Editor

ಧಾರವಾಡ:18 ಕೋಟಿ ಹಣ ಪತ್ತೆ|ಐಟಿ ಅಧಿಕಾರಿಗಳು ಎಸ್‌ಬಿಐಗೆ ಹಣ ರವಾನೆ

ಸಮಗ್ರ ನ್ಯೂಸ್‌ : ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುರವರ ಅವರ ಮನೆಯಲ್ಲಿ ಜಪ್ತಿ ಮಾಡಲಾದ 18 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿರುವ ಘಟನೆ ನಡೆದಿದೆ. ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅವರ ಮನೆಯಲ್ಲಿ 18 ಕೋಟಿ ರೂ. ಬೃಹತ್

ಧಾರವಾಡ:18 ಕೋಟಿ ಹಣ ಪತ್ತೆ|ಐಟಿ ಅಧಿಕಾರಿಗಳು ಎಸ್‌ಬಿಐಗೆ ಹಣ ರವಾನೆ Read More »

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ| ಬಾಲರಾಮನನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ

ಸಮಗ್ರ ನ್ಯೂಸ್: ಇಂದು ರಾಮ ನವಮಿ ಸಂಭ್ರಮ. ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೊಂಡಿರುವ ಬಾಲಕ ರಾಮನಿಗೆ ಇದು ಮೊದಲ ಶ್ರೀ ರಾಮ ನವಮಿ. ಈ ವರ್ಷ ವಿಶೇಷವಾಗಿ ರಾಮನಿಗೆ ‘ಸೂರ್ಯ ಅಭಿಷೇಕ / ಸೂರ್ಯ ತಿಲಕʼವೂ ಇಂದು ನೆರವೇರಿತು. ಕೋಟ್ಯಂತರ ಭಕ್ತರು ಈ ಕ್ಷಣವನ್ನು ಕಣ್ತುಂಬಿಕೊಂಡರು. ಸುಮಾರಾಗಿ ಮೂರರಿಂದ ನಾಲ್ಕು ನಿಮಿಷಗಳ ವರೆಗೆ ರಾಮನ ಮೇಲೆ ಸೂರ್ಯನ ಕಿರಣಗಳು ಸ್ಪರ್ಶಿಸಿದೆ.ಸೂರ್ಯರಶ್ಮಿ ನೇರವಾಗಿ ರಾಮ ಹಣೆಗೆ ಬೀಳುವಂತೆ ಮಾಡಲು ಈ ಹಿಂದೆ ವಿಜ್ಞಾನಿಗಳು

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ| ಬಾಲರಾಮನನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ Read More »

ಉಡುಪಿ: ಸೌಜನ್ಯಾಳ ನ್ಯಾಯಕ್ಕಾಗಿ ಈ ಬಾರಿ ನೋಟಾ ಜಾಗೃತಿ- ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್‌ : ಉಜಿರೆಯ ಎಸ್‌ಡಿಎಂ ಕಾಲೇಜಿನ 17 ವರ್ಷದ ಹೆಣ್ಣುಮಗಳು ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಕೊಲೆಯಾಗಿ 11 ವರ್ಷಗಳು ಕಳೆದಿವೆ. ನೈಜ ಅಪರಾಧಿಗಳ ಬಂಧನ ಇನ್ನೂ ಆಗಿಲ್ಲ, ಸೌಜನ್ಯ ತಾಯಿ ಕುಸುಮಾವತಿ ನ್ಯಾಯಕ್ಕಾಗಿ ಹರಿಸಿದ ಕಣ್ಣೀರು ಅಧಿಕಾರದಲ್ಲಿರುವ ಯಾವ ಪಕ್ಷದ ನಾಯಕರಿಗೂ ಕಾಣಲಿಲ್ಲ. ಹೆತ್ತಕರುಳಿನ ಕೂಗು ಇವರಿಗೆ ಕೇಳಿಸಲಿಲ್ಲ. ಇದೀಗ ಸೌಜನ್ಯಾ ಕುಟುಂಬದ ನ್ಯಾಯಕ್ಕಾಗಿ ನೋಟ ಅಭಿಯಾನ ಆರಂಭಿಸಿದ್ದು, ಅದಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗಿದೆ ಎಂದು ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಉಡುಪಿ: ಸೌಜನ್ಯಾಳ ನ್ಯಾಯಕ್ಕಾಗಿ ಈ ಬಾರಿ ನೋಟಾ ಜಾಗೃತಿ- ಮಹೇಶ್ ಶೆಟ್ಟಿ ತಿಮರೋಡಿ Read More »

ಹಿಂದೂಗಳ ಮೇಲೆ ದಾಳಿ ಹೆಚ್ಚಳ/ ಕಳವಳ ವ್ಯಕ್ತಪಡಿಸಿದ ಭಾರತೀಯ ಅಮೆರಿಕನ್ ಸಂಸದ,

ಸಮಗ್ರ ನ್ಯೂಸ್: ಅಮೆರಿಕದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚಾಗುತ್ತಿದೆ ಎಂದು ಭಾರತೀಯ ಅಮೆರಿಕನ್ ಸಂಸದ, ಕರ್ನಾಟಕ ಮೂಲದ ಶ್ರೀ ಥಾನೇದಾರ್ ಕಳವಳ ವ್ಯಕ್ತಪಡಿಸಿದ್ದು, ಇದು ಸಂಘಟಿತ ಹಿಂದೂ ವಿರೋಧಿ ದಾಳಿಯ ಆರಂಭ. ಈ ದ್ವೇಷದ ವಿರುದ್ಧದ ಸದಸ್ಯರೆಲ್ಲರೂ ಒಂದಾಗಬೇಕು ಎಂದು ಕರೆ ಕೊಟ್ಟಿದ್ದಾರೆ. ಹಿಂದೂಗಳ ಮೇಲೆ ದಾಳಿಗಳು ಹೆಚ್ಚಳವಾಗುತ್ತಿದೆ. ಆನ್ಲೈನ್ ಗಳಲ್ಲಿ ಅವರ ವಿರುದ್ಧ ತಪ್ಪು ಮಾಹಿತಿಗಳನ್ನು ನೀಡುವ ಕೆಲಸ ನಡೆಯುತ್ತಿದೆ. ಹಿಂದೂ ಧರ್ಮ ಇತರರ ಮೇಲೆ ದಾಳಿ ಮಾಡುವ ಧರ್ಮವಲ್ಲ, ಆದರೆ ಅವರ ಮೇಲೆ ದೌರ್ಜನ್ಯ

ಹಿಂದೂಗಳ ಮೇಲೆ ದಾಳಿ ಹೆಚ್ಚಳ/ ಕಳವಳ ವ್ಯಕ್ತಪಡಿಸಿದ ಭಾರತೀಯ ಅಮೆರಿಕನ್ ಸಂಸದ, Read More »

ಪುಷ್ಪ 2ನ ಪೋಸ್ಟರ್‌ಗೆ ಮೋದಿ ಐಕಾನ್ ಲುಕ್ ಕೊಟ್ಟ ಫೋಟೋ ವೈರಲ್‌

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರದ ಜೋರಾಗಿದ್ದು, ರಾಜಕೀಯ ನಾಯಕರು, ಅಭ್ಯರ್ಥಿಗಳು ದೇಶಾದ್ಯಂತ ಮತಯಾಚನೆ ನಡೆಸುತ್ತಿದ್ದಾರೆ. ಅಖಾಡದಲ್ಲಿ ಬೃಹತ್ ಸಮಾವೇಶಗಳು ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಲೋಕಸಭಾ ಚುನಾವಣೆಯ ಹವಾ ಹೇಗಿದೆ ಅನ್ನೋದಕ್ಕೆ ಪ್ರಧಾನಿ ನರೇಂದ್ರ ಮೋದಿ ಫೋಟೋಗೆ ಅವರ ಅಭಿಮಾನಿಗಳು ಪುಷ್ಪ ಟಚ್‌ ಕೊಟ್ಟಿದ್ದು, ಫೋಟೋ ಸಖತ್ ವೈರಲ್ ಆಗಿದೆ. ಇತ್ತೀಚಿಗೆ ತೆಲುಗಿನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುಷ್ಪ 2 ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಅದೇ ಪೋಸ್ಟರ್‌ ಅನ್ನ ಬಳಸಿಕೊಂಡಿರುವ

ಪುಷ್ಪ 2ನ ಪೋಸ್ಟರ್‌ಗೆ ಮೋದಿ ಐಕಾನ್ ಲುಕ್ ಕೊಟ್ಟ ಫೋಟೋ ವೈರಲ್‌ Read More »

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್! ನಿಮಗಾಗಿ ಇಲ್ಲಿದೆ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಪ್ರಮುಖ ಸಂಸ್ಥೆ ಗುಡ್‌ನ್ಯೂಸ್ ಹೇಳಿದೆ. ಅಣುಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) 400 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಗೇಟ್ (ಗೇಟ್-ಇಂಜಿನಿಯರಿಂಗ್‌ನಲ್ಲಿ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್) ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್ npcilcareers.co.in ಗೆ ಭೇಟಿ ನೀಡಿ ಮತ್ತು ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಏಪ್ರಿಲ್ 30ಕ್ಕೆ ಕೊನೆಗೊಳ್ಳುತ್ತದೆ. ಈ ನೇಮಕಾತಿಯ ಬಗ್ಗೆ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್! ನಿಮಗಾಗಿ ಇಲ್ಲಿದೆ ಸುವರ್ಣಾವಕಾಶ! Read More »

RBI Rules: ನೀವು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅಕೌಂಟ್ ಹೊಂದಿದ್ದೀರಾ? ಹಾಗಾದ್ರೆ ಈ ರೂಲ್ಸ್ ಗಳು ಗೊತ್ತಿರಲಿ

ಆಧುನಿಕ ಡಿಜಿಟಲ್ ವಹಿವಾಟಿಗೆ ಬ್ಯಾಂಕ್ ಖಾತೆ ಕೇಂದ್ರವಾಗಿದೆ. ಸರ್ಕಾರದ ಸವಲತ್ತುಗಳನ್ನು ಪಡೆಯಲು, ಆನ್‌ಲೈನ್‌ನಲ್ಲಿ ಉಳಿಸಲು ಮತ್ತು ವಹಿವಾಟು ನಡೆಸಲು ಬ್ಯಾಂಕ್ ಖಾತೆ ಕಡ್ಡಾಯವಾಗಿದೆ. ಅನೇಕ ಜನರು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಅದರಲ್ಲೂ ಖಾಸಗಿ ಕಚೇರಿಗಳಲ್ಲಿ ಕೆಲಸ ಮಾಡುವವರು ಯಾವುದೇ ಕಂಪನಿ ಸೇರಿದರೂ.. ಸಂಬಳಕ್ಕಾಗಿ ಬ್ಯಾಂಕ್ ಖಾತೆಗಳಂತಹ ಹಲವು ಖಾತೆಗಳು ನಮ್ಮ ಹೆಸರಿನಲ್ಲಿವೆ. ಒಬ್ಬರು ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಬಹುದು? ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುವ ನಿಯಮಗಳೇನು ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಈ

RBI Rules: ನೀವು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅಕೌಂಟ್ ಹೊಂದಿದ್ದೀರಾ? ಹಾಗಾದ್ರೆ ಈ ರೂಲ್ಸ್ ಗಳು ಗೊತ್ತಿರಲಿ Read More »

ಬಿಜೆಪಿ ಸೇರಿದ ಅಖಂಡ ಶ್ರೀನಿವಾಸ ಮೂರ್ತಿ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಅಖಂಡ ಶ್ರೀನಿವಾಸ ಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಟಿಕೆಟ್ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡಿರುವ ಪುಲಿಕೇಶಿನಗರ ಜಿಲ್ಲೆಯ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಯಡಿಯೂರಪ್ಪ ಅವರು ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು,

ಬಿಜೆಪಿ ಸೇರಿದ ಅಖಂಡ ಶ್ರೀನಿವಾಸ ಮೂರ್ತಿ Read More »

ಅರಬರ ನಾಡಲ್ಲಿ ಭಾರೀ ಮಳೆ| ವರ್ಷಧಾರೆಗೆ ಮುಳುಗಿದ ಮಾಯಾನಗರಿ ದುಬೈ

ಸಮಗ್ರ ನ್ಯೂಸ್: ಕಂಡುಕೇಳರಿಯದ ಚಂಡಮಾರುತವೊಂದು ಮರುಭೂಮಿ ನೆಲವಾದ ನೆಲವನ್ನು ನಡುಗಿಸುತ್ತಿದೆ. ಎಪ್ರಿಲ್ 15ರ ಸಂಜೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಈ ಮಾಯಾನಗರಿ ತತ್ತರಿಸಿ ಹೋಗಿದೆ. ಪ್ರವಾಹದಿಂದಾಗಿ 18 ಜನ ಮೃತಪಟ್ಟಿದ್ದಾರೆ. ಸದಾ ಒಣ ಹವೆ ಹಾಗೂ ಅಧಿಕ ತಾಪಮಾನ ಕಾಣುವ ದುಬೈ ಜನ ಪ್ರವಾಹದ ಹೊಡೆತ ನೋಡಿ ಮೂಕವಿಸ್ಮೀತರಾಗಿದ್ದಾರೆ. ಭಾರಿ ಮಳೆಯಿಂದ ಹತ್ತಾರು ವಿಮಾನಗಳು ರದ್ದಾಗಿವೆ. ಪ್ರವಾಹದಿಂದ ದುಬೈ ನಗರವು ಸ್ತಬ್ಧಗೊಂಡಿದೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಶ್ವದ ಅತ್ಯಂತ ಜನನಿಬಿಡ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಜಲಾವೃತವಾಗಿರುವುದರಿಂದ

ಅರಬರ ನಾಡಲ್ಲಿ ಭಾರೀ ಮಳೆ| ವರ್ಷಧಾರೆಗೆ ಮುಳುಗಿದ ಮಾಯಾನಗರಿ ದುಬೈ Read More »

ಬಿಹಾರ : ಜೇಡದಲ್ಲೂ ಮಾನವನ ಮುಖದ ರೂಪ ಪತ್ತೆ|ವಿಡಿಯೋ ಎಲ್ಲೆಡೆ ವೈರಲ್‌

ಸಮಗ್ರ ನ್ಯೂಸ್: ಮಾನವನ ಮುಖವನ್ನು ಹೋಳುವ ಜೇಡವೊಂದು ಪತ್ತೆಯಾಗಿರುವ ಘಟನೆ ಬಿಹಾರದ ಜೆಹಾನಾಬಾದ್‌ನ ಮನೆಯೊಂದರಲ್ಲಿ ನಡೆದಿದೆ. ಈ ವಿಭಿನ್ನವಾದ ಜೇಡದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮನೆಯೊಂದರ ಗೋಡೆಯ ಮೇಲೆ ಅಂಟಿಕೊಂಡಿದ್ದ ಈ ಜೇಡವನ್ನು ಸ್ಥಳೀಯರು ನೋಡಲು ಮುಗಿಬಿದ್ದಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಮಾನವನ ಮುಖವನ್ನು ಹೋಳುವ ಜೇಡದ ವಿಡಿಯೋ ಹಾಕಿದ್ದು, ಒಂದೇ ವಾರದಲ್ಲಿ 38 ಸಾವಿರಕ್ಕೂ ಹೆಚ್ಚಿನ ಜನರು ನೋಡಿದ್ದಾರೆ. ಮಾನವನ ಮುಖವನ್ನು ಹೋಳುವ ಜೇಡದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್

ಬಿಹಾರ : ಜೇಡದಲ್ಲೂ ಮಾನವನ ಮುಖದ ರೂಪ ಪತ್ತೆ|ವಿಡಿಯೋ ಎಲ್ಲೆಡೆ ವೈರಲ್‌ Read More »