Editor

ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಕಡ್ಡಾಯ/ ರಾಜ್ಯ ಸರ್ಕಾರದ ಆದೇಶ

ಸಮಗ್ರ ನ್ಯೂಸ್: ಅಂಬೇಡ್ಕರ್ ಜಯಂತಿಯನ್ನು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶೈಕ್ಷಣಿಕ ವರ್ಷವು ಈ ಏಪ್ರಿಲ್ 10 ರಂದು ಕೊನೆಗೊಳ್ಳುತ್ತದೆ. ಆದರೆ ಏಪ್ರಿಲ್ 14 ರಂದು, ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಇರುವುದರಿಂದ, ರಾಜ್ಯ ಸರ್ಕಾರ ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಜಯಂತಿ ಆಚರಿಸಲು ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರದ

ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಕಡ್ಡಾಯ/ ರಾಜ್ಯ ಸರ್ಕಾರದ ಆದೇಶ Read More »

ಬೆಳಗಾವಿ: ದಾಖಲೆ‌ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷದ 45 ಸಾವಿರ ಹಣ ಜಪ್ತಿ

ಸಮಗ್ರ ನ್ಯೂಸ್: ಕಾಗವಾಡ ಚಕ್‌ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಹಣ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಕುಡಚಿಯಿಂದ ಮಿರಜ್ ನತ್ತ ಸಾಗಿಸುತ್ತಿರುವ ವೇಳೆ ಪರಿಶೀಲನೆ ವೇಳೆ ಪತ್ತೆಹಚ್ಚಿದ್ದಾರೆ. ಕಾರಿನಲ್ಲಿ ಹಣ ಸಾಗಿಸುತ್ತಿದ ಸ್ವಪ್ನಿಲ ಅವರ ಹುಂಡಾಯಿ ವರ್ನಾ MH 12 PT 5700 ನಂಬರಿನ ಕಾರಿನಲ್ಲಿದ್ದ 5 ಲಕ್ಷ 45 ಸಾವಿರ ಹಣ ಜಪ್ತಿ ಮಾಡಲಾಗಿದೆ. ಸೂಕ್ತ ದಾಖಲೆ ಇಲ್ಲದ ಕಾರಣ ಹಣ ಜಪ್ತಿ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು

ಬೆಳಗಾವಿ: ದಾಖಲೆ‌ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷದ 45 ಸಾವಿರ ಹಣ ಜಪ್ತಿ Read More »

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಾದ್ಯಂತ ಇಂದು ಹೊರಬಿದ್ದಿದ್ದು, 81.15% ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 6,98,378 ವಿದ್ಯಾರ್ಥಿಗಳಲ್ಲಿ 5,52690 ವಿದ್ಯಾರ್ಥಿಗಳು ಪಾಸ್ ಆಗಿದ್ದು, 1,45,688 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಒಟ್ಟು 18.85% ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿದೆ. ಮರು ಪರೀಕ್ಷೆಗೆ ಹೆಸರು ನೋಂದಾವಣೆ ಮಾಡಲು ಇಂದಿನಿಂದ 1 ವಾರಗಳ ಕಾಲಾವಕಾಶ ನೀಡಲಾಗಿದೆ. ಏಪ್ರಿಲ್ 10 ರಿಂದ ಎಪ್ರಿಲ್ 16ರವೆಗೆ

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ Read More »

ನಾಗ್ಪುರ:23 ಲಕ್ಷ ರೂ.ಕಳೆದುಕೊಂಡ ಎಂಬಿಎ ವಿದ್ಯಾರ್ಥಿ

ಸಮಗ್ರ ನ್ಯೂಸ್‌ : ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ಮಹಾರಾಷ್ಟ್ರದ ನಾಗ್ಪುರದ ಕಾಲೇಜ್‌ವೊಂದರ ಎಂಬಿಎ ವಿದ್ಯಾರ್ಥಿಗೆ ₹23 ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಹೂಗ್ಲಿ ಮೂಲದ 28 ವರ್ಷದ ಎಂಬಿಎ ವಿದ್ಯಾರ್ಥಿ ಮೋಸಕ್ಕೆ ಒಳಗಾಗಿದ್ದಾನೆ. 2023ರ ನವೆಂಬರ್ 17ರಂದು ಟೆಲಿಗ್ರಾಮ್ ಮೆಸೇಜಿಂಗ್‌ ಆ್ಯಪ್‌ನಲ್ಲಿ ಹೂಡಿಕೆ ಸಲಹೆಗಾರನಂತೆ ವಂಚಕ ವಿದ್ಯಾರ್ಥಿಯನ್ನು ಸಂಪರ್ಕಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಯು ಆರಂಭದಲ್ಲಿ ₹1,000

ನಾಗ್ಪುರ:23 ಲಕ್ಷ ರೂ.ಕಳೆದುಕೊಂಡ ಎಂಬಿಎ ವಿದ್ಯಾರ್ಥಿ Read More »

ಮಡಿಕೇರಿ: ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ, ಸ್ವಾಮೀಜಿಗಳ ಆಶೀರ್ವಾದ ಪಡೆದ ಯದುವಂಶದ ಮಹಾರಾಜ

ಸಮಗ್ರ ನ್ಯೂಸ್‌ : ಮಡಿಕೇರಿ ತಾಲೂಕಿನ ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಪೋಕ್ಷೇತ್ರ ಮನೆಹಳ್ಳಿ ಮಠಕ್ಕೆ ಯದುವಂಶದ ಮಹಾರಾಜರು ಭೇಟಿ ನೀಡಿ, ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ, ಸ್ವಾಮೀಜಿಗಳ ಆಶೀರ್ವಾದ ಪಡೆದರು. ಮೈಸೂರಿನ ರಾಜ ವಂಶಸ್ಥ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕ್ಷೇತ್ರದ ಆರಾದ್ಯ ದೈವ ವೀರಭದ್ರ ಸ್ವಾಮಿ, ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ನೇತೃತ್ವ ಹಾಗೂ ಜಿಲ್ಲೆಯ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಮಳೆ, ಬೆಳೆ, ಪ್ರಜೆಗಳ ಕಲ್ಯಾಣಕ್ಕಾಗಿ

ಮಡಿಕೇರಿ: ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ, ಸ್ವಾಮೀಜಿಗಳ ಆಶೀರ್ವಾದ ಪಡೆದ ಯದುವಂಶದ ಮಹಾರಾಜ Read More »

ರಾಜ್ಯಾದ್ಯಂತ ರಣಬಿಸಿಲು ಹಿನ್ನಲೆ| ಎ. 15ರಿಂದ ಅಂಗನವಾಡಿ ಕಾರ್ಯನಿರ್ವಹಣಾ ಸಮಯ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಬೇಸಿಗೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣಾ ಸಮಯವನ್ನು ಈ ಮೊದಲು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೂ ನಿಗದಿಪಡಿಸಲಾಗಿತ್ತು. ಬಿಸಿಲು ಹೆಚ್ಚಾಗಿರುವುದರಿಂದ ಉಳಿದ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಏ.15 ರಿಂದ

ರಾಜ್ಯಾದ್ಯಂತ ರಣಬಿಸಿಲು ಹಿನ್ನಲೆ| ಎ. 15ರಿಂದ ಅಂಗನವಾಡಿ ಕಾರ್ಯನಿರ್ವಹಣಾ ಸಮಯ ಬದಲಾವಣೆ Read More »

ಕಾರ್ಕಳ:ರಂಜಾನ್ ಹಬ್ಬ ಭಾವೈಕ್ಯತೆಯ ದಿನ;ಜಹೀರ್ ಅಹ್ಮದ್

ಸಮಗ್ರ ನ್ಯೂಸ್ : ಪವಿತ್ರ ರಂಜಾನ್ ತಿಂಗಳಲ್ಲಿ 30 ದಿನಗಳ ಕಠಿಣ ಉಪವಾಸ ವ್ರತವನ್ನು ಸಂಪೂರ್ಣವಾಗಿ ಮಾಡಿದ ಭಕ್ತನಿಗೆ ಇಂದು ಅವನ ಪರಿಶ್ರಮದ ಬೆಲೆಯನ್ನು ಪಡೆಯುವ ದಿನವಾಗಿದೆ. ಅದಲ್ಲದೆ ರಂಜಾನ್ ಹಬ್ಬ ಭಾವೈಕ್ಯದ ದಿನವಾಗಿದೆ ಎಂದು ಜಾಮಿಯಾ ಮಸೀದಿಯ ಧರ್ಮ ಗುರುಗ ಜಹೀರ್ ಅಹ್ಮದ್ ಖಾಸ್ಮಿ ಕಾರ್ಕಳದ ಜಾಮಿಸಿದಿಯ ಇಧ್ಗಾದಲ್ಲಿ ಮೆರೆದಿರುವ ಮುಸ್ಲಿಂ ಬಾಂಧವರಿಗೆ ಉದ್ದೇಶಿಸಿ ಹೇಳಿದರು. ಇಂದು ಬೆಳಗಿನಿಂದಲೇ ಕಾರ್ಕಳದ ಸುತ್ತಮುತ್ತಲಿನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ವಿಶೇಷ ನಮಾಜಿಗೋಸ್ಕರ ಬೆಳಕಿನಿಂದಲೇ ಇದ್ದಗಾದಲ್ಲಿ ಜಮಾಹಿಸಿದ್ದರು. ನಂತರ

ಕಾರ್ಕಳ:ರಂಜಾನ್ ಹಬ್ಬ ಭಾವೈಕ್ಯತೆಯ ದಿನ;ಜಹೀರ್ ಅಹ್ಮದ್ Read More »

ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ

ಸಮಗ್ರ ನ್ಯೂಸ್: ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ 37 ವರ್ಷದ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಇವರು ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಲಿಯೊ ವರಾಡ್ಕರ್ ದಿಢೀರ್ ಪದತ್ಯಾಗ ಮಾಡಿದ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಆಯ್ಕೆಗೆ ಸಂಸತ್ತಿನಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸೈಮನ್ ಆಯ್ಕೆಯಾಗಿದ್ದಾರೆ. ಆರೋಗ್ಯ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸಚಿವರಾಗಿ ಕೆಲಸ ಮಾಡಿರುವ ಸೈಮನ್, ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡಿದ್ದರು. ಕಳೆದ ತಿಂಗಳು ಸೆಂಟರ್-ರೈಟ್ ಫೈನ್ ಪಕ್ಷದ

ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ Read More »

ಚುನಾವಣಾ ಆಯುಕ್ತರ ಮೇಲೆ ದಾಳಿ ಭೀತಿ/ ಝಡ್ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮೇಲೆ ಸಂಭಾವ್ಯ ದಾಳಿ ಭೀತಿ ಇರುವ ಹಿನ್ನೆಲೆಯಲ್ಲಿ, ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ. ಶಸ್ತ್ರ ಸಜ್ಜಿತ ಕಮಾಂಡೋಗಳು ರಾಜೀವ್ ಕುಮಾರ್ ಅವರಿಗೆ ದಿನದ 24 ಗಂಟೆಯೂ ಭದ್ರತೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಕೇಂದ್ರೀಯ ಮೀಸಲು ಪೆÇಲೀಸ್ ಪಡೆಗೆ ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು, 40 ರಿಂದ 45 ಸಿಬ್ಬಂದಿ ಇರುವ

ಚುನಾವಣಾ ಆಯುಕ್ತರ ಮೇಲೆ ದಾಳಿ ಭೀತಿ/ ಝಡ್ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ Read More »

ಹೈಕೋರ್ಟ್‍ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮದ್ಯ ನೀತಿ ಹಗರಣದಲ್ಲಿ ಇಡಿ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅರವಿಂದ್ ಕೇಜ್ರಿವಾಲ್ ಇದೀಗ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತನ್ನ ಬಂಧನದ ವಿರುದ್ದ ಕೇಜ್ರವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ಕೇಜ್ರಿವಾಲ್ ಅವರ ಬಂಧನವು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ಅವರ

ಹೈಕೋರ್ಟ್‍ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್ Read More »