Editor

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ‌ಜಾರಿ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಎಫ್‌ಐಆರ್ ದಾಖಲಾಗಿದ್ದು, ಈ ಕುರಿತಂತೆ ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ […]

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ‌ಜಾರಿ Read More »

ಮೋಂತಾ ಚಂಡಮಾರುತದ ಪರಿಣಾಮ| ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು (ಅ.29) ಮಳೆ ಅಬ್ಬರಿಸುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ

ಮೋಂತಾ ಚಂಡಮಾರುತದ ಪರಿಣಾಮ| ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ

ಸಮಗ್ರ ನ್ಯೂಸ್: ನಿತ್ಯ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿರುವ ಅಯೋಧ್ಯೆಯ ಐತಿಹಾಸಿಕ ರಾಮಮಂದಿರದ ನಿರ್ಮಾಣ ಕಾರ್ಯ ಮುಕ್ತಾಯವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಘೋಷಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಟ್ರಸ್ಟ್‌, ‘ಪ್ರಭು ಶ್ರೀರಾಮನ ಎಲ್ಲಾ ಭಕ್ತರಿಗೆ ಮಂದಿರ ನಿರ್ಮಾಣ ಕಾರ್ಯಗಳು ಪೂರ್ಣಗೊಂಡಿವೆ ಎಂದು ತಿಳಿಸಲು ಸಂತೋಷಪಡುತ್ತೇವೆ. ಇದರಲ್ಲಿ ಮುಖ್ಯಮಂದಿರ ಮತ್ತು ಆವರಣದೊಳಗಿನ ಮಹಾದೇವ, ಗಣೇಶ, ಹನುಮಾನ್, ಸೂರ್ಯದೇವ, ಭಗವತಿ ಮತ್ತು ಅನ್ನಪೂರ್ಣ ದೇವರ 6 ಮಂದಿರಗಳು ಸೇರಿವೆ. ಜೊತೆಗೆ ಶೇಷಾವತಾರ ಮಂದಿರವೂ ಪೂರ್ಣಗೊಂಡಿದೆ.

ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ Read More »

ಹಳೆಯ ಸ್ಲೋಚ್ ಹ್ಯಾಟ್ ಗೆ ವಿದಾಯ| ಇಂದಿನಿಂದ ಹೊಸ ನೀಲಿ ಕ್ಯಾಪ್ ನಲ್ಲಿ ಮಿಂಚಲಿದ್ದಾರೆ ರಾಜ್ಯ ಪೊಲೀಸರು

ಸಮಗ್ರ ನ್ಯೂಸ್: ರಾಜ್ಯದ ಪೊಲೀಸ್ ಸಿಬ್ಬಂದಿ ಧರಿಸುತ್ತಿದ್ದ ಹಳೇ ಕಾಲದ ಸ್ಲೋಚ್ ಹ್ಯಾಟ್‌ ಯುಗ ಕೊನೆಗೂ ಅಂತ್ಯಗೊಂಡಿದ್ದು ಅ.28ರಿಂದ (ಮಂಗಳವಾರ) ಹೊಸ ಕ್ಯಾಪ್‌ ಚಾಲ್ತಿಗೆ ಬರಲಿದೆ. ಈ ಮೂಲಕ ರಾಜ್ಯದ ಪೊಲೀಸರ ಬರೋಬ್ಬರಿ 4 ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಮೈಸೂರು ಮಹಾರಾಜರ ಕಾಲದ ಪೇಟಾ ಟೋಪಿಗೆ ವಿದಾಯ ಹಾಡಿ ಆಗಿನ ಮುಖ್ಯಮಂತ್ರಿ ಆರ್‌.ಗುಂಡೂರಾವ್‌ ಅವರು ಖಾಕಿ ಬಣ್ಣದ ಮಡಿಕೆಯ ಸ್ಲೋಚ್‌ ಟೋಪಿಗಳಿಗೆ ನಾಂದಿ ಹಾಡಿದ್ದರು. ಅಂದಿನಿಂದ ಇಂದಿನವರೆಗೆ ರಾಜ್ಯದ ಕಾನ್‌ಸ್ಟೇಬಲ್‌ಗಳು ಮತ್ತು ಹೆಡ್‌ ಕಾನ್‌ಸ್ಟೇಬಲ್‌ಗಳು ಇದೇ ಹ್ಯಾಟ್‌

ಹಳೆಯ ಸ್ಲೋಚ್ ಹ್ಯಾಟ್ ಗೆ ವಿದಾಯ| ಇಂದಿನಿಂದ ಹೊಸ ನೀಲಿ ಕ್ಯಾಪ್ ನಲ್ಲಿ ಮಿಂಚಲಿದ್ದಾರೆ ರಾಜ್ಯ ಪೊಲೀಸರು Read More »

ಇಳಿಕೆಯ ಹಾದಿಯತ್ತ ಚಿನ್ನದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್

ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ ಮುಂದುವರಿದಿದೆ. ಕಳೆದ ಹತ್ತು ದಿನದಲ್ಲಿ ಈ ಎರಡೂ ಬೆಲೆಗಳು ಸಿಕ್ಕಾಪಟ್ಟೆ ಕುಸಿದಿವೆ. ಆಭರಣ ಚಿನ್ನದ ಬೆಲೆ (gold rate) 12,170 ರೂ ಇದ್ದದ್ದು 11,225 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಶೇ.7-8ರಷ್ಟು ಬೆಲೆ ಕುಸಿತವಾಗಿದೆ.  ಬೆಳ್ಳಿ ಬೆಲೆಯಂತೂ ಇನ್ನೂ ಭಯಂಕರ ಕುಸಿತ ಕಂಡಿದೆ. ಅತಿರೇಕವಾಗಿ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಅಷ್ಟೇ ಅತಿರೇಕವಾಗಿ ಕುಸಿಯುತ್ತಿದೆ. ಹತ್ತು ದಿನಗಳ ಹಿಂದೆ 190 ರೂಗಳ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಅದರ

ಇಳಿಕೆಯ ಹಾದಿಯತ್ತ ಚಿನ್ನದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್ Read More »

RSS ಪಥ ಸಂಚಲನಕ್ಕೆ ತಡೆಯೊಡ್ಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ

RSS ಪಥ ಸಂಚಲನಕ್ಕೆ ತಡೆಯೊಡ್ಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »

ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ| ಕೇರಳ ಎಸ್ಐಟಿಯಿಂದ ಬೆಂಗಳೂರು, ಬಳ್ಳಾರಿಯಲ್ಲಿ ಶೋಧ

ಸಮಗ್ರ ನ್ಯೂಸ್: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಷ್ಟವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಬೆಂಗಳೂರಿನಲ್ಲಿರುವ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಅವರ ಅಪಾರ್ಟ್‌ಮೆಂಟ್‌‍ ಮತ್ತು ಬಳ್ಳಾರಿಯ ಆಭರಣ ಅಂಗಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಪೊಟ್ಟಿ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.ದೇವಾಲಯದ ಶ್ರೀಕೋವಿಲ್‌ (ಗರ್ಭಗುಡಿ) ಬಾಗಿಲಿನ ಚೌಕಟ್ಟಿನ ಚಿನ್ನದ ಲೇಪನ ಕೆಲಸಕ್ಕೆ ಹಣಕಾಸು ಒದಗಿಸಿದ ಗೋವರ್ಧನ್‌ ಅವರ ಒಡೆತನದ ಆಭರಣ ಅಂಗಡಿಯನ್ನು ಎಸ್‌‍ಐಟಿ ಶೋಧಿಸಿದೆ ಎಂದು ಮೂಲಗಳು ತಿಳಿಸಿವೆ, ಇದನ್ನು

ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ| ಕೇರಳ ಎಸ್ಐಟಿಯಿಂದ ಬೆಂಗಳೂರು, ಬಳ್ಳಾರಿಯಲ್ಲಿ ಶೋಧ Read More »

ಮುಧೋಳ‌ ಹೌಂಡ್, ರಾಮ್ ಪುರ ದೇಸೀ ತಳಿಯ 150 ಶ್ವಾನಗಳು ಬಿಎಸ್ಎಫ್ ಗೆ ಸೇರ್ಪಡೆ

ಸಮಗ್ರ ನ್ಯೂಸ್: : ಕರ್ನಾಟಕದ ಮುಧೋಳ ಹೌಂಡ್‌ ಹಾಗೂ ಉತ್ತರ ಪ್ರದೇಶದ ರಾಮ್‌ಪುರ ಎಂಬ ದೇಸಿ ತಳಿಯ 150 ನಾಯಿಗಳಿಗೆ ಇದೇ ಮೊದಲ ಬಾರಿಗೆ ಗಡಿ ರಕ್ಷಣಾ ಪಡೆ (BSF) ತರಬೇತಿ ನೀಡುತ್ತಿದೆ. ಭಾರತದ ಪೂರ್ವ ಹಾಗೂ ಪಶ್ಚಿಮ ಭಾಗದ ಗಡಿಗಳಲ್ಲಿ ಮತ್ತು ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಕೈಗೊಳ್ಳುವ ಅತ್ಯಂತ ಅಪಾಯಕಾರಿ ಕಮಾಂಡೊ ಕಾರ್ಯಾಚರಣೆಯಲ್ಲಿ ಈ ಎರಡು ತಳಿಯ ನಾಯಿಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಮಧ್ಯಪ್ರದೇಶದ ಟೆಕಾನ್ಪುರ ಎಂಬಲ್ಲಿರುವ ಬಿಎಸ್‌ಎಫ್‌ನ ರಾಷ್ಟ್ರೀಯ ತರಬೇತಿ ಕೇಂದ್ರಕ್ಕೆ

ಮುಧೋಳ‌ ಹೌಂಡ್, ರಾಮ್ ಪುರ ದೇಸೀ ತಳಿಯ 150 ಶ್ವಾನಗಳು ಬಿಎಸ್ಎಫ್ ಗೆ ಸೇರ್ಪಡೆ Read More »

ಜಮ್ಮು – ಕಾಶ್ಮೀರ ರಾಜ್ಯ ಸಭಾ ಸ್ಥಾನಕ್ಕೆ ಚುನಾವಣೆ| ಅಚ್ಚರಿಯ ಒಂದು ಸ್ಥಾನ ಗೆದ್ದ ಬಿಜೆಪಿ; ಮೂರು ಸ್ಥಾನ ಪಡೆದುಕೊಂಡ ಎನ್ ಸಿ ಪಾರ್ಟಿ

ಸಮಗ್ರ ನ್ಯೂಸ್: ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದರೆ, ವಿರೋಧ ಪಕ್ಷ ಬಿಜೆಪಿ ಒಂದು ಸ್ಥಾನದಲ್ಲಿ ಜಯಗಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಸ್ಥಾನದಲ್ಲಿ ಸತ್ಪಾಲ್ ಶರ್ಮಾ ಜಯಗಳಿಸುವುದರೊಂದಿಗೆ ಭಾರತೀಯ ಜನತಾ ಪಕ್ಷ ಒಂದು ರಾಜ್ಯಸಭಾ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ಇದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಪಕ್ಷಕ್ಕೆ ಮಹತ್ವದ ಜಯವಾಗಿದೆ. ಈ ಮೂಲಕ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ

ಜಮ್ಮು – ಕಾಶ್ಮೀರ ರಾಜ್ಯ ಸಭಾ ಸ್ಥಾನಕ್ಕೆ ಚುನಾವಣೆ| ಅಚ್ಚರಿಯ ಒಂದು ಸ್ಥಾನ ಗೆದ್ದ ಬಿಜೆಪಿ; ಮೂರು ಸ್ಥಾನ ಪಡೆದುಕೊಂಡ ಎನ್ ಸಿ ಪಾರ್ಟಿ Read More »

ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ| ಫಾರಿನ್ ಕರೆನ್ಸಿ, ಚಿನ್ನ ಸೇರಿ 25 ಕೋಟಿಗೂ ಅಧಿಕ ಆದಾಯ

ಸಮಗ್ರ ನ್ಯೂಸ್: ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಕೊನೆಗೊಂಡಿದ್ದು, ಶುಕ್ರವಾರ ನಡೆದ ಹುಂಡಿ ಎಣಿಕೆ ನಂತರದಲ್ಲಿ ಈ ಬಾರಿ ₹25.59 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಇದು ದೇಗುಲದ ಇತಿಹಾಸದಲ್ಲೇ ಅತ್ಯಧಿಕ ಕಾಣಿಕೆಯಾಗಿದೆ. ಸುಮಾರು 3೦೦ಕ್ಕೂ ಹೆಚ್ಚು ಸಿಬ್ಬಂದಿ ಎಣಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಹಾಗೂ ಭಾರತ್ ಸ್ಕೌಟ್ಸ್‌ ಆಯಂಡ್‌ ಗೈಡ್ಸ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೇವರ ಹುಂಡಿಯಲ್ಲಿ ಹಣದ ಜೊತೆಗೆ 75 ಗ್ರಾಂ ಚಿನ್ನ, ೧ ಕೇಜಿ ೫೮ ಗ್ರಾಂ

ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ| ಫಾರಿನ್ ಕರೆನ್ಸಿ, ಚಿನ್ನ ಸೇರಿ 25 ಕೋಟಿಗೂ ಅಧಿಕ ಆದಾಯ Read More »