Editor

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ – ಮನೋಜ್ ಕುಮಾ ಮೀನಾ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್​ ಕುಮಾರ್​ ಮೀನಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಐಟಿ ವಲಯ ಸೇರಿದಂತೆ

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ – ಮನೋಜ್ ಕುಮಾ ಮೀನಾ Read More »

ವೋಟರ್ ಸ್ಲಿಪ್‍ಗಳಲ್ಲಿ ಮತಗಟ್ಟೆಯ ಕ್ಯೂಆರ್ ಕೋಡ್/ ಚುನಾವಣಾ ಆಯೋಗದ ನೂತನ ಪ್ರಯೋಗ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮತಗಟ್ಟೆಯನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುವಂತೆ ಮನೆ ಮನೆಗೆ ಹಂಚುವ ವೋಟರ್ ಸ್ಲಿಪ್‍ಗಳಲ್ಲಿ ಇದೇ ಮೊದಲ ಬಾರಿಗೆ ಮತಗಟ್ಟೆಯ ಕ್ಯೂಆರ್ ಕೋಡ್ ಮುದ್ರಿಸಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮಾಡಿರುವ ಪ್ರಯೋಗ ಇದಾಗಿದ್ದು, ರಾಜ್ಯದ ನಗರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸೌಲಭ್ಯ ಜಾರಿಯಾಗಿದೆ. ನಗರದ ನಿವಾಸಿಗಳು ಕ್ಯೂಆರ್ ಕೋಡ್ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ತಲುಪಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ

ವೋಟರ್ ಸ್ಲಿಪ್‍ಗಳಲ್ಲಿ ಮತಗಟ್ಟೆಯ ಕ್ಯೂಆರ್ ಕೋಡ್/ ಚುನಾವಣಾ ಆಯೋಗದ ನೂತನ ಪ್ರಯೋಗ Read More »

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ| ಹೃದಯಾಘಾತದಿಂದ ಕಳಚಿದ ಸ್ಯಾಂಡಲ್ ವುಡ್ ಕೊಂಡಿ

ಸಮಗ್ರ ನ್ಯೂಸ್: ಕನ್ನಡ ಚಿತ್ರ ರಂಗದ ಹಿರಿಯ ನಟ ದ್ವಾರಕೀಶ್‌(81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಹಲವು ಖ್ಯಾತ ನಟರೊಂದಿಗೆ ನಟಿಸಿರುವ ದ್ವಾರಕೀಶ್‌ ಅವರು ಅನೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ| ಹೃದಯಾಘಾತದಿಂದ ಕಳಚಿದ ಸ್ಯಾಂಡಲ್ ವುಡ್ ಕೊಂಡಿ Read More »

ಮೈತ್ರಿ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರ ಹೈಡ್ರಾಮಾ| ದೇವೇಗೌಡರ ವಿರುದ್ಧ ಧಿಕ್ಕಾರ ಘೋಷಣೆ

ಸಮಗ್ರ ನ್ಯೂಸ್: ನಿನ್ನೆ ತುಮಕೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ. ಮಾಜಿ ಪ್ರಧಾನಿ ದೇವೇಗೌಡ ಅವರಿದ್ದ ವೇದಿಕೆಗೆ ನುಗ್ಗಿ ಗೊಂದಲ ಸೃಷ್ಟಿಸಿದ ಕಾಂಗ್ರೆಸ್ ಕಾರ್ಯಕರ್ತೆಯರು, ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ತುಮಕೂರಿನ ಕುಂಚಿಟಿಗರ ಸಭಾಭವನದಲ್ಲಿ ನಡೆಯುತ್ತಿದ್ದ ಮೈತ್ರಿ ಸಮಾವೇಶದಲ್ಲಿ ಕಾರ್ಯಕರ್ತೆಯರ ಸೋಗಿನಲ್ಲಿ ಬಂದು ಸಭೆಯಲ್ಲಿ ಕೂತಿದ್ದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತೆಯರು ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯವರು, ಗ್ಯಾರಂಟಿಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ

ಮೈತ್ರಿ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರ ಹೈಡ್ರಾಮಾ| ದೇವೇಗೌಡರ ವಿರುದ್ಧ ಧಿಕ್ಕಾರ ಘೋಷಣೆ Read More »

ಶಾರ್ಟ್ ಸರ್ಕ್ಯೂಟ್​​ಗೆ ನಾಲ್ಕುವರೆ ವರ್ಷದ ಮಗು ಬಲಿ| ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಸಮಗ್ರ ನ್ಯೂಸ್: ಬೆಂಗಳೂರಿನ ಸುಲ್ತಾನ್ ಪಾಳ್ಯ ಅಪಾರ್ಟ್​​ಮೆಂಟ್​​ನ ಕೊಠಡಿಯೊಂದರಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್​​ಗೆ ನಾಲ್ಕುವರೆ ವರ್ಷದ ಗಂಡು ಮಗು ಅನೂಪ್ ಬಲಿಯಾಗಿದೆ. ಸುಲ್ತಾನ್ ಪಾಳ್ಯ ಬಳಿಯಿರುವ ರಿಯಾನ್ ವುಡ್ ಅಪಾರ್ಟ್​ಮೆಂಟ್​​ನ ನಾಲ್ಕನೇ‌ ಮಹಡಿಯಲ್ಲಿರುವ ಮನೆಯೊಂದರಲ್ಲಿ ನೇಪಾಳ ಮೂಲದ ಪೂರಾನ್ ಖಂಡಕ್‌ ಹಾಗೂ ಇವರ ಪತ್ನಿ ಲಕ್ಷ್ಮೀ ವಾಸವಿದ್ದರು. ಘಟನೆ ನಡೆದ ಅಪಾರ್ಟ್​​ಮೆಂಟ್​​ನಲ್ಲಿ ಮಗುವಿನ ತಂದೆ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದರೆ, ತಾಯಿ ಸಹ ಅಪಾರ್ಟ್​ಮೆಂಟ್​​ನಲ್ಲಿ ಹೌಸ್‌ ಕೀಪಿಂಗ್ ಆಗಿ ಕೆಲಸ‌ ಮಾಡುತ್ತಿದ್ದರು. ಇವರು ನಿತ್ಯ ಮಧ್ಯಾಹ್ನ ಮಗುವನ್ನ ಮಲಗಿಸಿ

ಶಾರ್ಟ್ ಸರ್ಕ್ಯೂಟ್​​ಗೆ ನಾಲ್ಕುವರೆ ವರ್ಷದ ಮಗು ಬಲಿ| ಮುಗಿಲು ಮುಟ್ಟಿದ ಪೋಷಕರ ಆಕ್ರಂದನ Read More »

ಪ್ರಚಾರದಲ್ಲಿ ಭಾಗಿಯಾದ ಮಹಿಳೆಯರಿಗೆ ಹಣ ಹಂಚಿದ ಕಾಂಗ್ರೆಸ್ ಮುಖಂಡರು

ಸಮಗ್ರ ನ್ಯೂಸ್: ಸಂಸತ್ ಸಮರದ ಅಖಾಡದಲ್ಲಿ ಈಗ ಕಾಂಚಾಣದ ಸದ್ದು ಜೋರಾಗಿದೆ. ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂಧರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ನಂತರ ಸಚಿವರು, ಅಭ್ಯರ್ಥಿ, ಮುಖಂಡರು ರ್ಯಾಲಿ ನಡೆಸಿದರು ಈ ರ್ಯಾಲಿಯಲ್ಲಿ ಭಾಗಿಯಾದ ಮಹಿಳೆಯರಿಗೆ ಸ್ಥಳೀಯ ಮುಖಂಡನೊಬ್ಬ ಹಣ ಹಂಚುತ್ತಿದ್ದಾನೆ. ಆತನಿಂದ ಬಂಜಾರಾ ಸಮುದಾಯಕ್ಕೆ ಸೇರಿದ ಮಹಿಳೆಯರು ಹಣ ಪಡೆದುಕೊಳ್ಳುತ್ತಿದ್ದಾರೆ. ಈ ಮುಖಂಡ ಎಲ್ಲ ಮಹಿಳೆಯರಿಗೆ ಮತ್ತು ಪುರುಷರಿಗೆ ಹಣ ಹಂಚಿರುವುದು ಬೆಳಕಿಗೆ ಬಂದಿದೆ. ಪ್ರಚಾರದ

ಪ್ರಚಾರದಲ್ಲಿ ಭಾಗಿಯಾದ ಮಹಿಳೆಯರಿಗೆ ಹಣ ಹಂಚಿದ ಕಾಂಗ್ರೆಸ್ ಮುಖಂಡರು Read More »

ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ ಎಲ್ಇಡಿ ಬೋರ್ಡ್ ಕುಸಿದು ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಎ. 15ರಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಸಿ ನಂತರ ರ‍್ಯಾಲಿ ನಡೆಸಿದರು. ಇದೇ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದು ಖಾಸಗಿ ನ್ಯೂಸ್‌ ಚಾನೆಲ್‌ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ನಡೆದಿದೆ. ಏಕಾಏಕಿ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಬಿದ್ದಿದ್ದು, ಇದರಿಂದ ಮೆರವಣಿಗೆಗೆ ಆಗಮಿಸಿದ ವ್ಯಕ್ತಿಗೆ ತೀವ್ರವಾಗಿ ಪೆಟ್ಟು ಬಿದ್ದು, ತಲೆಯಿಂದ ರಕ್ತ ಸುರಿದಿದೆ. ಗಾಯಾಳುಗಳನ್ನು ಕಂಡು ಕಾಣದಂತೆ ಕಾಂಗ್ರೆಸ್ ಮುಖಂಡರು

ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ ಎಲ್ಇಡಿ ಬೋರ್ಡ್ ಕುಸಿದು ನಾಲ್ವರಿಗೆ ಗಾಯ Read More »

ಆನೇಕಲ್: ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಸೀಜ್

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ರಾಜ್ಯದಾದ್ಯಂತ ಅಲ್ಲಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದು ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಅನ್ನು ಹೆಬ್ಬಗೋಡಿ ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಸಿಎಂಎಸ್ ಏಜೆನ್ಸಿಗೆ ಸೇರಿದ ವಾಹನದಲ್ಲಿ ಎಟಿಎಂಗೆ ಹಣ ಸಾಗಿಸುವಾಗ ವಶಕ್ಕೆ ಪಡೆಯಲಾಗಿದೆ. ಹೆಬ್ಬಗೋಡಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಾಹನ ಪರಿಶೀಲನೆ ಮಾಡಿದ್ದು, ಬಂದೂಕು ಸಹಿತ ಸೆಕ್ಯೂರಿಟಿ ಗಾರ್ಡ್ ಇಲ್ಲದೆ

ಆನೇಕಲ್: ದಾಖಲೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಸೀಜ್ Read More »

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜಮೀರ್ ಅಹಮ್ಮದ್​ ಖಾನ್​ಗೆ ಎದೆ ನೋವು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ ತೆರಳಿದ್ದ ಸಚಿವ ಜಮೀರ್ ಅಹಮ್ಮದ್​ ಖಾನ್​ಗೆ​ ಎದೆ ನೋವು ಕಾಣಿಸಿಕೊಂಡಿದೆ. ಸಂಜೆ ನಾಲ್ಕು ಗಂಟೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.. ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ, ಎಲ್ಲಾ ಪರೀಕ್ಷೆಯಲ್ಲಿ ನಾಮರ್ಲ್​ ಬಂದಿದೆ

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜಮೀರ್ ಅಹಮ್ಮದ್​ ಖಾನ್​ಗೆ ಎದೆ ನೋವು: ಆಸ್ಪತ್ರೆಗೆ ದಾಖಲು Read More »

ಮೈಸೂರಿನಲ್ಲಿ ಬಿಜೆಪಿ ಸಮಾವೇಶ/ ಸ್ಥಳದ ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡ ಯದುವೀರ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶದ ನಂತರ ಆ ಜಾಗದಲ್ಲಿ ಕಸ ಹೆಕ್ಕುವ ಮೂಲಕ ಯದುವೀರ್ ದಂಪತಿ ಗಮನ ಸೆಳೆದಿದ್ದಾರೆ. ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಭಾಷಣ ಮಾಡಿದ್ದು, ಕಾರ್ಯಕ್ರಮದಲ್ಲಿ ಒಟ್ಟಾರೆ ಅರವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಮೈಸೂರು ಕೊಡಗು ಕ್ಷೇತ್ರದ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಮತಯಾಚನೆ ಮಾಡಿದ್ದರು. ಜನರು ಸೇರಿದ್ದ ವೇಳೆ ನೀರಿನ ಬಾಟಲಿಗಳು, ತಿಂಡಿ ಕವರ್‍ಗಳು ಹೀಗೆ ಸಾಕಷ್ಟು

ಮೈಸೂರಿನಲ್ಲಿ ಬಿಜೆಪಿ ಸಮಾವೇಶ/ ಸ್ಥಳದ ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡ ಯದುವೀರ್ Read More »