ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ
ಸಮಗ್ರ ನ್ಯೂಸ್ : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿದ್ದು, ಒಟ್ಟು ಐದು ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಸುರಂಗ ಮಾರ್ಗದ ಕೆಲಸದ ವೇಳೆ ಏಕಾಏಕಿ ಏರ್ ಬ್ಲಾಸ್ಟ್ ಸಂಭವಿಸಿದೆ. ಈ ವೇಳೆ ಒಂದು ಬದಿಯಲ್ಲಿ ಮಣ್ಣು ಕುಸಿದಿದೆ. ಘಟನೆಯಲ್ಲಿ ಉಸಿರಾಟದ ಸಮಸ್ಯೆಯಿಂದ ನಿತ್ರಾಣಗೊಂಡು ಸುರಂಗದಲ್ಲೇ ಸಿಲುಕಿದ್ದ ಕಾರ್ಮಿಕರನ್ನ ಕೂಡಲೇ ರಕ್ಷಿಸಲಾಗಿದೆ. ಐವರು ಕಾರ್ಮಿಕರಿಗೆ ಗಾಯಗಳಾಗಿದೆ. ಓರ್ವ ಕಾರ್ಮಿಕನ ಮೇಲೆ ಕಲ್ಲುಗಳು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ.
ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ Read More »










