Editor

ಮುಂಬೈ: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವಿಡಿಯೋ ವೈರಲ್

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಕೋಳಿ ಅಂಗಡಿಯಲ್ಲಿ ಮೊಟ್ಟೆ ಕದಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ. ವಿಡಿಯೊದಲ್ಲಿ ಇಬ್ಬರು ಮಹಿಳೆಯರು ಕೋಳಿ ಅಂಗಡಿಯೊಳಗೆ ನಿಂತಿರುವುದನ್ನು ಕಾಣಬಹುದು. ಅಂಗಡಿ ಮಾಲೀಕನು ಇನ್ನೊಂದು ಕಡೆ ಮುಖ ಮಾಡಿ ಕೋಳಿ ಕತ್ತರಿಸುವುದರಲ್ಲಿ ನಿರತರಾಗಿದ್ದಾಗ ಆತನಿಗೆ ತಿಳಿಯದಂತೆ ಆತನ ಬೆನ್ನ ಹಿಂದೆ ಮಹಿಳೆ ಮೊಟ್ಟೆಗೆ ಕನ್ನ ಹಾಕಿದ್ದಾರೆ. ಮಹಿಳೆಯ ವರ್ತನೆ ಅನುಮಾನಾಸ್ಪಾದವಾಗಿ ಕಂಡುಬಂದ ಹಿನ್ನಲೆಯಲ್ಲಿ ಮಾಲೀಕ ಅವಳ ಬ್ಯಾಗ್ ಅನ್ನು

ಮುಂಬೈ: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವಿಡಿಯೋ ವೈರಲ್ Read More »

ವಿಜಯಪುರ: ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆ

ಸಮಗ್ರ ನ್ಯೂಸ್‌ : ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಇವರ ಅಧ್ಯಕ್ಷತೆಯಲ್ಲಿ ವಿಜಯಪುರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸರಕಾರದಿಂದ ನಾಮನಿರ್ದೇಶನಗೊಂಡು ಜಿಲ್ಲಾ ಅನುಷ್ಠಾನ ಸಮಿತಿ ಹಾಗೂ ತಾಲೂಕಾ ಸಮಿತಿಗಳ ಸಭೆಯನ್ನು ಕರೆಯಲಾಗಿತ್ತು. ಸಭೆಯನ್ನುದ್ದೇಶಿಸಿ ಎಸ್.ಆರ್. ಪಾಟೀಲ (ಬ್ಯಾಡಗಿ) ಇವರು ಮಾತನಾಡುತ್ತಾ ೨೦೨೩ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೫ ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ

ವಿಜಯಪುರ: ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆ Read More »

ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಬ್ಯಾಗ್ ಪತ್ತೆ

ಸಮಗ್ರ ನ್ಯೂಸ್: ಕೊಳೆತ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಬ್ಯಾಗ್‌ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್‌ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ಚಂದ್ರಶೇಖರ್‌ ಅವರು ಎ. 19ರಂದು ಸ್ಥಳೀಯ ನಿವಾಸಿಗಳೊಂದಿಗೆ ಕಾಡಿಗೆ ಸೌದೆ ತರಲು ತೆರಳುವ ವೇಳೆ ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಷದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆ ಬುರುಡೆ ಹಾಗೂ ಬ್ಯಾಗ್‌ ಕಂಡುಬಂದಿತ್ತು. ಸ್ವಲ್ಪ

ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಬ್ಯಾಗ್ ಪತ್ತೆ Read More »

ಉಡುಪಿ: ರಾಜ್ಯದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಆತಂಕ; ಬಿ.ವೈ ವಿಜಯೇಂದ್ರ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟಿಕರಣ ಮಾಡುತ್ತಿರುವುದರ ಪರಿಣಾಮ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗೆ ಹಿಂದು ಯುವತಿ ಬರ್ಬರವಾಗಿ ಹತ್ಯೆಯಾಗಿದ್ದಾಳೆ. ಸಿಎಂ, ಗೃಹ ಸಚಿವರು ವೈಯಕ್ತಿಕ ಕಾರಣ ಎಂದು ಹೇಳುತ್ತಿರುವುದು ವಿಪರ್ಯಾಸ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಉಡುಪಿ ಶಾರದಾ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಯುವ ಭಾರತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಮೈಸೂರಿನಲ್ಲಿ ಮೋದಿ ಹಾಡು ಹಾಡಿದ್ದಕ್ಕೆ ಪುಂಡರು, ದೇಶದ್ರೋಹಿಗಳು ಬಿಜೆಪಿ ಕಾರ್ಯಕರ್ತರ ಮೇಲೆ

ಉಡುಪಿ: ರಾಜ್ಯದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಆತಂಕ; ಬಿ.ವೈ ವಿಜಯೇಂದ್ರ Read More »

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ CCB ಇನ್ಸ್​ಪೆಕ್ಟರ್ ಅಮಾನತು

ಸಮಗ್ರ ನ್ಯೂಸ್: ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಅಪರಾಧ ಕೇಂದ್ರ ವಿಭಾಗ (CCB)ಯ ರೌಡಿ ನಿಗ್ರಹದಳದ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಇವರನ್ನು ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ ಸಿಸಿಬಿ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಹಾಗೆ ಅಧಿಕಾರಿಗಳು ರೌಡಿಶೀಟರ್ ಕಾಡುಬೀಸನಹಳ್ಳಿ ರೋಹಿತ್ ಚಲನವನ ಬಗ್ಗೆ ವರದಿ ಕೇಳಿದ್ದರು. ಆದರೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ಅವರು ರೌಡಿಶೀಟರ್ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ, ವರದಿ ನೀಡಿರಲಿಲ್ಲ. ಹೀಗಾಗಿ ಸಿಸಿಬಿ

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ CCB ಇನ್ಸ್​ಪೆಕ್ಟರ್ ಅಮಾನತು Read More »

ಮಣಿಪುರ: ಮತದಾನ ವೇಳೆ ಗುಂಡಿನ ದಾಳಿ- ಮೂವರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಕಂಪು ಸಜೆಬ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯ ನಂತರ ಮೂವರು ಸ್ಥಳದಿಂದ ಪರಾರಿಯಾಗಿದ್ದರು. ಅವರನ್ನು ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿ.ಮೀ. ದೂರದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಪಿಸ್ತೂಲ್, ಮದ್ದುಗುಂಡು ಮತ್ತು 1.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸದ್ಯ

ಮಣಿಪುರ: ಮತದಾನ ವೇಳೆ ಗುಂಡಿನ ದಾಳಿ- ಮೂವರು ಪೊಲೀಸರ ವಶಕ್ಕೆ Read More »

ಉಡುಪಿ: ಜಯಪ್ರಕಾಶ್ ಹೆಗ್ಡೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ-ದೂರು ದಾಖಲು

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ವಿರುದ್ಧ ಕಪೋಲಕಲ್ಪಿತ ಕಥೆಗಳನ್ನು ಕಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಿಬಿಟ್ಟು ಧರ್ಮ ಧರ್ಮಗಳ ಮಧ್ಯೆ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಿಸುತ್ತಿರುವ ಆರೋಪಿಗಳು ಹಾಗೂ ಒಂದು ಸಾಮಾಜಿಕ ಜಾಲ ತಾಣದ ಗ್ರೂಪ್ ವಿರುದ್ಧ, ಸಹನಾ ಎಸ್ಟೇಟ್ ಮಾಲಿಕ ಸುರೇಂದ್ರ ಶೆಟ್ಟಿ ಎಂಬವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎ.26 ರಂದು ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆ. ಜಯಪ್ರಕಾಶ್ ಹೆಗ್ಡೆಯವರ ವಿರುದ್ಧ ಬಿಜೆಪಿ

ಉಡುಪಿ: ಜಯಪ್ರಕಾಶ್ ಹೆಗ್ಡೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ-ದೂರು ದಾಖಲು Read More »

ನಂಜನಗೂಡು: ನೇಹಾ ಹಿರೇಮಠ ಪ್ರಕರಣ|ನಂಜನಗೂಡಿನಲ್ಲಿ ಕ್ರಾಂತಿಕಾರಿ ಲಿಂಗಾಯತ ವೀರಶೈವ ಮುಖಂಡರ ಆಕ್ರೋಶ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿಗೆ ಉಗ್ರ ಶಿಕ್ಷೆ ನೀಡುವಂತೆ ನಂಜನಗೂಡಿನ ಕ್ರಾಂತಿಕಾರಿ ಲಿಂಗಾಯಿತ ವೀರಶೈವ ಬಳಗದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಳಗದ ಅಧ್ಯಕ್ಷ ಜಗದೀಶ್ ಹಾಗೂ ವೀರಶೈವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಬಸವಣ್ಣ, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ ಇಂದು ತಾಲ್ಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಇದೊಂದು ಹೇಯ ಕೃತ್ಯ ಯಾವುದೇ ಸಮಾಜದ ಹೆಣ್ಣು ಮಕ್ಕಳಿಗೂ ಇಂತಹ ಪರಿಸ್ಥಿತಿ ಬರಬಾರದು. ಕಾಂಗ್ರೆಸ್ ಸರ್ಕಾರ

ನಂಜನಗೂಡು: ನೇಹಾ ಹಿರೇಮಠ ಪ್ರಕರಣ|ನಂಜನಗೂಡಿನಲ್ಲಿ ಕ್ರಾಂತಿಕಾರಿ ಲಿಂಗಾಯತ ವೀರಶೈವ ಮುಖಂಡರ ಆಕ್ರೋಶ Read More »

ಕಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ

ಸಮಗ್ರ ನ್ಯೂಸ್‌ : ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು. ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿದ್ದಾರೆ. ಕಟೀಲಿನಿಂದ ಶಿಬರೂರಿಗೆ ನಡೆದ ಮೆರವಣಿಗೆಗೆ ಪಲಿಮಾರು ಶ್ರೀ ವಿದ್ಯಾಧೀಶ ಸ್ವಾಮೀಜಿ, ವೇದವ್ಯಾಸ ತಂತ್ರಿ ಕಟೀಲಿನ ಅಸ್ರಣ್ಣರು, ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ, ಜೀರ್ಣೋದ್ದಾರ

ಕಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ Read More »

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ|ರಸ್ತೆಗಿಳಿದು ಚೊಂಬು ಪ್ರದರ್ಶಿಸಿದ ನಲಪಾಡ್

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅದರಂತೆ ಬೆಂಗಳೂರಿನ ಮೇಖ್ರಿ ಸರ್ಕಲ್​ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಭದ್ರತಾ ಲೋಪ ಉಂಟಾಗಿದೆ. ಹೌದು ಮೋದಿಯವರು ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ನುಗ್ಗಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಚೊಂಬು ಪ್ರದರ್ಶಿಸಿದ್ದಾರೆ. ಕೂಡಲೇ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಡಿಫೆಂಡರ್

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ|ರಸ್ತೆಗಿಳಿದು ಚೊಂಬು ಪ್ರದರ್ಶಿಸಿದ ನಲಪಾಡ್ Read More »