Editor

ಪೆನ್ ಡ್ರೈವ್ ಕಾಮಕಾಂಡ| ಬಂಧನ ಭೀತಿಯಲ್ಲಿ ಪ್ರಜ್ವಲ್| ಎಸ್ಐಟಿ ನಿಂದ ಲುಕ್ ಔಟ್ ನೋಟೀಸ್

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುವ‌ ಮುನ್ನವೇ ಪ್ರಜ್ವಲ್‌ ರೇವಣ್ಣ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ. ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ […]

ಪೆನ್ ಡ್ರೈವ್ ಕಾಮಕಾಂಡ| ಬಂಧನ ಭೀತಿಯಲ್ಲಿ ಪ್ರಜ್ವಲ್| ಎಸ್ಐಟಿ ನಿಂದ ಲುಕ್ ಔಟ್ ನೋಟೀಸ್ Read More »

ಚಾಮರಾಜನಗರ: ಸಾರಿಗೆ ಬಸ್‌ ತಡೆದುವಿದ್ಯಾರ್ಥಿಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್‌ : ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜುಗಳಿಗೆ ತೆರಳಲು ಸಕಾಲದಲ್ಲಿ ಬಸ್ ಸೌಲಭ್ಯವಿಲ್ಲ ಎಂದು ಹಲವಾರು ಭಾರಿ ಅಧಿಕಾರಿಗಳಿಗೆ ದೂರು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು

ಚಾಮರಾಜನಗರ: ಸಾರಿಗೆ ಬಸ್‌ ತಡೆದುವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಉಡುಪಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಸಮಗ್ರ ನ್ಯೂಸ್‌ : ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಉದ್ಯಮಿ, ಸಮಾಜ ಸೇವಕ ಪ್ರಶಾಂತ್ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಮೇ 1ರಂದು ಹೊನ್ನಾವರದಲ್ಲಿ ಈ ಘಟನೆ ನಡೆದಿದೆ. ಹೊನ್ನಾವರ ತಲುಪಿದಾಗ ಪ್ರಶಾಂತ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಕಂಡಕ್ಟರ್‌ಗೆ ವಿಷಯ ತಿಳಿಸಿದರು. ಕೂಡಲೇ ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

ಉಡುಪಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು Read More »

ಪಾಕ್‍ನಲ್ಲಿ ತೀವ್ರ ಆರ್ಥಿಕ ಮುಗ್ಗಟ್ಟು/ ಒಂದು ಕೇಜಿ ಗೋಧಿ ಹಿಟ್ಟಿನ ಬೆಲೆ ರೂ. 800

ಸಮಗ್ರ ನ್ಯೂಸ್: ಪಾಕಿಸ್ತಾನ ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಇದೀಗ 1 ಕೇಜಿ ಗೋಧಿ ಹಿಟ್ಟಿನ ಬೆಲೆ 800 ರು. ದಾಟಿದ್ದು, ಒಂದು ರೊಟ್ಟಿ 25 ರು.ಗಿಂತ ಕಮ್ಮಿಗೆ ಸಿಗುತ್ತಿಲ್ಲ. ಅಲ್ಲದೆ ಬಾಳೆಹಣ್ಣು ಬೆಲೆ ಕೂಡ 200 ರು. ಗಡಿ ದಾಟಿದೆ. ಹೀಗಾಗಿ ಬೆಲೆ ನಿಯಂತ್ರಣ ಹಾಗೂ ಆಹಾರ ಪೆÇೀಲು ನಿಯಂತ್ರಣ ಉದ್ದೇಶದಿಂದ ಮದುವೆ ತಿನಿಸು ಹಾಗೂ ಭಕ್ಷ್ಯಗಳಿಗೆ ಲಗಾಮು ಹಾಕಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ ವಿಶೇಷವಾಗಿ ಮದುವೆಗಳು ಮತ್ತು ಸಮಾರಂಭಗಳಲ್ಲಿ. ಪಂಜಾಬ್ ಪ್ರಾಂತ್ಯದ

ಪಾಕ್‍ನಲ್ಲಿ ತೀವ್ರ ಆರ್ಥಿಕ ಮುಗ್ಗಟ್ಟು/ ಒಂದು ಕೇಜಿ ಗೋಧಿ ಹಿಟ್ಟಿನ ಬೆಲೆ ರೂ. 800 Read More »

ಹುಬ್ಬಳ್ಳಿ: ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರು

ಸಮಗ್ರ ನ್ಯೂಸ್‌ : ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರುಗಳು ಹಿರೇಮಠದ ದಂಪತಿಗೆ ಸಾಂತ್ವನ ಹೇಳಿದರು. ನಂತರ ಅವರಿಂದ ಪಾದಪೂಜೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಶ್ರೀಗಳು, ನೇಹಾ ಹಿರೇಮಠ ಹತ್ಯೆ ಖಂಡನೀಯ. ಇಂತಹ ನೀಚ ಕೃತ್ಯ ಮಾಡಿದವನಿಗೆ ತಕ್ಕ ಶಿಕ್ಷೆ ನೀಡಬೇಕು. ಪ್ರಕರಣವನ್ನು ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದೆ. ಆದರೆ, ಸಿಐಡಿ ಸಂಸ್ಥೆಯು ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯ ಮಾಡಿದರು.

ಹುಬ್ಬಳ್ಳಿ: ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರು Read More »

ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಗ್‍ಬಾಸ್ ಸ್ಪರ್ಧಿ ಮಂಗಳಮುಖಿ ತಮನ್ನಾ ಸಿಂಹಾದ್ರಿ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಚೈತನ್ಯ ಯುವಜನ ಪಕ್ಷದಿಂದ ಬಿಗ್‍ಬಾಸ್ ಸ್ಪರ್ಧಿ ಮಂಗಳಮುಖಿ ತಮನ್ನಾ ಸಿಂಹಾದ್ರಿ ಕಣಕ್ಕಿಳಿದಿದ್ದಾರೆ. ಜನಸೇನಾ ಪಕ್ಷದ ಅಭ್ಯರ್ಥಿಯಾಗಿ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಇವರಿಗೆ ವಿರುದ್ಧವಾಗಿ ಸ್ಪರ್ಧೆ ಮಾಡುತ್ತಿದ್ದಾರೆ, ಎಸ್‍ಆರ್ ಕಾಂಗ್ರೆಸ್ ಪಕ್ಷದಿಂದ ವಂಗಾ ಗೀತಾ ಅವರು ಸ್ಪರ್ಧೆ ಮಾಡಲಿದ್ದಾರೆ. ಬ್ರಾಹ್ಮಣ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ವೇದ ಶಾಲೆಯನ್ನು ಸ್ಥಾಪಿಸುವ ಜೊತೆಗೆ ಪೀಠಾಪುರಂ ಪಟ್ಟಣವನ್ನು ರಾಷ್ಟ್ರೀಯ ಮಟ್ಟದ ಆಧ್ಯಾತ್ಮಿಕ ಕೇಂದ್ರವನ್ನಾಗಿ ಪರಿವರ್ತಿಸುವ ಗುರಿಯಿಂದ

ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಗ್‍ಬಾಸ್ ಸ್ಪರ್ಧಿ ಮಂಗಳಮುಖಿ ತಮನ್ನಾ ಸಿಂಹಾದ್ರಿ Read More »

ಹೆಚ್ಚಾದ ಉಷ್ಣ ಗಾಳಿ/ ತೆಲಂಗಾಣದಲ್ಲಿ ಮತದಾನದ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್: ಉಷ್ಣಗಾಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ ಲೋಕಸಭಾ ಚುನಾವಣೆಯ ಮತದಾನದ ಅವಧಿಯನ್ನು ಚುನಾವಣಾ ಆಯೋಗವು 1 ಗಂಟೆಗಳ ಕಾಲ ವಿಸ್ತರಿಸಿದೆ. ಏಳು ಹಂತದ ಚುನಾವಣೆಯ ನಾಲ್ಕನೇ ಸುತ್ತಿನಲ್ಲಿ ರಾಜ್ಯದ ಎಲ್ಲಾ 17 ಲೋಕಸಭಾ ಕ್ಷೇತ್ರಗಳಿಗೆ ಮೇ 13 ರಂದು ಮತದಾನ ನಡೆಯಲಿದ್ದು, ಹೊಸ ಸಮಯವು ಮುಂಚಿನ 7 ರಿಂದ ಸಂಜೆ 5 ರವರೆಗೆ ಬದಲಾಗಿ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಇರಲಿದೆ. . ವಿಸ್ತ್ರತ ಮತದಾನದ ಸಮಯವು 12 ಲೋಕಸಭಾ ಕ್ಷೇತ್ರಗಳ ಎಲ್ಲಾ

ಹೆಚ್ಚಾದ ಉಷ್ಣ ಗಾಳಿ/ ತೆಲಂಗಾಣದಲ್ಲಿ ಮತದಾನದ ಅವಧಿ ವಿಸ್ತರಣೆ Read More »

ಮೋದಿ ವಿರುದ್ಧ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧೆ

ಸಮಗ್ರ ನ್ಯೂಸ್: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ನರೇಂದ್ರ ಮೋದಿ ಅವರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದೇನೆ. ನಿಮ್ಮಲ್ಲರಿಂದ ನನಗೆ ಸಿಗುತ್ತಿರುವ ಪ್ರೀತಿ, ಬೆಂಬಲದಿಂದ ನಾನು ಉತ್ಸುಕನಾಗಿದ್ದೇನೆ. ನಾಮಪತ್ರ ಸಲ್ಲಿಕೆ ಹಾಗೂ ಮುಂದಿನ ಮಾಹಿತಿಗಳ ಬಗ್ಗೆ ವೀಡಿಯೋ ಸಂದೇಶಗಳ ಮೂಲಕ ನಿಮಗೆ ತಿಳಿಸುತ್ತಿರುತ್ತೇನೆ ಎಂದು ಹೇಳಿದ್ದಾರೆ.

ಮೋದಿ ವಿರುದ್ಧ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧೆ Read More »

ಶಾಸ್ತ್ರಗಳನ್ನು ಪೂರೈಸದ ಮದುವೆಗೆ ಮಾನ್ಯತೆ ಇಲ್ಲ/ ಸ್ಪಷ್ಟಪಡಿಸಿದ ಸುಪ್ರೀಂ

ಸಮಗ್ರ ನ್ಯೂಸ್: ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೂರೈಸದೆ ನಡೆಸುವ ಮದುವೆಗೆ ಕಾನೂನಿನ ಮಾನ್ಯತೆಯೇ ಇಲ್ಲ. ಅಲ್ಲದೆ ಇಂಥ ಆಚರಣೆಗಳಿಲ್ಲದೆ ಮಾಡಿಸುವ ಮದುವೆ ನೋಂದಣಿ ಕೂಡಾ ಮದುವೆಗೆ ಮಾನ್ಯತೆ ದೊರಕಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾ.ಅಗಾಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠ ಈ ಮಹತ್ವದ ತೀರ್ಪು ನೀಡಿದೆ. ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕøತಿ ಸಂಸ್ಕಾರ ಎಂಬುದು

ಶಾಸ್ತ್ರಗಳನ್ನು ಪೂರೈಸದ ಮದುವೆಗೆ ಮಾನ್ಯತೆ ಇಲ್ಲ/ ಸ್ಪಷ್ಟಪಡಿಸಿದ ಸುಪ್ರೀಂ Read More »

ಆಂಧ್ರಪ್ರದೇಶ: ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನ

ಸಮಗ್ರ ನ್ಯೂಸ್‌ : ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿದೆ. ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಬೀಗಗಳು ಇದ್ದಂತೆಯೇ ಇದ್ದುದ್ದರಿಂದ ಇದು ಹೊರಗಿನವರ ಕೆಲಸವಲ್ಲ, ಠಾಣೆಯ ಒಳಗಿನವರ ಕೆಲಸ ಎಂದು ಸ್ಪಷ್ಟವಾಗಿದೆ. ಈ ವೇಳೆ ತನಿಖೆ ನಡೆಸಿದಾಗ ಬೀರುವಿನಲ್ಲಿದ್ದ ಹಣವನ್ನು ಗೃಹರಕ್ಷಕ ದಳದ

ಆಂಧ್ರಪ್ರದೇಶ: ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನ Read More »