108 ಅಂಬ್ಯುಲೆನ್ಸ್ ಸೇವೆ ಸಿಬ್ಬಂದಿ ಮುಷ್ಕರ ಅಂತ್ಯ| ಆರೋಗ್ಯ ಇಲಾಖೆಯಿಂದ ವೇತನ ಬಾಕಿಇಲ್ಲ ಎಂದು ಸ್ಪಷ್ಟನೆ ನೀಡಿದ ಆಯುಕ್ತರು
ಸಮಗ್ರ ನ್ಯೂಸ್: ಮೂರು ತಿಂಗಳ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ 108 ಆರೋಗ್ಯ ಕವಚದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಂಬ್ಯುಲೆನ್ಸ್ ಸಿಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಮಂಗಳವಾರ ಕೈ ಬಿಟ್ಟಿದ್ದಾರೆ. ಆರೋಗ್ಯ ಇಲಾಖೆ ಆಯುಕ್ತ ಡಾ| ರಣದೀಪ್ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108 ಸಿಬಂದಿ, ತಮ್ಮ ಸಮಸ್ಯೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಪ್ರತಿಯಾಗಿ ಸರಕಾರದ ನಿಲುವನ್ನು ಪ್ರತಿಪಾದಿಸಿದ ಆಯುಕ್ತರು, ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ. ಸಿಬಂದಿಗೆ ವೇತನ ಪಾವತಿ ಮಾಡಬೇಕಿರುವ ಜಿವಿಕೆ […]










