ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ| ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ
ಸಮಗ್ರ ನ್ಯೂಸ್: ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬಿಕನಹಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಯುವಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಮೇ.18ರಂದು ಬಿಡದಿಯ ನುರಿತ ಶಿಲ್ಪಿಯಿಂದ ಗ್ರಾಮದಲ್ಲಿ ನಿರ್ಮಾಣಗೊಂಡಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮಂಗಳವಾರ ತಡರಾತ್ರಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣನ ಕತ್ತಿ, ಕೈ, ಕಾಲು ಸೇರಿದಂತೆ ವಿವಿಧ ಭಾಗದಲ್ಲಿ ಹಾನಿಗೊಳಿಸಿ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿರುವ ಘಟನೆ ನಡೆದಿದೆ. ಘಟನೆಯ ಕುರಿತು ಮಾತನಾಡಿದ ಗ್ರಾಮದ ಮುಖಂಡ ಬಿಕನಹಳ್ಳಿ ಗ್ರಾಮದ ಹಿರೇಗೌಡ ಸರ್ವ ಸಮುದಾಯ ನಾಯಕ ಮತ್ತು […]










