Editor

ಹಬ್ಬಗಳ ಸೀಸನ್ ನಲ್ಲಿ ಭಾರೀ ಬೇಡಿಕೆ ಕಂಡ ನಂದಿನಿ ಉತ್ಪನ್ನಗಳು| ಮಾರಾಟದಲ್ಲಿ ದಾಖಲೆ ಬರೆದ ಕೆಎಂಎಫ್

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕೆಎಂಎಫ್‌ ಉತ್ಪನ್ನಗಳಿಗೆ ಭಾರೀ ಬೇಡಿಕೆ ಬಂದಿದೆ. ಕರ್ನಾಟಕ ಹಾಲು ಮಹಾಮಂಡಳಿ (KMF) ಈ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳಲ್ಲಿ ತನ್ನ ಮಾರಾಟದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಈ ಸೀಸನ್ ನಲ್ಲಿ 1100 ಟನ್ ಸಿಹಿತಿಂಡಿಗಳನ್ನು ಮಾರಾಟ ಮಾಡುವ ಮೂಲಕ 46 ಕೋಟಿ ರೂಪಾಯಿ ವಹಿವಾಟು ನಡೆಸಿದೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಇದು ಕೆಎಂಎಫ್ ಇತಿಹಾಸದಲ್ಲೇ ಹೊಸ ದಾಖಲೆ ಎಂದು ಹೇಳಲಾಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ಪ್ರತಿ ವರ್ಷ […]

ಹಬ್ಬಗಳ ಸೀಸನ್ ನಲ್ಲಿ ಭಾರೀ ಬೇಡಿಕೆ ಕಂಡ ನಂದಿನಿ ಉತ್ಪನ್ನಗಳು| ಮಾರಾಟದಲ್ಲಿ ದಾಖಲೆ ಬರೆದ ಕೆಎಂಎಫ್ Read More »

ಆಂಧ್ರಪ್ರದೇಶದಲ್ಲಿ ಭೀಕರ ದುರಂತ| ಚಲಿಸುತ್ತಿದ್ದ ವೋಲ್ವೊ ಬಸ್ ಬೆಂಕಿಗಾಹುತಿಯಾಗಿ 22 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಆಂಧ್ರಪದೇಶದ ಕರ್ನೂಲ್ ಜಿಲ್ಲೆಯಲ್ಲಿ ರಸ್ತೆಯಲ್ಲೇ ಖಾಸಗಿ ಬಸ್ ಹೊತ್ತಿ ಉರಿದು 22 ಮಂದಿ ಸಜೀವ ದಹನವಾಗಿದ್ದು, ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ ಆಗಿದೆ. ಇಲ್ಲಿಯವರೆಗೆ 22 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ 11 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಇನ್ನೂ ಕೆಲವರನ್ನು ಗುರುತಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಸಿರಿ ಹೇಳುತ್ತಾರೆ. ಇದರಿಂದಾಗಿ, ಪ್ರಯಾಣಿಕರ ಸಂಬಂಧಿಕರು ಎಲ್ಲಿದ್ದಾರೆಂದು ತಿಳಿಯದೆ ಆತಂಕಗೊಂಡಿದ್ದಾರೆ. ಹೈದರಾಬಾದ್ನಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಮುರಿ ಕಾವೇರಿ ಟ್ರಾವೆಲ್ಸ್ಗೆ ಸೇರಿದ ವೋಲ್ವೋ ಬಸ್ ಗುರುವಾರ ಮಧ್ಯರಾತ್ರಿಯ

ಆಂಧ್ರಪ್ರದೇಶದಲ್ಲಿ ಭೀಕರ ದುರಂತ| ಚಲಿಸುತ್ತಿದ್ದ ವೋಲ್ವೊ ಬಸ್ ಬೆಂಕಿಗಾಹುತಿಯಾಗಿ 22 ಮಂದಿ ಸಜೀವ ದಹನ Read More »

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ| ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿದ ಚೀನಿವಾರಪೇಟೆ

ಸಮಗ್ರ ನ್ಯೂಸ್: ಚಿನ್ನದ ಬೆಲೆಯ (gold rate) ಏರಿಳಿಕೆ ಆಟ ನಡೆಯುತ್ತಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 500ಕ್ಕೂ ಹೆಚ್ಚು ರೂಗಳಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಂತೂ ಭರ್ಜರಿ ಇಳಿಕೆ ಮುಂದುವರಿಸಿದೆ. ಇಂದು ಅದರ ಬೆಲೆ ಗ್ರಾಮ್​ಗೆ ಬರೋಬ್ಬರಿ 8 ರೂಗಳಷ್ಟು ಕಡಿಮೆ ಆಗಿದೆ. 162 ರೂಗೆ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,16,600 ರುಪಾಯಿ ಇದೆ.

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ| ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿದ ಚೀನಿವಾರಪೇಟೆ Read More »

ಶಬರಿಮಲೆ‌ಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತಲೆ ಮೇಲೆ ಇರುಮುಡಿ ಹೊತ್ತು, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮಹಿಳಾ ರಾಷ್ಟ್ರಪತಿಯಾಗಿ ಶಬರಿಮಲೆ ದೇಗುಲಕ್ಕೆ ಭೇಟಿ ನೀಡಿದ ಮೊದಲಿಗರು ಎಂದು ಮುರ್ಮು ದಾಖಲೆ ಬರೆದಿದ್ದಾರೆ. ಅಲ್ಲದೆ ಅಯ್ಯಪ್ಪ ಸನ್ನಿಧಿಗೆ ಭೇಟಿ ನೀಡಿದ ಭಾರತದ ಎರಡನೇ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ. ಇಂದು

ಶಬರಿಮಲೆ‌ಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಬೆಂಗಳೂರಿನ ಲಾಡ್ಜ್ ನಲ್ಲಿ‌ ಸಾವನ್ನಪ್ಪಿದ ಪುತ್ತೂರಿನ ಯುವಕನ ಪ್ರಕರಣಕ್ಕೆ ರೋಚಕ ತಿರುವು| ಪೋಸ್ಟ್ ಮಾರ್ಟಂ ವರದಿಯಲ್ಲೇನಿದೆ ಗೊತ್ತಾ?

ಸಮಗ್ರ ನ್ಯೂಸ್: ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರು ಮೂಲದ ತಕ್ಷಿತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಕರಣ ಹೊಸ ತಿರುವು ಪಡೆದಿದೆ. ಮರಣೋತ್ತರ ಪರೀಕ್ಷೆಯ ವರದಿ ಮಡಿವಾಳ ಠಾಣೆಯ ಪೊಲೀಸರ ಕೈ ಸೇರಿದೆ. ಪುತ್ತೂರು ಮೂಲದ ತಕ್ಷಿತ್ ಸಾವಿನ ಪ್ರಕರಣ ಹೊಸ ಆಯಾಮ ಪಡೆದುಕೊಂಡಿದೆ. ಬೆಂಗಳೂರು ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತನಾಗಿದ್ದ ತಕ್ಷಿತ್ ಮರಣೋತ್ತರ ಶವ ಪರೀಕ್ಷೆಯ ವರದಿ ಪೊಲೀಸರ ಕೈಗೆ ಸೇರಿದೆ. ವರದಿಯ ಕೆಲವೊಂದು ಅಂಶಗಳು ಲಭ್ಯವಾಗಿದೆ. ತಕ್ಷಿತ್ ಮತ್ತು ಯುವತಿ ಸುಮಾರು 20 ದಿನಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದರು. ಪದೇ

ಬೆಂಗಳೂರಿನ ಲಾಡ್ಜ್ ನಲ್ಲಿ‌ ಸಾವನ್ನಪ್ಪಿದ ಪುತ್ತೂರಿನ ಯುವಕನ ಪ್ರಕರಣಕ್ಕೆ ರೋಚಕ ತಿರುವು| ಪೋಸ್ಟ್ ಮಾರ್ಟಂ ವರದಿಯಲ್ಲೇನಿದೆ ಗೊತ್ತಾ? Read More »

ಸುಳ್ಯ: ಹೈಪರ್ ಐಜಿಇ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ನಿಧನ

ವಿರಳ ಹಾಗೂ ತೀರ ಅಪರೂಪದ ಖಾಯಿಲೆ Hyper IGE Mediated Mast cell activation syndromeನಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗಾಂಧಿನಗರ ನಿವಾಸಿ ಚಾಂದಿನಿ ಕೊನೆಗೂ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು ಬಹಳ ಅಪರೂಪದ ಕಾಯಿಲೆ ಎಂದು ಗೊತ್ತಾಗಿ, ಅದಕ್ಕೆ ಚಿಕಿತ್ಸೆ

ಸುಳ್ಯ: ಹೈಪರ್ ಐಜಿಇ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ನಿಧನ Read More »

ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ

ಸಮಗ್ರ ನ್ಯೂಸ್: ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ. ಅಂದರೆ ಈ ನದಿಗಳ ನೀರು ಕುಡಿಯಲು ಯೋಗ್ಯವಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 12 ನದಿಗಳ ನೀರನ್ನು 32 ಕಡೆ ಪರೀಕ್ಷೆಗೊಳಪಡಿಸುತ್ತದೆ. ಪ್ರತಿ ತಿಂಗಳು ನದಿಗಳ ನೀರನ್ನು ಪರೀಕ್ಷೆ ನಡೆಸಿ ಅವುಗಳ ವರದಿ ಸಿದ್ಧಪಡಿಸಲಾಗುತ್ತಿದೆ.

ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ Read More »

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪುಡಿ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ದಾಂಧಲೆ ನಡೆಸಿ, ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಅಟ್ಟಹಾಸದಿಂದ ಹೆಣ್ಣೂರು ಬಡಾವಣೆಯ ನಿವಾಸಿಗಳು ಬೆಚ್ಚಿಬಿದ್ದಿದ್ದು, ಸ್ಥಳೀಯರ ಧೈರ್ಯದಿಂದ ಮೂವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನೆ ತಡರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಹೆಣ್ಣೂರು ಬಡಾವಣೆಯ ದೊಡ್ಡೆರಾಮಣ್ಣ ಬಡಾವಣೆ ಬಳಿ ನಡೆದಿದೆ. ಸರ್ವಜ್ಞನಗರ ನಿವಾಸಿಗಳೆನ್ನಲಾದ ಐವರು ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಈ ದಾಂಧಲೆಗೆ ಕಾರಣವಾದ

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ Read More »

ಅ.31ರವರೆಗೆ ಗಣತಿ ಕಾರ್ಯ ವಿಸ್ತರಣೆ| ಶಿಕ್ಷಕರಿಗೆ ಗಣತಿ ಕಾರ್ಯದಿಂದ ಬಿಡುಗಡೆ

ಸಮಗ್ರ ನ್ಯೂಸ್: ಅಕ್ಟೋಬರ್.31, 2025ರವರೆಗೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡಲಾಗಿದೆ. ಇನ್ಮುಂದೆ ಇತರೆ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಜಾತಿಗಣತಿ ಸಮೀಕ್ಷೆ ಮುಂದುವರೆಸಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್.31, 2025ರವರೆಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ

ಅ.31ರವರೆಗೆ ಗಣತಿ ಕಾರ್ಯ ವಿಸ್ತರಣೆ| ಶಿಕ್ಷಕರಿಗೆ ಗಣತಿ ಕಾರ್ಯದಿಂದ ಬಿಡುಗಡೆ Read More »

ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ದೀಪಾವಳಿ ಸಂಭ್ರಮದಲ್ಲಿರುವ ಕರ್ನಾಟಕ ಮಂದಿಗೆ ಮಳೆರಾಯ ಅಡ್ಡಿಯಾಗಿದ್ದಾನೆ. ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ರಾಜ್ಯಕ್ಕೆ ಮಳೆ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು ಇದರ ಪರಿಣಾಮ ರಾಜ್ಯದ ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ಉತ್ತರಕನ್ನಡ, ಮಂಗಳೂರು, ಉಡುಪಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಗಳ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.

ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ Read More »