Editor

ಚಾಮರಾಜನಗರ: ಕಾಡಾನೆ ದಾಳಿಯಿಂದ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಚಾಮರಾಜನಗರ ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಒಡೆಯರ ಪಾಳ್ಯ ಸಮೀಪದ ಹೊಸ ಪೋಡು ಗ್ರಾಮದ ಈರಾ (61) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕಾರ್ಯನಿಮಿತ್ತ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸಿದ್ದ ಹೊಸ ಫೋಡು ಗ್ರಾಮದ ನಿವಾಸಿ ಈರ ಎಂಬಾತ ಕೆಲಸ ಮುಗಿದ ಮೇಲೆ ಗುಂಡಿಮಾಳದ ವರಗೆ ಬಸ್ ನಲ್ಲಿ ಪ್ರಯಾಣಿಸಿ ನಂತರ ಹೊಸ ಪೋಡು

ಚಾಮರಾಜನಗರ: ಕಾಡಾನೆ ದಾಳಿಯಿಂದ ವ್ಯಕ್ತಿ ಸ್ಥಳದಲ್ಲೇ ಮೃತ್ಯು Read More »

ಕೋಲ್ಕತ್ತ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ| ನಾಲ್ವರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ರಾಮನವಮಿ ಮೆರವಣಿಗೆಯ ಸಮಯದಲ್ಲಿ ಕಲ್ಲು ತೂರಾಟ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 9.10ರ ಸುಮಾರಿಗೆ ಎಗ್ರಾದ ಸಮೀಪ ಮೆರವಣಿಗೆ ಸಾಗುತ್ತಿದ್ದಾಗ ಘಟನೆ ನಡೆದಿದೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನರ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸದ್ಯ

ಕೋಲ್ಕತ್ತ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ| ನಾಲ್ವರು ಪೊಲೀಸರ ವಶಕ್ಕೆ Read More »

ದೇವಸ್ಥಾನಕ್ಕೆ 5 ಕೋಟಿ ರೂ ದೇಣಿಗೆ ನೀಡಿದ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ

ಸಮಗ್ರ ನ್ಯೂಸ್‌: ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಚೈತ್ರ ನವರಾತ್ರಿಯ ಅಷ್ಟಮಿಯ ಸಂದರ್ಭದಲ್ಲಿ ಭಾರತದ ಪ್ರಮುಖ ಎರಡು ದೇವಾಲಯಗಳಾದ ಒಡಿಶಾದ ಪುರಿ ಜಗನ್ನಾಥ ದೇವಾಲಯ ಮತ್ತು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ. ಹಿಂದೂ ಧರ್ಮ ಹಾಗೂ ದೇವಾಲಯದ ಬಗ್ಗೆ ಅಪಾರ ಗೌರವ ಹೊಂದಿರುವ ಅಂಬಾನಿ ಕುಟುಂಬ ಆಗಾಗ ಹಲವು ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ.

ದೇವಸ್ಥಾನಕ್ಕೆ 5 ಕೋಟಿ ರೂ ದೇಣಿಗೆ ನೀಡಿದ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ Read More »

ಹಾಸನ: ಕಾರು ಡಿಕ್ಕಿ ಹೊಡೆದು ಸೈಕಲ್‌ ಸವಾರ ಮೃತ್ಯು

ಸಮಗ್ರ ನ್ಯೂಸ್‌ : ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾಟೀಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ನಗರದ ಡೈರಿ ಸರ್ಕಲ್ ಬಳಿ ನಡೆದಿದೆ. ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ. ಕಾರಿನ ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ಆನಂದ್‌ ಅವರ ಮುಖವೇ ಅಪ್ಪಚ್ಚಿ ಆಗಿತ್ತು. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಹಾಸನ ಸಂಚಾರಿ

ಹಾಸನ: ಕಾರು ಡಿಕ್ಕಿ ಹೊಡೆದು ಸೈಕಲ್‌ ಸವಾರ ಮೃತ್ಯು Read More »

ಮಂಗಳೂರು: ಯುವ ದಂತವೈದ್ಯೆ ಹಠಾತ್ ಸಾವು

ಸಮಗ್ರ ವಾರ್ತೆ: ಯುವ ದಂತ ವೈದ್ಯೆಯೊಬ್ಬರು ಹಠಾತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಮೃತರನ್ನು ಡಾ. ಸ್ವಾತಿ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಮಂಗಳವಾರದಿಂದ ನಗರದ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ತನಕ ಆಳ್ವರಬೆಟ್ಟು ಮನೆಯಲ್ಲಿ ತಂಗಿದ್ದ ಸ್ವಾತಿ ಸೋಮವಾರ ಸಂಜೆ ಮನೆಯಿಂದ ಪಾಂಡೇಶ್ವರದ ಪಿಜಿಗೆ ಬಂದು ತಂಗಿದ್ದರು. ರಾತ್ರಿ ತಾಯಿ ತಂದೆ ಜತೆಗೆ ಮೊಬೈಲ್

ಮಂಗಳೂರು: ಯುವ ದಂತವೈದ್ಯೆ ಹಠಾತ್ ಸಾವು Read More »

ಚಿತ್ರದುರ್ಗ: ಗಂಡನ ಮನೆಯಲ್ಲಿ ಕಿರುಕುಳ- ಮಹಿಳೆ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ನಡೆದಿದೆ. ಆಶಾ (26) ಮೃತ ದುರ್ದೈವಿ. ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ

ಚಿತ್ರದುರ್ಗ: ಗಂಡನ ಮನೆಯಲ್ಲಿ ಕಿರುಕುಳ- ಮಹಿಳೆ ಆತ್ಮಹತ್ಯೆ Read More »

ಕಲಬುರಗಿ: ಕೊನೆಗೂ ಮೈತ್ರಿಕೂಟಕ್ಕೆ ಜೈ ಎಂದ ಶಾಸಕ ಕಂದಕೂರ

ಸಮಗ್ರ ನ್ಯೂಸ್‌ : ರಾಯಚೂರು ಲೋಕಸಭಾ ಕ್ಷೇತ್ರ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರ ಹಾಗೂ ಸುರಪುರ ಉಪ ಚುನಾವಣೆ ಕ್ಷೇತ್ರಗಳಲ್ಲಿ ನಾನು ಸಂಪೂರ್ಣ ಸಮಯ ಕೊಟ್ಟು ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಸ್ಪಷ್ಟ ಪಡಿಸಿದ್ದಾರೆ. ತಮ್ಮ ಗೃಹ ಕಚೇರಿಯಲ್ಲಿ ಕೈಗೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮತ್ತು ಸುರಪೂರ ವಿಧಾನಸಭೆ ಅಭ್ಯರ್ಥಿ ರಾಜುಗೌಡ ಕೂಡ ಭೇಟಿಯಾಗಿ ಬೆಂಬಲ ಕೋರಿದ್ದು, ಹಾಗೆ ನಮ್ಮ ರಾಜ್ಯ ಜೆಡಿಎಸ್

ಕಲಬುರಗಿ: ಕೊನೆಗೂ ಮೈತ್ರಿಕೂಟಕ್ಕೆ ಜೈ ಎಂದ ಶಾಸಕ ಕಂದಕೂರ Read More »

ಕಲಬುರಗಿ: ಪರೀಕ್ಷಾ ಅಕ್ರಮ ಹಗರಣ ಆರೋಪಿ ಮನೆಗೆ ಡಾ.ಉಮೇಶ್ ಜಾಧವ್ ಭೇಟಿ

ಸಮಗ್ರ ನ್ಯೂಸ್‌ : ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ನಡೆಸಿ ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಬುಧವಾರ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಪಿಎಸ್‌ಐ ಪರೀಕ್ಷೆ ವೇಳೆ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು, ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಕಲಬುರಗಿ ಸಂಸದ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಾತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ಡಿ ಪಾಟೀಲ್ ಅನ್ನು

ಕಲಬುರಗಿ: ಪರೀಕ್ಷಾ ಅಕ್ರಮ ಹಗರಣ ಆರೋಪಿ ಮನೆಗೆ ಡಾ.ಉಮೇಶ್ ಜಾಧವ್ ಭೇಟಿ Read More »

ಬಿಜೆಪಿ ವಿರುದ್ಧವೇ ಗುಡುಗಿದ ಎಚ್.ಡಿ ದೇವೇಗೌಡ| ಕಾವೇರಿ ಹೋರಾಟ ಕುರಿತು ಅಸಮಾಧಾನ

ಸಮಗ್ರ ನ್ಯೂಸ್: ಮೈತ್ರಿ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಬಿಜೆಪಿ ವಿರುದ್ಧವೇ ಗುಡುಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಕಾವೇರಿ ಹೋರಾಟದ ದಿನಗಳನ್ನು ನೆನೆದ ದೇವೇಗೌಡರು, ಬಿಜೆಪಿ ವಿರುದ್ಧವೇ ಅಸಮಾಧಾನ ಹೊರಹಾಕಿದ ಘಟನೆ ಕೊರಟಗೆರೆಯಲ್ಲಿ ನಡೆದ ಮೈತ್ರಿ ಸಭೆಯಲ್ಲಿ ನಡೆದಿದೆ. ಕಾವೇರಿ ಹೋರಾಟಕ್ಕೆ ಬಿಜೆಪಿಯ 17 ಜನ ಸಂಸದರು ನನಗೆ ಬೆಂಬಲ ನೀಡಲಿಲ್ಲ. ಲೋಕಸಭೆಯಲ್ಲಿ ಒಬ್ಬ ದೇವೇಗೌಡ, 17 ಜನ ಬಿಜೆಪಿ ಸಂಸದರು ಇದ್ದರು. ಆದರೆ, ನನಗೆ ಬೆಂಬಲ ನೀಡಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಅಂದು ರಾಜ್ಯದ

ಬಿಜೆಪಿ ವಿರುದ್ಧವೇ ಗುಡುಗಿದ ಎಚ್.ಡಿ ದೇವೇಗೌಡ| ಕಾವೇರಿ ಹೋರಾಟ ಕುರಿತು ಅಸಮಾಧಾನ Read More »

ಚಾಮರಾಜನಗರ: ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದ ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿಲ್ಲ- ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟನೆ

ಸಮಗ್ರ ನ್ಯೂಸ್ : ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಯಾವುದೇ ಗೋರಿಗಳನ್ನು ನಿರ್ಮಾಣ ಮಾಡಿಲ್ಲ ಎಂದು ಸೆಂಟ್ ಪೀಟರ್ಸ್ ಲೂಥರನ್ ಚರ್ಚ್‍ನ ಫಾದರ್ ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟಪಡಿಸಿದರು. ಪಟ್ಟಣದ ಸೆಂಟ್ ಪೀಟರ್ಸ್ ಚರ್ಚ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ವಿಜಯಪುರ ಸರ್ವೆ ನಂಬರ್ 102, 62, 61 ಮತ್ತು 105 ರ ಮಧ್ಯೆ ಇರುವ ಸರ್ಕಾರಿ ರಸ್ತೆ ಮತ್ತು ರಾಜ ಕಾಲುವೆಯಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಗೋರಿಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು

ಚಾಮರಾಜನಗರ: ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದ ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿಲ್ಲ- ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟನೆ Read More »