Editor

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು

ಸಮಗ್ರ ನ್ಯೂಸ್‌ : ಜಿಲ್ಲೆಯ ಮಣಿಕಾ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಬಾಲಕ ಶುಕ್ರವಾರ ಆಟವಾಡುತ್ತಿದ್ದ ವೇಳೆ, ಮಧ್ಯಾಹ್ನ 3ರ ಸುಮಾರಿಗೆ ಕೊಳವೆ ಬಾವಿಯೊಳಗೆ ಬಿದ್ದಿದ್ದ. 40 ಅಡಿ ಆಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಾಲಕನ ರಕ್ಷಣೆಗೆ ವಿವಿಧ ಸಂಸ್ಥೆಗಳು ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ, ರಕ್ಷಣಾ ಕಾರ್ಯದಲ್ಲಿ

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು Read More »

ಮೋದಿ ಗೆಲ್ಲಿಸಲು ಎಲ್ಲಿಗೆ ಕರೆದರೂ ನಾನು ಪ್ರಚಾರಕ್ಕೆ ಬರುವೆ: ಎಚ್ .ಡಿ ದೇವೆಗೌಡ

ಸಮಗ್ರ ನ್ಯೂಸ್: ಇಂದು ಮೈಸೂರಿನಲ್ಲಿ ಮೋದಿ ಸಮಾವೇಶ ನಡೆದಿದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ನರೇಂದ್ರ ಮೋದಿ ಅವರು ಈ ದೇಶ ಕಂಡ ಅತ್ಯಂತ ಯಶಸ್ವಿ ಪ್ರಧಾನಮಂತ್ರಿ ಎಂದು ಹಾಡಿಹೊಗಳಿರುವ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ತಾವು ರಾಜ್ಯದೆಲ್ಲೆಡೆ ಪ್ರಚಾರ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ನೀವು ಎಲ್ಲಿ ಕರೆದರೂ

ಮೋದಿ ಗೆಲ್ಲಿಸಲು ಎಲ್ಲಿಗೆ ಕರೆದರೂ ನಾನು ಪ್ರಚಾರಕ್ಕೆ ಬರುವೆ: ಎಚ್ .ಡಿ ದೇವೆಗೌಡ Read More »

ಬೀದರ್: ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು

ಸಮಗ್ರ ನ್ಯೂಸ್‌ : ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರವಾಸ ಕೊನೆಯ ಗಳಿಗೆಯಲ್ಲಿ ರದ್ದಾಗಿದೆ. ಕಲಬುರಗಿ ಪ್ರವಾಸ ಮುಗಿಸಿಕೊಂಡು ಸಂಜೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಖರ್ಗೆ ಅವರು ಪ್ರಚಾರ ಮಾಡುವವರಿದ್ದರು. ಆದರೆ, ಅನಾರೋಗ್ಯದಿಂದ ಅವರ ಪ್ರವಾಸ ರದ್ದಾಗಿದೆ. ಡಿಹೈಡ್ರೇಶನ್ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆಯವರು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಅವರು ಇಲ್ಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ದಿನ ಪ್ರಚಾರಕ್ಕೆ

ಬೀದರ್: ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು Read More »

ಕುಮಾರಸ್ವಾಮಿ ಹೇಳಿಕೆಯಿಂದ ಮಹಿಳೆಯರ ಘನತೆಗೆ ಧಕ್ಕೆ/ ಕೇಸ್ ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ

ಸಮಗ್ರ ನ್ಯೂಸ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಹಿಳೆಯರ ಬಗ್ಗೆ ನೀಡಿದ್ದ ಹೇಳಿಕೆಯ ವಿರುದ್ಧವಾಗಿ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುದ್ದಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಮಹಿಳೆರ ಘನತೆ, ಚಾರಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ.ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕೆ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ಆಯೋಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ನೊಟೀಸ್

ಕುಮಾರಸ್ವಾಮಿ ಹೇಳಿಕೆಯಿಂದ ಮಹಿಳೆಯರ ಘನತೆಗೆ ಧಕ್ಕೆ/ ಕೇಸ್ ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ Read More »

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ

ಸಮಗ್ರ ನ್ಯೂಸ್‌ : ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಜೇನು ದಾಳಿ ಮಾಡಿದ್ದು, ಇಂದು ಜೇನು ಕಡಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್‌ಗೆ ಹೆಚ್ಚು ಪ್ರವಾಸಿಗರು ಭೇಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ Read More »

ಇಸ್ರೇಲ್ – ಇರಾನ್ ಯುದ್ಧ/ಇಸ್ರೇಲ್‍ನ ಶಾಲಾ-ಕಾಲೇಜುಗಳು ಬಂದ್

ಸಮಗ್ರ ನ್ಯೂಸ್: ಇಸ್ರೇಲ್ ಮೇಲೆ 200 ಕ್ಕೂ ಹೆಚ್ಚು ಡೋನ್‍ಗಳ ದಾಳಿ ನಡೆದಿರುವ ಹಿನ್ನಲೆಯಲ್ಲಿ ಎಲ್ಲಾ ಶಾಲಾ- ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಘೋಷಿಸಲಾಗಿದೆ. ಇರಾನ್ ಡೋನ್ ದಾಳಿ ನಡೆಸಿದ್ದು, ಇಸ್ರೇಲ್ ನಾಗರಿಕರು ಜಾಗರೂಕರಾಗಿರಬೇಕು. ಎಚ್ಚರಿಕೆಯ ಸೈರನ್ ಶಬ್ದ ಕೇಳಿದ ತಕ್ಷಣ ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ನಾಗರಿಕರಿಗೆ ಸಲಹೆ ನೀಡಲಾಗಿದೆ. ಇರಾನ್ ದಾಳಿಗೆ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಎಚ್ಚರಿಕೆ ವಹಿಸಿವೆ. ದೇಶ ರಕ್ಷಣೆಗಾಗಿ ಆಕಾಶದಲ್ಲಿ ಯುದ್ಧ ವಿಮಾನಗಳ ಕಾರ್ಯಾಚರಣೆ ನಡೆಸುತ್ತಿವೆ. ನಾಳೆಯಿಂದ ಶಾಲಾ-ಕಾಲೇಜುಗಳು ಇರುವುದಿಲ್ಲ. ಕಾರ್ಯಕ್ರಮ, ಪ್ರವಾಸ

ಇಸ್ರೇಲ್ – ಇರಾನ್ ಯುದ್ಧ/ಇಸ್ರೇಲ್‍ನ ಶಾಲಾ-ಕಾಲೇಜುಗಳು ಬಂದ್ Read More »

ಯಾದಗಿರಿ : ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾದ ರೈತ

ಸಮಗ್ರ ನ್ಯೂಸ್‌ : ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ. ರೈತ ಶಾಂತಪ್ಪ ಉಪ್ಪಾರ್ (35) ಮೃತ ದುರ್ದೈವಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಂತಪ್ಪ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಶಾಂತಪ್ಪ ಸುಮಾರು 2 ಲಕ್ಷ ರೂಪಾಯಿವರೆಗೂ ಕೈಸಾಲ ಮಾಡಿಕೊಂಡಿದ್ದರು. ತಂದೆ ಹೆಸರಿನಲ್ಲಿ 4 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರು. ಆದರೆ ಬೆಳೆದ ತೊಗರಿ ಬೆಳೆ ಕೂಡ ಹಾನಿಯಾಗಿತ್ತು. ಸಾಲ ಪಾವತಿ ಮಾಡಲು ಎರಡು ಎತ್ತುಗಳನ್ನು

ಯಾದಗಿರಿ : ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾದ ರೈತ Read More »

ಮಂಗಳೂರು: ಬಾವುಟಗುಡ್ಡೆಯಲ್ಲಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮಟ್ಟದ ಸಮಾವೇಶ

ಸಮಗ್ರ ನ್ಯೂಸ್‌ : ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಕಾರ್ಮಿಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಮಾವೇಶ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಜರಗಿತು. ಮಾಜಿ ಶಾಸಕರಾದ ಜೆಆರ್ ಲೋಬೋವ ಅವರು ದೇಶದ ಬೃಹತ್ ಕಾರ್ಮಿಕ ಸಂಘಟನೆಯಾದ ಇಂಟಕ್ ಸಂಘಟನೆಯು ಕಾಂಗ್ರೆಸ್ಸಿನ ಅವಿಭಾಜ್ಯ ಅಂಗವಾಗಿದೆ. ಕಾರ್ಮಿಕರು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನ ತಮಗೆ ಒಳಿತಾಗುವಂತೆ ಚಲಾಯಿಸುವ ಮೂಲಕ ಕಾರ್ಮಿಕ ಶಕ್ತಿಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಅಧ್ಯಕ್ಷರಾದ ಮನೋಹರ್ ಶೆಟ್ಟಿ ಅವರು ಮಾತನಾಡಿ, ಕಾರ್ಮಿಕರಿಗೆ

ಮಂಗಳೂರು: ಬಾವುಟಗುಡ್ಡೆಯಲ್ಲಿ ಕಾರ್ಮಿಕ ಸಂಘಟನೆಯ ಜಿಲ್ಲಾ ಮಟ್ಟದ ಸಮಾವೇಶ Read More »

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಮಗ್ರ ನ್ಯೂಸ್ : ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ರವರು ಮಾತನಾಡುತ್ತಾ ಡಾ.ಬಾಬಾಸಾಹೇಬ ಅಂಬೇಡ್ಕರರವರು ಮಾನವಕುಲದ ಶ್ರೇಷ್ಠ ಚಿಂತಕ, ದೀನ ದಲಿತರ ಹಾಗೂ ದುರ್ಬಲ ವರ್ಗದವರ ವಿಮೋಚನೆಗಾಗಿ ಜನಿಸಿದ ಮಹಾನಾಯಕ. ಇಂತಹ ಮಹಾನ್ ಚೇತನ ಈ ಜಗತ್ತಿನಲ್ಲಿ, ಅದರಲ್ಲೂ ಜಾತಿ ವ್ಯವಸ್ಥೆ ತುಂಬಿ ತುಳುಕುತ್ತಿದ್ದ ಭಾರತದಲ್ಲಿ ಹುಟ್ಟಿದ್ದೇ ಒಂದು ಮಹಾ ವಿಷ್ಮಯ.

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಪ್ರೊಫೆಸರ್ ರಾಜು ಆಲ್ಗೂರ ನಮನ

ಸಮಗ್ರ ನ್ಯೂಸ್‌ : ಭಾರತದ ‘ಪ್ರಜಾತಂತ್ರದ ಜೀವ ದನಿ’, ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್‌ರಿಗೆ ಅಭ್ಯರ್ಥಿ ಆಲಗೂರ್ ನಮನ ಸಲ್ಲಿಸಿದರು. ಭಾರತದ ‘ಪ್ರಜಾತಂತ್ರದ ಜೀವ ದನಿ’, ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್ ಅವರ ಜನ್ಮ ದಿನದ ನಿಮಿತ್ತ ಅವರ ಪುತ್ಥಳಿಗೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ್ ಅವರು ನಮಿಸಿ, ಮಾಲಾರ್ಪಣೆ ಮಾಡಿದರು. ಅಂಬೇಡ್ಕರ್ ಅವರ ಕನಸಿನ ದೇಶಕ್ಕಾಗಿ ನಾವೆಲ್ಲ ಶ್ರಮಿಸಬೇಕು. ತಮ್ಮ ಜೀವವನ್ನೇ ತೇಯ್ದು ನಮ್ಮ ಬಾಳು ಬೆಳಗಿಸಿದ ಪುಣ್ಯಾತ್ಮನ ಬಯಕೆಗಳೆಲ್ಲ ಈಡೇರುವಂತೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಪ್ರೊಫೆಸರ್ ರಾಜು ಆಲ್ಗೂರ ನಮನ Read More »