Editor

ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್, ಓಮ್ನಿ ಕಾರು ಮುಖಾಮುಖಿ|ಮೂವರು ಮೃತ್ಯು

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಂಜುಂಡಪ್ಪ (83), ರಾಕೇಶ್ (27), ದೇವರಾಜ್ (30) ಎಂದು ಗುರುತಿಸಲಾಗಿದೆ. ಈ ಮೂವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂಬ ಮಾಹಿತಿ ತಿಳಿದು ಬಂದಿದೆ. ಕೆಎಸ್‌ಆರ್‌ಟಿಸಿ ಬಸ್‌ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್‌-ಕಾರು ಮುಖಾಮುಖಿ

ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್, ಓಮ್ನಿ ಕಾರು ಮುಖಾಮುಖಿ|ಮೂವರು ಮೃತ್ಯು Read More »

ಸೌಜನ್ಯಾ ಕೊಲೆ‌ ಪ್ರಕರಣ ಮರುತನಿಖೆಯನ್ನು ಪ್ರಧಾನಿ ಘೋಷಿಸಲಿ – ತಿಮರೋಡಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೈಕೋರ್ಟ್‌ಗೆ ಲಿಖಿತ ಅಭಿಪ್ರಾಯ ನೀಡಬೇಕು. ಏ.14ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಘೋಷಣೆ ಮಾಡಬೇಕು ಎಂದು ಸೌಜನ್ಯಾ ಪರ ಹೋರಾಟ ಸಮಿತಿ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪ್ರಕರಣ ಮರುತನಿಖೆ ನಡೆಸುವ ಸಂಬಂಧ ಹೈಕೋರ್ಟ್

ಸೌಜನ್ಯಾ ಕೊಲೆ‌ ಪ್ರಕರಣ ಮರುತನಿಖೆಯನ್ನು ಪ್ರಧಾನಿ ಘೋಷಿಸಲಿ – ತಿಮರೋಡಿ Read More »

ಇಸ್ಲಾಮಾಬಾದ್: ಯಾತ್ರೆಗೆ ತೆರಳುತ್ತಿದ್ದ ವೇಳೆ ಅಪಘಾತ|17 ಮಂದಿ ಮೃತ್ಯು, 41 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಯಾತ್ರಾರ್ಥಿಗಳು ಈದ್ ಅಲ್-ಫಿತರ್ ರಜೆಯ ಹಿನ್ನೆಲೆಯಲ್ಲಿ ನೈರುತ್ಯ ಪಾಕಿಸ್ತಾನದಲ್ಲಿರುವ ಧಾರ್ಮಿಕ ಕೇಂದ್ರವೊಂದಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಈ ಅಪಘಾತ ಸಂಭವಿಸಿದೆ. 17 ಯಾತ್ರಾರ್ಥಿಗಳು ಸಾವಿಗೀಡಾಗಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಟ್ರಕ್ ಮಿತಿಮೀರಿದ ವೇಗದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಚಾಲಕ ಟ್ರಕ್ನಿಂದ ಜಿಗಿದಿದ್ದು, ಸುರಕ್ಷಿತವಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು,

ಇಸ್ಲಾಮಾಬಾದ್: ಯಾತ್ರೆಗೆ ತೆರಳುತ್ತಿದ್ದ ವೇಳೆ ಅಪಘಾತ|17 ಮಂದಿ ಮೃತ್ಯು, 41 ಮಂದಿಗೆ ಗಾಯ Read More »

ನವದೆಹಲಿ: ನಾನು ಹಣಕ್ಕಾಗಿ ಗಂಡನನ್ನು ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ- ಮನ್ನತ್ ಕುಲ್ಹಾರಿಯಾ

ಸಮಗ್ರ ನ್ಯೂಸ್ : ನಾನು ಹಣಕ್ಕಾಗಿ ನನ್ನ ಗಂಡನನ್ನು ಹರಾಜು ಹಾಕಲು ಅಥವಾ ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಇನ್ಸ್ಟಾಗ್ರಾಮ್ನಲ್ಲಿ ಮನ್ನತ್ ಕುಲ್ಹಾರಿಯಾ ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಎಲ್ಲೆಡೆ ಸುದ್ದಿಯಾಗಿದೆ. ಶ್ರೀದೇವಿ ಹಾಗೂ ಅನಿಲ್ ಕಪೂರ್ ಜೊತೆಯಾಗಿ ನಟಿಸಿದ್ದ ಜುಡಾಯಿ ಚಿತ್ರದಲ್ಲಿ ನಾಯಕಿ ಹೇಗೆ ತನ್ನ ಗಂಡನನ್ನು ಮಾರಾಟ ಮಾಡಲು ಯೋಚಿಸುವುದಿಲ್ಲವೋ ಅದೇ ರೀತಿ ನಾನು ಸಹ ಯಾವುದೇ ಆಲೋಚನೆ ಇಲ್ಲದೇ ಆತನನ್ನು ಮಾರುತ್ತೇನೆ. ಆತ ಬೆಲೆಯಿಲ್ಲದ ವಸ್ತು ಆಗಿರುವುದರಿಂದ ನಾನು ಆತನನ್ನು ಮಾರಾಟ

ನವದೆಹಲಿ: ನಾನು ಹಣಕ್ಕಾಗಿ ಗಂಡನನ್ನು ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ- ಮನ್ನತ್ ಕುಲ್ಹಾರಿಯಾ Read More »

ಧಾರವಾಡ:ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 23ನೇ ಸ್ಥಾನ

ಸಮಗ್ರ ನ್ಯೂಸ್‌ : ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಕಾಶಿ ಧಾರವಾಡ ಈ ಫಲಿತಾಂಶದಲ್ಲಿ 23ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಬಾರಿ ಶೇ.73.4 ರಷ್ಟು ಫಲಿತಾಂಶ ಕಂಡು 27ನೇ ಸ್ಥಾನದಲ್ಲಿದ್ದ ಧಾರವಾಡ, ಪ್ರಸಕ್ತ ವರ್ಷ ಶೇ.80.7 ರಷ್ಟು ಫಲಿತಾಂಶ ಮಾಡಿ 23ನೇ ಸ್ಥಾನಕ್ಕೇರಿದೆ. ಹುಬ್ಬಳ್ಳಿ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿದ್ಯಾ 598 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಮೊದಲ ಬ್ಯಾಂಕ್ ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ಧಾರವಾಡದ ಕೆ.ಇ. ಬೋರ್ಡ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರವೀನಾ ಲಮಾಣಿ

ಧಾರವಾಡ:ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 23ನೇ ಸ್ಥಾನ Read More »

ಹುಬ್ಬಳ್ಳಿ: ಗಾಂಜಾ ಘಾಟು| ಅಲರ್ಟ್ ಆದ CEN ಪೊಲೀಸರು

ಸಮಗ್ರ ನ್ಯೂಸ್‌ : ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಗಾಂಜಾ ಮಾರಾಟ, ಸಾಗಾಟ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಗಾಂಜಾ ಪ್ರಕರಣಗಳು ಏರುತ್ತಲೇ ಇವೆ. ಇದಕ್ಕೆಲ್ಲ ಕಡಿವಾಣ ಹಾಕುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಅಭಿಯಾನ ಆರಂಭಿಸಿದ್ದಾರೆ. ಅದರಂತೆ ಇಂದು CEN ಪೊಲೀಸರು ಹುಬ್ಬಳ್ಳಿಯ ಹೊಸ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನಜಂಗುಳಿ ಪ್ರದೇಶದಲ್ಲಿ ಇನ್ಸ್‌ಪೆಕ್ಟರ್ ಬಿ.ಕೆ ಪಾಟೀಲ್ ನೇತೃತ್ವದಲ್ಲಿ ಅನುಮಾನಾಸ್ಪದ ಜನರನ್ನು ತಡೆದು ಶ್ವಾನದಳದಿಂದ ತಪಾಸಣೆ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಹಾಗೂ ಸಾಗಾಟ ಕಂಡು ಬಂದಲ್ಲಿ,

ಹುಬ್ಬಳ್ಳಿ: ಗಾಂಜಾ ಘಾಟು| ಅಲರ್ಟ್ ಆದ CEN ಪೊಲೀಸರು Read More »

ಆಮ್ ಆದ್ಮಿಗೆ ಮತ್ತೊಂದು ಶಾಕ್/ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ

ಸಮಗ್ರ ನ್ಯೂಸ್: ದೆಹಲಿ ಮದ್ಯನೀತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ. ವಿಭವ್ ಕುಮಾರ್ ನೇಮಕ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎನ್ನುವ ಕಾರಣ ಕೊಟ್ಟು ಅವರನ್ನು ವಿಚಕ್ಷಣ ಇಲಾಖೆ ವಜಾಗೊಳಿಸಿದೆ. ಅರವಿಂದ್ ಕೇಜಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರನ್ನು ಕೆಲವು ದಿನಗಳ ಹಿಂದೆ ಇಡಿ ವಿಚಾರಣೆ ನಡೆಸಿದ ಸಮಯದಲ್ಲಿ ವಿಜಿಲೆನ್ಸ್

ಆಮ್ ಆದ್ಮಿಗೆ ಮತ್ತೊಂದು ಶಾಕ್/ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ Read More »

ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ, ಮಿಸ್ ಮಾಡದೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ:ಆಗ್ನೇಯ ಮಧ್ಯ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ಹುದ್ದೆಯ ಮಾಹಿತಿ:ಕಾರ್ಪೆಂಟರ್- 38COPA-

ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ, ಮಿಸ್ ಮಾಡದೇ ಅಪ್ಲೈ ಮಾಡಿ Read More »

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಪ್ಲೈ ಮಾಡಿ, 42,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (SRF) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 18, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಪ್ಲೈ ಮಾಡಿ, 42,000 ಸಂಬಳ! Read More »

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗಿನ ತಾಯಿ ಮಗಳು ಪಾಸ್!

ಸಮಗ್ರ ನ್ಯೂಸ್: ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ರಿನಿಶಾ ಹಾಗು ಅವಳ ತಾಯಿ ಬೇಬಿರಾಣಿ 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.! ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜಿನಲ್ಲಿ ಓದುತಿರುವ ಎಲೆಕ್ಟ್ರಿಕಲ್ ಕ್ಲಾಸ್ 1 ಗುತ್ತಿಗೆದಾರ ಸುರೇಂದ್ರ.ಟಿ.ಕೆ ರವರ ಪುತ್ರಿ ರಿನಿಶಾ ಟಿ.ಎಸ್ 600ಕ್ಕೆ 570 ಪಡೆದು ಅತ್ಯುನ್ನತ ಅಂಕ ಪಡೆದರೆ ಅವಳ ತಾಯಿ ಬೇಬಿರಾಣಿ.ಎಂ. ಯು. ನೆಲ್ಲಿಹುದಿಕೇರಿ ಜೂನಿಯರ್ ಕಾಲೇಜಿನಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು 600ಕ್ಕೆ 388 ಪಡೆಯುವ ಮೂಲಕ ಒಂದೇ ವರ್ಷದಲ್ಲಿ ತಾಯಿಮಗಳು ಪಿಯುಸಿ

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗಿನ ತಾಯಿ ಮಗಳು ಪಾಸ್! Read More »