Editor

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ-ಮಾಸ್ಟರಿಂಗ್ ಕಾರ್ಯ ಆರಂಭ

ಸಮಗ್ರ ನ್ಯೂಸ್ : ದಕ್ಷಿಣಕನ್ನಡ ಜಿಲ್ಲೆಯ 8 ಕಡೆಗಳಲ್ಲಿ ಮಾಸ್ಟರಿಂಗ್ ಕಾರ್ಯ ಆರಂಭವಾಗಿದೆ. ಜಿಲ್ಲೆಯಲ್ಲಿ 18,18,127 ಮತದಾರರಿದ್ದಾರೆ. ಒಟ್ಟು 1876 ಮತಗಟ್ಟೆ ಇರಲಿದೆ. 171 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗು 1705 ಸಾಮಾನ್ಯ ಮತಗಟ್ಟೆ ಇರಲಿದ್ದು, ಮತಗಟ್ಟೆಗಳಿಗೆ 11255 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಇನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1600 ಪೊಲೀಸರ ನಿಯೋಜನೆ ಮಾಡಲಾಗಿದೆ. ಸದ್ಯ ಮತಗಟ್ಟೆಗಳಿಗೆ ತೆರಳಿರುವ ಸಿಬ್ಬಂದಿಗಳಿಗೆ ಅಧಿಕಾರಿಗಳು ನಿರ್ದೇಶನಗಳನ್ನ […]

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ-ಮಾಸ್ಟರಿಂಗ್ ಕಾರ್ಯ ಆರಂಭ Read More »

ಮಂಗಳೂರು ಯೂನಿವರ್ಸಿಟಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ಮಂಗಳೂರು ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್​ಲೈನ್ ಅಥವಾ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕ್ಸ್​/ಮೆಡಿಕಲ್

ಮಂಗಳೂರು ಯೂನಿವರ್ಸಿಟಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 31,000 ಸಂಬಳ! Read More »

ಲಾರಿಗೆ ಬೊಲೆರೋ ವಾಹನ ಡಿಕ್ಕಿ… ಇಬ್ಬರು ಸಾವು

ಸಮಗ್ರ ನ್ಯೂಸ್: ಲಾರಿಯ ಹಿಂಬದಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH 48) ನಡೆದಿದೆ. ಈ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಈ ಮೃತಪಟ್ಟ ವ್ಯಕ್ತಿಗಳು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು. ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು

ಲಾರಿಗೆ ಬೊಲೆರೋ ವಾಹನ ಡಿಕ್ಕಿ… ಇಬ್ಬರು ಸಾವು Read More »

ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ಸಮಗ್ರ ನ್ಯೂಸ್: ಬೆಂಗಳೂರಿನ ಆರ್.ಆರ್ ನಗರದಲ್ಲಿರುವ ನಟಿ ಅಮೂಲ್ಯ ಅವರ ಮಾವ, ಮಾಜಿ ಕಾರ್ಪೊರೇಟರ್‌ ಹಾಗೂ ಬಿಜೆಪಿ ಮುಖಂಡ ಆಗಿರುವ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳು ನಿನ್ನೆ ತಡರಾತ್ರಿ 10ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ.10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ಸದ್ಯ ರಾಮಚಂದ್ರ ಅವರು, ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮನೆಯಲ್ಲೇ ಇದ್ದಾರೆ.

ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ Read More »

ಕಳಚಿದ ಯಕ್ಷರಂಗದ ಹಿರಿಯ ಕೊಂಡಿ| ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಸಮಗ್ರ ನ್ಯೂಸ್: ಬಡಗುತಿಟ್ಟು ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ (67) ವಿಧಿವಶರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಏಪ್ರಿಲ್‌ 25 ರಂದು ಬೆಳಗ್ಗೆ 4.30ಕ್ಕೆ ಬೆಂಗಳೂರಿನಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 46 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಕಾಳಿಂಗ ನಾವುಡರ ಅಗಲುವಿಕೆಯ ಬಳಿಕ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಎನಿಸಿಕೊಂಡಿದ್ದರು. ಮೂಲತಃ ಗೋಕರ್ಣ ಮೂಲದವಾರದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು

ಕಳಚಿದ ಯಕ್ಷರಂಗದ ಹಿರಿಯ ಕೊಂಡಿ| ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ Read More »

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್

ಸಮಗ್ರ ನ್ಯೂಸ್: ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ಇಂದು ಶಾಕ್‌ ನೀಡಿದೆ. ಈ ಬ್ಯಾಂಕ್ ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಟ್‌ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು ಎಂದು ಆರ್‌ಬಿಐ ನಿರ್ಬಂಧ ಹೇರಿದೆ. ಇದರಿಂದಾಗಿ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬ್ಯಾಂಕ್ ನ ಗ್ರಾಹಕರಿಗೆ ಭಯ ಎದುರಾಗಿದ್ದು ಇದಕ್ಕೆ ಬ್ಯಾಂಕ್ ನಿಂದ ಗ್ರಾಹಕರಿಗೆ ಭಯ ಪಡಬೇಕಿಲ್ಲ ಎಂದು ತಿಳಿಸಿದೆ. ಇದು ನೂತನ

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್ Read More »

ಲೋಕ ಚುನಾವಣೆ| 3 ದಿನ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆಯಲಿದೆ. ಈ ಹಿನ್ನೆಲೆ ಅಬ್ಬರದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಸಂಜೆ 6 ಗಂಟೆಯಿಂದ 14 ಕ್ಷೇತ್ರಗಳಲ್ಲಿ 144 ಸೆಕ್ಷನ್​​​​​​ ಜಾರಿಯಾಗಿದ್ದು, ಸಭೆ, ಸಮಾರಂಭ, ಮೆರವಣಿಗೆ, ಧ್ವನಿವರ್ಧಕ ಬಳಕೆಗೆಲ್ಲ ಬ್ರೇಕ್​​ ಬಿದ್ದಿದೆ. ಅಷ್ಟೇ ಅಲ್ಲದೆ 14 ಕ್ಷೇತ್ರಗಳಲ್ಲಿ 3 ದಿನ ಮದ್ಯ ಮಾರಾಟ ನಿಷೇಧ ಮಾಡಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಲಿಕ್ಕರ್ ಶಾಪ್​​ಗಳು ಕ್ಲೋಸ್​ ಆಗಿದ್ದು, ಶುಕ್ರವಾರದ ಏಪ್ರಿಲ್ 26ರಂದು

ಲೋಕ ಚುನಾವಣೆ| 3 ದಿನ ಮದ್ಯ ಮಾರಾಟ ನಿಷೇಧ Read More »

ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು

ಸಮಗ್ರ ನ್ಯೂಸ್: ಮಾದಕ ವಸ್ತುವಿನ ಸಾಗಾಟ ನಡೆಸಿದ ಸುಳ್ಯ ಮೂಲದ ಇಬ್ಬರು ಯುವಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಗೆ ಸೇರಿದ 1.5 ಲಕ್ಷ ರೂ. ಮೌಲ್ಯದ ಎಂಡಿಎಂಎಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಸುಳ್ಯದ ಅಲೆಟ್ಟಿ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂದು ಗುರುತಿಸಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಮಿಂಚಿನ ದಾಳಿ ನಡೆಸುವ ಮೂಲಕ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಎಂಡಿಎಂಎಯನ್ನು ಪ್ರತಿ ಗ್ರಾಂಗೆ

ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು Read More »

ಹಲ್ಲೆ ಪ್ರಕರಣ: ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

ಸಮಗ್ರ ನ್ಯೂಸ್: ಮೊನ್ನೆ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಪಾರ್ಕಿಂಗ್ ವಿಚಾರವಾಗಿ ಹಲ್ಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಸಚಿವ ಪ್ರಲ್ಹಾದ ಜೋಶಿ ಅವರನ್ನು ದಂಪತಿಗಳು ಭೇಟಿ ಮಾಡಿದ್ದಾರೆ. ʻಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು. ನಿಮ್ಮ ಜೊತೆ ನಾವಿದ್ದೇವೆ

ಹಲ್ಲೆ ಪ್ರಕರಣ: ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ Read More »

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಒಂದೇ ದಿನ ಬಾಕಿ ಇದೆ. ಲೋಕ ಸಮರದಲ್ಲಿ ಗೆಲುವಿಗೆ ಕಾಂಗ್ರೆಸ್ ಮತ್ತು ಕಮಲ-ದಳ ಮೈತ್ರಿ ಪಡೆ ಅಬ್ಬರದ ಪ್ರಚಾರ ನಡೆಸಿ, ಭರ್ಜರಿ ಮತಯಾಚನೆ ಮಾಡಿದೆ. ಇವತ್ತು ರಾಜ್ಯದ 14 ಕ್ಷೇತ್ರ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೊದಲ ಹಂತದ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ. ಈ ಹಿನ್ನೆಲೆ ಕೊನೆ ದಿನ ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರಕ್ಕೆ

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ Read More »