Editor

ಸಿಐಡಿ ವರದಿಯನ್ನು ಭಾಷಾಂತರಿಸಿದ್ದು ಬಿಟ್ರೆ ಮತ್ತೇನು ಮಾಡಿದ್ದೀರಿ? ಸೌಜನ್ಯ ಪ್ರಕರಣ ವಿಚಾರದಲ್ಲಿ ಸಿಬಿಐಗೆ ಚಾಟಿ ಬೀಸಿದ ಸುಪ್ರೀಂ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ […]

ಸಿಐಡಿ ವರದಿಯನ್ನು ಭಾಷಾಂತರಿಸಿದ್ದು ಬಿಟ್ರೆ ಮತ್ತೇನು ಮಾಡಿದ್ದೀರಿ? ಸೌಜನ್ಯ ಪ್ರಕರಣ ವಿಚಾರದಲ್ಲಿ ಸಿಬಿಐಗೆ ಚಾಟಿ ಬೀಸಿದ ಸುಪ್ರೀಂ Read More »

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ| ಸಿಬಿಐ ವರದಿಗೆ ತರಾಟೆ

ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮರುತನಿಖೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದ್ದು, ಪ್ರಕರಣದ ಕುರಿತು ಯಾವುದೇ ಅಂತಿಮ ಆದೇಶವನ್ನು ಮತ್ತೆ ಕಾಯ್ದಿರಿಸಿದೆ. ಈ ಹಿಂದೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಜು . 14ರಂದು ಈ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಜು.21ಕ್ಕೆ ಮುಂದೂಡಿತ್ತು. ಅಲ್ಲದೇ ಕೆಲವು ಪ್ರಮುಖ

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ| ಸಿಬಿಐ ವರದಿಗೆ ತರಾಟೆ Read More »

ಮಂಗಳೂರು: ಶೈಕ್ಷಣಿಕ ಜಿಲ್ಲೆಯಲ್ಲೇ 34 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ಬಂದ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು, ಪಿಎಂಶ್ರೀ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕಾಗಿ ಪಾಲಕರು ಪೈಪೋಟಿ ನಡೆಸುತ್ತಾರೆ. ಇನ್ನೊಂದೆಡೆ, ಸರ್ಕಾರಿ ಪ್ರಾಥಮಿಕ ಶಾಲೆಗಳು ಅದರಲ್ಲೂ ಕಿರಿಯ ಪ್ರಾಥಮಿಕ ಶಾಲೆಗಳು ಸೊರಗುತ್ತಿವೆ. ಪ್ರಸಕ್ತ ಸಾಲಿನಲ್ಲಿ 23 ಸರ್ಕಾರಿ ಶಾಲೆಗಳು, ಆರು ಅನುದಾನಿತ ಶಾಲೆಗಳು ಹಾಗೂ ಐದು ಅನುದಾನರಹಿತ ಶಾಲೆಗಳು ಸೇರಿದಂತೆ ಒಟ್ಟು 34 ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳ ದಾಖಲಾತಿಯಾಗಿಲ್ಲ. ಶೂನ್ಯ ದಾಖಲಾತಿ ಆಗಿರುವ ಸರ್ಕಾರಿ ಶಾಲೆಗಳಲ್ಲಿ ಎಲ್ಲವೂ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳೇ

ಮಂಗಳೂರು: ಶೈಕ್ಷಣಿಕ ಜಿಲ್ಲೆಯಲ್ಲೇ 34 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ಬಂದ್ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ಕುರಿತ ವಿಚಾರಣೆಗೆ ಸುಪ್ರೀಂ ನಕಾರ

ಸಮಗ್ರ ನ್ಯೂಸ್: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ಮುಂದೆ ವಕೀಲ ನರೇಂದ್ರ ಮಿಶ್ರಾ ಅವರು ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದ್ದರು. NEET ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ಕುರಿತ ವಿಚಾರಣೆಗೆ ಸುಪ್ರೀಂ ನಕಾರ Read More »

ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಪ್ರಕ್ರಿಯೆ ಮತ್ತೆ ಮುಂದೂಡಲ್ಪಟ್ಟಿದೆ.‌ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರಿಂದ ನೂತನ ಸಚಿವರ ಅಂತಿಮ ಪಟ್ಟಿಗೆ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ, ಇಂದು ನಡೆಯಬೇಕಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ತಾತ್ಕಾಲಿಕವಾಗಿ ವಿಳಂಬವಾಗಿದೆ. ರಾಜಭವನದ ‘ಲೋಕಭವನ’ದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂಬ ವದಂತಿಗಳು ಬಲವಾಗಿದ್ದವು. ಈ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರ ಅನುಮತಿಗೂ ಮನವಿ ಮಾಡಿದ್ದರು. ಆದರೆ,

ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ Read More »

ರಾಜ್ಯದಲ್ಲಿ ‌ಮತ್ತೆ ಚುರುಕಾದ ಮುಂಗಾರು| ಏಳು ದಿನಗಳವರೆಗೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪುಷ್ಯ ಮಳೆ ಚುರುಕಾಗಿದ್ದು, ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆ ಜೊತೆಗೆ ಜೋರಾದ ಗಾಳಿ ಮುನ್ಸೂಚನೆ ನೀಡಲಾಗಿದೆ. ಇನ್ನು,

ರಾಜ್ಯದಲ್ಲಿ ‌ಮತ್ತೆ ಚುರುಕಾದ ಮುಂಗಾರು| ಏಳು ದಿನಗಳವರೆಗೆ ಮಳೆ ಸಾಧ್ಯತೆ Read More »

“ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ‌ ತೋರಿಸಿ”| ಎನ್ ಡಿಎ ಸಂಸದರಿಗೆ ಪ್ರಧಾನಿ ಕಿವಿಮಾತು

ಸಮಗ್ರ ನ್ಯೂಸ್: ನೀಟ್-ಯುಜಿ (NEET-UG) 2026 ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಷ್ಟ್ರೀಯತಾವಾದಿ ಜನತಾಂತ್ರಿಕ ಮೈತ್ರಿ (NDA) ಸಂಸದರಿಗೆ ‘ಮಕ್ಕಳನ್ನು ಪ್ರಚೋದಿಸಬೇಡಿ, ಅವರಿಗೆ ಸರಿಯಾದ ದಾರಿ ತೋರಿಸಿ’ ಎಂದು ಕರೆ ನೀಡಿದರು. ನೀಟ್-ಯುಜಿ (NEET-UG) 2026 ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸಂಸದರೊಂದಿಗೆ ಮಹತ್ವದ ಸಂದೇಶ ಹಂಚಿಕೊಂಡಿದ್ದಾರೆ. ಸಂಸತ್ತಿನ

“ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ‌ ತೋರಿಸಿ”| ಎನ್ ಡಿಎ ಸಂಸದರಿಗೆ ಪ್ರಧಾನಿ ಕಿವಿಮಾತು Read More »

ಹಸೆಮಣೆ ಏರಬೇಕಾಗಿದ್ದ ಯುವಕ ರಷ್ಯಾ‌ ದಾಳಿಗೆ ಬಲಿ| ಕಡಲಲ್ಲೇ ಹೆಣವಾದ ಕಾಸರಗೋಡಿನ ನಾವಿಕ

ಸಮಗ್ರ ನ್ಯೂಸ್: ಉಕ್ರೇನ್‌ ಕರಾವಳಿ ಪ್ರದೇಶದಲ್ಲಿ ಸಂಭವಿಸಿದ ರಷ್ಯಾದ ದಾಳಿಯಲ್ಲಿ ಕೇರಳ ಮೂಲದ ಯುವ ನಾವಿಕ ಅಖಿಲ್ ಜೋಯನ್ (26) ಸೇರಿದಂತೆ ನಾಲ್ವರು ಭಾರತೀಯರು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ವೆಳ್ಳರಿಕ್ಕುಂಡು ನಿವಾಸಿಯಾಗಿರುವ ಅಖಿಲ್, ಇನ್ನೆರಡು ತಿಂಗಳಲ್ಲಿ ಮದುವೆಯಾಗಲು ತಯಾರಿ ನಡೆಸುತ್ತಿದ್ದರು. ಆದಾಗ್ಯೂ, ಮಗನ ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಇದೀಗ ಆತನ ಸಾವು ಚೇತರಿಸಿಕೊಳ್ಳಲಾಗದಷ್ಟು ದೊಡ್ಡ ಆಘಾತ ನೀಡಿದೆ. ಉಕ್ರೇನ್‌ನ ಒಡೆಸಾ ಬಂದರಿನಿಂದ ಯೂಕ್ರೇನಿಯನ್ ಜೋಳವನ್ನು ಹೊತ್ತು ಸಾಗುತ್ತಿದ್ದ ಎಮ್‌ವಿ ಗೋಲ್ಡನ್ ಲಿಯೋ ಎಂಬ ಸರಕು

ಹಸೆಮಣೆ ಏರಬೇಕಾಗಿದ್ದ ಯುವಕ ರಷ್ಯಾ‌ ದಾಳಿಗೆ ಬಲಿ| ಕಡಲಲ್ಲೇ ಹೆಣವಾದ ಕಾಸರಗೋಡಿನ ನಾವಿಕ Read More »

ಬೆಳ್ತಂಗಡಿ: ಅಪ್ರಾಪ್ತೆಗೆ ಗರ್ಭದಾನ| ಆರೋಪಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಮೂಲದ ಆಟೋ ರಿಕ್ಷಾ ಚಾಲಕ ಶುಭರಾಜ್ (28) ಬಂಧಿತ ಆರೋಪಿ. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಈತ ಪರಿಚಯ ಮಾಡಿಕೊಂಡು, ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಈ ವಿಷಯವನ್ನು ಯಾರ ಬಳಿಯೂ ಹೇಳದಂತೆ ಬಾಲಕಿಗೆ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ

ಬೆಳ್ತಂಗಡಿ: ಅಪ್ರಾಪ್ತೆಗೆ ಗರ್ಭದಾನ| ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಒಳನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,

ಕರಾವಳಿ, ಒಳನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ Read More »