Editor

ಪಾಠ‌ ಹೇಳುವ ಉಪನ್ಯಾಸಕರಿಂದ ವಿದ್ಯಾರ್ಥಿನಿಯ ಅತ್ಯಾಚಾರ| ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಬೆಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಬೆಂಗಳೂರು ಮೂಲದ ವಿದ್ಯಾರ್ಥಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದು, ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಸೇರಿದಂತೆ ಆಕೆಯ ಪೋಷಕರು ಈ ಕುರಿತಂತೆ ಮಹಿಳಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿ ಉಪನ್ಯಾಸಕರಾದ ನರೇಂದ್ರ, ಸಂದೀಪ್ ಮತ್ತು ಸ್ನೇಹಿತ ಅನೂಪ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಘಟನೆಯ ಹಿನ್ನೆಲೆ: ವಿದ್ಯಾರ್ಥಿನಿ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ […]

ಪಾಠ‌ ಹೇಳುವ ಉಪನ್ಯಾಸಕರಿಂದ ವಿದ್ಯಾರ್ಥಿನಿಯ ಅತ್ಯಾಚಾರ| ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಬೆಂಗಳೂರಿನಲ್ಲಿ ಅರೆಸ್ಟ್ Read More »

ಎರಡು ಶತಮಾನ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ!!

ಸಮಗ್ರ ವಿಶೇಷ: ಭಾರತವನ್ನು ಸುಮಾರು 200 ವರ್ಷಗಳ ಕಾಲ ಆಳಿದ್ದ ಈಸ್ಟ್ ಇಂಡಿಯಾ ಕಂಪನಿ ಈಗ ಯಾರ ವಶದಲ್ಲಿದೆ ಎಂಬುದು ಹಲವರಿಗೆ ಕುತೂಹಲ ಮೂಡಿಸುವ ವಿಚಾರ. ಬ್ರಿಟಿಷ್ ಸಾಮ್ರಾಜ್ಯದ ಪತನದ ನಂತರ ಈ ವಿಶ್ವವನ್ನೇ ಆಳಿದ ವ್ಯಾಪಾರ ಕಂಪನಿಗೆ ಏನಾಯಿತು? ಅದರ ಪ್ರಸ್ತುತ ಮಾಲೀಕರು ಯಾರು? ಇಲ್ಲಿದೆ ಈ ಕುತೂಹಲಕಾರಿ ಇತಿಹಾಸ ಮತ್ತು ವರ್ತಮಾನದ ಮಾಹಿತಿ. ಈಸ್ಟ್ ಇಂಡಿಯಾ ಕಂಪನಿಯನ್ನು 1600ರ ಡಿಸೆಂಬರ್ 31 ರಂದು ಇಂಗ್ಲೆಂಡ್‌ನಲ್ಲಿ ಬ್ರಿಟಿಷ್ ಸಾಮ್ರಾಜ್ಞಿಯ ವಿಶೇಷ ಸನ್ನದಿನೊಂದಿಗೆ ವ್ಯಾಪಾರ ಕಂಪನಿಯಾಗಿ ಸ್ಥಾಪಿಸಲಾಯಿತು.

ಎರಡು ಶತಮಾನ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ!! Read More »

ಧರ್ಮಸ್ಥಳದ ಸುತ್ತಮುತ್ತಲಿನ ಸಾವುಗಳ ಕುರಿತು ತನಿಖೆಗೆ ಎಸ್ಐಟಿ ರಚಿಸಿ| ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲು ಸಂಭವಿಸಿರುವ ಎನ್ನಲಾದ ಸಾವುಗಳ ಆರೋಪಗಳಿಗೆ ಸಂಬಂಧಿಸಿ ಕೂಲಂಕಷ ತನಿಖೆಗೆ ಎಸ್​​​ಐಟಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹಲವು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರನೋರ್ವ ನೀಡಿರುವ ಹೇಳಿಕೆಗಳ ಆಧಾರದಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇದಲ್ಲದೇ ಕಳೆದ 20 ವರ್ಷಗಳ ಈ ವ್ಯಾಪ್ತಿಯಲ್ಲಿ

ಧರ್ಮಸ್ಥಳದ ಸುತ್ತಮುತ್ತಲಿನ ಸಾವುಗಳ ಕುರಿತು ತನಿಖೆಗೆ ಎಸ್ಐಟಿ ರಚಿಸಿ| ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ Read More »

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ

ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರಕಾರಿ ಬಸ್ ಓಡಾಡಕ್ಕೆ ಸೋಮವಾರ ಪುತ್ತೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ತಡೆರಹಿತ ಬಸ್‍ಗೆ ಚಾಲನೆ ನೀಡಿದರು. ಪುತ್ತೂರು-ಮಂಗಳೂರು ನಡುವೆ ತಡೆರಹಿತವಾಗಿ ಪ್ರತಿದಿನ 7 ಬಸ್ಸುಗಳು 29 ಟ್ರಿಪ್‍ಗಳ ಸಂಚಾರ ನಡೆಸಲಿದೆ. ಪುತ್ತೂರು ಮಂಗಳೂರು ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚರಿಸಲಿದ್ದು, ಅತಿ ಕಡಿಮೆ ಅವಧಿಯಲ್ಲಿ ತಲುಪಲಿದೆ. ಈ ಬಸ್‍ನಲ್ಲಿ ಪ್ರಯಾಣಿಸುವ

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ Read More »

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 2-3 ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಮತ್ತು

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಪುತ್ತೂರು: ಪ್ರಜ್ಞಾ ಆಶ್ರಮದಲ್ಲಿನ ವಿಶೇಷ ಮಕ್ಕಳೊಂದಿಗೆ ಡಾ. ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬ ಆಚರಣೆ 

ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಪುತ್ತೂರಿನ ಬೀರಮಲೆಯ ಪ್ರಜ್ಞಾ ಆಶ್ರಮದಲ್ಲಿ ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದರು. ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ಹಂಚಿ ಆರ್ಥಿಕ ಸಹಾಯ ಮಾಡುವ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಸಂಭ್ರಮಿಸಿ ಆಚರಿಸಿದರು.  ಈ ಸಂಧರ್ಭದಲ್ಲಿ ಉನೈಸ್ , ಪ್ರಹ್ಲಾದ್ ಬೆಳ್ಳಿಪ್ಪಾಡಿ , ಆದ್ಯ ಬ್ಯಾಗ್ಸ್ ಮಾಲಕರಾದ ಅಶೋಕ್ ರಾವ್ ಬಪ್ಪಳಿಗೆ , ಹರೀಶ್ ಬಪ್ಪಳಿಗೆ , ಬ್ರಾಂಡ್ ಬಾಯ್ ಮಾಲಕರಾದ

ಪುತ್ತೂರು: ಪ್ರಜ್ಞಾ ಆಶ್ರಮದಲ್ಲಿನ ವಿಶೇಷ ಮಕ್ಕಳೊಂದಿಗೆ ಡಾ. ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬ ಆಚರಣೆ  Read More »

ಗ್ರಾಮ ಪಂಚಾಯತ್ ಜಾಲ್ಸೂರು, ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ

ಸಮಗ್ರ ನ್ಯೂಸ್:ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವರ ಸಹಭಾಗಿತ್ವದಲ್ಲಿ ನೂತನವಾಗಿ ಬೊಳುಬೈಲಿನಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ಬಸ್ಸು ತಂಗುದಾಣ ಉದ್ಘಾಟನಾ ಕಾರ್ಯಕ್ರಮವು ಜುಲೈ 13ರಂದು ನಡೆಯಿತು. ನವಚೇತನ ಯುವಕ ಮಂಡಲದ ಅಧ್ಯಕ್ಷ  ಪ್ರದೀಪ್ ಬೊಳುಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸಾವಿತ್ರಿ ಗೋಪಾಲ್ ಅಡ್ಕಾರು ವಹಿಸಿದ್ದರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು “ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ

ಗ್ರಾಮ ಪಂಚಾಯತ್ ಜಾಲ್ಸೂರು, ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ Read More »

ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ| ಪ್ರಯಾಣಿಕರೆಲ್ಲ ದುರ್ಮರಣ

ಸಮಗ್ರ ನ್ಯೂಸ್: ಅಹ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ನಡೆದು ಜಾಸ್ತಿ ದಿನ ಕಳೆದಿಲ್ಲ, ಆಗಲೇ ಅದೇ ರೀತಿಯ ಮತ್ತೊಂದು ವಿಮಾನ ದುರಂತ ಲಂಡನ್‌ನಲ್ಲಿ ನಡೆದಿದ್ದು, ವಿಮಾನದಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ. ಲಂಡನ್ ಸೌಥೆಂಡ್‌ವಿಮಾನ ನಿಲ್ದಾಣದಿಂದ ಟೇಕಾಫ್ ಆದ ವಿಮಾನವೂ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ. ಈ ದೃಶ್ಯಗಳು ಕ್ಯಾಮರಾಗಳಲ್ಲಿ ಸೆರೆ ಆಗಿದ್ದು ವೈರಲ್ ಆಗುತ್ತಿದೆ. ಬೀಚ್‌ಕ್ರಾಫ್ಟ್ ಬಿ200 ಎಂಬ ಪ್ರಯಾಣಿಕ ವಿಮಾನವೂ ಪತನಗೊಂಡಿದ್ದು, ಈಸಿ ಜೆಟ್ ಕಂಪನಿಗೆ ಸೇರಿದ

ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ| ಪ್ರಯಾಣಿಕರೆಲ್ಲ ದುರ್ಮರಣ Read More »

ದಾಂಪತ್ಯಕ್ಕೆ ವಿದಾಯ ಹೇಳಿದ ‌ಸೈನಾ‌ ನೆಹ್ವಾಲ್

ಸಮಗ್ರ ನ್ಯೂಸ್: ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ದೀರ್ಘಕಾಲದ ಸಂಗಾತಿ ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುವ ನಿರ್ಧಾರವನ್ನು ಘೋಷಿಸಿದ್ದಾರೆ. ಸೈನಾ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ನಿರ್ಧಾರವನ್ನು ಸಂಕ್ಷಿಪ್ತ ಹೇಳಿಕೆಯ ಮೂಲಕ ಪ್ರಕಟಿಸಿದರು. ಸುಮಾರು 7 ವರ್ಷಗಳ ದಾಂಪತ್ಯದ ನಂತರ ಸೈನಾ ಮತ್ತು ಪರುಪಳ್ಳಿ ಬೇರ್ಪಡಲಿದ್ದಾರೆ. ಸೈನಾ ಮತ್ತು ಪರುಪಳ್ಳಿ ಹೈದರಾಬಾದ್ ನ ಪುಲ್ಲೇಲ ಗೋಪಿಚಂದ್ ಅಕಾಡೆಮಿಯಲ್ಲಿ ಭಾರತೀಯ ಬ್ಯಾಡ್ಮಿಂಟನ್ ಶ್ರೇಯಾಂಕಗಳ ಮೂಲಕ ಒಟ್ಟಿಗೆ ಬೆಳೆದರು. ಸೈನಾ ತಮ್ಮ ಒಲಿಂಪಿಕ್ ಕಂಚು ಮತ್ತು ವಿಶ್ವದ ನಂ.

ದಾಂಪತ್ಯಕ್ಕೆ ವಿದಾಯ ಹೇಳಿದ ‌ಸೈನಾ‌ ನೆಹ್ವಾಲ್ Read More »

ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ. ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ

ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ Read More »