Editor

ವಿಜಯಪುರ: ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು. ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಇಡೀ ಜಿಲ್ಲೆ ಪರಿಚಿತನಿದ್ದೇನೆ. ಎರಡು ಸಲ ಶಾಸಕನಾಗಿದ್ದೇನೆ. ನನಗೆ

ವಿಜಯಪುರ: ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ Read More »

ಚಾಮರಾಜನಗರ : ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ;ಸಚಿವ ಮುನಿಯಪ್ಪ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ನನಗೆ ಸಾಕಷ್ಟು ಉನ್ನತ ಹುದ್ದೆಗಳನ್ನು ನನಗೆ ನೀಡಿದ್ದು, ಯಾವುದೋ ಒಂದು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸು ತೋರಿಸಲು ಸಾಧ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು. ಚಾಮರಾಜನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಾನು ಮತ್ತು ನನ್ನ ಮಗ ಇಬ್ಬರೂ ಉಪಸ್ಥಿತರಿದ್ದೆವು. ಕಾಂಗ್ರೆಸ್ ಹೈಕಮಾಂಡ್ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ

ಚಾಮರಾಜನಗರ : ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ;ಸಚಿವ ಮುನಿಯಪ್ಪ Read More »

ಕಾನ್ ಚಲನಚಿತ್ರೋತ್ಸವ/ ಭಾರತದ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಆಯ್ಕೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಕಾನ್ ಚಲನಚಿತ್ರೋತ್ಸವ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ಭಾರತೀಯ ಚಿತ್ರವಾದ ಪಾಯಲ್ ಕಪಾಡಿಯಾ ನಿರ್ದೇಶನ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಈ ಬಾರಿ ಆಯ್ಕೆಯಾಗಿದೆ. ಕಳೆದ 40 ವರ್ಷಗಳಲ್ಲೇ ಭಾರತೀಯ ಚಿತ್ರವೊಂದು ಆಯ್ಕೆಯಾಗಿದ್ದು ಇದೇ ಮೊದಲು ಎಂಬುದು ವಿಶೇಷ. ಜೊತೆಗೆ ಭಾರತೀಯ ಮೂಲದ ಬ್ರಿಟನ್ ಸಂಜಾತೆ ಸಂಧ್ಯಾ ಸೂರಿ ಅವರ ಸಂತೋಷ್ ಚಿತ್ರವು ವಿಭಿನ್ನ ಶೈಲಿಯ ಚಿತ್ರಗಳ ವಿಭಾಗಕ್ಕೆ ಆಯ್ಕೆಯಾಗಿದೆ. 1983ರಲ್ಲಿ ಮೃಣಾಲ್ ಸೇನ್ ಅವರ ಖಾರಿಜ್ ಚಿತ್ರ ಕಡೆಯ

ಕಾನ್ ಚಲನಚಿತ್ರೋತ್ಸವ/ ಭಾರತದ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಆಯ್ಕೆ Read More »

ಬೀದರ್: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ !

ಸಮಗ್ರ ನ್ಯೂಸ್‌ : ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. ಮೂರು ಮಕ್ಕಳಿರೋ ಮಹಿಳೆ ಮೇಲೆ ಸತೀಶ್‌ ಎಂಬಾತ ಅತ್ಯಾಚ್ಯಾರ ಎಸಗಿದ್ದಾನೆ. ಗ್ರಾಮದ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಮಹಿಳೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ ಹಲ್ಲೆಗೈದು ಆರೋಪಿ ಪರಾರಿಯಾದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜನವಾಡ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅತ್ಯಾಚಾರ ಹಾಗು ಕೊಲೆ ಕೇಸ್‌ ದಾಖಲಿಸಲಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಬೀದರ್: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ ! Read More »

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ

ಸಮಗ್ರ ನ್ಯೂಸ್: ಭಾರತ ಜೊತೆಗಿನ ಮಾಲ್ಮೀನ್ಸ್ ರಾಜತಾಂತ್ರಿಕ ಸಂಬಂಧಗಳ ಮುನಿಸಿನ ಬಳಿಕ ಪ್ರವಾಸಿಗರನ್ನು ಮರಳಿ ಸೆಳೆಯಲು ಭಾರತದಲ್ಲಿ ರೋಡ್‍ಶೋಗಳನ್ನು ನಡೆಸುವುದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಈ ಸಂಬಂಧ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೇಟರ್ಸ್ ಅವರು ಮಾಲೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು ನಡೆಸುವುದರ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ. ಪ್ರವಾಸೋದ್ಯಮದಲ್ಲಿ ಕುಸಿತ ಕಂಡ ಹಿನ್ನೆಲೆ ಸಂಸ್ಥೆಯನ್ನು ಮತ್ತಷ್ಟು

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ Read More »

ಲೋಕಸಭಾ ಚುನಾವಣೆ/ ಪ್ರಚಾರ ವೀಕ್ಷಿಸಲು ಹಲವು ದೇಶಗಳಿಗೆ ಆಹ್ವಾನ

ಸಮಗ್ರ ನ್ಯೂಸ್: ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ನೂರು ಕೋಟಿ ಜನರು ಭಾಗಿಯಾಗುವ ವಿಶ್ವದ ಅತಿದೊಡ್ಡ ಚುನಾವಣೆ ಪ್ರಕ್ರಿಯೆ ಮತ್ತು ಆಡಳಿತಾರೂಢ ಪಕ್ಷದ ಚುನಾವಣಾ ಪ್ರಚಾರ ರಣತಂತ್ರ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ಅಧಿಕ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ. ಈ ಪೈಕಿ 13 ಪಕ್ಷಗಳು ಈಗಾಗಲೇ ತಮ್ಮ ಆಗಮನವನ್ನು ಖಚಿತಪಡಿಸಿವೆ. ಈ ಪಕ್ಷಗಳ ಪ್ರತಿನಿಧಿಗಳು 3 ಅಥವಾ 4ನೇ ಹಂತದ ಚುನಾವಣೆ ವೇಳೆ ಭಾರತಕ್ಕೆ ಆಗಮಿಸಿ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ

ಲೋಕಸಭಾ ಚುನಾವಣೆ/ ಪ್ರಚಾರ ವೀಕ್ಷಿಸಲು ಹಲವು ದೇಶಗಳಿಗೆ ಆಹ್ವಾನ Read More »

ಬೀದ‌ರ್: ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ-ಬ್ರೈಲ್‌ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ

ಸಮಗ್ರ ನ್ಯೂಸ್ : ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ಅಧಿಸೂಚನೆ ಹೊರಬಿದ್ದಿದ್ದು, ಮೊದಲ ದಿನ ಅಂಧ ವ್ಯಕ್ತಿಯೊಬ್ಬರು ಉಮೇದುವಾರಿಕೆ ಸಲ್ಲಿಸಿದರು. ಬೀದರ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್‌ ನಾಗಪ್ಪ ಬೂಸಾ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿ, ಬ್ರೈಲ್ ಲಿಪಿ ಸಹಾಯದಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಯಾವುದೇ ಆಡಂಬರವಿಲ್ಲದೆ ಸರಳವಾಗಿ ಬೆರಳೆಣಿಕೆಯ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು. ಹಾಗೂ ಯನಿವರ್ಸ್ ಸಿಟಿಜನ ಪಕ್ಷದಿಂದ ವಿನಯ ತಂದೆ ರಾಜೆಂದ್ರ

ಬೀದ‌ರ್: ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ-ಬ್ರೈಲ್‌ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ Read More »

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ

ಸಮಗ್ರ ನ್ಯೂಸ್: ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಬಹುದಿನದ ಬೇಡಿಕೆಯಾದ ಅರಣ್ಯ ಕ್ಯಾಂಟೀನ್ ಸ್ಥಾಪನೆಗೆ ಇಲಾಖೆ ಮುಂದಾಗಿದ್ದು, ಚುನಾವಣೆಯ ನಂತರ ಆ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡು ಕ್ಯಾಂಟೀನ್ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಕಡಿಮೆ ಬೆಲೆಯಲ್ಲಿ ಪಡಿತರ ಸಿಗಲು ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಅರಣ್ಯ ಕ್ಯಾಂಟೀನ್ ಸ್ಥಾಪಿಸುವಂತೆ ಹಲವು ವರ್ಷಗಳಿಂದ ಆಗ್ರಹಕ್ಕೆ ಪೂರಕವಾಗಿ ಕೆಲ ತಿಂಗಳ ಹಿಂದಷ್ಟೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಸುಭಾಷ್ ಮಾಲ್ಖೆಡೆ ಅವರು ಸೇನೆ

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ Read More »

ಪ್ಯಾರೀಸ್ ಒಲಿಂಪಿಕ್ಸ್/ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದ ಮೇರಿ ಕೋಮ್

ಸಮಗ್ರ ನ್ಯೂಸ್: ಪ್ಯಾರೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನ ಭಾರತದ ಮುಖ್ಯಸ್ಥರ ಸ್ಥಾನದಿಂದ ಬಾಕ್ಸರ್ ಎಂಸಿ ಮೇರಿ ಕೋಮ್ ಹಿಂದೆ ಸರಿದಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು ಮೇರಿ ಕೋಮ್ ತಮಗೆ ಬರೆದ ಪತ್ರದಲ್ಲಿ ತಮ್ಮ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಾರ್ಚ್ 21 ರಂದು ನೇಮಕಾತಿಯನ್ನು ಪ್ರಕಟಿಸಿತ್ತು. ‘ನನ್ನ ದೇಶಕ್ಕೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸೇವೆ ಸಲ್ಲಿಸುವುದನ್ನು ನಾನು ಗೌರವವೆಂದು ಪರಿಗಣಿಸುತ್ತೇನೆ ಮತ್ತು ಅದಕ್ಕಾಗಿ ನಾನು

ಪ್ಯಾರೀಸ್ ಒಲಿಂಪಿಕ್ಸ್/ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದ ಮೇರಿ ಕೋಮ್ Read More »

ಉದಯ ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ವಿಧವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ ಎನ್ನಲಾಗಿದೆ. ಎಸ್​.ಕೆ.ಜೈನ್ ಅವರ ಪ್ರಾರ್ಥೀವ ಶರೀರವನ್ನು ಬೆಂಗಳೂರಿನ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಂದು ರಾತ್ರಿ ಆಸ್ಪತ್ರೆಯಿಂದ ತರಲಾಗುವುದು, ಬಳಿಕ ನಾಳೆಯೇ ಅವರ ಅಂತ್ಯಸಂಸ್ಕಾರವನ್ನು ನೇರವೇರಿಸಲಾಗುವುದು ಅಂತ ತಿಳಿದುಬಂದಿದೆ. ಉದಯ ವಾಹಿನಿಯಲ್ಲಿ ಜ್ಯೋತಿಷ್ಯ

ಉದಯ ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ ಇನ್ನಿಲ್ಲ Read More »