Editor

ದೇಶದಲ್ಲಿ ತಪ್ಪಿದ ಭಾರೀ ವಿಧ್ವಂಸಕ ಕೃತ್ಯ| 300 ಕೆಜಿ RDX , AK 47 ವಶಕ್ಕೆ

ಸಮಗ್ರ ನ್ಯೂಸ್: ಬಂಧಿತ ಕಾಶ್ಮೀರಿ ವೈದ್ಯನೊಬ್ಬ ನೀಡಿದ ಮಾಹಿತಿಯ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರಿದಾಬಾದ್‌ನಲ್ಲಿ 300 ಕಿಲೋಗ್ರಾಂಗಳಷ್ಟು ಆರ್‌ಡಿಎಕ್ಸ್, ಒಂದು ಎಕೆ -47 ರೈಫಲ್ ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ವಿಚಾರಣೆಯ ಸಮಯದಲ್ಲಿ ಡಾ. ಆದಿಲ್ ಅಹ್ಮದ್ ರಾಥರ್ ನೀಡಿದ ಮಾಹಿತಿಯ ಆಧಾರದ ಮೇಲೆ ಈ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮೊದಲು, ಪೊಲೀಸರು ಕಾಶ್ಮೀರ ಕಣಿವೆಯಲ್ಲಿ ವೈದ್ಯರಿಗೆ ಸೇರಿದ ಲಾಕರ್‌ನಿಂದ ಎಕೆ -47 ರೈಫಲ್ ಮತ್ತು ಇತರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು. ಪ್ರಸ್ತುತ ಜಮ್ಮು […]

ದೇಶದಲ್ಲಿ ತಪ್ಪಿದ ಭಾರೀ ವಿಧ್ವಂಸಕ ಕೃತ್ಯ| 300 ಕೆಜಿ RDX , AK 47 ವಶಕ್ಕೆ Read More »

ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರದಿಂದ ಬ್ರೇಕ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಎತ್ತಿನಹೊಳೆ ಏತ ನೀರಾವರಿ ಯೋಜನೆ ಹಾಗೂ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ತಡೆ ಹಿಡಿದಿದೆ. ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ 2,000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗಾಗಿ ಸುಮಾರು 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರವು ತಡೆಹಿಡಿದು ಆದೇಶ ಹೊರಡಿಸಿದೆ. ಯೋಜನೆಯ ಸದಸ್ಯರು ಗಂಭೀರ ಪರಿಸರ ಕಾಳಜಿಗಳನ್ನು ಮತ್ತು ಅರಣ್ಯ

ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರದಿಂದ ಬ್ರೇಕ್ Read More »

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ (DKWJA) 2025-28ರ ಸಾಲಿಗಾಗಿ ನಡೆದ ಚುನಾವಣೆಯಲ್ಲಿ, ವಾರ್ತಾಭಾರತಿ ಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಆಗಿರುವ ಪುಷ್ಪರಾಜ್ ಬಿ.ಎನ್. ಅವರು ನೂತನ ಅಧ್ಯಕ್ಷರಾಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಪುಷ್ಪರಾಜ್ ಅವರು ಒಟ್ಟು 187 ಮತಗಳನ್ನು ಪಡೆದು, ತಮ್ಮ ಪ್ರತಿಸ್ಪರ್ಧಿ, ವಿಜಯವಾಣಿ ವರದಿಗಾರ ಶ್ರವಣ್ ಕುಮಾರ್ ನಾಳ (144 ಮತಗಳು) ಅವರನ್ನು ಸೋಲಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಸುಮಾರು

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ Read More »

‘ಮಹಾನಟಿ – ಸೀಸನ್ 2’ ವಿನ್ನರ್ ಆದ ಮಂಗಳೂರಿನ ವಂಶಿ ರತ್ನಕುಮಾರ್

ಸಮಗ್ರ ನ್ಯೂಸ್: ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಮಹಾನಟಿ ಸೀಸನ್ 2’ನ ವಿನ್ನರ್ ಆಗಿ ಮಂಗಳೂರಿನ ವಂಶಿ ಹೊರ ಹೊಮ್ಮಿದ್ದಾರೆ. ಕಳೆದ ಕೆಲ ತಿಂಗಳಿಂದ ತಮ್ಮ ನಟನಾ ಪ್ರತಿಭೆಯನ್ನು ತೋರಿಸುತ್ತಾ ಬರುತ್ತಿದ್ದ ಅವರು, ಈಗ ಕಪ್ ಗೆದ್ದಿದ್ದಾರೆ. ಬೆಳಗಾವಿಯ ವರ್ಷಾ ಡಿಗ್ರಜೆ ಅವರು ಮೊದಲ ರನ್ನರ್ ಅಪ್ ಆದರು. ವಿನ್ ಆದ ಬಳಿಕ ಮಾತನಾಡಿದ ವಂಶಿ ಅವರು, ‘ತುಂಬಾ ಖುಷಿ ಆಗ್ತಿದೆ. ಬಿ ಸರೋಜಾ ದೇವಿ ಅವರನ್ನು ನೋಡಿಲ್ಲ ನಾನು. ಆದರೆ, ಅವರ ನಟನೆಯನ್ನು ನೋಡಿಕೊಂಡು ಬಂದಿದ್ದೇನೆ.

‘ಮಹಾನಟಿ – ಸೀಸನ್ 2’ ವಿನ್ನರ್ ಆದ ಮಂಗಳೂರಿನ ವಂಶಿ ರತ್ನಕುಮಾರ್ Read More »

ಕರ್ನಾಟಕ, ತಮಿಳುನಾಡಿಗೆ ಖಾಸಗಿ ಬಸ್ ಸಂಚಾರ ಸ್ಥಗಿತಕ್ಕೆ ಕೇರಳ‌ ಬಸ್ ಮಾಲೀಕರ ನಿರ್ಧಾರ

ಸಮಗ್ರ ನ್ಯೂಸ್: ಕೇರಳದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಐಷಾರಾಮಿ ಬಸ್ ಮಾಲೀಕರ ಸಂಘ ಭಾನುವಾರ ಪ್ರಕಟಿಸಿದೆ. ಕೇರಳದಿಂದ ತಮಿಳುನಾಡು ಮತ್ತು ಕರ್ನಾಟಕಕ್ಕೆ ಅಂತರರಾಜ್ಯ ಪ್ರವಾಸಿ ಬಸ್ ಸೇವೆಗಳನ್ನು ಸೋಮವಾರ ಸಂಜೆ 6 ಗಂಟೆಯಿಂದ ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್ ಮಾಲೀಕರ ಸಂಘ, ಕೇರಳ ರಾಜ್ಯ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ. ನೆರೆಯ ರಾಜ್ಯಗಳು ಭಾರಿ ದಂಡ ವಿಧಿಸಲು, ಕಾನೂನುಬಾಹಿರ ರಾಜ್ಯ ಮಟ್ಟದ ತೆರಿಗೆಗಳನ್ನು ವಿಧಿಸಲು ಮತ್ತು ಕೇರಳ ನಿರ್ವಾಹಕರಿಗೆ ಸೇರಿದ ಅಖಿಲ ಭಾರತ

ಕರ್ನಾಟಕ, ತಮಿಳುನಾಡಿಗೆ ಖಾಸಗಿ ಬಸ್ ಸಂಚಾರ ಸ್ಥಗಿತಕ್ಕೆ ಕೇರಳ‌ ಬಸ್ ಮಾಲೀಕರ ನಿರ್ಧಾರ Read More »

ಸಲಿಂಗ ಕಾಮಕ್ಕೆ ಅಡ್ಡಿಯಾದ ಮಗುವನ್ನೇ ಕೊಂದ ತಾಯಿ

ಸಮಗ್ರ ನ್ಯೂಸ್: ಇಬ್ಬರು ಯುವತಿಯರು ತಮ್ಮ ಸಲಿಂಗ ಕಾಮದಾಟಕ್ಕೆ ಮಗು ಅಡ್ಡಿಯಾದೀತೆಂದು ಅದನ್ನು ಕೊಂದು ಹಾಕಿರುವ ಘಟನೆ ತಮಿಳುನಾಡು ಗಡಿ ತಾಲ್ಲೂಕಾದ ಕೆಳಮಂಗಳದಲ್ಲಿ ನಡೆದಿದೆ. ಈ ಕೃತ್ಯವು ಇವರ ನಡುವೆ ನಡೆದ ಮೊಬೈಲ್‌ ಚಾಟ್‌ ಮೂಲಕ ಹೊರಬಿದ್ದಿದೆ. ಚಿನ್ನಟ್ಟಿ ನಿವಾಸಿಗಳಾದ ಭಾರತಿ (26) ಮತ್ತು ಸುಮಿತ್ರಾ (22) ಇಬ್ಬರೂ ಪರಸ್ಪರ ಸಂಬಂಧ ಹೊಂದಿದ್ದರು. ಭಾರತಿಗೆ ಸುರೇಶ್‌ ಎಂಬಾತನೊಡೆನ ವಿವಾಹವಾಗಿದ್ದು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವಿತ್ತು. ಸುರೇಶ್‌ ಮನೆಯಲ್ಲಿ ಇಲ್ಲದಾಗ ಇಬ್ಬರ ಕಾಮದಾಟ ನಡೆಯುತ್ತಿತ್ತು.

ಸಲಿಂಗ ಕಾಮಕ್ಕೆ ಅಡ್ಡಿಯಾದ ಮಗುವನ್ನೇ ಕೊಂದ ತಾಯಿ Read More »

ರೈತರ ಹೋರಾಟಕ್ಕೆ ‌ಮಣಿದ‌ ಸರ್ಕಾರ| ಟನ್ ಗೆ ₹3300 ನಿಗದಿ| ಹೋರಾಟಗಾರರಿಂದ ಸಂಭ್ರಮಾಚರಣೆ

ಸಮಗ್ರ ನ್ಯೂಸ್: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.

ರೈತರ ಹೋರಾಟಕ್ಕೆ ‌ಮಣಿದ‌ ಸರ್ಕಾರ| ಟನ್ ಗೆ ₹3300 ನಿಗದಿ| ಹೋರಾಟಗಾರರಿಂದ ಸಂಭ್ರಮಾಚರಣೆ Read More »

ಮಂಗಳೂರು: ಉದ್ಯಮಿಯ ಪುತ್ರನ ಶವ ನದಿ ತೀರದಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಖ್ಯಾತ ಉದ್ಯಮಿಯ ಪುತ್ರ ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಆಳ್ವ (29) ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ತಿಳಿದು ಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಲಿ ತಾಲೂಕಿನ ಬಪ್ಪನಾಡು ಬಳಿ ಈ ಘಟನೆ ನಡೆದಿದೆ. ಈತ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಉದ್ಯಮಿ ನವೀನ್ ಚಂದ್ರ ಆಳ್ವಾ ಪುತ್ರ ಅಭಿಷೇಕ್ ಮೃತಪಟ್ಟ ಯುವಕ. ನ.5 ರಂದು ಮೂಲ್ಕಿ

ಮಂಗಳೂರು: ಉದ್ಯಮಿಯ ಪುತ್ರನ ಶವ ನದಿ ತೀರದಲ್ಲಿ ಪತ್ತೆ Read More »

ಬೆಳಗಾವಿ: ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ| ರಾ.ಹೆದ್ದಾರಿ ತಡೆದು ಪ್ರತಿಭಟನೆ| ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಬೆಳಗಾವಿಯ ಹತ್ತರಗಿ ಬಳಿ ರೈತರು ಉಗ್ರ ಸ್ವರೂಪದ ಹೋರಾಟ ನಡೆಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ದಿಢೀರ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತರಗಿ ಬಳಿ ಹೆದ್ದಾರಿಯಲ್ಲಿ ಬೀಡು ಬಿಟ್ಟಿರುವ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಸಿದ್ದರು. ಆದರೆ ಹೆದ್ದರೈ ಬಂದ್ ಮಾಡದಂತೆ ಪೊಲೀಸರು ಪ್ರತಿಭಟನಾಕಾರರ

ಬೆಳಗಾವಿ: ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ| ರಾ.ಹೆದ್ದಾರಿ ತಡೆದು ಪ್ರತಿಭಟನೆ| ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಲ್ಲು ತೂರಾಟ Read More »

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ| ಪೋಕ್ಸೊ ಪ್ರಕರಣ ದಾಖಲು.

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ‌ ಶ್ರೀಶಾಂತ್ ಪೂಜಾರಿ (20) ಎಂದು ಗುರುತಿಸಲಾಗಿದ್ದು, ಈತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಕಟಪಾಡಿ ಮಣಿಪುರದ ನಿವಾಸಿಯಾಗಿರುವ ಈತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ| ಪೋಕ್ಸೊ ಪ್ರಕರಣ ದಾಖಲು. Read More »