Editor

ಪುತ್ತೂರು: ಬೈಕ್ ಗೆ ಡಿಕ್ಕಿ ಹೊಡೆದ ಜೀಪ್| ಬೈಕ್ ಸವಾರ ಸಾವು, ಮಕ್ಕಳು ಗಂಭೀರ

ಸಮಗ್ರ ನ್ಯೂಸ್: ಬೈಕ್‍ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಲೋಕೇಶ್ ಅವರು

ಪುತ್ತೂರು: ಬೈಕ್ ಗೆ ಡಿಕ್ಕಿ ಹೊಡೆದ ಜೀಪ್| ಬೈಕ್ ಸವಾರ ಸಾವು, ಮಕ್ಕಳು ಗಂಭೀರ Read More »

ಲೋಕಸಭಾ ಚುನಾವಣೆ/ ನಾಳೆ ದೇಶದ 102 ಕ್ಷೇತ್ರಗಳಲ್ಲಿ ಮತದಾನ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದ್ದು, 21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣಾ ಪ್ರಚಾರವು ಬುಧವಾರ ಮಧ್ಯಾಹ್ನ 3 ಗಂಟೆಗೆ ಈಶಾನ್ಯದಲ್ಲಿ ಮುಕ್ತಾಯಗೊಂಡಿತು. ಇತರ ಪ್ರದೇಶಗಳಲ್ಲಿ ಸಂಜೆ 6 ಗಂಟೆಗೆ ಮುಕ್ತಾಯವಾಯಿತು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.

ಲೋಕಸಭಾ ಚುನಾವಣೆ/ ನಾಳೆ ದೇಶದ 102 ಕ್ಷೇತ್ರಗಳಲ್ಲಿ ಮತದಾನ Read More »

ಚುನಾವಣಾ ಅಭ್ಯರ್ಥಿಗಳೀಗೆ ಪತ್ರ ಬರೆದ ಮೋದಿ/ ಅಣ್ಣಾಮಲೈಗೆ ಶ್ಲಾಘನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಎನ್‍ಡಿಎ ಮೈತ್ರಿಕೂಟದ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಎಲ್ಲ ಅಭ್ಯರ್ಥಿಗಳಿಗೆ ವೈಯಕ್ತಿಕ ಪತ್ರ ಬರೆದಿದ್ದು, ತಮ್ಮ ಕ್ಷೇತ್ರಗಳ ಮತದಾರರಿಗೆ ತಮ್ಮ ಸಂದೇಶವನ್ನು ತಲುಪಿಸುವಂತೆ ಒತ್ತಾಯಿಸಿದ್ದಾರೆ. ಕೊಯಮತ್ತೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಪ್ಪುಸ್ವಾಮಿ ಅಣ್ಣಾಮಲೈ ಅವರಿಗೆ ಬರೆದಿರುವ ಪತ್ರದಲ್ಲಿ, ಕೆಲಸ ತೊರೆದು ಸರ್ಕಾರಿ ಸೇವೆಗೆ ಸೇರುವ ಅಣ್ಣಾಮಲೈ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ನಿಮ್ಮ ಪ್ರತಿಷ್ಠಿತ ಉದ್ಯೋಗವನ್ನು ತೊರೆದು ಜನರ ಸೇವೆಗೆ ನೇರವಾಗಿ ನಿಮ್ಮನ್ನು ತೊಡಗಿಸಿಕೊಳ್ಳುವ ನಿಮ್ಮ ನಿರ್ಧಾರಕ್ಕೆ ಅಭಿನಂದನೆಗಳು.

ಚುನಾವಣಾ ಅಭ್ಯರ್ಥಿಗಳೀಗೆ ಪತ್ರ ಬರೆದ ಮೋದಿ/ ಅಣ್ಣಾಮಲೈಗೆ ಶ್ಲಾಘನೆ Read More »

ಇಂದು ಮಂಡ್ಯದಲ್ಲಿ ನಟ ದರ್ಶನ್ ಪ್ರಚಾರ/ ಕಾಂಗ್ರೆಸ್ ಪರ ನಿಂತ ಚಾಲೆಂಜಿಂಗ್ ಸ್ಟಾರ್

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಸ್ಟ್ರಾರ್ ಚಂದ್ರು ಪರ ನಟ ದರ್ಶನ್ ಇಂದು ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೂ ಪ್ರಚಾರ ನಡೆಸಲು ಮುಂದಾಗಿದ್ದಾರೆ. ಬೆಳಗ್ಗೆ 9:30ಕ್ಕೆ ಮಂಡ್ಯ ಜಿಲ್ಲೆ ಹಲಗೂರು ಪಟ್ಟಣದಿಂದ ಮತಯಾಚನೆಗೆ ಪ್ರಚಾರ ಆರಂಭಿಸಲಿದ್ದಾರೆ. ಈ ಹಿಂದೆ ದರ್ಶನ್ ಅವರು ಸುಮಲತಾ ಅಂಬರೀಶ್ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದರು. ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಸುಮಲತಾ ಅಂಬರೀಶ್ ಈ ಬಾರಿ ಮಂಡ್ಯ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಎನ್‍ಡಿಎ ಅಭ್ಯರ್ಥಿಯಾಗಿ ಮಾಜಿ

ಇಂದು ಮಂಡ್ಯದಲ್ಲಿ ನಟ ದರ್ಶನ್ ಪ್ರಚಾರ/ ಕಾಂಗ್ರೆಸ್ ಪರ ನಿಂತ ಚಾಲೆಂಜಿಂಗ್ ಸ್ಟಾರ್ Read More »

ಏ.24ರಂದು ಮಡಿಕೇರಿಗೆ ಯೋಗಿ ಆದಿತ್ಯನಾಥ್

ಉತ್ತರಪ್ರದೇಶದ ಮುಖ್ಯಮಂತ್ರಿ, ಬಿಜೆಪಿ ಸ್ಟಾರ್ ಪ್ರಚಾರಕರಾದ ಯೋಗಿ ಆದಿತ್ಯನಾಥ್ ಏಪ್ರಿಲ್ 24 ರಂದು ಮಡಿಕೇರಿಗೆ ಭೇಟಿ. ಮಡಿಕೇರಿಯ ಗಾಂಧಿಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಚುನಾವಣಾ ಪ್ರಚಾರ ನಡೆಸಲಿರುವ ಯೋಗಿ ಆದಿತ್ಯನಾಥ್. ಕಾರ್ಯಕ್ರಮದ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾಹಿತಿ.

ಏ.24ರಂದು ಮಡಿಕೇರಿಗೆ ಯೋಗಿ ಆದಿತ್ಯನಾಥ್ Read More »

ರೈಲ್ ವಿಕಾಸ್ ನಿಗಮದಲ್ಲಿ 2.80 ಲಕ್ಷ ಸಂಬಳದ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜನರಲ್ ಮ್ಯಾನೇಜರ್(ಸಿವಿಲ್​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 27, 2024 ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಿದ್ಯಾರ್ಹತೆ:ರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ

ರೈಲ್ ವಿಕಾಸ್ ನಿಗಮದಲ್ಲಿ 2.80 ಲಕ್ಷ ಸಂಬಳದ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ Read More »

ಅಹಮದಾಬಾದ್ ನಲ್ಲಿ ಭೀಕರ ಅಪಘಾತ| 10 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್‌ವೇಯ ನಾಡಿಯಾಡ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಕೆಟ್ಟು ನಿಂತಿದ ಟ್ಯಾಂಕರ್‌ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಈ ಕಾರು ವಡೋದರಾದಿಂದ ಅಹಮದಾಬಾದ್‌ಗೆ ಹೋಗುತ್ತಿತ್ತು. ಅಪಘಾತದ ನಂತರ, ವಡೋದರಾ-ಅಹಮದಾಬಾದ್ ಎಕ್ಸ್‌ಪ್ರೆಸ್ ಹೆದ್ದಾರಿ ಜಾಮ್ ಆಗಿದ್ದು, ಅಪಘಾತದಿಂದ ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ವಿಷಯ ತಿಳಿಯಿತ್ತಿದ್ದಂತೆಯೇ ಪೊಲೀಸರು ಹಾಗೂ ಖೇಡಾ ಜಿಲ್ಲೆಯ ಎಸ್ಪಿ

ಅಹಮದಾಬಾದ್ ನಲ್ಲಿ ಭೀಕರ ಅಪಘಾತ| 10 ಮಂದಿ ದುರ್ಮರಣ Read More »

ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕರ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಇಂದು ರಾಮನವಮಿ ಸಂಭ್ರಮ, ನಾಡಿನೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ರಾಮನವಮಿ ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದ ಯುವಕರನ್ನು ಅಡ್ಡಗಟ್ಟಿ ಅನ್ಯಕೋಮಿನ ಯುವಕರು ಪುಂಡಾಟ ಮೆರೆದಿದ್ದಾರೆ. ಈ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ. ಇಬ್ಬರು ಮುಸ್ಲಿಂ ಯುವಕರು ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ, ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೇ ವೇಳೆ

ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕರ ಮೇಲೆ ಹಲ್ಲೆ Read More »

ಮೈಸೂರು: ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ-ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸಮಗ್ರ ನ್ಯೂಸ್‌ : ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಚನ್ನಗುಂಡಿ ಹಾಡಿಯಲ್ಲಿರುವ ಆದಿವಾಸಿ ಜನರು ಎಚ್ಚರಿಕೆ ನೀಡಿದ್ದಾರೆ. ಏಪ್ರಿಲ್ 26 ರಂದು ನಡೆಯುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ನಮ್ಮ ತಾತ ಮುತ್ತಾತನ ಕಾಲದಿಂದಲೂ ನಾವು ಚನ್ನಗುಂಡಿಹಾಡಿ ಗ್ರಾಮದಲ್ಲಿ ಮತವನ್ನು ಹಾಕಿ ಬರುತ್ತಿದ್ದೇವೆ. ನಮ್ಮೂರಲ್ಲಿ ಇದ್ದ ಮತಗಟ್ಟೆಯನ್ನು ತೆಗೆದು ಹಾಕಿ ಪಕ್ಕದ

ಮೈಸೂರು: ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ-ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ Read More »

ಹಾಸನ: ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸಿ;ಹೆಚ್.ಡಿ. ಗಿರೀಶ್

ಸಮಗ್ರ ನ್ಯೂಸ್‌ : ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸುವಂತೆ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ. ಗಿರೀಶ್ ತಿಳಿಸಿದ್ದಾರೆ. ಹಾಸನ ನಗರದ ಜಾಕಿ ಮತ್ತು ಗೋಕುಲದಾಸ ಕೈಗಾರಿಕಾ ಕಾರ್ಖಾನೆಗೆ ಹಾಸನ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ಹಾಗೂ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಭೇಟಿ ನೀಡಿ ಮತದಾನ ಮಾಹಿತಿಯುಳ್ಳ ಬ್ಯಾನರ್ ಅಳವಡಿಸಿ ಅಲ್ಲಿನ ಕಾರ್ಮಿಕರಿಗೆ ಮತದಾನ ಬಗ್ಗೆ

ಹಾಸನ: ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸಿ;ಹೆಚ್.ಡಿ. ಗಿರೀಶ್ Read More »