Editor

ನೇಹಾ ಹತ್ಯೆ ಆರೋಪಿಗೆ 90 ದಿನಗಳಲ್ಲೇ ಗಲ್ಲು ಶಿಕ್ಷೆ: ಸುರ್ಜೇವಾಲ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸುತ್ತೇನೆ. ಪ್ರಕರಣದ ತನಿಖೆ ನಡೆಸಿ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವುದಾಗಿ ಎಐಸಿಸಿ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲ ಭರವಸೆ ನೀಡಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆ 90 ದಿನಗಳಲ್ಲಿ ಪೂರ್ಣಗೊಳಿಸಿ ಆರೋಪಿಗೆ ಗಲ್ಲು ಶಿಕ್ಷೆ ನೀಡುವ ಮೂಲಕ ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು. ಆದರೆ ಈ ಪ್ರಕರಣವನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದರು. ಈ ಹಿಂದೆ ಪರೇಶ್‌ ಮೇಸ್ತ ಸಾವಿನ ಪ್ರಕರಣವನ್ನೂ ಬಿಜೆಪಿಯವರು ರಾಜಕೀಯಗೊಳಿಸಿದ್ದರು. ಕೊನೆಗೆ ಅದು […]

ನೇಹಾ ಹತ್ಯೆ ಆರೋಪಿಗೆ 90 ದಿನಗಳಲ್ಲೇ ಗಲ್ಲು ಶಿಕ್ಷೆ: ಸುರ್ಜೇವಾಲ Read More »

ಮೂಡಿಗೆರೆ: ಹುಲಿ ಹತ್ಯೆ| ಇಬ್ಬರ ಬಂಧನ

ಸಮಗ್ರ ನ್ಯೂಸ್: ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31), ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19) ಬಂಧಿತ ಆರೋಪಿಗಳು. ಇನ್ನು ಹಲವರು ಹುಲಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದು ಉಳಿದವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅರಣ್ಯ

ಮೂಡಿಗೆರೆ: ಹುಲಿ ಹತ್ಯೆ| ಇಬ್ಬರ ಬಂಧನ Read More »

ಹಾಸನ: ಉಚಿತ ಬಸ್ ಟಿಕೆಟ್ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯು ಒಂದು. ಇದರಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಯಿತ್ತು. ಈ ಶಕ್ತಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ವಿದ್ಯಾರ್ಥಿನಿಯೊಬ್ಬರು, ಉಚಿತ ಪ್ರಯಾಣದ ಟಿಕೆಟ್‌ಗಳಿಂದ ಮಾಡಿದ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ವಿಭಿನ್ನ ರೀತಿಯಲ್ಲಿ ಸನ್ಮಾನಿಸಿರುವುದು ಗಮನ ಸೆಳೆದಿದೆ. ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಬಿ. ಜಯಶ್ರೀ, ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ ಮಾಡಿದ್ದ ಹಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಾಕಿ ಗೌರವಿಸಿದ್ದಾರೆ. ಹಾಸನ ಕಾಂಗ್ರೆಸ್‌

ಹಾಸನ: ಉಚಿತ ಬಸ್ ಟಿಕೆಟ್ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ Read More »

ಪುತ್ತೂರು:ಸಂತೋಷದ ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ!ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

ಸಮಗ್ರ ನ್ಯೂಸ್: 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ನಡೆಯುವ ಚಿನ್ನೋತ್ಸವಕ್ಕೆ ಈ ಬಾರಿ ಚಿನ್ನದ ಹಬ್ಬ “ಮುಳಿಯ ಚಿನ್ನೋತ್ಸವ” ಕ್ಕೆ ಎ. 22ರಂದು ಚಾಲನೆ ನೀಡಲಾಯಿತು. ಮೇ 20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ನ ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು

ಪುತ್ತೂರು:ಸಂತೋಷದ ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ!ಮುಳಿಯ ಚಿನ್ನೋತ್ಸವಕ್ಕೆ ಚಾಲನೆ Read More »

ಕೊಟ್ಟಿಗೆಹಾರ: ಪವರ್ ಲೈನ್ ತುಳಿದು ಹಸು ಸಾವು

ಸಮಗ್ರ ನ್ಯೂಸ್: ಎ. 21ರಂದು ಸುರಿದ ಬಾರಿ ಗಾಳಿ ಮಳೆಗೆ ಪವರ್ ಲೈನ್ ಮೇಲೆ ಮರ ಬಿದ್ದು ಪವರ್ ಲೈನ್ ತುಳಿದು ಹಸು ಸಾವನಪ್ಪಿದ ಘಟನೆ ಕೊಟ್ಟಿಗೆಹಾರದ ಬಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಸು ಬಿ ಹೊಸಳ್ಳಿ ಗ್ರಾಮದ ಗಣಪ ಎಂಬುವರಿಗೆ ಸೇರಿದ್ದಾಗಿದ್ದು, ಈ ಮಾರ್ಗದಲ್ಲಿ ಜನರು ಯಾರು ಹೋಗದಿರುವುದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಕೊಟ್ಟಿಗೆಹಾರ: ಪವರ್ ಲೈನ್ ತುಳಿದು ಹಸು ಸಾವು Read More »

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಮಗುವಿನ ಮೇಲೆ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು, ಆದರೆ ಮಗುವಿನ ತಂದೆ ನೋಡದೆ ಕಾರು ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ. ಸಂಬಂಧಿಗಳ ಮದುವೆ ಇದ್ದ ಕಾರಣ ಮಗುವಿನ ಕುಟುಂಬಸ್ಥರು ಚನ್ನಪಟ್ಟಣಕ್ಕೆ ಹೋಗಿದ್ದರು. ರಾತ್ರಿ ಹಿಂದಿರುಗಿದಾಗ ಮಗುವಿನ ತಂದೆ ಲಗೇಜ್‌ ತೆಗೆದು ಮನೆಯೊಳಗೆ

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು Read More »

ಬೆಳ್ತಂಗಡಿ :ಕೆರೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆ

ಸಮಗ್ರ ನ್ಯೂಸ್ : ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಕಂಡುಬಂದ ಘಟನೆ ನಡೆದಿದೆ. ಕಾಡುಕೋಣದ ಮೃತ ದೇಹವನ್ನು ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಹಾಗೂ ಸ್ಥಳೀಯರು ಸೇರಿ ಸೋಮವಾರ ಕೆರೆಯಿಂದ ಮೇಲೆತ್ತಿದರು. ನೀರು ಅರಸಿಕೊಂಡು ಬಂದ ಸುಮಾರು 6 ವರ್ಷ ಪ್ರಾಯದ ಕಾಡುಕೋಣ ನೀರು ಕುಡಿದ ಬಳಿಕ ಕೆರೆಯ ಕೆಸರಿನಲ್ಲಿ ಸಿಲುಕಿ ಮೇಲೆ ಬರಲಾರದೆ ಎರಡು ದಿನಗಳ ಹಿಂದೆ ಮೃತಪಟ್ಟಿರುವ ಕುರಿತು

ಬೆಳ್ತಂಗಡಿ :ಕೆರೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆ Read More »

ಮಂಗಳೂರು: ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು- ಸುರ್ಜೆವಾಲಾ ಕಿಡಿ

ಸಮಗ್ರ ನ್ಯೂಸ್‌ : ಮಂಗಳೂರಿನಲ್ಲಿ ಚೊಂಬು ಹಿಡಿದುಕೊಂಡೆ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು. ಕರ್ನಾಟಕ ನ್ಯಾಯ ಕೇಳಿದಾಗ ಮೋದಿ ನೀಡೋದು ಚೊಂಬು. ಜನರು 15 ಲಕ್ಷ ಕೇಳಿದಾಗ ಮೋದಿ ನೀಡೋದು ಚೊಂಬು. ಜನ ಸ್ಮಾರ್ಟ್ ಸಿಟಿ ಕೇಳಿದಾಗ ಮೋದಿ ಕೊಡೋದು ಚೊಂಬು ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರಕಾರ ಕನ್ನಡಿಗರಿಗೆ , ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ. ಕಳೆದ ವಿಧಾನ ಸಭಾ ಚುನಾವಣೆ ಬಿಜೆಪಿಗೆ

ಮಂಗಳೂರು: ದೇಶದ ಜನತೆ ಉದ್ಯೋಗ ಕೇಳಿದಾಗ ಮೋದಿ ನೀಡಿದ್ದು ಚೊಂಬು- ಸುರ್ಜೆವಾಲಾ ಕಿಡಿ Read More »

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಟಿ.ಎ.ಶರವಣ ದೂರು

ಸಮಗ್ರ ನ್ಯೂಸ್: ಮತದಾರರನ್ನು ಸೆಳೆಯುವ ಉದ್ದೇಶದಿಂದ ಚುನಾವಣಾ ಲಂಚ ಹಾಗೂ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ಟಿ.ಎ.ಶರವಣ ಅವರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್ ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ಗುಂಪುಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಇದು ಗ್ಯಾರಂಟಿ ಕಾರ್ಡ್‌ಗಳು ಚುನಾವಣಾ ಆಮಿಷವಾಗಿದ್ದು, ಇಂತಹವುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಎಂಎಲ್‌ಸಿ ಟಿ.ಎ.ಶರವಣ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಟಿ.ಎ.ಶರವಣ ದೂರು Read More »

ಉಡುಪಿ:1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ; ಆರೋಪಿಯ ಬಂಧನ

ಸಮಗ್ರ ನ್ಯೂಸ್‌ : ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರ ರಾಜ್ಯದ ಸೀತಾಮರಿ ಜಿಲ್ಲೆಯ ನಿವಾಸಿ ಮುಹಮ್ಮದ್ ಇರ್ಫಾನ್ (35) ಬಂಧಿತ ಆರೋಪಿ. ಈತ ಎ.20ರಂದು ಕೇರಳದ ಚಿತ್ರ ನಿರ್ಮಾಪಕ ಜೋಶಿಯವರ ಕೊಚ್ಚಿ ಪನಂಪಲ್ಲಿಯ ಮನೆಯಲ್ಲಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದನು. ಖಚಿತ ಮಾಹಿತಿಯನ್ನು ಆಧರಿಸಿ ಕೋಟ ಪೊಲೀಸರು ಮೂರ್ಕೈ ಸಮೀಪ ಶನಿವಾರ ಸಂಜೆ

ಉಡುಪಿ:1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ; ಆರೋಪಿಯ ಬಂಧನ Read More »