವಾಂತಿ, ಭೇದಿ

ಸಮಗ್ರ ನ್ಯೂಸ್‌ : ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ಬ್ಬಾಳ ಗ್ರಾಮದಲ್ಲಿ ಕಾಲ್ಗೆರೆ ಗ್ರಾಮದ ಸಣ್ಣರುದ್ರಪ್ಪ ಎಂಬುವರ ಮಗಳ ಮದುವೆ ಸಮಾರಂಭ ನಡೆದಿತ್ತು. ಹೆಬ್ಬಾಳು ಮಠದಲ್ಲಿ ಆಯೋಜಿಸಿದ್ದ ಮದುವೆಗೆ ಬಂದಿದ್ದ ಸಂಬಂಧಿಕರು, ನೆಂಟರು, ಸ್ನೇಹಿತರು ಭರ್ಜರಿ ಮದುವೆ ಊಟವನ್ನು ಮಾಡಿದರು.ಮದುವೆ ಊಟ ಮಾಡಿದವರಲ್ಲಿ ಸಂಜೆ ವೇಳೆ ಎಲ್ಲರೂ ವಾಂತಿ, ಭೇದಿ ಜತೆಗೆ ಸುಸ್ತು ಕಾಣಿಸಿಕೊಂಡಿದೆ. ಅನಾರೋಗ್ಯ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

ಚಿತ್ರದುರ್ಗ: ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿಗೆ ವಾಂತಿ, ಭೇದಿ Read More »

ಹತ್ತನೇ ತರಗತಿ ಹುಡುಗಿಯ ರುಂಡ ಕತ್ತರಿಸಿದಾತ ಅರೆಸ್ಟ್

ಸಮಗ್ರ ನ್ಯೂಸ್: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದು ರಾಜ್ಯವೇ ಬೆಚ್ಚಿ ಬಿದ್ದಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಮೀನಾಳನ್ನು ಕೊಲೆ ಮಾಡಿದ್ದ ಆರೋಪಿ ಪ್ರಕಾಶ್‌ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕಾಶ್‌ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಸೋಮವಾರಪೇಟೆ ಠಾಣೆಗೆ ಪೊಲೀಸರು ಕರೆ ತರುತ್ತಿದ್ದಾರೆ.

ಹತ್ತನೇ ತರಗತಿ ಹುಡುಗಿಯ ರುಂಡ ಕತ್ತರಿಸಿದಾತ ಅರೆಸ್ಟ್ Read More »

ಮಹಿಳೆ‌ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್

ಸಮಗ್ರ ನ್ಯೂಸ್: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಈತ ಪ್ರಮುಖ ಮಾಹಿತಿದಾರರಾದ್ದರಿಂದ ಅದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡ, ಹಾಸನದಿಂದ

ಮಹಿಳೆ‌ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್ Read More »

ಕಡಬ: ಸ್ವಾವಲಂಬಿ ಹೆಜ್ಜೆ ಇರಿಸಿದ್ದ ಎಂಡೋ ಪೀಡಿತ ಯುವಕ ಸಾವು

ಸಮಗ್ರ ನ್ಯೂಸ್: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಎಂಡೋ ಪೀಡಿತ ಯುವಕ ತನ್ನ ಮೂಗಿನ ಶಸ್ತ್ರಚಿಕಿತ್ಸೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಇಲ್ಲಿನ ಪಲ್ಲತ್ತಡ್ಕ ನಿವಾಸಿ ಭಾಸ್ಕರ ಗೌಡ ಹಾಗೂ ರೇವತಿ ದಂಪತಿಯ ಪುತ್ರ ಮನೋಜ್‌(24) ಮೃತಪಟ್ಟವರು. ಮನೋಜ್‌ಗೆ ಮೂಗಿನಲ್ಲಿ ದುರ್ಮಾಂಸ ಬೆಳೆದು ಆಗಾಗ ತೊಂದರೆ ಉಂಟಾಗುತ್ತಿತ್ತು. ಇದೇ ಕಾರಣಕ್ಕೆ ಏಳು ಬಾರಿ ಶಸ್ತ್ರ ಚಿಕಿತ್ಸೆ ನಡೆಸಿ ಫಲಕಾರಿಯಾಗಿತ್ತು. ಲವಲವಿಕೆಯಿಂದ ಇದ್ದ ಈತನಿಗೆ ಇತ್ತೀಚೆಗೆ ಮತ್ತೆ ಮೂಗಿನಲ್ಲಿ ದುರ್ಮಾಂಸ ಬೆಳೆದಾಗ ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಕಡಬ: ಸ್ವಾವಲಂಬಿ ಹೆಜ್ಜೆ ಇರಿಸಿದ್ದ ಎಂಡೋ ಪೀಡಿತ ಯುವಕ ಸಾವು Read More »

ಹವಾಮಾನ ವರದಿ| ಚಂಡಮಾರುತ ಪರಿಣಾಮ; ಭಾರೀ ಮಳೆ ಸಾಧ್ಯತೆ| ರಾಜ್ಯದ 23 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ ಸಂಭವಿಸುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿಯೊಂದಿಗೆ ಮಳೆಯಾಗಲಿದ್ದು, ಪ್ರತೀ ಗಂಟೆಗೆ ಗಾಳಿಯು 40-50 ಕಿ.ಮೀ. ವೇಗದಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಚಾಮರಾಜನಗರ, ಮಂಡ್ಯ, ರಾಮನಗರ,

ಹವಾಮಾನ ವರದಿ| ಚಂಡಮಾರುತ ಪರಿಣಾಮ; ಭಾರೀ ಮಳೆ ಸಾಧ್ಯತೆ| ರಾಜ್ಯದ 23 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಸೋಶಿಯಲ್ ಮೀಡಿಯಾದಲ್ಲಿ ಪೆನ್ ಡ್ರೈವ್ ವಿಡಿಯೋ ಹಂಚಿಕೊಂಡಾತ ಈಗ ಪೊಲೀಸ್ ಅತಿಥಿ!!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವುದರ ಮೇಲೆಯೂ ಹದ್ದಿನ ಕಣ್ಣಿಡಲಾಗಿದೆ. ಈಗ ಚಿಕ್ಕಮಗಳೂರಿನಲ್ಲಿ ಯುವ ಪ್ರಜ್ವಲ್ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬೆನ್ನಲ್ಲಿಯೇ ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಹಿಂದೆ ಅಶ್ಲೀಲ ವಿಡಿಯೋ ನೋಡುವುದಕ್ಕೆ ಹಂಚಿಕೆ ಮಾಡುವುದಕ್ಕೆ ಕಾನೂನಿನಲ್ಲಿ ಹೆಚ್ಚಿನ ನಿರ್ಬಂಧ ಇರಲಿಲ್ಲ. ಆದರೆ, ಬೇರೊಬ್ಬರ ಮಾನಹಾನಿ ಮಾಡುವುದಕ್ಕೆ ಯಾವುದೇ ಅವಕಾಶವಿಲ್ಲ. ಇತ್ತೀಚೆಗೆ

ಸೋಶಿಯಲ್ ಮೀಡಿಯಾದಲ್ಲಿ ಪೆನ್ ಡ್ರೈವ್ ವಿಡಿಯೋ ಹಂಚಿಕೊಂಡಾತ ಈಗ ಪೊಲೀಸ್ ಅತಿಥಿ!! Read More »

ಬೆಳಗಾವಿಯಲ್ಲಿ ಅಪಘಾತ; ತಮಿಳು ಕಾರ್ಮಿಕ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ದುರ್ಮರಣ

ಸಮಗ್ರ ನ್ಯೂಸ್: ತಮಿಳು ಕಾರ್ಮಿಕ ಮುಖಂಡ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಇಂದು ಬೆಳಗಾವಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ತುರ್ತು ಕೆಲಸದ ನಿಮಿತ್ತ ಬೆಳಗಾವಿಗೆ ತೆರಳಿದ್ದ ಶಿವಕುಮಾರ್, ಬೆಳಗಾವಿಯ ಖಾನಾಪುರ ಎಂಬಲ್ಲಿ ಇವರು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ತಮಿಳು ಮುಖಂಡರಾಗಿ ಕಾಂಗ್ರೆಸ್ ಕಾರ್ಮಿಕ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಇವರ ಅಗಲಿಕೆಯು ಇದೀಗ ತಮಿಳು ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.

ಬೆಳಗಾವಿಯಲ್ಲಿ ಅಪಘಾತ; ತಮಿಳು ಕಾರ್ಮಿಕ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ದುರ್ಮರಣ Read More »